ಧಾರ್ಮಿಕ

ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿದ ಸರ್ಕಾರ! | ನಿಯಮ ಉಲ್ಲಂಘಿಸಿದರೆ ಭಾರಿ ದಂಡದೊಂದಿಗೆ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಹಾಗೂ ವಿಸರ್ಜನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶವನ್ನು ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಎನ್‌.ಪ್ರವೀಣ್‌ ಸೂಚಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯ […]

ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿದ ಸರ್ಕಾರ! | ನಿಯಮ ಉಲ್ಲಂಘಿಸಿದರೆ ಭಾರಿ ದಂಡದೊಂದಿಗೆ ಜೈಲು ಶಿಕ್ಷೆ Read More »

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ!

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ. ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೊ. ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್​ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ! Read More »

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ…

ಬೆಂಗಳೂರು: ದೈವ ಭಕ್ತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಸ್ಥಾನಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಮುಜರಾಯಿ ಇಲಾಖೆಯ ಮಹತ್ವದ ನಿರ್ಣಯ ಇದಾಗಿದ್ದು, ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ದೇವಾಲಯಗಳು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿರ್ಧಾರ ತಳೆದು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶೀಘ್ರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್‍ ಬೀಳಲಿದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ… Read More »

ಸೆ. 19ರಂದೇ ರಜೆ ಘೋಷಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್

ಪುತ್ತೂರು: ಗಣೇಶೋತ್ಸವದ ಸಾರ್ವತ್ರಿಕ ರಜೆಯ ಗೊಂದಲಕ್ಕೆ ತೆರೆ ಎಳೆಯಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸೆ. 19ರಂದು ಗಣೇಶೋತ್ಸವ ಹಬ್ಬ ಆಚರಣೆ ನಡೆಯಲಿದ್ದು, ಸೆ. 18ಕ್ಕೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಗೊಂದಲ ಉಂಟಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸರಕಾರಿ ರಜೆಯನ್ನು ಮಾರ್ಪಡಿಸಿ ಅನುಕೂಲವಾಗುವಂತೆ ಸೆ. 19ರಂದು ರಜೆ ಘೋಷಿಸುವ ಸಂಬಂಧ

ಸೆ. 19ರಂದೇ ರಜೆ ಘೋಷಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್ Read More »

ಸೆ. 28ರಿಂದ ಅ. 4: ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಪುತ್ತೂರು ತಾಲೂಕು ಬಿ.ಸಿ. ಟ್ರಸ್ಟ್ ವತಿಯಿಂದ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ತಾಲೂಕು ವತಿಯಿಂದ ಭಜನಾ ಮಂಡಳಿ ಪರಿಷತ್ ಸಭೆ ನಡೆಯಿತು. ಸೆ. 28ರಿಂದ ಅ. 4ರವರೆಗೆ ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ 25ನೇ ವರ್ಷದ ಭಜನಾ ಕಮ್ಮಟ ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ಮಂಡಳಿಯ ಸದಸ್ಯರು ಪಾಲ್ಗೊಳ್ಳುವ ಕುರಿತು ಚರ್ಚಿಸಲಾಯಿತು. ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ ಪಿ.ಕೆ. ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭಜನಾ ಪರಿಷತ್ ತಾಲೂಕು ಅಧ್ಯಕ್ಷ ಸುಬ್ಬಯ್ಯ ರೈ , ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ

ಸೆ. 28ರಿಂದ ಅ. 4: ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಪುತ್ತೂರು ತಾಲೂಕು ಬಿ.ಸಿ. ಟ್ರಸ್ಟ್ ವತಿಯಿಂದ ಪೂರ್ವಭಾವಿ ಸಭೆ Read More »

ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ | ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಪೂರ್ವಾಭಾವಿ ಸಭೆಯು ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ ಮಾತನಾಡಿ, ಕಳೆದ 88 ವರ್ಷದಿಂದ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೆ ವಿಗ್ರಹ ಪ್ರತಿಷ್ಠೆ, ಶೋಭಾಯಾತ್ರೆ ನಡೆಯುತ್ತಿದೆ. ಈ ವರ್ಷದಿಂದ ಉತ್ಸವಕ್ಕೆ ಹೊಸ ಸಮಿತಿ ರಚನೆ ಮಾಡುವ ಜತೆಗೆ 10 ದಿನದ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ, ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ನಡೆಸಿ

ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ | ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪೂರ್ವಭಾವಿ ಸಭೆ Read More »

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ | ಅಧ್ಯಕ್ಷರಾಗಿ ರಾಜೇಶ್ ಬನ್ನೂರು ಆಯ್ಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉತ್ಸವ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಬನ್ನೂರು ಅವರನ್ನು ಆಯ್ಕೆ ಮಾಡಲಾಯಿತು. ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ದಯಾನಂದ ಆದರ್ಶ, ನಯನಾ ರೈ ನೆಲ್ಲಿಕಟ್ಟೆ, ಕಾರ್ಯದರ್ಶಿಯಾಗಿ ಅಜಿತ್ ರೈ ಹೊಸಮನೆ, ಜತೆ ಕಾರ್ಯದರ್ಶಿಯಾಗಿ ಎಂ. ಗೋಪಾಲಕೃಷ್ಣ ಈಶ, ಹರಿಪ್ರಸಾದ್ ಶೆಟ್ಟಿ

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ | ಅಧ್ಯಕ್ಷರಾಗಿ ರಾಜೇಶ್ ಬನ್ನೂರು ಆಯ್ಕೆ Read More »

ಹಿಂದೂಗಳು ಒಗ್ಗಟ್ಟಾಗಿ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕು | ಬಪ್ಪಳಿಗೆ ಸಿಂಗಾಣಿಯಲ್ಲಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆಯಲ್ಲಿ ಕಿಶೋರ್ ಕುಮಾರ್ ಬೊಟ್ಯಾಡಿ

ಪುತ್ತೂರು: ಸಿಂಗಾಣಿ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಹಾಗೂ ಬಪ್ಪಳಿಗೆ ಎಂಸಿಬಿ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಮತ್ತು ಕೃಷ್ಣ ವೇಷಧಾರಿಗಳ ಶೋಭಾಯಾತ್ರೆ ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯಿತು. ಕೃಷ್ಣ ವೇಷಧಾರಿ ಮಕ್ಕಳ ಭವ್ಯ ಶೋಭಾಯತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕ ರವಿಚಂದ್ರ ನೆಲ್ಲಿತ್ತಾಯ ಚಾಲನೆ ನೀಡಿದರು. ಬಳಿಕ ರಾಗಿಕುಮೇರಿ ಶಾಲಾ ಬಳಿಯಿಂದ ಸಿಂಗಾಣಿವರೆಗೂ ಚೆಂಡೆ, ವಾದ್ಯ, ಬ್ಯಾಂಡ್ ಸೆಟ್ ಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಬಳಿಕ ಸಿಂಗಾಣಿಯ ಹಿಲ್

ಹಿಂದೂಗಳು ಒಗ್ಗಟ್ಟಾಗಿ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕು | ಬಪ್ಪಳಿಗೆ ಸಿಂಗಾಣಿಯಲ್ಲಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆಯಲ್ಲಿ ಕಿಶೋರ್ ಕುಮಾರ್ ಬೊಟ್ಯಾಡಿ Read More »

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ

ಸವಣೂರು : ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಭಗವಾನ್ ಶ್ರೀಸತ್ಯಸಾಯಿ ಬಾಬಾರವರ ದಿವ್ಯ ಅನುಗ್ರಹದೊಂದಿಗೆ ವಿದ್ಯಾರಶ್ಮಿ ಪದವಿ ಕಾಲೇಜಿನ ವಿದ್ಯಾಸಿಂಚನ ಸಭಾಂಗಣದಲ್ಲಿ ಎರಡು ದಿನಗಳ ಆಧ್ಯಾತ್ಮಿಕ ಶಿಕ್ಷಣ ಶಿಬಿರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ  ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆಗೆ ಆಧ್ಯಾತ್ಮಿಕ ಶಿಕ್ಷಣವು ಪೂರಕವಾದದ್ದು ಇದು ನಮ್ಮನ್ನು ಸನ್ಮಾರ್ಗದ ಕಡೆಗೆ ಕೊಂಡೊಯ್ಯುತ್ತದೆ ಎಂದರು. ಸತ್ಯಸಾಯಿ

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ Read More »

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀ ಕೃಷ್ಣನ ವೇಷ  ತೊಟ್ಟು ಸಂಭ್ರಮಿಸಿದ  ಪುಟಾಣಿಗಳು

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಹಾಗೂ ಕಾವು ಗೆಳೆಯರ ಬಳಗದ ವತಿಯಿಂದ ಮುದ್ದು ಕೃಷ್ಣ ಸ್ಫರ್ಧೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸದಸ್ಯರಾದ ಬಾಲಮುರಳಿ ಸಸ್ಪೆಟ್ಟಿ, ಲಕ್ಷ್ಮಿನಾರಾಯಣ ಭಟ್ ಪೆರ್ನಾಜೆ, ಸುಚೇತಾ ರೈ ಮತ್ತು ಗೀತಾ ಮಾಣಿಯಡ್ಕ ಚೆನ್ನಮಣೆ ಆಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀ ಕೃಷ್ಣನ ವೇಷ  ತೊಟ್ಟು ಸಂಭ್ರಮಿಸಿದ  ಪುಟಾಣಿಗಳು Read More »

error: Content is protected !!
Scroll to Top