ಧಾರ್ಮಿಕ

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವ: ಆಮಂತ್ರಣ ಬಿಡುಗಡೆ

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸೆ.18 ಹಾಗೂ ಸೆ.19ರಂದು ನಡೆಯುವ ಪ್ರಥಮ ವರ್ಷದ ಗೌರಿ ಹಬ್ಬ ಹಾಗೂ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಆಮಂತ್ರಣ ಬಿಡುಗಡೆಗೆ ಮುನ್ನ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಅರ್ಚಕ ರಾಮ ಕಲ್ಲೂರಾಯ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮೋಹನ್ ರೈ ಓಲೆಮುಂಡೋವು, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಎನ್.ಎಸ್‌.ಡಿ. ಸರ್ವೆ ದೋಳ ಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸಮಿತಿಯ ಕೋಶಾಧಿಕಾರಿ […]

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವ: ಆಮಂತ್ರಣ ಬಿಡುಗಡೆ Read More »

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ

ಮುಕ್ಕೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ. ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು  ಸಭಾಧ್ಯಕ್ಷತೆ ವಹಿಸಲಿದ್ದು

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ | ಪೂರ್ವಭಾವಿ ಸಭೆ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸಮಿತಿ ಸಭೆಯು ಕ್ಷೇತ್ರದಲ್ಲಿ ಸೆ.10ರಂದು ನಡೆಯಿತು. ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ | ಪೂರ್ವಭಾವಿ ಸಭೆ Read More »

ಪುತ್ತೂರು ಪೇಟೆಯಲ್ಲಿ ಅಟ್ಟಿಮಡಕೆಯ ವೈಭವ

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವೈಭವದ ಶೋಭಾಯಾತ್ರೆಗೆ ಶನಿವಾರ ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ವೈದ್ಯ ಡಾ.ಎಂ.ಕೆ.ಪ್ರಸಾದ್ ಚಾಲನೆ ನೀಡಿದರು. ನಗರದ ಪ್ರಮುಖ ಕಡೆಗಳಲ್ಲಿ ಅಟ್ಟಿ ಮಡಿಕೆಗಳನ್ನು ಅಳವಡಿಸಲಾಗಿದ್ದು, ವೀರ ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ

ಪುತ್ತೂರು ಪೇಟೆಯಲ್ಲಿ ಅಟ್ಟಿಮಡಕೆಯ ವೈಭವ Read More »

ಮೇರಿಮಾತೆ ಜನ್ಮ ದಿನಾಚರಣೆ ಅಂಗವಾಗಿ ಚರ್ಚ್‌ಗಳಲ್ಲಿ ಮೊಂತಿ ಫೆಸ್ಟ್ | ಮಾಯಿದೆ ದೇವುಸ್ ಚರ್ಚ್‍ನಲ್ಲಿ ಬೈಬಲ್ ವಾಚಿಸಿ ಸಂದೇಶ ನೀಡಿದ ಧರ್ಮಗುರು

ಪುತ್ತೂರು : ಯೇಸುಕ್ರಿಸ್ತ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ‘ಮೊಂತಿ ಫೆಸ್ತ್(ತೆನೆ ಹಬ್ಬ)-ಕುಟುಂಬದ ಹಬ್ಬ’ ವನ್ನು ನಗರದ ಮಾಯಿದೆ ದೇವುಸ್ ಚರ್ಚ್‍ನಲ್ಲಿ ಶುಕ್ರವಾರ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಮಾಯಿದೆ ದೇವುಸ್ ಚರ್ಚ್‌ನಲ್ಲಿ ಬೈಬಲ್ ವಾಚಿಸಿ ಹಬ್ಬದ ಸಂದೇಶ ನೀಡಲಾಯಿತು. ಭತ್ತದ ತೆನೆಗಳನ್ನು ಆಯಾ ಚರ್ಚ್‌ನಲ್ಲಿ ಪ್ರಮುಖರು ಸಂಗ್ರಹಿಸಿ ಹಬ್ಬದ ದಿನದಂದು ಅವನ್ನು ಧರ್ಮಗುರುಗಳು ಪವಿತ್ರೀಕರಿಸಿ ಭಕ್ತರಿಗೆ ಹಂಚುವುದು ಸಂಪ್ರದಾಯವಾಗಿದ್ದು, ಈ ನಿಟ್ಟಿನಲ್ಲಿ ಪವಿತ್ರೀಕರಿಸಿದ ಭತ್ತದ ತೆ, ಸಿಹಿತ ಪ್ರತೀಕವಾಗಿ ಕಬ್ಬನ್ನು ಆಯಾ ಚರ್ಚ್‌ಗಳಲ್ಲಿ ಭಕ್ತರಿಗೆ

ಮೇರಿಮಾತೆ ಜನ್ಮ ದಿನಾಚರಣೆ ಅಂಗವಾಗಿ ಚರ್ಚ್‌ಗಳಲ್ಲಿ ಮೊಂತಿ ಫೆಸ್ಟ್ | ಮಾಯಿದೆ ದೇವುಸ್ ಚರ್ಚ್‍ನಲ್ಲಿ ಬೈಬಲ್ ವಾಚಿಸಿ ಸಂದೇಶ ನೀಡಿದ ಧರ್ಮಗುರು Read More »

ಸೆ.10 : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ 27ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶಾಂತಿಗೋಡು : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 27ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.10 ಭಾನುವಾರ ಶಾಂತಿಗೋಡು ಶಾಲಾ ವಠಾದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಂತಿಗೋಡು ಪ್ರಗತಿಪರ ಕೃಷಿಕ ಶಿವಪ್ಪ ಗೌಡ ಕಂರ್ಬಡ್ಕ ಉದ್ಘಾಟಿಸಲಿದ್ದು, ನರಿಮೊಗರು ಗ್ರಾಪಂ ಅಧ್ಯಕ್ಷೆ ಹರಿಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಪಂ ಸದಸ್ಯರಾದ ನಾಗಮ್ಮ ಬಾಲಕೃಷ್ಣ ಗೌಡ ತೋಟ, ಆಶಾ ಸಚೀಂದ್ರ  ಬೊಳ್ಳೆಕ್ಕು. ಶಾಂತಿಗೋಡು ಶಾಲಾ

ಸೆ.10 : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ 27ನೇ ವರ್ಷದ ಮೊಸರು ಕುಡಿಕೆ ಉತ್ಸವ Read More »

ನರಿಮೊಗರು ಸರಸ್ವತಿ  ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ನರಿಮೊಗರು : ಜಗತ್ತು ತಾನು, ತನ್ನದು ಎಂಬ ಸ್ವಾರ್ಥದಲ್ಲಿ ಮುಳುಗಿರುವಾಗ ಪರಾರ್ಥಕ್ಕೋಸ್ಕರ ಬದುಕಿದ ಪುರುಷೋತ್ತಮ ಶ್ರೀ ಕೃಷ್ಣ ಭಗವಂತ,ಸೇವೆ ಎಂಬ ಮೌಲ್ಯವನ್ನು ಭಾರತೀಯರಲ್ಲಿ ತುಂಬಿದ. ಬೌದ್ಧಿಕ ಹಾಗೂ ಆಧ್ಯಾತ್ಮಿಕ ನಡೆಯನ್ನು ತನ್ನ ಬದುಕಿನಲ್ಲಿ ಬಾಳಿ ತೋರಿಸಿ ಆದರ್ಶವನ್ನು ತುಂಬಿದ ಎಂದು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಹೇಳಿದರು. ಶಾಲೆಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿ ಇಂದಿಗೂ ಇತರರಿಗಾಗಿ ಮಿಡಿಯುವ ಹೃದಯಗಳಿದ್ದರೆ ಅದಕ್ಕೆ ಶ್ರೀ ಕೃಷ್ಣನ

ನರಿಮೊಗರು ಸರಸ್ವತಿ  ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ Read More »

ಸೆ.10 : ವೀರಮಂಗಲ  ಶ್ರೀಕೃಷ್ಣ ಕಲಾಕೇಂದ್ರದಿಂದ “ಶ್ರೀಕೃಷ್ಣ ಲೀಲೋತ್ಸವ”

ಪುತ್ತೂರು : ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ ವತಿಯಿಂದ 3ನೇ ವರ್ಷದ ಶ್ರೀಕೃಷ್ಣ ಲೀಲೋತ್ಸವ ಸೆ.10 ಭಾನುವಾರ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವಿಷ್ಣು ಸಹಸ್ರನಾಮಾರ್ಚನೆ, 9.30 ಕ್ಕೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ, 10 ಕ್ಕೆ ನಡೆಯುವ ಮನರಂಜನಾ ಕಾರ್ಯಕ್ರಮವನ್ನು ವೀರಮಂಗಲ ಸ.ಹಿ.ಪ್ರಾ.ಶಾಲಾ ಸಹಶಿಕ್ಷಕಿ ಹರಿಣಾಕ್ಷಿ ಎಂ. ಉದ್ಘಾಟಿಸುವರು. 3.30 ಕ್ಕೆ ಗೋಪೂಜೆ, ಮುದ್ದುಕೃಷ್ಣ

ಸೆ.10 : ವೀರಮಂಗಲ  ಶ್ರೀಕೃಷ್ಣ ಕಲಾಕೇಂದ್ರದಿಂದ “ಶ್ರೀಕೃಷ್ಣ ಲೀಲೋತ್ಸವ” Read More »

ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ : ತೇಜಶಂಕರ ಸೋಮಯಾಜಿ | ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು : ಭಗವಾನ್ ಶ್ರೀಕೃಷ್ಣನನ್ನು ನಾನಾ ನೆಲೆಯಿಂದ ಗುರುತಿಸುತ್ತಾ ಸಾಗುವುದಕ್ಕೆ ಸಾಧ್ಯವಿದೆ. ದುಷ್ಟ ಶಿಕ್ಷಣ, ಶಿಷ್ಟ ರಕ್ಷಣದಿಂದ ತೊಡಗಿ ರಾಜತಾಂತ್ರಿಕ ವಿಚಾರಗಳವರೆಗೆ ಅಷ್ಟೂ ವಿಷಯಗಳಲ್ಲಿ ಶ್ರೀಕೃಷ್ಣ ನಮಗೆ ಮಾದರಿಯಾಗಿ ಕಾಣಿಸುತ್ತಾನೆ. ಆತನ ಒಂದೊಂದು ನಡೆಯ ಹಿಂದೆಯೂ ಒಂದೊಂದು ಸಂದೇಶಗಳನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ ಆತ ಕೃತಿಯ ಮೂಲಕ ತೋರಿಸಿದ್ದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಸಾಧ್ಯರಾದವರು ಆತನನ್ನು ಹೀಗಳೆಯುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಅನಾವರಣಗೊಳಿಸುತ್ತಿರುವುದನ್ನು ಕಾಣಬಹುದು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು.

ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ : ತೇಜಶಂಕರ ಸೋಮಯಾಜಿ | ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಸೆ 6 : ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ, ಮುದ್ದುಕೃಷ್ಣ ಸ್ಫರ್ಧೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಹಾಗೂ ಕಾವು ಗೆಳೆಯರ ಬಳಗದ  ಪ್ರಾಯೋಜಕತ್ವದಲ್ಲಿ ಮುದ್ದು ಕೃಷ್ಣ ಸ್ಫರ್ಧೆ ಕಾವು  ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ 6  ರಂದು ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿವಿಧ ಅಟೋಟ ಕಾರ್ಯಕ್ರಮ ನಡೆಯಲಿದ್ದು ಪುರುಷರಿಗೆ ಕಬಡ್ಡಿ,ಹಗ್ಗ ಎಳೆಯುವುದು, ಚೆನ್ನಮಣೆ, ನಿಧಾನ ಬೈಕ್ ರೇಸ್, ಸೈಕಲ್ ರೇಸ್,

ಸೆ 6 : ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ, ಮುದ್ದುಕೃಷ್ಣ ಸ್ಫರ್ಧೆ Read More »

error: Content is protected !!
Scroll to Top