ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
ಶರವೂರು: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಜು.24 ರಿಂದ ಆರಂಭಗೊಂಡಿದ್ದು, ಆ.1 ಮಂಗಳವಾರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಹರಿಪ್ರಸಾದ್ ಹಾಗೂ ರಾಘವೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಜು.24 ಸೋಮವಾರ ಬೆಳಿಗ್ಗೆ 8 ರಿಂದ ಗಣಪತಿ ಹವನ, ಸುಕೃತ ಹವನ, ಪವಮಾನ ಹೋಮ, ದ್ವಾದಶಮೂರ್ತಿ ಆರಾಧನೆ, ಸಂಜೆ ಮಹಾಸುದರ್ಶನ ಹೋಮ, ಸಪ್ತಪತೀ ಪಾರಾಯಣ, ದುರ್ಗಾಪೂಜೆ ಜರಗಿತು. […]










