ಧಾರ್ಮಿಕ

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಶರವೂರು: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಜು.24 ರಿಂದ ಆರಂಭಗೊಂಡಿದ್ದು, ಆ.1 ಮಂಗಳವಾರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಹರಿಪ್ರಸಾದ್ ಹಾಗೂ ರಾಘವೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಜು.24 ಸೋಮವಾರ ಬೆಳಿಗ್ಗೆ 8 ರಿಂದ ಗಣಪತಿ ಹವನ, ಸುಕೃತ ಹವನ, ಪವಮಾನ ಹೋಮ, ದ್ವಾದಶಮೂರ್ತಿ ಆರಾಧನೆ, ಸಂಜೆ ಮಹಾಸುದರ್ಶನ ಹೋಮ, ಸಪ್ತಪತೀ ಪಾರಾಯಣ, ದುರ್ಗಾಪೂಜೆ ಜರಗಿತು. […]

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್  ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಉಪಾಧ್ಯಕ್ಷರಾದ ರವೀಂದ್ರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ  ಬೆಳ್ಳಿಹಬ್ಬ ಕಾರ್ಯಕ್ರಮ ಸೆ.19 ಮಂಗಳವಾರದಿಂದ ಸೆ.22 ಶುಕ್ರವಾರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣೆಗೆ ಮಂಗಳಾ ಮಂಟಪದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಅಧ್ಯಕ್ಷ ಹಾಗೂ ಬೆಳ್ಳಿ ಹಬ್ಬ ಸಮಿತಿಯ  ಗೌರವಾಧ್ಯಕ್ಷ ಶಂಕರ ಭಟ್ ಬದನಾಜೆ ಚಾಲನೆ  ನೀಡಿದರು ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ 

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ Read More »

ಚಾರ್ವಾಕ ಶ್ರೀ ಕುಕ್ಕೆನಾಥ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಜನರೇಟರ್ ಉದ್ಘಾಟನೆ

ಚಾರ್ವಾಕ : ಚಾರ್ವಾಕ ಗ್ರಾಮದ ಕುಕ್ಕೆನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದ ನೂತನ ಜನರೇಟರ್ ಉದ್ಗಾಟನೆ ನೆರವೇರಿತು. ಅರುವಗುತ್ತು ಯಜಮಾನ ಪ್ರದೀಪ್ ಆರ್. ಗೌಡ ಜನರೇಟರನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಸದಸ್ಯ ವೆಂಕಪ್ಪ ಮೀಯೊಳ್ಪೆ, ಪ್ರಕಾಶ್ ಅರುವ, ಜತ್ತಪ್ಪ ಉದುಲಡ್ಡ, ಅರ್ಚಕ ನೂತನ್ ಭಟ್, ಸಮಿತಿ ಸದಸ್ಯರಾದ ಸುಲೋಚನಾ ಮೀಯೊಳ್ಪೆ, ಸುಮ ದೇವಸ್ಯ, ಆಡಳಿತ ಪಂಗಡದ ಅಧ್ಯಕ್ಷ ಶೀನಪ್ಪ ಮಾಚಿಲ  ಮತ್ತು ಕೂಡುಕಟ್ಟಿನ ಭಕ್ತಾದಿಗಳು ಉಪಸ್ಥಿತರಿದ್ದರು.

ಚಾರ್ವಾಕ ಶ್ರೀ ಕುಕ್ಕೆನಾಥ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಜನರೇಟರ್ ಉದ್ಘಾಟನೆ Read More »

ಪಡುಮಲೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಆಯ್ಕೆ

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಆ.25 ರಂದು ನಡೆಯಲಿರುವ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜಾ ಸಮಿತಿಯ ಸಭೆ ನಡೆಯಿತು.ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ವ್ಯವಸ್ಥಾಪನ ಸಮಿತಿ ಸದಸ್ಯ ಪ್ರಭಾಕರ ಗೌಡ ಕೋಡಿಯಡ್ಕ, ಧ.ಗ್ರಾ. ಯೋಜನೆಯ ಬಡಗನ್ನೂರು ಎ ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಉಪಸ್ಥಿತರಿದ್ದರು.ನೂತನ ಸಮಿತಿ ರಚನೆ : ಈ ಸಂದರ್ಭದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ನೂತನ

ಪಡುಮಲೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಆಯ್ಕೆ Read More »

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ  ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ  ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ Read More »

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ

ವಿಟ್ಲ : ವಿಟ್ಲ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಸಮಿತಿ ವತಿಯಿಂದ ಈ ಬಾರಿ  25ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದ್ದು, ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸೆ.19 ರಿಂದ 22 ರ ತನಕ ಚಂದಳಿಕೆ ಮಂಗಳ ಮಂಟಪದಲ್ಲಿ ಶ್ರೀ ಗಣೇಶೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಹಬ್ಬ ಸಮಿತಿಯ ಗೌರವಾಧ್ಯಕ್ಷ ಶಂಕರ

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ Read More »

ಜು.23 : ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರು: ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಹಾಗೂ ವಾರ್ಷಿಕ ಮಹಾಸಭೆ ಜು.23 ಭಾನುವಾರ ಬೆಳಿಗ್ಗೆ 11 ಕ್ಕೆ ಪುತ್ತೂರು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಲಾಲ್ ಅವರಿಗೆ

ಜು.23 : ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ Read More »

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ

ಪುತ್ತೂರು: ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ. ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ.

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ Read More »

ಉಪ್ಪಿನಂಗಡಿ ದುರ್ಗಾಗಿರಿ, ನಿನ್ನಿಕಲ್ಲು ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಉಪ್ಪಿನಂಗಡಿ: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ಗ್ರಾಮದ ದುರ್ಗಾಗಿರಿ ಮತ್ತು ನಿನ್ನಿಕಲ್ಲು ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಸುತ್ತಮುತ್ತಲಿನಲ್ಲಿರುವ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಅಲ್ಲದೆ ದೇವಸ್ಥಾನ ಛಾವಣಿಯನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಮೇಲ್ವಿಚಾರಕ ಶಿವಪ್ಪ, ಜನಜಾಗೃತಿ ವಲಯಾಧ್ಯಕ್ಷ, ಒಕ್ಕೂಟದ ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಪಂಚಾಯತ್ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಸೇವಾ ಪ್ರತಿನಿಧಿಗಳಾದ ಉಷಾ ಹರೀಶ್. ಶಶಿ ಗಂಗಾಧರ,

ಉಪ್ಪಿನಂಗಡಿ ದುರ್ಗಾಗಿರಿ, ನಿನ್ನಿಕಲ್ಲು ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ Read More »

error: Content is protected !!
Scroll to Top