ಧಾರ್ಮಿಕ

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ […]

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾರ್ಚ್ 9ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಜೆ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವಕ್ಕೆ ಎಣ್ಣೆ ಬೂಳ್ಯ ನೀಡಿ, ಬಳಿಕ ಅನ್ನಸಂತರ್ಪಣೆ ಜರಗಿತು. ಇದೇ ಸಂದರ್ಭ ನೇಮೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಕ್ಕಿಡಿಪ್ ಡ್ರಾದ ಫಲಿತಾಂಶ ನಡೆಯಿತು. ರಾತ್ರಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು, ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ

ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು. ಫಲಿತಾಂಶ ಹೀಗಿದೆ: ಪ್ರಥಮ  :  3831, ದ್ವಿತೀಯ  : 4347, ತೃತೀಯ : 2994 ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು. ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ

ಪುತ್ತೂರು: ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಸಂಸ್ಕಾರ ಮಂಗಲ ಹೋಮ, ಆಶ್ಲೇಷಾ ಬಲಿ, ಅಷ್ಟವಟು ಆರಾಧನೆ, ಪಂಚವಿಂಶತಿ ಕಲಶ ಪೂಜೆ, ನಾಗಪ್ರತಿಷ್ಠೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಡಾ.ಎಂ.ಕೆ.ಪ್ರಸಾದ್  ಮತ್ತಿತರರು ಉಪಸ್ಥಿತರಿದ್ದರು. ಸ್ಥಳ ದಾನಿಗಳಾದ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ Read More »

ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವಾರ್ಷಿಕೋತ್ಸವ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವರ್ಷದ ವಾರ್ಷಿಕೋತ್ಸವ ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಭಜನಾ ಮಂಡಳಿಯಲ್ಲಿ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8ಕ್ಕೆ ಗಣಪತಿ ಹೋಮ, 9 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನಾಗ ತಂಬಿಲ, ದೈವಗಳಇಗೆ ತಂಬಿಲ ಸೇವೆ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ 12 ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಊರ

ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವಾರ್ಷಿಕೋತ್ಸವ Read More »

ಪರಿಸರ ಜಾಗೃತಿಗೆ ಸಾಕ್ಷಿಯಾಗಲಿರುವ ಶ್ರೀ ಮಾರಿಯಮ್ಮ ಬ್ರಹ್ಮಕಲಶೋತ್ಸವ

ದೇವಸ್ಥಾನಕ್ಕೆ ಬಳಸಿದ ಮರದ ಬದಲಾಗಿ 500 ಸಸಿ ನೆಡುವ ಸಂಕಲ್ಪ ಕಾರ್ಕಳ : ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ನಾಡಿನಲ್ಲಿ ಕಲೆ, ಸಂಸ್ಕೃತಿ, ವೈವಿಧ್ಯಮಯ ಆಚಾರ ವಿಚಾರ, ಶಿಲ್ಪಕಲೆಗಳಿಗೆ ಪ್ರಸಿದ್ಧಿ ಪಡೆದ ಕಾರ್ಕಳದ ನಗರದಲ್ಲಿ ನಡೆಯುತ್ತಿರುವ ಶ್ರೀ ಮಾರಿಗುಡಿ ಬ್ರಹ್ಮಕಲಶೋತ್ಸವವು ಪರಿಸರ ಜಾಗೃತಿಗೆ ಸಾಕ್ಷಿಯಾಗಲಿದೆ. ದೇವಾಲಯದ ನವೀಕರಣದ ಕೆಲಸ ಕಾರ್ಯಗಳಿಗೆ ಅನೇಕ ಮರಗಳನ್ನು ಬಳಸಿದ್ದು, ಇದಕ್ಕೆ ಪ್ರತಿಯಾಗಿ 500 ಸಸಿಗಳನ್ನು ನೆಟ್ಟು ಪೋಷಣೆಯ ಜವಾಬ್ದಾರಿಯ ಸಂಕಲ್ಪವನ್ನು ಜೀರ್ಣೊದ್ಧಾರ ಸಮಿತಿ ಹೊಂದಿದೆ. ಅರಣ್ಯ ಇಲಾಖೆಯವರಿಂದ ತೆಳ್ಳಾರು ರಸ್ತೆಯಲ್ಲಿನ ಕುಂಬ್ರಪದವಿನಲ್ಲಿ ಜಾಗ

ಪರಿಸರ ಜಾಗೃತಿಗೆ ಸಾಕ್ಷಿಯಾಗಲಿರುವ ಶ್ರೀ ಮಾರಿಯಮ್ಮ ಬ್ರಹ್ಮಕಲಶೋತ್ಸವ Read More »

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು : ಮಿಥುನ್​ ರೈ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಮಿಥುನ್ ರೈ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸದ್ಯ ಸಾಮಾಜಿಕ ತಾಣಗಳಲ್ಲಿ ಮಿಥುನ್ ರೈ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆಕಾಂಗ್ರೆಸ್ ನಾಯಕ ಮಿಥುನ್​ ರೈ ತಮ್ಮ

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು : ಮಿಥುನ್​ ರೈ ವಿವಾದಾತ್ಮಕ ಹೇಳಿಕೆ Read More »

ಮಾ.9 : ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ

ಕುದ್ಮಾರು : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾ.9 ಗುರುವಾರ ಕುದ್ಮಾರು ದೈಪಿಲ ದ್ವಾರದ ಬಳಿ ಕಟ್ದತ್ತಾರು ಕಟ್ಟೆಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಪತಿ ಹೋಮ, ಸಂಜೆ 6 ಕ್ಕೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು, 8.30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು

ಮಾ.9 : ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »

ಇಂದು (ಮಾ.8) : ಕಾರ್ಜಾಲು ದೊಂಪದ ಬಲಿ ನೇಮೋತ್ಸವ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು: ಕಾರ್ಜಾಲು ಶ್ರೀ ಧೂಮಾವತಿ ದೈವದ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಮಾ.11 ರಂದು ನಡೆಯಲಿದ್ದು, ಇದರ ಅಂಗವಾಗಿ ಇಂದು ( ಮಾ.8 ) ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ನಡೆಯಲಿದೆ. ಸಂಜೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿಯಿಂದ ದರ್ಬೆ ವೃತ್ತದ ತನಕ ಆಮಂತ್ರಣ ಪತ್ರ ವಿತರಿಸಲಾಗುವುದು. ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಕಲ್ಲೇಗ ರೂರಲ್ ಡೆವಲಪ್ ಮೆಂಟ್ ಚಾರಿಟೇಬಲ್‍ ಟ್ರಸ್ಟ್‍ನ ಅಧ್ಯಕ್ಷ ಸಂಜೀವ ಕಲ್ಲೇಗ ಚಾಲನೆ ನೀಡಲಿದ್ದಾರೆ ಎಂದು

ಇಂದು (ಮಾ.8) : ಕಾರ್ಜಾಲು ದೊಂಪದ ಬಲಿ ನೇಮೋತ್ಸವ ಆಮಂತ್ರಣ ಪತ್ರಿಕೆ ವಿತರಣೆ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹವನ, ಚಕ್ರಾಬ್ಧ ಮಂಡಲ ವಿಷ್ಣು ಪೂಜೆ, ನಾಗ ಸಾನ್ನಿಧ್ಯದಲ್ಲಿ ನಾಗತಂಬಿಲ, ಮಧ್ಯಾಹ್ನ ಕಲಶಪೂಜೆ, ಕಲಶಾಭಿಷೇಕ, ವಿಶೇಷ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಬಳಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ದೈವಗಳ ಭಂಡಾರ ತೆಗೆದು ದೈವಸ್ಥಾನಗಳಗೆ ತೆರಳಿ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ Read More »

error: Content is protected !!
Scroll to Top