ಧಾರ್ಮಿಕ

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ

ಕುದ್ಮಾರು: ಕುದ್ಮಾರು ಗ್ರಾಮದ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ಭಕ್ತಾದಿಗಳು ಶ್ರೀ ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು. ಬೆಳಗ್ಗಿನಿಂದಲೇ ಭಕ್ತಾದಿಗಳು ಆಗಮಿಸಿ ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು.

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ

ಕಾಣಿಯೂರು : ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ಜಿನೇಶ್ ಭಟ್ ಬರೆಪ್ಪಾಡಿ ಪೂಜಾ ವಿಧಿ ವಿಧಾನ ನಡೆಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳ ಅರ್ಪಿಸಿದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ Read More »

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ

ಕಡಬ : ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ, ಪಂಚಾಮೃತಾಭಿಷೇಕ ಸೇವೆ ಸೋಮವಾರ ಬೆಳಿಗ್ಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ಸೇವೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದ ಮಹಾಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು.

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ Read More »

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ನೇತೃತ್ವದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾ ಭವನದಲ್ಲಿ ನಡೆಯುವ 40ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯಂದು ನಡೆಸುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು. ಕಾವು  ಶ್ರೀ ಗಣೇಶೋತ್ಸವ ಸಮಿತಿಯ  ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್  ಮಂಜಲ್ತಡ್ಕ, ಜೊತೆ

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಪ್ರಥಮ ಹಬ್ಬ. ಶ್ರಾವಣ ಶುಕ್ಲ ಪಂಚಮಿಯಂದು (ಈ ಬಾರಿ ಆ.21 ಸೋಮವಾರ) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಹೊಸ ಬಟ್ಟೆ ಧರಿಸಿ, ನಾಗದೇವರನ್ನು ಪೂಜಿಸಿ, ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ. ಜತೆಗೆ ವಿಷಭಯದ ಸಂಕಟ ತಪ್ಪುತ್ತದೆ ಎಂದು ಭಕ್ತರಲ್ಲಿ ಬಲವಾದ ನಂಬಿಕೆಯಿದೆ. ಉಪವಾಸದಿಂದ ಶಕ್ತಿ ಹೆಚ್ಚಾಗಿ ಅದರ ಫಲ ಲಭಿಸುತ್ತದೆ. ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್ Read More »

ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ತೆರಳುವ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ, ಎಲ್ಲೆಡೆ ನಡೆಯುವ ಬ್ರಹ್ಮಕಲಶೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳಿಗೆ ಹೊರೆಕಾಣಿಕೆ ಸಮರ್ಪಣೆಯಾಗುತ್ತಿದೆ. ಅದರಂತೆ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಸ್ವಾಮೀಜಿಯವರು ಪ್ರತಿಯೊಂದು

ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ Read More »

ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ  ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ19, 26, ಸೆ.2, 9 ಹಾಗೂ ಸೆ.16 ರ ಶನಿವಾರದಂದು ವಿಶೇಷ ಪೂಜೆ ಹಾಗೂ ಸೋಣ ಶನಿವಾರದ ವೃತಧಾರಿಗಳಿಗೆ ಅನ್ನದಾನ ನಡೆಯಲಿದೆ. ಈ ದಿನಗಳಲ್ಲಿ ಸರ್ವಸೇವೆ, ಮಹಾಪೂಜೆ, ಕ್ಷೀರಾಭಿಷೇಕ, ಬಲಿವಾಡು ಸೇವೆ, ಕಲಶಸ್ನಾನ, ಹೂವಿನ ಪೂಜೆ, ಎಳ್ಳೆಣ್ಣೆ ಸೇವೆ, ಕುಂಕುಮಾರ್ಚನೆ ಸೇವೆ ನಡೆಯಲಿದೆ. ಅಲ್ಲದೆ ಪ್ರತಿ ವರ್ಷದಂತೆ ನಾಗರ ಪಂಚಮಿ ಹಬ್ಬ ಆ.21 ಸೋಮವಾರ ನಡೆಯಲಿದ್ದು, ಹಬ್ಬದ ಅಂಗವಾಗಿ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ

ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ Read More »

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆ.19 ಶನಿವಾರ ನಡೆಯಿತು. ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ, ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪೂಜೆಯ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು  ಭಾಗವಹಿಸಿದ್ದರು.

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ವಿಶೇಷ ತೀರ್ಥಸ್ನಾನವು ಆ 19ರಂದು ನಡೆಯಿತು. ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ದೇವಸ್ಥಾನಕ್ಕೆ ಆಗಮಿಸಿ ತೀರ್ಥಸ್ಥಾನ ಮಾಡಿದರು. ಬಳಿಕ ದೇವರ ದರ್ಶನ ಮಾಡಿದರು. ಮುಂದಿನ ವಿಶೇಷ ತೀರ್ಥಸ್ಥಾನ ಆ.26, ಸೆ.2, ಸೆ.9 ಹಾಗೂ ಸೆ.16 ರಂದು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ Read More »

ಆ.25 : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ | ದಶಮಾನೋತ್ಸವ ಕಾರ್ಯಕ್ರಮ

ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ದಶಮಾನೋತ್ಸವ ಕಾರ್ಯಕ್ರಮ ಆ.25ರಂದು 8.30ರಿಂದ ನಾಗರಾಜ ಭಟ್ ಸುಳ್ಯ ನೇತೃತ್ವದಲ್ಲಿ ನಡೆಯಲಿದೆ ಎಂದು ಪೂಜಾ ಸಮಿತಿಯ ಗೌರವಾಧ್ಯಕ್ಷೆ ಸರೋಜಿನಿ ವಿ. ನಾಗಪ್ಪಯ್ಯ ಹೇಳಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 8.30ರಿಂದ ಸಂಕಲ್ಪ ವ್ರತಧಾರಣೆ, 11ಗಂಟೆಗೆ ದಶಮಾನೋತ್ಸವ ಸಭಾ ಕಾರ್ಯಕ್ರಮ, ಅಭಿನಂದನೆ, ಲಕ್ಷ್ಮೀ ಕಟಾಕ್ಷ ಅದೃಷ್ಟ ಚೀಟಿಯ ಡ್ರಾ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 3ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ನಾಟ್ಯ ವೈಭವ,

ಆ.25 : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ | ದಶಮಾನೋತ್ಸವ ಕಾರ್ಯಕ್ರಮ Read More »

error: Content is protected !!
Scroll to Top