ಧಾರ್ಮಿಕ

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ

ಪುತ್ತೂರು: ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ ಮಾರ್ಚ್ 7ರಂದು ಬಂಟ್ರಿಂಜ ಮಾಡದಲ್ಲಿ ನಡೆಯಿತು. ಸೋಮವಾರ ರಾತ್ರಿ ದೊಡ್ಡಮನೆಯಿಂದ ಭಂಡಾರ ಚಿತ್ತಿರಿಗೆ ಬೂಡುಗೆ ತೆರಳಿತು. ಅಲ್ಲಿ ಚಂದನದ ಮೊಗವನ್ನು ಜೊತೆ ಸೇರಿಸಿಕೊಂಡು, ಕಿರುವಾಳು ಭಂಡಾರ ಬಂಟ್ರಿಂಜ ಮಾಡಕ್ಕೆ ಆಗಮಿಸಿತು. ಮಂಗಳವಾರ ಬೆಳಿಗ್ಗೆ ಮೆಚ್ಚಿ ಜಾತ್ರೆ ಆರಂಭಗೊಂಡು, ಮೊದಲಿಗೆ ಚಂದನದ ಮೊಗ ಏರಿಸಲಾಯಿತು. ಬಳಿಕ ಚಿನ್ನದ ಮೊಗ ನಂತರ ಬೆಳ್ಳಿಯ ಮೊಗ ಏರಿಸಿ ನೇಮ ನಡೆಯಿತು. ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ Read More »

ಇಂದು ಮತ್ತು ನಾಳೆ : ಕುದ್ಮಾರು ಕೆಲಂಬೀರಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ

ಕಾಣಿಯೂರು : ಕುದ್ಮಾರು ಗ್ರಾಮದ ಕೆಲಂಬಿರಿ ಗರಡಿಯಲ್ಲಿ 48ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ.7 ಮಂಗಳವಾರ ಬೆಳಿಗ್ಗೆ ಸ್ಥಳ ಶುದ್ಧಿ ಹೋಮ, ನಾಗ್ರಬ್ರಹ್ಮ ತಂಬಿಲ ಮಧ್ಯಾಹ್ನ ಸಾರ್ವಜನಿಕ ಶ್ರೀ ಸತ್ಯನಾರಾಯಣ, ರಾತ್ರಿ ಕಡಬ ಯುವ ವಾಹಿತಿ ಘಟಕದ ವತಿಯಿಂದ ಭಜನಾ ಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು ಬಳಿಕ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ತೆಗೆಯುವುದು, ಅನಂತರ ಅನ್ನಸಂತರ್ಪಣೆ ಜರಗಲಿದೆ. ಮಾ.8 ಬುಧವಾರ

ಇಂದು ಮತ್ತು ನಾಳೆ : ಕುದ್ಮಾರು ಕೆಲಂಬೀರಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ Read More »

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆಗೆ ಭಂಡಾರ ಆಗಮನ | ಮಂಗಳವಾರ ಮಧ್ಯಾಹ್ನ ಇತಿಹಾಸ ಪ್ರಸಿದ್ಧ ಮೆಚ್ಚಿಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆಯ‌ ಹಿಂದಿನ‌ ದಿನವಾದ ಸೋಮವಾರ ರಾತ್ರಿ ದೈವಗಳ ಭಂಡಾರ ಆಗಮನವಾಯಿತು. ದೊಡ್ಡಮನೆಯಿಂದ ಸಂಪ್ರದಾಯದಂತೆ ಭಂಡಾರ ಹೊರಟು, ಚಿತ್ತರಿಗೆ ಬೂಡಿಗೆ ದೈವಗಳ ಭಂಡಾರ ಆಗಮನವಾಯಿತು. ಚಿತ್ತರಿಗೆ ಬೂಡಿನಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಪೂಜೆ ನೆರವೇರಿತು. ನಂತರ ದೈವಗಳ ಭಂಡಾರ ಬಂಟ್ರಿಂಜ ಮಾಡಕ್ಕೆ ತೆರಳಿತು. ಮಂಗಳವಾರ ಮಧ್ಯಾಹ್ನ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆ ನಡೆಯಲಿದೆ.

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆಗೆ ಭಂಡಾರ ಆಗಮನ | ಮಂಗಳವಾರ ಮಧ್ಯಾಹ್ನ ಇತಿಹಾಸ ಪ್ರಸಿದ್ಧ ಮೆಚ್ಚಿಜಾತ್ರೆ Read More »

ಉದ್ಯೋಗದ ಜೊತೆ ಸ್ವ – ಉದ್ಯೋಗಕ್ಕೂ ಗಮನ ಕೊಡಿ |  ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಭಾರತಿ ಎಂ.ಎಲ್.

ಪುತ್ತೂರು: ಸಮಾಜದಲ್ಲಿ ಮಹಿಳೆಯರು ಪುರುಷರಷ್ಟೇ ಸಮಾನ ಪ್ರಾಶಸ್ತ್ಯ ಪಡೆದುಕೊಂಡಿದ್ದು, ಉದ್ಯೋಗದ ಜೊತೆಗೆ ಸ್ವ-ಉದ್ಯೋಗ ನಡೆಸುವತ್ತಲೂ ಗಮನ ಕೊಡಬೇಕು ಎಂದು ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಭಾರತಿ ಎಂ.ಎಲ್. ಹೇಳಿದರು. ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ  ನಡೆದ ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವದಲ್ಲಿ ಅವರು ಮುಖ್ಯಅತಿಥಿಯಾಗಿ ಮಾತನಾಡಿದರು. ಸ್ತ್ರೀಯರನ್ನು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ. ಶಿಕ್ಷಣವೇ ಇಂದು ಎಲ್ಲಾ ಕ್ಷೇತ್ರಗಳ ಅಡಿಪಾಯ. ಶಿಕ್ಷಣ ಪಡೆದವರು ಸ್ವತಂತ್ರವಾಗಿ ಜೀವನ ಕಟ್ಟಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನವೂ ಆಗುತ್ತದೆ

ಉದ್ಯೋಗದ ಜೊತೆ ಸ್ವ – ಉದ್ಯೋಗಕ್ಕೂ ಗಮನ ಕೊಡಿ |  ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಭಾರತಿ ಎಂ.ಎಲ್. Read More »

ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಉಜಿರೆ : ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಶನಿವಾರ ವಿವಾಹ ನೋಂದಣಿ ಕಾರ್ಯಾಲಯವನ್ನು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ.

ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ

ಪಡುಮಲೆ : ಪಡುಮಲೆ ಶ್ರೀ ಕೂವೆ ಶಾಸ್ತರ ವಿಷ್ಣುಮೂರ್ತಿ ದೇವಾಲಯದಲ್ಲಿ  1008 ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಮಾ.5 ರಂದು ನಡೆಯಿತು. ಪೂರ್ವಾಹ್ನ ಗಂ 5 ರಿಂದ   ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ವಾಸುದೇವ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ   ಗಣಪತಿ ಹೋಮ,ಕವಟೋದ್ಘಾಟನೆ,ಶಾಂತಿ, ಪ್ರಾಯಶ್ಚಿತ್ತ ಮತ್ತು ಶಾಂತಿ ಹೋಮ ನಡೆದು ಬಳಿಕ ಪಡುಮಲೆ ಒಡೆಯ ಶ್ರೀ ಶಾಸ್ತಾರ ವಿಷ್ಣುಮೂರ್ತಿ  ದೇವರಗೆ  ಕಲಶಾಭಿಷೇಕ  ಅವಭೃತ ಪ್ರೋಕ್ಸಣೆ ಮಹಾಪೂಜೆ ,ಮಂತ್ರಾಕ್ಷತೆ ಕಾರ್ಯಕ್ರಮ ನೆಡೆಯಿತು. .ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. 

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ Read More »

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ

ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಶೌರ್ಯ ಯಾತ್ರೆ ಭಾನುವಾರ ನಡೆಯಿತು. ನಗರದ ದಬೆ ವೃತ್ತದಿಂದ ಹೊರಟ ಶೌರ್ಯ ಯಾತ್ರೆ ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಸಮಾಪನಗೊಂಡಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಿ, ಭಾರತದಲ್ಲಿ ವೀರತ್ವ, ಪರಾಕ್ರಮ ಮೆರೆದವರ ಇತಿಹಾಸವನ್ನು ಮಕ್ಕಳಿಗೆ ತಿಳಿಸಲಾಗದ ವಾತಾವರಣವನ್ನು ಮೆಕಾಲೆ ಶಿಕ್ಷಣ ವ್ಯವಸ್ಥೆ ಮಾಡಿತ್ತು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ Read More »

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ | ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ

ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ಪಂಚಮಿ ರಥ ನಿರ್ಮಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳ ಪೂರ್ವಭಾವಿ ಸಭೆ ಭಾನುವಾರ ದೇವಾಲಯದ ವಠಾರದಲ್ಲಿ ನಡೆಯಿತು. ಶತಮಾನಗಳ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಹಿಂದಿನ ಕಾಲದಲ್ಲಿ ಜಾತ್ರೆಯು ರಥೋತ್ಸವದೊಂದಿಗೆ ವೈಭವಪೂರ್ಣವಾಗಿ ನಡೆಯುತಿತ್ತು. ಕಾಲ ಕ್ರಮೇಣ ಅದು ನಿಂತಿತು. ಅದಕ್ಕೆ ಸಾಕ್ಷಿ ಎಂಬಂತೆ ರಥದ ಪಳೆಯುಳಿಕೆಗಳು ಇತ್ತಿಚ್ಚಿನ ದಿನಗಳ ತನಕವು ದೇವಾಲಯದಲ್ಲಿ ಇತ್ತು. ಕೆಲ ವರ್ಷಗಳ ಹಿಂದೆ ನಡೆದ ಪ್ರಶ್ನಾಚಿಂತನೆಯಲ್ಲಿ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ | ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ Read More »

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಮಾ.25 ರಿಂದ 27 ರ ತನಕ ನಡೆಯುವ ಬಡಗನ್ನೂರು ಗ್ರಾಮದ ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ  ಬಿಡುಗಡೆ  ಮಾಡಲಾಯಿತು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನ ಮಂದಿರ ಪುನಃ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷ ಶ್ರೀನಿವಾಸ ಗೌಡ ಕನ್ನಾಯ,

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ  14 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಭಜನಾ ಮಂದಿರದ ಅಧ್ಯಕ್ಷ ಪ್ರದೀಪ್ ಕೃಷ್ಣ ಬಂಗಾರಡ್ಕ,  ಉಪಾಧ್ಯಕ್ಷ ಗೋಪಾಲಕೃಷ್ಣ ಬಂಗಾರಡ್ಕ, ಕಾರ್ಯದರ್ಶಿ-ಕಿಟ್ಟಣ್ಣ ರೈ ಬಂಗಾರಡ್ಕ ಹಾಗೂ ಊರಿನ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 14ನೇ ವಾರ್ಷಿಕೋತ್ಸವ ಸಮಾರಂಭ ಮಾ.30 ರಂದು ನಡೆಯಲಿದ್ದು, ಅರ್ಧ ಏಕಾಹ ಭಜನೆ, ಸಾಮೂಹಿಕ ಶ್ರೀ ರಾಮ ಕಲ್ಪೋಕ್ತ ಪೂಜೆ ಹಾಗೂ ರಾತ್ರಿ ರಂಗಪೂಜೆ ನಡೆಯಲಿದೆ.

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top