ಧಾರ್ಮಿಕ

ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ

ಕಡಬ: ಹಿಂದೂ ಸಮಾಜ ಎಂಬುದು ಒಂದು ಆಲದ ಮರ. ಆ ಮರದ ರೆಂಬೆ ಕೊಂಬೆಗಳು ಇತರ ಸಮುದಾಯ. ಈ ನಿಟ್ಟಿನಲ್ಲಿ ಆಲದ ಮರದ ರೆಂಬೆಕೊಂಬೆಗಳು ಗಟ್ಟಿಯಾಗಿದ್ದರೆ ಸಮಾಜ ಉಳಿಯಲು ಸಾಧ್ಯ. ಹಾಗೆಯೇ ಇತರ ಸಮುದಾಯ ಬಲಿಷ್ಟವಾದರೆ ಹಿಂದೂ ಸಮುದಾಯ ಗಟ್ಟಿಯಾಗಿರಲು ಸಾಧ್ಯ. ಈ ಪೈಕಿ ಗೌಡ ಸಮುದಾಯ ಒಂದಾಗಿದ್ದು, ಸಂಘಟನಾತ್ಮಕವಾಗಿ ಬೆಳೆಯಬೇಕಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ […]

ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ Read More »

ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಸವಣೂರು: ಬೆಳಂದೂರು ಗ್ರಾಮದ ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಗಣಪತಿ ಹವನ, ಮೃತ್ಯುಂಜಯ ಹೋಮ ಮತ್ತು ದುರ್ಗಾ ಪೂಜೆ ಜೂ.17 ರಂದು ನಡೆಯಲಿದೆ . ಬೆಳಿಗ್ಗೆ ಗಂಟೆ 9-00ರಿಂದ ಗಣಪತಿ ಹವನ ಮೃತ್ಯುಂಜಯ ಹೋಮ ಮಧ್ಯಾಹ್ನ 12-30ಕ್ಕೆ ಮಹಾಪೂಜೆ ಸಂಜೆ 6-00ರಿಂದ ದುರ್ಗಾ ಪೂಜೆ ರಾತ್ರಿ ಗಂಟೆ 8-30ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

 ಚಿಕಿತ್ಸಕ ಗುಣದ ಕವಿ ಕನಕ : ಪ್ರೊ. ತಾಳ್ತಜೆ | ರಾಮಕುಂಜದಲ್ಲಿ ಕನಕ ಕಮ್ಮಟ ಉದ್ಘಾಟನೆ

ರಾಮಕುಂಜ: ತಮಿಳುನಾಡಿನಿಂದ ಮೊದಲ್ಗೊಂಡು ಕನ್ನಡನಾಡಿನ ಮೂಲಕ ಉತ್ತರ ಭಾರತ ಕಡೆಗೆ ವ್ಯಾಪಿಸಿದ ಭಕ್ತಿಲತೆ ಭಾರತದ ಬದುಕನ್ನು ಪೋಷಿಸಿದೆ. ಈ ಭಕ್ತಿ ಪರಂಪರೆಯ ವಿಶಿಷ್ಟ ಕವಿ ಕನಕ. ತನ್ನ ಆಧ್ಯಾತ್ಮಿಕ ಮತ್ತು ಸಾಮಾಜಿಕ ರಚನೆಗಳಲ್ಲಿ ಕನಕದಾಸರು ಚಿಕಿತ್ಸಕ ಗುಣದ ಕವಿಯಾಗಿ ಮೂಡಿಬಂದಿದ್ದಾರೆ ಎಂದು ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತಕುಮಾರ್ ಹೇಳಿದರು. ಅವರು ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ,ಕನಕದಾಸ ಸಂಶೋಧನಾ ಕೇಂದ್ರ ಮತ್ತು ಶ್ರೀ ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜು 

 ಚಿಕಿತ್ಸಕ ಗುಣದ ಕವಿ ಕನಕ : ಪ್ರೊ. ತಾಳ್ತಜೆ | ರಾಮಕುಂಜದಲ್ಲಿ ಕನಕ ಕಮ್ಮಟ ಉದ್ಘಾಟನೆ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಶ್ರೀ ದೇವರಿಗೆ ಅನುಜ್ಞಾ ಕಲಶವು ಜೂ.14 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣೆ,ಸ್ವಸ್ತಿ ಪುಣ್ಯಾಹ ವಾಚನ ,ಶ್ರೀ ಮಹಾಗಣಪತಿ ಹೋಮ,ಅನುಜ್ಞಾ ಕಲಶ ಪೂಜೆ, ಮಧ್ಯಾಹ್ನ 11.10ರಿಂದ ಸಿಂಹ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ದೇವರಿಗೆ ಅನುಜ್ಞಾ ಪ್ರಾರ್ಥನೆ,

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ Read More »

ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಲೋಕಾರ್ಪಣೆ |  ಅರುಣ್ ಕುಮಾರ್ ಪುತ್ತಿಲರಿಂದ ನೊಂದಣಿ ಪ್ರಮಾಣ ಪತ್ರ ಬಿಡುಗಡೆ

ಪುತ್ತೂರು: ಜಾತ್ರೆಗಳಲ್ಲಿ ಭಾರಿ ಮೊತ್ತಕ್ಕೆ ಅಂಗಡಿಗಳನ್ನು ಏಲಂ ಮಾಡಿ ಬಡ ವ್ಯಾಪಾರಸ್ಥರಿಗೆ ಹಾಗೂ ಜಾತ್ರೆಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಆರ್ಥಿಕ ನಷ್ಟ ತಪ್ಪಿಸಲು , ಏಲಂ ಮೊತ್ತವನ್ನು ಕಡಿಮೆ ಮಾಡಿಸಲು ವ್ಯಾಪಾರಿಗಳನ್ನು  ಒಟ್ಟುಗೂಡಿಸಲು  ಹಿಂದೂ ವ್ಯಾಪಾರಸ್ಥರ ಸಂಘ ತಲೆಯೆತ್ತಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ‘ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ  ನೊಂದಾಯಿತವಾಗಿದ್ದು,  ಇದರ ನೊಂದಣಿ ಪತ್ರವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರ ಪುತ್ತೂರಿನ ಪುತ್ತಿಲರ ಪರಿವಾರ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. ಕರ್ನಾಟಕ ರಾಜ್ಯ ಹಿಂದೂ ಜಾತ್ರಾ

ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಲೋಕಾರ್ಪಣೆ |  ಅರುಣ್ ಕುಮಾರ್ ಪುತ್ತಿಲರಿಂದ ನೊಂದಣಿ ಪ್ರಮಾಣ ಪತ್ರ ಬಿಡುಗಡೆ Read More »

ನಾಳೆ (ಜೂ.14) : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ ಜೂ.14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8.30 ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಮಧ್ಯಾಹ್ನ 11.10 ರ ಸಿಂಹಲಗ್ನ ಶುಭ ಮುಹೂರ್ತದಲ್ಲಿ ಶ್ರೀ ದೇವರಿಗೆ ಅನುಜ್ಞಾ ಪ್ರಾರ್ಥನೆ, ಅನುಜ್ಞಾ ಕಲಶಾಭಿಷೇಕ ನಡೆಯಲಿದೆ. 12.30 ರಿಂದ ಮಹಾಪೂಜೆ,

ನಾಳೆ (ಜೂ.14) : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪಾದುಕಾನ್ಯಾಸ ಕಾರ್ಯಕ್ರಮ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಪ್ರಯುಕ್ತ ಜೂ.12 ರಂದು ಸೋಮವಾರ ಪಾದುಕನ್ಯಾಸ ಕಾರ್ಯಕ್ರಮ ನೆರವೇರಿತು.    ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ಪೂಜಾವಿಧಾನ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ,  ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ, ವ್ಯವಸ್ಥಾಪನಾ ಸಮಿತಿಯ ದೇವಯ್ಯ ಗೌಡ ದೇವಸ್ಯ, ದಾಮೋದರ ರೈ ತೊಟ್ಲ, ವಿಠಲ ರೈ ಮೇರ್ಲ, ಕಿಶೋರ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪಾದುಕಾನ್ಯಾಸ ಕಾರ್ಯಕ್ರಮ Read More »

ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಉತ್ತಮ ಮಳೆಗಾಗಿ ವೇದ ಸಂವರ್ಧನಾ ಪ್ರತಿಷ್ಟಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆಯು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ತಡವಾದ ಮಳೆಯು ಪ್ರಕೃತಿಯ ಸಮತೋಲನ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವ್ಯವಸ್ಥೆಯಲ್ಲೂ ಸಮಸ್ಯೆ ಆಗದಂತೆ ಲೋಕಕ್ಷೇಮ ಮತ್ತು ಉತ್ತಮ ಮಳೆಗಾಗಿ ಪರ್ಜನ್ಯ ಜಪವನ್ನು ಮಾಡಲಾಯಿತು. ದೇವಳದ ಗೋಪುರದಲ್ಲಿ ರುದ್ರ ಪಠಣ, ಪರ್ಜನ್ಯ ಜಪ ಮಾಡಲಾಯಿತು

ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಅರುಣ್ ಕುಮಾರ್ ಪುತ್ತಿಲದಿಂದ ಪೇಜಾವರ ಮಠಾಧೀಶರಿಗೆ ಪಾದ ಪೂಜೆ

ಪುತ್ತೂರು: ಪೇಜಾವರ ಮಠಾಧೀಶರಾದ ಶ್ರೀ ಶ್ರೀ  ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಅರುಣ್ ಕುಮಾರ್ ಪುತ್ತಿಲರ ಮನೆಯಲ್ಲಿ ಜೂ.9 ಶುಕ್ರವಾರ ವಾಸ್ತವ್ಯ ಮಾಡಿದರು. ಅರುಣ್ ಕುಮಾರ್ ಪುತ್ತಿಲ ದಂಪತಿ ಸ್ವಾಮೀಜಿಯವರ ಪಾದ ಪೂಜೆ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಅರುಣ್ ಪುತ್ತಿಲರಲ್ಲಿ ಹಲವು ಮಾತುಕತೆ ನಡೆಸಿದರು. ಸ್ವಾಮೀಜಿ ಜೊತೆ ಪೇಜಾವರ ಆಪ್ತ ವರ್ಗ ಕೂಡ ಆಗಮಿಸಿತ್ತು.

ಅರುಣ್ ಕುಮಾರ್ ಪುತ್ತಿಲದಿಂದ ಪೇಜಾವರ ಮಠಾಧೀಶರಿಗೆ ಪಾದ ಪೂಜೆ Read More »

ನಾಳೆ (ಜೂ.11) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಜೂ.11 ಭಾನುವಾರ ಬೆಳಿಗ್ಗೆ 8 ರಿಮದ 11.15 ತನಕ ನಡೆಯಲಿದೆ. ವೇದ ಸಂವರ್ಧನಾ ಪ್ರತಿಷ್ಠಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಈ ಲೋಕ ಕ್ಷೇಮಕರ ಕಾರ್ಯದಲ್ಲಿ ಭಾಗವಹಿಸಿ ಕೃತಾರ್ಥರಾಗೋಣ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜೂ.11) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ Read More »

error: Content is protected !!
Scroll to Top