ರಾಜ್ಯ

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ […]

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ.

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬಿಜೆಪಿ ಹೋರಾಟ ಬೆಂಬಲಿಸದಿರಲು ನಿರ್ಧಾರ ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ.

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌ Read More »

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ

ಹನಿಟ್ರ್ಯಾಪ್‌ನಲ್ಲಿ ದೊಡ್ಡ ದೊಡ್ಡವರ ಕೈವಾಡ ಇದೆ ಎಂದು ಮಾಹಿತಿ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್​ ಪ್ರಕರಣದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಲಾಗಿದೆ. ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಮತ್ತು ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.ನನಗೆ ಕೂಡ ಹನಿಟ್ರ್ಯಾಪ್ ನಡೆಸಲು

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ Read More »

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ

ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಕಾನೂನಿನ ಮುಂದೆ ತಂದು ನಿಲ್ಲಿಸುವ ಕೆಚ್ಚೆದೆ ಇದೆಯೇ? ದೇಶಾದ್ಯಂತ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಪ್ರಕರಣ ಅಂತಿಮವಾಗಿ ಸುತ್ತಿಕೊಳ್ಳುವುದು ಯಾರ ಕೊರಳಿಗೆ? ಹೀಗೊಂದು ಅನುಮಾನ ಈಗ ರಾಜ್ಯದ ಜನರನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಹನಿಟ್ರ್ಯಾಪ್‌ ಗುಸುಗುಸು ನಿಜ ಎನ್ನುವುದನ್ನು ವಿಧಾನಮಂಡಲ ಕಲಾಪದಲ್ಲೇ ಒಪ್ಪಿಕೊಳ್ಳಲಾಗಿದೆ. ಹಿರಿಯ ಸಚಿವ ಕೆ.ಎನ್‌.ರಾಜಣ್ಣ ತನ್ನನ್ನೂ ಸೇರಿಸಿ ಸುಮಾರು 48 ಮಂದಿಯ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಹಾಗೂ ಅನೇಕರ ವೀಡಿಯೊಗಳು ದಾಖಲಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ.

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ Read More »

ಇಂದು ಕರ್ನಾಟಕ ಬಂದ್‌ : ಬೆಂಗಳೂರಿನಲ್ಲಿ ಪರಿಣಾಮ ಗೋಚರ, ಉಳಿದೆಡೆ ಆಂಶಿಕ

ಉಡುಪಿ, ದಕ್ಷಿಣ ಕನ್ನಡದಲ್ಲಿ ಜನಜೀವನ ಯಥಾಸ್ಥಿತಿ; ವಾಹನಗಳ ಓಡಾಟ ಬೆಂಗಳೂರು: ಬೆಳಗಾವಿಯಲ್ಲಿ ಸರಕಾರಿ ಬಸ್‌ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ಮಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯಗಳ ಬೇಡಿಕೆ ಮುಂದಿರಿಸಿಕೊಂಡು ಕನ್ನಡ ಒಕ್ಕೂಟಗಳು ಕರೆ ನೀಡಿದ ಬಂದ್‌ ಬೆಳಗ್ಗೆ ಆರು ಗಂಟೆಯಿಂದಲೇ ಶುರುವಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ

ಇಂದು ಕರ್ನಾಟಕ ಬಂದ್‌ : ಬೆಂಗಳೂರಿನಲ್ಲಿ ಪರಿಣಾಮ ಗೋಚರ, ಉಳಿದೆಡೆ ಆಂಶಿಕ Read More »

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ

ಸದ್ದಿಲ್ಲದೆ ವೇತನ ಏರಿಸಿಕೊಂಡ ಸರಕಾರ ಬೆಂಗಳೂರು : ಜನರು ಬೆಲೆ ಏರಿಕೆಯಿಂದ ನಿತ್ಯ ಖರ್ಚುವೆಚ್ಚಗಳನ್ನು ಸರಿದೂಗಿಸಲು ಒದ್ದಾಡುತ್ತಿರುವಾಗಲೇ ಸರಕಾರ ಮಾತ್ರ ಮುಖ್ಯಮಂತ್ರಿಯೂ ಸೇರಿದಂತೆ ಎಲ್ಲ ಸಚಿವರ ಮತ್ತು ಶಾಸಕರ ವೇತವನ್ನು ಸದ್ದಿಲ್ಲದೆ ಹೆಚ್ಚಿಸಿಕೊಂಡಿದೆ. ಸಚಿವರು ಮತ್ತು ಶಾಸಕರ ವೇತನವನ್ನು ಶೇ.100ರಷ್ಟು ಹೆಚ್ಚಿಸುವ ಪ್ರಸ್ತಾವಕ್ಕೆ ರಾಜ್ಯಪಾಲರಿಂದ ಅನುತಿಯೂ ದೊರೆತಿದೆ. ಕಲಾಪ ವ್ಯವಹಾರಗಳ ಸಲಹಾ ಸಮಿತಿಯ ನಿರ್ಣಯದಂತೆ ‘ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ Read More »

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ

ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಹನಿಟ್ರ್ಯಾಪ್‌ ಕೃತ್ಯ ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಿನ್ನೆ ಹನಿಟ್ರ್ಯಾಪ್‌ ಕುರಿತು ಜೋರು ಚರ್ಚೆ ನಡೆದ ಬೆನ್ನಿಗೆ ಹನಿಟ್ರ್ಯಾಪ್‌ನ ರೂವಾರಿ ಯಾರು ಮತ್ತು ಯಾರಿಗೆಲ್ಲ ಹನಿಟ್ರ್ಯಾಪ್‌ ಬಲೆ ಹೆಣೆಯಲಾಗಿತ್ತು ಎಂಬ ಮಾಹಿತಿಗಳು ಹೊರಬರತೊಡಗಿವೆ. ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ ಸಹಕಾರಿ ಸಚಿವ ಕೆ.ಎನ್‌. ರಾಜಣ್ಣ ತನ್ನನ್ನೂ ಸೇರಿಸಿ ರಾಜ್ಯ ಮತ್ತು ಕೇಂದ್ರದ 48 ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಶಾಸಕ ಸುನಿಲ್‌ ಕುಮಾರ್‌ ಕೂಡ ಹನಿಟ್ರ್ಯಾಪ್‌ ಕುರಿತಂತೆ ಸರಕಾರದ ಮೇಲೆ

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ Read More »

ಜನರಿಗೆ ಮತ್ತೆ ಕರೆಂಟ್‌ ಶಾಕ್‌ : ಸದ್ದಿಲ್ಲದೆ ವಿದ್ಯುತ್‌ ದರ ಹೆಚ್ಚಳ

ಯೂನಿಟ್‌ಗೆ 36 ಪೈಸೆಯಂತೆ ಹೆಚ್ಚಿಸಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಬೆಂಗಳೂರು : ಈಗಾಗಲೇ ಎಲ್ಲ ಅಗತ್ಯ ವಸ್ತುಗಳ ಮತ್ತು ಸೇವೆಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಸರಕಾರ ಮತ್ತೆ ವಿದ್ಯುತ್‌ ದರ ಏರಿಕೆಯ ಶಾಕ್‌ ಕೊಟ್ಟಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹೆಚ್ಚಳದ ಮೊತ್ತವನ್ನು ಗ್ರಾಹಕರಿಂದ ವಸೂಲಿ ಮಾಡಲು ಕೆಇಆರ್​ಸಿ ಮುಂದಾರುವುದರ ಪರಿಣಾಮವಾಗಿ

ಜನರಿಗೆ ಮತ್ತೆ ಕರೆಂಟ್‌ ಶಾಕ್‌ : ಸದ್ದಿಲ್ಲದೆ ವಿದ್ಯುತ್‌ ದರ ಹೆಚ್ಚಳ Read More »

error: Content is protected !!
Scroll to Top