ರಾಜ್ಯ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ

ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ಕೆರಳಿಸಿದ್ದ ಮೌಲ್ವಿ ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ. ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. […]

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ Read More »

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ

ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆ ಎಂದು ಕಿಡಿಕಾರಿದ ಬಿಜೆಪಿ ನಾಯಕರು ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಈ ತನಿಖೆಯಲ್ಲಿ ಪಕ್ಷಪಾತ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆ ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ Read More »

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು

ಬೆಂಗಳೂರು : ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಜೆಸಿಬಿ ಹರಿದು ಮೃತ ಪಟ್ಟ ಮಗು ಥವನ್ ರೆಡ್ಡಿ (2) ಎನ್ನಲಾಗಿದೆ. ಮಂಗಳವಾರ ಸಂಜೆ 6.30ಕ್ಕೆ ಘಟನೆ ನಡೆದಿದ್ದು, ಜೆಸಿಬಿ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ. ಮೃತ ಮಗು ಥವನ್ ರೆಡ್ಡಿ ಮನೆ ಮುಂದೆ ಆಟವಾಡುತ್ತಿದ್ದಾಗ ವೇಗವಾಗಿ ಬಂದ ಜೆಸಿಬಿ ಮಗುವಿನ ತಲೆಯ ಮೇಲೆ ಹರಿದು ಹೋಗಿದೆ.  ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು Read More »

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ

ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀಯನ್ನು ವರಿಸಲಿರುವ ತೇಜಸ್ವಿ ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.5ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯಕಿಯಾಗಿ ಖ್ಯಾತರಾಗಿದ್ದಾರೆ. ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. 5ರಂದು ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ Read More »

ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ

ಬೆಂಗಳೂರು : ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಾಳೆ. ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ವಯಸ್ಸಾಗಿದೆ ಹೀಗಾಗಿ ಏನಾದ್ರೂ ಹೇಳುತ್ತೀರಾ ಅವರನ್ನು ಹೇಗೆ ಸಾಯಿಸೋದು ಅಂತ ಎಂದು ವೈದ್ಯರಿಗೆ ಮೆಸೇಜ್ ಮಾಡಿದ್ದಾರೆ. ಜೊತೆಗೆ ಒಂದೆರಡು ಮಾತ್ರೆ ತಗೊಂಡ್ರೆ ಸಾಯುತ್ತಾರೆ ಅಲ್ವಾ ಅದು ಹೇಳಿ ಎಂದು ಕೇಳಿಕೊಂಡಿದ್ದಾಳೆ. ಇದಕ್ಕೆ ವೈದ್ಯರು

ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ Read More »

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

26 ಕಿ.ಮೀ. ಯೋಜನೆಯಲ್ಲಿ 3.8 ಕಿ.ಮೀ. ಸುರಂಗ ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ, ಇದಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಎಂದು ತಿರಸ್ಕರಿಸಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಹಾಸನ ಜಿಲ್ಲೆಯ ಮಲೆನಾಡು ಭಾಗದ ಶಾಸಕರು ಮತ್ತು ಋಾಜ್ಯ

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ

ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.‘ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ Read More »

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ

ಮಹಾರಾಷ್ಟ್ರದಲ್ಲಿ ಹುಲಿ, ಚಿರತೆ, ಕಾಗೆಗಳಿಗೂ ಹಕ್ಕಿಜ್ವರ ಬೆಂಗಳೂರು: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್​ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮೃತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಉಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ Read More »

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು 119 ಕೆಜಿ ಗಾಂಜಾ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡಿನ ಮೊಹಿಯುದ್ದೀನ್ ಶಬ್ಬೀರ್ (38), ಮಹಾರಾಷ್ಟ್ರದ ಥಾಣೆಯ ಮಹೇಶ್ ದ್ವಾರಕಾನಾಥ್ ಪಾಂಡೆ (30), ಕೇರಳದ ಅಜಯ್ ಕೃಷ್ಣನ್ (30) ಮತ್ತು ಹರಿಯಾಣದ ಜೀವನ್ ಸಿಂಗ್ (35) ಸೆರೆಯಾಗಿರುವ ಆರೋಪಿಗಳು. ಆರೋಪಿಗಳಿಂದ ಆಲ್ಟೋ ಕಾರು ಹಾಗೂ ಟೆಂಪೋ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ Read More »

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು : ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರ ಜೋಬಿ ಆ್ಯಂಟೋನಿ (45) ಹಾಗೂ ಜೋಬಿ ಅವರ ಪತ್ನಿ ಶರ್ಮಿಳಾ (40) ಶವ ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್‌ನ ಏಣಿಯಲ್ಲಿ ಮಂಗಳವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಾಡಿದ ವಿಡಿಯೋದಲ್ಲಿ ‘ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

error: Content is protected !!
Scroll to Top