ರಾಜ್ಯ

ರಾತ್ರಿ ವೇಳೆ ಸರ್ಕಾರಿ ಬಸ್ಸಿಗೆ ಅಡ್ಡಗಟ್ಟಿ ಕುಡುಕರ ಕಿರಿಕಿರಿ

ಚಿಕ್ಕಮಗಳೂರು: ಮಧ್ಯರಾತ್ರಿ ಸಮಯದಲ್ಲಿ ಕುಡಿದು ಅಮಲಿನಲ್ಲಿ ಸರ್ಕಾರಿ ಬಸ್ಸನ್ನು ‌ಅಡ್ಡಗಟ್ಟಿ ಹುಚ್ಚಾಟ ಮೆರೆದ ಘಟನೆ ಚಿಕ್ಕಮಗಳೂರಿನಲ್ಲಿ ‌ನಡೆದಿದೆ. ಸರ್ಕಾರಿ ಬಸ್ಸು ಕಡೂರಿನಿಂದ ‌ಚಿಕ್ಕಮಗಳೂರಿಗೆ ಬರುತ್ತಿತ್ತು. ನಗರದ ಟೆಂಟರ್ ‌ಚಿಕನ್ ಸಮೀಪ ಕುಡುಕರು ತಮ್ಮ ಆಟೋ ಅಡ್ಡಗಟ್ಟಿ ‌ತಡೆದು‌ ರಸ್ತೆ ನಡುವಲ್ಲೇ ಬಸ್ಸು ನಿಲ್ಲುವಂತೆ ಮಾಡಿದ್ದಾರೆ. ಸುಮಾರು ರಾತ್ರಿ 12 ಗಂಟೆಯ ವೇಳೆ ಈ ಘಟನೆ ನಡೆದಿದ್ದು, ಅಸಭ್ಯವಾಗಿ ವರ್ತಿಸುತ್ತಾ ಬಸ್ಸಿನ ಮುಂದೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾರೆ. ತೊಂದರೆ ಮಾಡದಂತೆ ಬಸ್ಸಿನ ಚಾಲಕ ಮನವಿ ಮಾಡಿದರೂ ಅದಕ್ಕೆ ಕ್ಯಾರೇ […]

ರಾತ್ರಿ ವೇಳೆ ಸರ್ಕಾರಿ ಬಸ್ಸಿಗೆ ಅಡ್ಡಗಟ್ಟಿ ಕುಡುಕರ ಕಿರಿಕಿರಿ Read More »

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ವಿವಾದ : ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ

ಸರ್ಕಾರದ ವಿರುದ್ಧ ಪೋಷಕರ ತೀವ್ರ ಆಕ್ರೋಶ ಬೆಂಗಳೂರು : ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೆಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರವನ್ನು ಸಿಬ್ಬಂದಿ ಬಲವಂತವಾಗಿ ತೆಗೆಸಿರುವುದು ರಾಜ್ಯದಲ್ಲಿ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ಕೆಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಿದೆ. ಗುರುವಾರ ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ವಿವಾದ : ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ Read More »

ವಿದ್ಯುತ್ ತಂತಿ ಸ್ಪರ್ಶ: ಮಾವಿನ ಮರವೇರಿದ್ದ ವ್ಯಕ್ತಿ ಸಾವು

ಮಣಿಪಾಲ: ಡಿಸಿ ಆಫಿಸ್ ಹಿಂಭಾಗದ ಮಾವಿನ ಮರದಲ್ಲಿ ಮಾವಿನ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ. ಅಲೆವೂರು ನಿವಾಸಿ ಸದಾನಂದ ದೇವಾಡಿಗ(55) ಎಂಬವರೇ ‌ಮೃತ ದುರ್ದೈವಿ. ಗ್ರಾಮ ಸಹಾಯಕ ಕೆಲಸವನ್ನು ಅವರು ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಮಾವಿನ ಕಾಯಿ ಕೊಯ್ಯಲು ಅವರು ಮರವೇರಿದ್ದು, ಈ ವೇಳೆ ಅವರು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮರದಿಂದ ಮೃತದೇಹವನ್ನು ತೆರವು ಮಾಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶ: ಮಾವಿನ ಮರವೇರಿದ್ದ ವ್ಯಕ್ತಿ ಸಾವು Read More »

ಸಿಡಿಲು ಬಡಿದು ಇಬ್ಬರು ಯುವಕರ ಸಾವು

ಬೀದರ್: ಗುಡುಗು ಸಹಿತ ಮಳೆಗೆ ಬೀದರ್‌ನ ಬಾಲ್ಕಿಯ ನಾವದಗಿಯಲ್ಲಿ ಇಬ್ಬರು ರೈತರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರೇವಣಸಿದ್ಧ ‌ಮತ್ತು ಜೇವರ್ಗಿಯ ಯಲ್ಲಾಲಿಂಗ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಜಮೀನಿನಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವೇಳೆ ಈ ಘಟನೆ ನಡೆದಿದೆ. ಜೋರಾಗಿ ಸುರಿದ ಮಳೆ, ಗುಡುಗಿಗೆ ಅಲ್ಲೇ ಸಮೀಪದಲ್ಲಿದ್ದ ಮಾವಿನ ಮರದಡಿ ಈ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಸಮಯದಲ್ಲಿ ಸಿಡಿಲು ಮರಕ್ಕೆ ಬಡಿದಿದೆ. ಆಶ್ರಯ ಪಡೆದಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮನೆಗೆ ಆಧಾರ ಸ್ತಂಭದಂತಿದ್ದ ಮಕ್ಕಳನ್ನು ಕಳೆದುಕೊಂಡ

ಸಿಡಿಲು ಬಡಿದು ಇಬ್ಬರು ಯುವಕರ ಸಾವು Read More »

ಕಾಡಾನೆ ದಾಳಿ: ಮೂವರು ಇಟಿಎಫ್ ಸಿಬ್ಬಂದಿಗೆ ಗಾಯ

ಹಾಸನ: ಇಟಿಎಫ್‌ನ ಮೂವರು ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬೇಲೂರಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ರಮೇಶ್, ವಿಶ್ವ, ಜೀವನ್ ಎಂದು ಗುರುತಿಸಲಾಗಿದೆ. ಅದರಲ್ಲಿ ರಮೇಶ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ‌. ಗ್ರಾಮದ ಹಾಸ್ಟೆಲ್ ಹಿಂಭಾಗದಲ್ಲಿ ಸಿಬ್ಬಂದಿ ಮೇಲೆ ಆನೆ ದಾಳಿ ನಡೆದಿರುವುದಾಗಿದೆ. ಕಾಡಾನೆಗಳ ಹೆಜ್ಜೆಗುರುತು ಹಿಂಬಾಲಿಸಿಕೊಂಡು ಈ ಸಿಬ್ಬಂದಿ ಮುನ್ನಡೆಯುತ್ತಿದ್ದರು. ಈ ಸಮಯದಲ್ಲಿ ಇವರ ಮೇಲೆ ಏಕಾಏಕಿ ಆನೆ ದಾಳಿ ನಡೆದಿರುವುದಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ

ಕಾಡಾನೆ ದಾಳಿ: ಮೂವರು ಇಟಿಎಫ್ ಸಿಬ್ಬಂದಿಗೆ ಗಾಯ Read More »

ವಿಚಾರಣಾಧೀನ ಖೈದಿ ಆಸ್ಪತ್ರೆಯ ಬಾತ್‌ರೂಮ್ ಗಾಜು ಒಡೆದು ಪರಾರಿ

ಬಳ್ಳಾರಿ: ವಿಚಾರಣಾಧೀನ ಖೈದಿಯೊಬ್ಬನನ್ನು ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆತ ಸ್ನಾನದ ಕೋಣೆಯ ಕಿಟಕಿಯ ಗಾಜು ಹುಡಿ ಮಾಡಿ ತಪ್ಪಿಸಿಕೊಂಡ ಘಟನೆ ನಡೆದಿದೆ. ಚಲನಚಿತ್ರಗಳಲ್ಲಿ ಬರುವಂತೆ ಆರೋಪಿ ಬಾತ್‌ರೂಮ್‌ಗೆ ಹೋಗುವುದಾಗಿ ‌ತಿಳಿಸಿದ್ದು, ಅಲ್ಲಿಗೆ ಹೋದ ಆತ ಬಾತ್‌ರೂಮ್‌ನ ಗಾಜು ಪುಡಿ ಮಾಡಿ ಅಲ್ಲಿಂದ ಪರಾರಿಯಾಗಿರುವುದಾಗಿದೆ. ಪರಾರಿಯಾದ ಆರೋಪಿಯನ್ನು ಹರಪ್ಪನಹಳ್ಳಿಯ ಅಣ್ಣಪ್ಪ ಎಂದು ಗುರುತಿಸಲಾಗಿದೆ. ಈತ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದ. ಮರದಿಂದ ಬಿದ್ದ ಪರಿಣಾಮ ಈತನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆತನನ್ನು ವಿಮ್ಸ್‌ಗೆ

ವಿಚಾರಣಾಧೀನ ಖೈದಿ ಆಸ್ಪತ್ರೆಯ ಬಾತ್‌ರೂಮ್ ಗಾಜು ಒಡೆದು ಪರಾರಿ Read More »

ಹದಗೆಟ್ಟ ಸಚಿವ ಡಿ.ಸುಧಾಕರ್‌ ಆರೋಗ್ಯ : ಐಸಿಯುನಲ್ಲಿ ಚಿಕಿತ್ಸೆ

ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕಿಗೊಳಗಾಗಿರುವ ಸಚಿವ ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಹದಗೆಟ್ಟಿದ್ದು, ಇಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸಚಿವ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರದ ದಿನಗಳಲ್ಲಿ ಅವರಿಗೆ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.

ಹದಗೆಟ್ಟ ಸಚಿವ ಡಿ.ಸುಧಾಕರ್‌ ಆರೋಗ್ಯ : ಐಸಿಯುನಲ್ಲಿ ಚಿಕಿತ್ಸೆ Read More »

ತಾಯಿಗೆ ಬೈಕ್‌ನಿಂದ ಗುದ್ದಿದ ಪಾಪಿ ಮಗ: ದೂರು ದಾಖಲು

ಕಡಬ: ಮಗನೇ ತಾಯಿಗೆ ಬೈಕ್ ಢಿಕ್ಕಿ ಹೊಡೆಸಿ ಗಾಯಗೊಳಿಸಿದ್ದು, ಆರೋಪಿ ಮಗ ದಯಾನಂದನ ‌ವಿರುದ್ಧ ಕಡಬ ‌ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಕುಂತೂರು ಗ್ರಾಮದ ಬೀರಂತಡ್ಕ ನಿವಾಸಿ ಪುಷ್ಪಾವತಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪುಷ್ಪಾವತಿ ಅವರ ಪುತ್ರಿ ಬಂಟ್ವಾಳದ ಇರ್ವತ್ತೂರು ನಿವಾಸಿ ಚೇತನಾ ಬಿ. ಅವರು ಪೊಲೀಸರಿಗೆ ದೂರು ನೀಡಿರುವುದಾಗಿದೆ. ದೂರಿನಲ್ಲಿ ಎ. 4 ರಂದು ದಯಾನಂದ್ ಅವರು ತಮ್ಮ ತಾಯಿ ಪುಷ್ಪಾವತಿ ಅವರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಅಜ್ಜಿ ಮನೆಗೆ ಹೋಗುವುದಾಗಿ ಕರೆದುಕೊಂಡು

ತಾಯಿಗೆ ಬೈಕ್‌ನಿಂದ ಗುದ್ದಿದ ಪಾಪಿ ಮಗ: ದೂರು ದಾಖಲು Read More »

ಖರ್ಗೆ ‌ಪ್ರಧಾನಿ ಮೋದಿ ಅವರಲ್ಲಿ ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಬೆಂಗಳೂರು: ಪ್ರಧಾನಿ ಮೋದಿ ಅವರನ್ನು ಮಲ್ಲಿಕಾರ್ಜುನ ಖರ್ಗೆ ‘ಭಯೋತ್ಪಾದಕ’ ಎಂದು ಟೀಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ‌ಅವರು ಕೆಂಡಾಮಂಡಲವಾಗಿದ್ದಾರೆ. ಖರ್ಗೆ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನಾವು ಖರ್ಗೆ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪರಿಸ್ಥಿತಿಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅವರ ಬಗ್ಗೆ ಕರುಣೆ ತೋರುತ್ತೇನೆ. ಅವರಿಗೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. 25

ಖರ್ಗೆ ‌ಪ್ರಧಾನಿ ಮೋದಿ ಅವರಲ್ಲಿ ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ Read More »

ಅತಿ ವೇಗದಿಂದ ಬಂದ ಕಾರು ಢಿಕ್ಕಿ: ವ್ಯಕ್ತಿ ಸಾವು

ಹುಬ್ಬಳ್ಳಿ: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಗುದ್ದಿದ್ದು, ವ್ಯಕ್ತಿಯ ರುಂಡ ದೇಹದಿಂದ ಬೇರ್ಪಟ್ಟು ಕಾರಿನ ಎಂಜಿನ್ ಒಳಗೆ ಸಿಲುಕಿದ ಘಟನೆ ಕುಂದಗೋಳದ ಶೇರವಾಡದ ಬಳಿ ನಡೆದಿದೆ. ಸದಾನಂದ ಕಾಟೇಗಾರ(32) ಮೃತ ದುರ್ದೈವಿ. ಇವರು ಶೇರವಾಡ ಗ್ರಾಮದವರು ಎಂದು ತಿಳಿದು ಬಂದಿದೆ. ಹಾಳಾಗಿ ನಿಂತಿದ್ದ ಬುಲ್ಡೋಸರ್ ಅನ್ನು ಸರಿಪಡಿಸಲು ಸದಾನಂದ ಅವರು ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿರುವುದಾಗಿದೆ. ಪರಿಣಾಮ ಅವರ ರುಂಡ

ಅತಿ ವೇಗದಿಂದ ಬಂದ ಕಾರು ಢಿಕ್ಕಿ: ವ್ಯಕ್ತಿ ಸಾವು Read More »

error: Content is protected !!
Scroll to Top