ರಾಜ್ಯ

ಬುಧವಾರ ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಎಂಟರಷ್ಟು ಸಚಿವರು ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು : ಡಿ.ಕೆ.ಶಿವಕುಮಾರ್‌ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆಗೆ ಸುಮಾರು ಎಂಟರಷ್ಟು ಸಚಿವರು ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಜೋತಿಷಿ ದ್ವಾರಕನಾಥ್‌ ಅವರು ಡಿಕೆಶಿಗೆ ಅಧಿಕಾರ ಗ್ರಹಣದ ಮೂಹೂರ್ತ ನೀಡಿದ್ದಾರೆ ಎನ್ನಲಾಗಿದೆ. ಅವರ ಸಲಹೆಯಂತೆ ಡಿಕೆಶಿ ಬುಧವಾರ ಗೋಧೂಳಿ ಮುಹೂರ್ತವನ್ನು ಆರಿಸಿಕೊಂಡಿದ್ದಾರೆ. […]

ಬುಧವಾರ ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ Read More »

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? : ಸಿದ್ದರಾಮಯ್ಯಗೆ ಸುರೇಶ್‌ ಕುಮಾರ್‌ ಪ್ರಶ್ನೆ

ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿಯಾಗದಿರುವ ಬಗ್ಗೆ ಸ್ಪಷ್ಟನೆ ಕೊಡಲು ಆಗ್ರಹ ಬೆಂಗಳೂರು: 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಬಾಕಿ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬಹಿರಂಗ ಪತ್ರ ಬರೆದಿದ್ದಾರೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿಬಾಕಿಗೆ ಸ್ಪಷ್ಟನೆ ಹಾಗೂ ಬಾಕಿ ಪಾವತಿ ಮಾಡುವಂತೆ ಒತ್ತಾಯಿಸಿ ಸಿದ್ದಾರೆ. ತಮ್ಮ ಪಕ್ಷದ ಸೂಚನೆಯಂತೆ ತಾವು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೀರಿ. ಇಂದಿನ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? : ಸಿದ್ದರಾಮಯ್ಯಗೆ ಸುರೇಶ್‌ ಕುಮಾರ್‌ ಪ್ರಶ್ನೆ Read More »

ಜಮೀನಿಗಾಗಿ ನಡೆದ ರಕ್ತದೋಕುಳಿ : ಆರು ಜನರ ಬರ್ಬರ ಹತ್ಯೆ

ಹೊಲದಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಗುಂಡಿಕ್ಕಿ ಸಾಯಿಸಿದ ದುಷ್ಕರ್ಮಿಗಳು ವಿಜಯಪುರ : ಆಸ್ತಿ ವಿವಾದ ಹಿನ್ನೆಲೆ 6 ಜನರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜಮೀನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ ನಿರಾಳೆ ಕುಟುಂಬದ

ಜಮೀನಿಗಾಗಿ ನಡೆದ ರಕ್ತದೋಕುಳಿ : ಆರು ಜನರ ಬರ್ಬರ ಹತ್ಯೆ Read More »

ಇಂದು ಸಂಜೆ ಕಾಂಗ್ರೆಸಿನ ಮಹತ್ವದ ಸಿಎಲ್‌ಪಿ ಸಭೆ : ಮುಖ್ಯಮಂತ್ರಿಯ ಅಧಿಕೃತ ಘೋಷಣೆ

ವಿಧಾನಸೌಧದ ಮೆಟ್ಟಿಲುಗಳ ಪ್ರಮಾಣವಚನ ಸ್ವೀಕರ ಸಾಧ್ಯತೆ ಬೆಂಗಳೂರು : ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರೇ ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ ತೀರ್ಮಾನವನ್ನು ಪ್ರಕಟಿಸಲಿದೆ. ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ನೂತನ

ಇಂದು ಸಂಜೆ ಕಾಂಗ್ರೆಸಿನ ಮಹತ್ವದ ಸಿಎಲ್‌ಪಿ ಸಭೆ : ಮುಖ್ಯಮಂತ್ರಿಯ ಅಧಿಕೃತ ಘೋಷಣೆ Read More »

ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆದರೂ ಸಂಭ್ರಮಾಚರಣೆಗೆ ಲಗಾಮು

ಫೈನಲ್‌ ಪಂದ್ಯದ ರಾತ್ರಿಯಿಂದಲೇ ಕಟ್ಟುನಿಟ್ಟಿನ ನಿರ್ಬಂಧಗಳು ಜಾರಿ ಬೆಂಗಳೂರು: ಐಪಿಎಲ್‌ 2026 ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಫೈನಲ್‌ ಪ್ರವೇಶಿಸಿದ್ದು, ಪಂದ್ಯದ ದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ.ಕಳೆದ ಬಾರಿ ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆದಿತ್ತು. ಮಧ್ಯರಾತ್ರಿ 12 ಗಂಟೆ ನಂತರ ರಸ್ತೆ ರಸ್ತೆಗಳಲ್ಲಿ ಆರ್‌ಸಿಬಿ ಫ್ಯಾನ್ಸ್‌ ಸೆಲಬ್ರೇಷನ್‌ ಮಾಡಿದ್ದರು. ಈ ಬಾರಿ ಸಂಭ್ರಮಾಚರಣೆಗೆಗೆ ಕಟ್ಟುನಿಟ್ಟಿನ ನಿಯಮ ತರಲಾಗಿದೆ. ಪೊಲೀಸ್‌ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸೋಷಿಯಲ್ ಮೀಡಿಯಾದ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಒಂದು

ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆದರೂ ಸಂಭ್ರಮಾಚರಣೆಗೆ ಲಗಾಮು Read More »

ಟಯರ್‌ ಸ್ಫೋಟಿಸಿ ಲಾರಿಗೆ ಡಿಕ್ಕಿಯಾದ ಕಾರು : ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ. ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ‌ ಮೃತಪಟ್ಟವರು. ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸುತ್ತಿದ್ದು, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅತಿವೇಗದಿಂದಾಗಿ ಕಾರಿನ ಟೈಯರ್‌ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ‌ ಕಾರು

ಟಯರ್‌ ಸ್ಫೋಟಿಸಿ ಲಾರಿಗೆ ಡಿಕ್ಕಿಯಾದ ಕಾರು : ಐವರು ಸ್ಥಳದಲ್ಲೇ ಸಾವು Read More »

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅಧಿಕಾರ ಹಂಚಿಕೆ ಸೂತ್ರದನ್ವಯ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಗುರುವಾರ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ಇರಲಿಲ್ಲ. ಹೀಗಾಗಿ ಅವರ ಕಾರ್ಯದರ್ಶಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ನೀಡಿದ್ದರು. ಬುಧವಾರ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು Read More »

ಸೋಮವಾರ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಾಧ್ಯತೆ?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಪಟ್ಟವೇರಲು ಸಿದ್ಧತೆ ಬೆಂಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ, ಡಿಸಿಎಂ ಡಿ.ಕೆ ಶಿವಕುಮಾರ್ ಪಾಳಯದಲ್ಲಿ ಚಟುವಟಿಕೆ ಗರಿಗೆದರಿದ್ದು, ಬಹುತೇಕ ಸೋಮವಾರ ಅವರಿಗೆ ಪಟ್ಟಾಭಿಷೇಕಬಾಗಲಿದೆ ಎಂದು ಮೂಲವೊಂದು ತಿಳಿಸಿದೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಿದ್ದಂತೆ, ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶುಕ್ರವಾರ ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯಪಾಲರು ಕಾರ್ಯದ ಒತ್ತಡದಲ್ಲಿರುತ್ತಾರೆ. ಶುಕ್ರವಾರ ಸಂಜೆಯೊಳಗೆ ರಾಜೀನಾಮೆ ಅಂಗೀಕಾರವಾಗಬೇಕಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ

ಸೋಮವಾರ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಾಧ್ಯತೆ? Read More »

ರಾಜೀನಾಮೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದಂತೆ ‌ಸಿದ್ದರಾಮಯ್ಯ ಅವರು ಸಿ.ಎಂ. ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೈಕಮಾಂಡ್ ‌ಸೂಚಿಸಿದ ಹಾಗೆ ತಾವು ರಾಜೀನಾಮೆ ಸಲ್ಲಿಕೆ ಮಾಡಿದ್ದಾಗಿ ತಿಳಿಸಿದ್ದಾರೆ. ಯಾವುದೋ ಕಾರ್ಯದ ನಿಮಿತ್ತ ರಾಜ್ಯಪಾಲರು ಇಂದೋರ್‌ಗೆ ಹೋಗಿದ್ದು, ಅವರು ಮರಳಿದ ಬಳಿಕ ರಾಜೀನಾಮೆ ಪತ್ರ ಅಂಗೀಕಾರವಾಗಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಎರಡು ಬಾರಿ ಸಿ.ಎಂ. ಆಗುವ ಅವಕಾಶ ಸಿಕ್ಕಿದೆ. ಎರಡು ಬಾರಿ ವಿರೋಧ ಪಕ್ಷದ

ರಾಜೀನಾಮೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು? Read More »

ಸಿಎಂ ‌ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮದ್ಯಾಹ್ನ‌ದ ಬಳಿಕ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸುವ ಸಲುವಾಗಿ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರು ನಗರದಲ್ಲಿರದ ಕಾರಣ ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ. ಮೂಲಗಳ ಪ್ರಕಾರ ರಾಜ್ಯಪಾಲರು ರಾಜ ಭವನ ಕ್ಕೆ ಹಿಂದಿರುಗಿದ ನಂತರವಷ್ಟೇ ರಾಜೀನಾಮೆ ಪತ್ರ ಅಂಗೀಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಸಾಂವಿಧಾನಿಕ ಪ್ರಕ್ರಿಯೆಗಳ ನಂತರ ಅಂತಿಮ ಘೋಷಣೆ ಹೊರಬೀಳಲಿದೆ. ಸಿಎಂ ‌ಸ್ಥಾನಕ್ಕೆ ರಾಜೀನಾಮೆ ನೀಡುವ

ಸಿಎಂ ‌ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ Read More »

error: Content is protected !!
Scroll to Top