ರಾಜ್ಯ

ಸರಕಾರಿ ನೌಕರರಿಗೆ ಇನ್ನು ಸೆಲ್ಫಿ ಕ್ಲಿಕ್‌ ಹಾಜರಾತಿ ವ್ಯವಸ್ಥೆ

ಎಐ ಆಧಾರಿತ ಹೊಸ ತಂತ್ರಜ್ಞಾನ ಅಳವಡಿಸಲು ಸಿದ್ಧತೆ ಬೆಂಗಳೂರು: ಸರಕಾರಿ ನೌಕರರು ತಮ್ಮ ಕಚೇರಿ ಆವರಣದಲ್ಲಿ ಮೊಬೈಲ್ ಫೋನ್‌ನಿಂದ ಸೆಲ್ಫಿ ಕ್ಲಿಕ್ ಮಾಡುವ ಮೂಲಕ ತಮ್ಮ ಹಾಜರಾತಿಯನ್ನು ಖಚಿತಪಡಿಸುವ ಈ ಎಐ ಚಾಲಿತ ಹಾಜರಾತಿ ವ್ಯವಸ್ಥೆಯನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರಿ ಕಚೇರಿಯಲ್ಲಿ ಪರಿಚಯಿಸುವ ಸಿದ್ಧತೆ ನಡೆಯುತ್ತಿದೆ. ಸೆಲ್ಫಿ ತೆಗೆಯುವ ವೇಳೆ ಹಾಜರಾತಿಯನ್ನು ನೈಜ ಸಮಯದಲ್ಲಿ ಸೆರೆಹಿಡಿಯಲಾಗುತ್ತದೆ. ಈಗ ಇರುವ ಲೆಡ್ಜರ್‌ನಲ್ಲಿ ಸಹಿ ಮಾಡುವ ಅಥವಾ ಬಯೋಮೆಟ್ರಿಕ್ ಉಪಕರಣದ ಮೇಲೆ ಬೆರಳು ಇಡುವ ಮೂಲಕ […]

ಸರಕಾರಿ ನೌಕರರಿಗೆ ಇನ್ನು ಸೆಲ್ಫಿ ಕ್ಲಿಕ್‌ ಹಾಜರಾತಿ ವ್ಯವಸ್ಥೆ Read More »

ಏಪ್ರಿಲ್‌ನಿಂದ ಟೋಲ್‌ ಸುಂಕ ಹೆಚ್ಚಳ

ಶೇ.5ರಷ್ಟು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರ ಬೆಂಗಳೂರು : ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ವಾಹನ ಮಾಲೀಕರಿಗೆ ಈಗ ಟೋಲ್‌ ಸುಂಕ ಏರಿಕೆ ಬಿಸಿ ತಟ್ಟಲಿದೆ. ಏಪ್ರಿಲ್ 1ರಿಂದ ಕರ್ನಾಟಕಾದ್ಯಂತ ಟೋಲ್ ಸುಂಕ ಶೇ.3ರಿಂದ 5ರಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ

ಏಪ್ರಿಲ್‌ನಿಂದ ಟೋಲ್‌ ಸುಂಕ ಹೆಚ್ಚಳ Read More »

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ

ಸೋಷಿಯಲ್‌ ಮೀಡಿಯಾಗಳಲ್ಲಿರುವ ವೀಡಿಯೊಗಳನ್ನು ಡಿಲೀಟ್‌ ಮಾಡಲು ಆದೇಶ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ನಡೆಯುತ್ತಿರುವ ಅವಹೇಳನ ಮತ್ತು ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಈ ಕುರಿತು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಜತೆಗೆ ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವೀಡಿಯೊಗಳನ್ನು ಡಿಲೀಟ್‌ ಮಾಡುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ಸೌಜನ್ಯ ಪ್ರಕರಣದ ವಿಚಾರವಾಗಿ ಧರ್ಮಸ್ಥಳ

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ Read More »

ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ!

ಕರ್ನಾಟಕದಿಂದ ಓಡಿಹೋಗಿ ಕೈಲಾಸ ದೇಶ ಸ್ಥಾಪಿಸಿಕೊಂಡಿರುವ ನಿತ್ಯಾನಂದ ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ಬಿಡದಿಯ ನಿತ್ಯಾನಂದ ಸ್ವಾಮಿಯ ವಿರುದ್ಧ ಸುಮಾರು 3,900 ಚದರ ಕಿಲೋಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ ದೇಶದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಅವರ ಅನುಯಾಯಿಗಳು ಬುಡಕಟ್ಟು ಜನಾಂಗದವರ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಮಾಡಿದ್ದಾರೆ ಎನ್ನಲಾಗಿದೆ.ಬೊಲಿವಿಯಾದ ಅಮೆಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರುವುದು

ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ! Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕೆಲವೇ ಸೆಕೆಂಡುಗಳಲ್ಲಿ ಹರಡಿ ಬೆಕ್ಕುಗಳನ್ನು ಸಾಯಿಸುವ ವೈರಾಣು ಬೆಂಗಳೂರು: ಹಕ್ಕಿಜ್ವರದ ಹಾವಳಿಯ ಬೆನ್ನಿಗೆ ಈಗ ರಾಜ್ಯದ ಕೆಲವೆಡೆಗಳಲ್ಲಿ ಬೆಕ್ಕುಗಳಿಗೆ ವೈರಸ್‌ ಸೋಂಕು ತಗಲಿದ್ದು, ಬೆಕ್ಕುಗಳು ಹಠಾತ್‌ ಸಾವಿಗೀಡಾಗುತ್ತಿವೆ. ಬೆಕ್ಕುಗಳಿಗೆ ಬಂದಿರುವ ಮರಣಾಂತಿಕ ರೋಗಕ್ಕೆ ಎಫ್​ಪಿವಿ ವೈರಸ್ ಕಾರಣ ಎಂದು ಗುರುತಿಸಲಾಗಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ಅಲ್ಲದೆ ರಾಜ್ಯದ ವಿವಿಧೆಡೆ ವೈರಸ್ ಸೋಂಕು ಹರಡುತ್ತಿದೆ. ರಾಯಚೂರಿನಲ್ಲಿ ಕಳೆದ

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ

ಪ್ರೋಟೊಕಾಲ್‌ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ನೀಡಿದ ಪ್ರೋಟೊಕಾಲ್‌ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ.

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

error: Content is protected !!
Scroll to Top