ರಾಜ್ಯ

ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ

ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್‌ ಶಾಸಕ ಲೇವಡಿ ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ಆಪರೇಷನ್‌ ಸಿಂಧೂರ ಕುರಿತು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡೋದಕ್ಕೆ ನಮ್ಮ ವಿರೋಧವಿದೆ. ಆದರೆ ನಮ್ಮ ದೇಶದೊಳಗೆ ಬಂದು […]

ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ Read More »

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ

ಜಿಲ್ಲೆಯ ಬಹುಕಾಲದ ಕನಸು ನನಸು- ಸಿಎಂ ಸಿದ್ದರಾಮಯ್ಯನವರಿಂದ ಲೋಕಾರ್ಪಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊನೆಗೂ ಹೊಸ ಜಿಲ್ಲಾಧಿಕಾರಿ ಕಾರ್ಯಾಲಯ ಸಿಗುವ ಕಾಲಕೂಡಿಬಂದಿದೆ. ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಉದ್ಘಾಟನೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಚೇರಿಗಳನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈಗಾಗಲೇ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೊಠಡಿಗಳಿಂದ ವಿವಿಧ ಇಲಾಖೆಗಳು ಕಡತಗಳೊಂದಿಗೆ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ Read More »

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ

ಇಂದು ಮಂಗಳೂರಿಗೆ ಅಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಪ್ರಶ್ನೆಗಳ ಬಾಣ ಎಸೆದ ಸಂಸದ ಮಂಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಸಹಿತ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಕೇವಲ ಬಲಿಪಶುವೇ? ಮಂಗಳೂರು ಕೇವಲ ಕಾಂಗ್ರೆಸ್‌ನ ರಾಜಕೀಯ ದಾಳವೇ? ಹೂಡಿಕೆ, ಅಭಿವೃದ್ಧಿಯನ್ನು ಕುಂಠಿತಗೊಳಿಸಿ ಇಲ್ಲಿನ ಶಾಂತಿ ಕದಡಿ, ಚುನಾವಣಾ ಲಾಭಕ್ಕಾಗಿ ಕಮ್ಯೂನಲ್ ಹಣೆಪಟ್ಟಿ ಹಚ್ಚಲು ಈ ಪ್ರದೇಶವನ್ನು ಬಳಸಲಾಗುತ್ತಿದೆಯೇ?

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ Read More »

ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಟೆಕ್ಕಿ

ಬೆಂಗಳೂರು : ಆಪರೇಷನ್‌ ಸಿಂಧೂರ ವಿಜಯೋತ್ಸವ ಆಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ವಿಜಯೋತ್ಸವ ನಡೆಯುತ್ತಿದ್ದಾಗ ಶುಭಾಂಶು ಶುಕ್ಲಾ(26) ಎಂಬ ಯುವಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಛತ್ತಿಸ್‌ಗಢ ಮೂಲದ ಶುಕ್ಲಾ ಬೆಂಗಳೂರಿನಲ್ಲಿ ಟೆಕ್ಕಿ ಆಗಿದ್ದು, ವೈಟ್‌ಫೀಲ್ಡ್‌ನ ಪ್ರಶಾಂತ್‌ ಲೇಔಟ್‌ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ ಶುಭಾಂಶು ಶುಕ್ಲಾ

ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಟೆಕ್ಕಿ Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು

ಬಳ್ಳಾರಿ : ಕುರಿ ಮೇಯಿಸಲು ಹೋದ ವೇಳೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ. ಕುರಿ ಮೇಯಿಸಲು ಹೋದಾಗ ಜೋರು ಮಳೆ ಬಂದ ಕಾರಣ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ಮರಕ್ಕೇ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭೀರಪ್ಪ (45), ಸುನೀಲ್ (26) ಮತ್ತು ವಿನೋದ್ (14) ಮೃತಪಟ್ಟವರು. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು Read More »

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದನ ಕಳ್ಳರು

ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದ ಕೃತ್ಯಕ್ಕೆ ಭಾರಿ ಆಕ್ರೋಶ ಚಿಕ್ಕಮಗಳೂರು : ಬೆಂಗಳೂರು ಮಾದರಿಯಲ್ಲೇ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ದನದ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ವಿಪರೀತ ರಕ್ತ ಸೋರಿಕೆಯಾಗಿ ದನ ಮೃತಪಟ್ಟಿದೆ. ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದನ ಕಳ್ಳರು Read More »

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ

ಯುದ್ಧಕ್ಕೆ ಮೋದಿಯೇ ಕಾರಣ ಎಂಬ ವೀಡಿಯೊ ಅಪ್‌ಲೋಡ್‌ ಮಾಡಿದ್ದ ಯುವಕ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕೆಂದು ಪ್ರಚೋದನಾಕಾರಿ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ?

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ Read More »

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ

ಯುದ್ಧದ ಹಿನ್ನೆಲೆಯಲ್ಲಿ ತೈಲ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಬೆಂಗಳೂರು: ಬೆಂಗಳೂರಿನ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿಹತ್ತಿಕೊಂಡು ತೈಲ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ Read More »

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಸ್ನೇಹಿತನ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗ ಬಂದ ಸಾವು ಕಾರ್ಕಳ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೇ 11ರಂದು ತಡರಾತ್ರಿ ಮಿಯ್ಯಾರು ಎಂಬಲ್ಲಿ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಸಂದರ್ಭ ರಾಕೇಶ್‌

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ Read More »

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜನಾರ್ದನ ರೆಡ್ಡಿ ಬೆಂಗಳೂರು : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನ ರದ್ದಾಗಿದೆ. ಸಿಬಿಐ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ ಬೆನ್ನಿಗೆ ಜನಾರ್ದನ ರೆಡ್ಡಿಯವರನ್ನು ಜೈಲಿಗೆ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಜನಾರ್ದನ ರೆಡ್ಡಿ ಆಂಧ್ರದ ಚಂಚಲಗುಡ ಜೈಲಿನಲ್ಲಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ಏಳು

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು Read More »

error: Content is protected !!
Scroll to Top