ರಾಜ್ಯ

ಸದ್ಯದಲ್ಲೇ ಏರಲಿದೆ ಖಾಸಗಿ ಬಸ್‌ ಟಿಕೆಟ್‌ ದರ

ಡೀಸೆಲ್‌, ಟೋಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಟಿಕೆಟ್‌ ದರ ಹೆಚ್ಚಳಕ್ಕೆ ಬಸ್‌ ಮಾಲೀಕರ ನಿರ್ಧಾರ ಮಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಈಗ ಪ್ರಯಾಣ ದರ ಏರಿಕೆಯಾಗುವ ಸಂಕಷ್ಟ ಎದುರಾಗಲಿದೆ. ರಾಜ್ಯಾದ್ಯಂತ ಖಾಸಗಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರವೇ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಹಾಲು, ಕರೆಂಟ್‌, ಮೆಟ್ರೊ ಟಿಕೆಟ್‌ ದರ, ಸರ್ಕಾರಿ ಬಸ್ ಟಿಕೆಟ್‌ […]

ಸದ್ಯದಲ್ಲೇ ಏರಲಿದೆ ಖಾಸಗಿ ಬಸ್‌ ಟಿಕೆಟ್‌ ದರ Read More »

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ

ಮಂಗಳೂರು: ರಾಜ್ಯದಲ್ಲಿ ಕಳೆದ 20 ತಿಂಗಳಿಂದ ನಡೆಯುತ್ತಿರುವ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರಾರಂಭಿಸಿರುವ ಜನಾಕ್ರೋಶ ಯಾತ್ರೆ ಏ.9ರಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ. ಕಾಂಗ್ರೆಸ್‌ ಸರಕಾರದ ವಿರುದ್ಧ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಾಗಿದ್ದು, ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಏ.9ರಂದು ಮಧ್ಯಾಹ್ನ

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ Read More »

ನಾಳೆ (ಏ.8) : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2025ನೇ ಸಾಲಿನ  ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಏ.8) ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದು ಬಳಿಕ ಮಧ್ಯಾಹ್ನ 1.30ರಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ. 2025ರ ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ಈ ಪರೀಕ್ಷೆಗೆ ರಾಜ್ಯದಿಂದ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ ಗಳಾದ kseab.karnataka.gov.in ಮತ್ತು karresults.nic.in

ನಾಳೆ (ಏ.8) : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌

ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌ Read More »

ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) 2025ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ವಾರವೇ ಪ್ರಕಟಸುವ ನಿರೀಕ್ಷೆ ಇದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಲು ಅವಕಾಶವಿದೆ. karresults.nic.in ಮತ್ತು kseab.karnataka.gov.in ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ

ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ Read More »

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ

ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ

ಬೆಂಗಳೂರು: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಚಿತ್ರಹಿಂಸೆ ನೀಡಿರುವ ವೀಡಿಯೊ ವೈರಲ್ ಆಗಿದೆ. ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ Read More »

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ

ಗೂಡ್ಸ್ ವಾಹನಗಳು, ಟ್ಯಾಕ್ಸಿ ಸೇರಿ 6 ಲಕ್ಷಕ್ಕೂ ವಾಹನಗಳ ಸಂಚಾರ ಸ್ಥಗಿತ ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಏ.14ರಿಂದ ಮುಷ್ಕರ ಹೂಡಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಮತ್ತು ಟೋಲ್ ದರ ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ Read More »

error: Content is protected !!
Scroll to Top