ರಾಜ್ಯ

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ

ಗೂಡ್ಸ್ ವಾಹನಗಳು, ಟ್ಯಾಕ್ಸಿ ಸೇರಿ 6 ಲಕ್ಷಕ್ಕೂ ವಾಹನಗಳ ಸಂಚಾರ ಸ್ಥಗಿತ ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಏ.14ರಿಂದ ಮುಷ್ಕರ ಹೂಡಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಮತ್ತು ಟೋಲ್ ದರ ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ […]

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ Read More »

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ

ಎ.19ರಂದು ರಿಜಿಸ್ಟ್ರರ್‌ ಮದುವೆ ಮಾಡಿಕೊಳ್ಳುವುದಾಗಿ ಹೇಳಿಕೆ ಉಡುಪಿ: ಉಡುಪಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲವ್‌ ಜಿಹಾದ್‌ ಪ್ರಕರಣ ಯುವತಿ ನ್ಯಾಯಾಲಯಕ್ಕೆ ಹಾಜರಾಗುವುದರೊಂದಿಗೆ ತಿರುವು ಪಡೆದುಕೊಂಡಿದೆ. ಕ್ರೈಸ್ತ ಸಮುದಾಯದ 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯನ್ನು ಮುಹಮ್ಮದ್‌ ಅಕ್ರಮ್‌ ಎಂಬಾತ ಅಪಹರಿಸಿ ಬಲವಂತವಾಗಿ ಮದುವೆಯಾಗಲು ತಯಾರಿ ನಡೆಸಿದ್ದಾನೆ. ಈ ವಿಚಾರದಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯುವತಿಯ ತಾಯಿ ಕೆಲದಿನಗಳ ಹಿಂದೆ ಆರೋಪಿಸಿದ್ದರು. ಇದರ ಬೆನ್ನಿಗೆ ಹಿಂದು ಸಂಘಟನೆಗಳು ಮಧ್ಯೆ ಪ್ರವೇಶಿಸಿ ಲವ್‌ ಜಿಹಾದ್‌ ಅರೋಪ ಮಾಡಿದ್ದವು.ಅಪಹರಣ

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ Read More »

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ

2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಇಂತಿದೆ ಬೆಂಗಳೂರು: ಈ ಬೇಸಿಗೆ ರಜೆ ಕಳೆದ ಬಳಿಕ ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭಗೊಳ್ಳಲಿವೆ. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೇ 29ರಿಂದ ಶಾಲೆಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು,

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ Read More »

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ

ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏ.6ರಂದು ನಡೆಯಬೇಕಿದ್ದ ಸಭೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನಾಳೆ ಧರ್ಮಸ್ಥಳದಿಂದ ಉಜಿರೆವರೆಗೆ ಮೆರವಣಿಗೆ ನಡೆಸಿ ಉಜಿರೆಯಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.ಆರಂಭದಲ್ಲಿ ಈ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಪ್‌ ಸೇರಿದಂತೆ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿದ ಬಳಿಕ ಪರಿಸ್ಥಿತಿ ಗಂಭೀರವಾಗಿರುವುದನ್ನು ಅರಿತು ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ

ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ Read More »

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌

ಹವಾಲ ಮೂಲಕ ದುಬೈಗೆ ಕೋಟಿಗಟ್ಟಲೆ ಹಣ ರವಾನೆ ಬೆಂಗಳೂರು : ನಟಿ ರನ್ಯಾ ರಾವ್‌ ಮೂರು ತಿಂಗಳಲ್ಲಿ ಬರೋಬ್ಬರಿ 49.6 ಕೆಜಿ ಚಿನ್ನ ಕಳ್ಳ ಸಾಗಾಟ ಮಾಡಿರುವ ವಿಚಾರ ಬಯಲಾಗಿದೆ. ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಮೂರನೇ ಆರೋಪಿ ಸಾಹಿಲ್ ಜೈನ್ ಡಿಆರ್‌ಐ ಮುಂದೆ ಈ ವಿಚಾರ ಬಾಯಿಬಿಟ್ಟಿದ್ದಾನೆ. ನವಂಬರ್‌ನಿಂದ ರನ್ಯಾ ಬರೋಬ್ಬರಿ 49.6 ಕೆಜಿ ಚಿನ್ನ ಸಾಗಿಸಿದ್ದಾಳೆ. ಈ ಚಿನ್ನವನ್ನೆಲ್ಲ ತಂದು ಸಾಹಿಲ್ ಜೈನ್​ಗೆ ಕೊಟ್ಟಿದ್ದ ರನ್ಯಾ ಅದನ್ನು ಆತನ ಮೂಲಕ ಮಾರಾಟ ಮಾಡಿಸುತ್ತಿದ್ದಳು. ಅಷ್ಟೇ ಅಲ್ಲ

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌ Read More »

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು!

ಪತ್ನಿಯನ್ನು ಸಾಯಿಸಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದ ಗಂಡನಿಗೆ ಶಾಕ್ ಮಡಿಕೇರಿ : ಐದು ವರ್ಷದ ಹಿಂದೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಹೆಂಡತಿ ಹೋಟೆಲೊಂದರಲ್ಲಿ ಪ್ರಿಯಕರನ ಜೊತೆ ಗಂಡನ ಕೈಗೆ ಸಿಕ್ಕಿಬಿದ್ದ ಸಿನಿಮಾ ಮಾದರಿ ಘಟನೆಯೊಂದು ಮಡಿಕೇರಿಯಲ್ಲಿ ಸಂಭವಿಸಿದೆ. ಕುಶಾಲನಗರ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಈ ಕೊಲೆ ಪ್ರಕರಣ ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾದಂತೆ ಅನಾವರಣಗೊಂಡಿದೆ. ತಾನು ಮಾಡದ ಕೊಲೆಗಾಗಿ ಗಂಡ ಎರಡು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಪೊಲೀಸರು ಮಲ್ಲಿಗೆ

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು! Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಎರಡನೇ ದಿನ ಪ್ರವೇಶಿಸಿದ ಅಹೋರಾತ್ರಿ ಧರಣಿ ಬೆಂಗಳೂರು: ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್‌ ಸರಕಾರದ ಬಿಜೆಪಿ ಬೆಂಗಳುರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ಬಿಜೆಪಿ ನಿರ್ಧರಿಸಿದೆ. ಫ್ರೀಡಂ ಪಾರ್ಕ್ ಇರುವ ಶೇಷಾದ್ರಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಜೆಪಿ ನಾಯಕರು ಬಿಸಿ ಮುಟ್ಟಿಸಲಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ Read More »

error: Content is protected !!
Scroll to Top