ರಾಜ್ಯ

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ

ಏ.9ರಂದು ಮಂಗಳೂರು, 10ರಂದು ಉಡುಪಿಯಲ್ಲಿ ಜನಾಕ್ರೋಶ ಹೋರಾಟ ಬೆಂಗಳೂರು : ಬೆಲೆಯೇರಿಕೆ ಖಂಡಿಸಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಮುಂದಾಗಿದ್ದು, ಏಪ್ರಿಲ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುವುದರೊಂದಿಗೆ ಬಿಜೆಪಿಯ ಹೋರಾಟ ಪ್ರಾರಂಭವಾಗಲಿದೆ.ಏಪ್ರಿಲ್​ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್​ 5ರಂದು ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ […]

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ Read More »

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು

ಬೆಂಗಳೂರು:  ತಾಯಿ ಸಾವನ್ನಪ್ಪಿದ್ದರಿಂದ ಮಗ ಮನನೊಂದು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಪತ್ತೆಹಚ್ಚಲಾಗಿದೆ. ಮೃತರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಭಾದೆಯಿಂದ ಮನೆಯಲ್ಲಿಯೇ ನೇ‌ಣಿಗೆ ಶರಣಾಗಿದ್ದರು. ಈತ ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕುರಿತಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

ಮಗಳ ಬರ್ತ್‌ಡೇ ದಿನವೇ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಪ್ಲ್ಯಾನ್‌

ಆಡಿಯೊ ಕ್ಲಿಪ್ಪಿಂಗ್‌ನಿಂದ ಬಯಲಾಯಿತು ಸುಪಾರಿ ಹಿಂದಿನ ಮರ್ಮ ಬೆಂಗಳೂರು: ಸಚಿವ ಕೆ.ಎನ್‌ ರಾಜಣ್ಣ ಅವರ ಪುತ್ರ, ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಅವರ ಮಗಳ ಬರ್ತ್‌ಡೇ ದಿನವೇ ಯತ್ನಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ತನ್ನ ಹತ್ಯಾಯತ್ನದ ಬಗ್ಗೆ ರಾಜೇಂದ್ರ ಅವರೇ ದೂರಿನ ಜೊತೆಗೆ ನೀಡಿದ್ದ ಆಡಿಯೊ ಕ್ಲಿಪ್ಪಿಂಗ್‌ ಈಗ ಬಯಲಾಗಿದ್ದು, ಇದರಲ್ಲಿ ಪುಷ್ಪಾ ಎಂದು ಹೇಳಿಕೊಂಡಿರುವ ಮಹಿಳೆ ರಾಕಿ ಎಂಬಾತನಿಗೆ ರಾಜೇಂದ್ರ ಅವರ ಹತ್ಯೆಯ ಪ್ಲ್ಯಾನ್‌ ವಿವರಿಸಿದ ಸಂಭಾಷಣೆಯಿದೆ. ರಾಜೇಂದ್ರ ತುಮಕೂರು ಎಸ್ಪಿಗೆ ನೀಡಿದ ಆಡಿಯೋದಲ್ಲಿ ಸುಪಾರಿ

ಮಗಳ ಬರ್ತ್‌ಡೇ ದಿನವೇ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಪ್ಲ್ಯಾನ್‌ Read More »

ಜೋಕೆ…ಐಸ್‌ಕ್ರೀಂನಲ್ಲೂ ಇದೆ ರಾಸಾಯನಿಕ ಅಂಶ

ಅನಾರೋಗ್ಯಕರ ಪರಿಸರದಲ್ಲಿ ಐಸ್‌ಕ್ರೀಂ ತಯಾರಿ ಪತ್ತೆ ಬೆಂಗಳೂರು: ಬಿರುಬಿಸಿಲಿದೆ, ಸೆಖೆಯಾಗುತ್ತಿದೆ ಎಂದು ಐಸ್‌ಕ್ರೀಂ ತಿನ್ನಲು ಹೋದಿರಾ ಜೋಕೆ! ಐಸ್‌ಕ್ರೀಂನಲ್ಲೂ ಇದೆ ವಿಷಕಾರಿ ಅಂಶ. ಇದಕ್ಕೂ ಮಿಗಿಲಾಗಿ ಐಸ್‌ಕ್ರೀಂ ತಯಾರಿ ಮತ್ತು ಸಂಗ್ರಹ ಅನಾರೋಗ್ಯಕಾರಿ ಪರಿಸರದಲ್ಲಿ ನಡೆಯುತ್ತಿರುವುದನ್ನು ಆರೋಗ್ಯ ಇಲಾಖೆ ಪತ್ತೆಹಚ್ಚಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಐಸ್‌ಕ್ರೀಂಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ರವಾನೆ ಮಾಡಿದ್ದಾರೆ. ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಅಧಿಕಾರಿಗಳು ಪ್ರತಿ ತಿಂಗಳು ಆಹಾರ

ಜೋಕೆ…ಐಸ್‌ಕ್ರೀಂನಲ್ಲೂ ಇದೆ ರಾಸಾಯನಿಕ ಅಂಶ Read More »

ಲಿಫ್ಟ್‌, ಜನರೇಟರ್‌ ರಿನೀವಲ್‌ ಶುಲ್ಕ ಹೆಚ್ಚಳಕ್ಕೆ ಚಿಂತನೆ

ಜನರಿಗೆ ಇನ್ನೊಂದು ಬೆಲೆ ಏರಿಕೆಯ ಬರೆ ಬೆಂಗಳೂರು: ಹಾಲು ಮತ್ತು ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಜನರಿಗೆ ಇನ್ನೊಂದು ಬೆಲೆ ಏರಿಕೆಯ ಬರೆ ಹಾಕಲು ಸರಕಾರ ಚಿಂತಿಸುತ್ತಿದೆ. ಇಂಧನ ಇಲಾಖೆಯ ಅಡಿಯಲ್ಲಿ ಬರುವ ಡಿಪಾರ್ಟ್‌ಮೆಂಟ್‌ ಆಫ್‌ ಇಲೆಕ್ಟ್ರಿಕಕಲ್‌ ಇನ್‌ಸ್ಪೆಕ್ಟರೇಟ್‌ ಈಗ ವಾರ್ಷಿಕ ಪರಿಶೀಲನೆ ಮತ್ತು ರಿನೀವಲ್ ಶುಲ್ಕವನ್ನು ದುಪ್ಪಟ್ಟು ಏರಿಕೆ ಮಾಡುತ್ತಿದೆ. ಈ ಹಿಂದೆ ಮೂರು ಮಹಡಿಯ ಮನೆಗೆ ಲಿಫ್ಟ್ ಹಾಕಿಸಿಕೊಂಡಿದ್ದರೆ ಆ ಮನೆಯನ್ನು ಪರಿಶೀಲನೆ ಮಾಡಿ ರಿನೀವಲ್ ಮಾಡಲು 800ರಿಂದ 1000 ರೂ. ಶುಲ್ಕ ತೆಗೆದುಕೊಳುತ್ತಿದ್ದ

ಲಿಫ್ಟ್‌, ಜನರೇಟರ್‌ ರಿನೀವಲ್‌ ಶುಲ್ಕ ಹೆಚ್ಚಳಕ್ಕೆ ಚಿಂತನೆ Read More »

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

ಹೈದಾರಾಬಾದ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ಯುಗಾದಿ ದಿನವಾದ ಇಂದು ನಡೆದಿದೆ. ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಮೀಪದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಪುತ್ತೂರು: ಬೆಲೆ ಏರಿಕೆಯ ಬಿಸಿಯ ನಡುವೆ ಬೀಡಿ ಕಾರ್ಮಿಕರ ವೇತನ ಇಳಿಕೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ನಡೆ ಖಂಡನೀಯ — ಸಿಐಟಿಯು

ಪುತ್ತೂರು: ಬೀಡಿಕಾರ್ಮಿಕರ ಕನಿಷ್ಟ ವೇತನವನ್ನು ಹಿಮ್ಮುಖವಾಗಿ 315 ರಿಂದ 270  ಕ್ಕೆ ಇಳಿಸಿ ಹೊಸ ಆದೇಶ ಮಾಡಿದ ರಾಜ್ಯ ಸರಕಾರದ ನಡೆಯನ್ನು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ (ಸಿಐಟಿಯು) ಅಧ್ಯಕ್ಷ, ನ್ಯಾಯವಾದಿ ಪಿ.ಕೆ.ಸತೀಶನ್ ಮತ್ತು ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್‌ ತೀವ್ರವಾಗಿ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿರುವ ಸುಮಾರು 7 ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ಅನ್ಯಾಯ ಮಾಡುತ್ತಿದೆ. ಈ ಹಿಂದೆ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ

ಪುತ್ತೂರು: ಬೆಲೆ ಏರಿಕೆಯ ಬಿಸಿಯ ನಡುವೆ ಬೀಡಿ ಕಾರ್ಮಿಕರ ವೇತನ ಇಳಿಕೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ನಡೆ ಖಂಡನೀಯ — ಸಿಐಟಿಯು Read More »

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ

ಸಾಯಿಸಲು ರೌಡಿಶೀಟರ್‌ಗೆ 70 ಲ.ರೂ. ಸುಪಾರಿ ನೀಡಿದ್ದಾರೆ ಎಂದು ಆರೋಪ ತುಮಕೂರು: ಸದನದಲ್ಲಿ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು ತನ್ನ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ತುಮಕೂರಿನಲ್ಲಿ ದೂರು ದಾಖಲಿಸಿದ್ದಾರೆ. ರಾಜೇಂದ್ರ ನೀಡಿದ ದೂರಿನ ಪ್ರಕಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಇತರ ಆರೋಪಿಗಳು.

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ Read More »

ಸೈಬರ್‌ ವಂಚಕರ ಕಿರುಕುಳದಿಂದ ವೃದ್ಧ ದಂಪತಿ ಆತ್ಮಹತ್ಯೆ

ಹಣ ಕೊಟ್ಟರೂ ಕರೆ ಮಾಡಿ ಬೆದರಿಕೆಯೊಡ್ಡುತ್ತಿದ್ದ ವಂಚಕರು ಬೆಂಗಳೂರು: ಸೈಬರ್‌ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಸಾವಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ದಂಪತಿ ಡೆತ್‌ನೋಟ್‌ ಬರೆದಿಟ್ಟಿದ್ದು, ಅದರಲ್ಲಿ ಸೈಬರ್‌ ವಂಚನೆಯ ಮಾಹಿತಿ ನೀಡಿದ್ದಾರೆ.ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆ

ಸೈಬರ್‌ ವಂಚಕರ ಕಿರುಕುಳದಿಂದ ವೃದ್ಧ ದಂಪತಿ ಆತ್ಮಹತ್ಯೆ Read More »

ಮಂಗಳೂರು : ವಧಿಸಲು ಸಾಗಿಸುತ್ತಿದ್ದ 25 ಗೋವುಗಳ ರಕ್ಷಣೆ

ಬಜಪೆ ಸಮೀಪ ಬಜರಂಗ ದಳ ಕಾರ್ಯಕರ್ತರ ಸಾಹಸಮಯ ಕಾರ್ಯಾಚರಣೆ ಮಂಗಳೂರು : ವಧಿಸುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಜಾನುವಾರುಗಳನ್ನು ಬಜರಂಗ ದಳ ಕಾರ್ಯಕರ್ತರು ರಕ್ಷಿಸಿದ್ದಾರೆ. ನಗರದ ಹೊರವಲಯದ ಬಜಪೆ ಸೂರಲ್ಪಾಡಿಯಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮೂಡುಬಿದಿರೆಯತ್ತ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಪಿಕಪ್‌ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಗೋವುಗಳ

ಮಂಗಳೂರು : ವಧಿಸಲು ಸಾಗಿಸುತ್ತಿದ್ದ 25 ಗೋವುಗಳ ರಕ್ಷಣೆ Read More »

error: Content is protected !!
Scroll to Top