ರಾಜ್ಯ

ರೆಪೊ ದರದಲ್ಲಿ ಯಥಾಸ್ಥಿತಿ | ಗೃಹ, ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿಸುದ್ದಿ

ಮುಂಬೈ: ಆರ್.ಬಿ.ಐ.ನ ಹಣಕಾಸು ನೀತಿ ಸಮಿತಿಯೂ ಸತತ ನಾಲ್ಕನೇ ತಿಂಗಳಿನಲ್ಲಿಯೂ ಶೇ. 6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ತಿಳಿಸಿದೆ. ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರಿಂದ ಗೃಹ ಹಾಗೂ ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ […]

ರೆಪೊ ದರದಲ್ಲಿ ಯಥಾಸ್ಥಿತಿ | ಗೃಹ, ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿಸುದ್ದಿ Read More »

ಆಸ್ತಿ ತೆರಿಗೆ ವಸೂಲಿಗೆ ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ | ತೆರಿಗೆ ಸಂಗ್ರಹ ತೃಪ್ತಿ ನೀಡಿಲ್ಲವೆಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ‌ ನಡೆಯದ ಹಿನ್ನೆಲೆ ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ ಉಪ‌ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿ.ಕೆ ಶಿವಕುಮಾರ್ ಅವರು, ಬಿಬಿಎಂಪಿಯ ತೆರಿಗೆ ಸಂಗ್ರಹ ನನಗೆ ತೃಪ್ತಿ ನೀಡಿಲ್ಲ. ಸಂಗ್ರಹವಾಗುತ್ತಿರುವುದು ಕೇವಲ 3 ಸಾವಿರ ಕೋಟಿ ರೂ.ಗಳು ಮಾತ್ರ. ಇಷ್ಟು ಹಣದಲ್ಲಿ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಸರ್ಕಾರ

ಆಸ್ತಿ ತೆರಿಗೆ ವಸೂಲಿಗೆ ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ | ತೆರಿಗೆ ಸಂಗ್ರಹ ತೃಪ್ತಿ ನೀಡಿಲ್ಲವೆಂದ ಡಿ.ಕೆ. ಶಿವಕುಮಾರ್ Read More »

ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ!! ಸತ್ಯಶೋಧನಾ ತಂಡದಲ್ಲಿರುವ ಪ್ರಮುಖರು ಯಾರ್ಯಾರು?

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಗಲಭೆಯನ್ನು ಖಂಡಿಸಿರುವ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಅಕ್ಟೋಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಸತ್ಯಶೋಧನಾ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ

ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ!! ಸತ್ಯಶೋಧನಾ ತಂಡದಲ್ಲಿರುವ ಪ್ರಮುಖರು ಯಾರ್ಯಾರು? Read More »

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ

ತುಮಕೂರು: ತುಮಕೂರು ಬಿಜೆಪಿ ರೈತ ಮೋರ್ಚಾ ಹಾಗೂ ಕರ್ನಾಟಕ ಸುಭಾಷ್ ಪಾಳೇಕರ್ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಆಂದೋಲನ ವೇದಿಕೆ ಆಶ್ರಯದಲ್ಲಿ 101 ನಾಟಿ ಗೋವುಗಳ ವಿತರಣೆ ‘ಗೋ ದಾನ’ ಕಾರ್ಯಕ್ರಮ ಹಾಗೂ ಗೋ ಆಧಾರಿತ ಕೃಷಿಯ ಬಗ್ಗೆ ಮಾಹಿತಿ ಒಂದು ದಿನದ ಕಾರ್ಯಾಗಾರ ಅ. 3ರಂದು ತುಮಕೂರು ಕ್ಯಾತ್ಸಂದ್ರ ಶ್ರೀ ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ಸಭಾಭವನದಲ್ಲಿ ನಡೆಯಿತು. ಶ್ರೀ ಮಠದ  ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಉಪಸ್ಥಿತರಿದ್ದು, ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ Read More »

ಈದ್ ಮಿಲಾದ್ ಮೆರವಣಿಗೆಯಲ್ಲಿ ಕಲ್ಲು ತೂರಾಟ: ಶಿವಮೊಗ್ಗದಲ್ಲಿ ಸೆಕ್ಷನ್ 144

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಜನರು ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಫ್ಲೆಕ್ಸ್, ಬಂಟಿಂಗ್ಸ್ ಬ್ಯಾನರ್ ಕಟ್ಟುವುದು, ಮಾರಕಾಸ್ತ್ರ, ಸ್ಫೋಟಕಗಳ ಬಳಕೆ ನಿರ್ಬಂಧಿಸಲಾಗಿದೆ. ಭಾನುವಾರ ರಾತ್ರಿ ಶಾಂತಿ ನಗರ ರಾಗಿಗುಡ್ಡ ವಾರ್ಡ್ ಗೆ ಸೀಮಿತವಾಗಿ ಸೆಕ್ಷನ್ 144 ಹಾಕಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಇಡೀ ಶಿವಮೊಗ್ಗ ನಗರಕ್ಕೆ ವಿಸ್ತರಿಸಲಾಗಿದೆ. ಮುಂದಿನ ಆದೇಶದವರೆಗೂ

ಈದ್ ಮಿಲಾದ್ ಮೆರವಣಿಗೆಯಲ್ಲಿ ಕಲ್ಲು ತೂರಾಟ: ಶಿವಮೊಗ್ಗದಲ್ಲಿ ಸೆಕ್ಷನ್ 144 Read More »

ಬೆಂಗಳೂರು ತುಳುಕೂಟದಿಂದ ಪುದ್ವಾರ್ ವಣಸ್ದ ಗಮ್ಮತ್ತ್, | ಶಾಸಕರಿಗೆ ಸನ್ಮಾನ

ಪುತ್ತೂರು: ಬೆಂಗಳೂರು ತುಳುಕೂಟದ ವತಿಯಿಂದ ಬೆಂಗಳೂರು ಅತ್ತಿಗುಪ್ಪೆ ಬಂಟರಭವನದಲ್ಲಿ ನಡೆದ ಪುದ್ವಾರ್ ವಣಸ್ದ ಗಮ್ಮತ್ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ತುಳುಕೂಟದ ವತಿಯಿಂದ ಸನ್ಮಾನಿಸಲಾಯಿತು. ಹೊಸ ಅಕ್ಕಿ ಊಟ ಸವಿದು ಪುದ್ವಾರ್ ಕಾರ್ಯಕ್ರಮದಲ್ಲಿ ಜಿಲ್ಲೆಯ ತುಳು ಬಾಂಧವರು ಪುದ್ವಾರ್ ಆಚರಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ತುಳುಕೂಟದ ಅಧ್ಯಕ್ಷ ರಾಜೇಂದ್ರ ಕುಮಾರ್, ತುಳುಕೂಟದ ಪ್ರಮುಖರಾದ ಸುಂದರ್‌ರಾಜ್ ರೈ, ರವೀಂದ್ರನಾಥ ಮಾರ್ಲ, ಅಜಿತ್ ಹೆಗ್ಡೆ ಜಿ, ಸಹಿತಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಬೆಂಗಳೂರು ತುಳುಕೂಟದಿಂದ ಪುದ್ವಾರ್ ವಣಸ್ದ ಗಮ್ಮತ್ತ್, | ಶಾಸಕರಿಗೆ ಸನ್ಮಾನ Read More »

ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವ

ಕುಶಾಲನಗರ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಅವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು. ಡಾ. ಅನುರಾಧಾ ಕುರುಂಜಿ ಅವರಿಗೆ ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರೂ ಆಗಿದ್ದಾರೆ. ವೇದಿಕೆಯಲ್ಲಿ ವಿಜಯ ವಿಷ್ಣು ಭಟ್, ಉಷಾ, ಸಂತೋಷ ಕುಡೆಕಲ್ಲು, ರಂಗಸ್ವಾಮಿ,

ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವ Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ

ಸುಬ್ರಹ್ಮಣ್ಯ: ಅಂಗಡಿ ಮಾಲಕರೊಬ್ಬರು ನಿಷೇಧದ ನಡುವೆಯೇ ಶಾಲಾ ಕಾಲೇಜು ಬಳಿ ತಂಬಾಕು ಮಾರಾಟ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬಳು ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಿಂದ ಶೀಘ್ರ ಸ್ಪಂದನೆ ದೊರಕಿದೆ. ಪತ್ರ ತಲುಪಿದ ಸ್ವಲ್ಪ ಹೊತ್ತಿನಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದು ಕಡಬ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೈಕಂಬದಲ್ಲಿ ನಡೆದಿದೆ. ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಪತ್ರ ಬರೆದ ಬಾಲಕಿ. ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಬಂದಿದ್ದ ಧಾರ್ಮಿಕ ಕೇಂದ್ರಗಳ ಬಳಿಯ ಮಾದಕ ವಸ್ತು

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ Read More »

ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ: ಗುಡುಗಿದ ಜೆಡಿಎಸ್ ರಾಜ್ಯಾಧ್ಯಕ್ಷ?

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ನಡುವೆ ನಡೆದಿರುವ ಚುನಾವಣಾ ಮೈತ್ರಿಯ ವಿರುದ್ಧ ಜೆಡಿಎಸ್‌ ರಾಜ್ಯಾದ್ಯಕ್ಷ ಸಿಎಂ. ಇಬ್ರಾಹಿಂ ಅಬ್ಬರಿಸಿದ್ದಾರೆ. ʻʻಇಬ್ಬರು ಕೂತು ಮಾತನಾಡಿದರೆ ಮೈತ್ರಿ ಆಗಲ್ಲ. ನಾನು ರಾಜ್ಯಾಧ್ಯಕ್ಷನಿದ್ದೇನೆ. ಚುನಾಯಿತ ಆಧ್ಯಕ್ಷನಿದ್ದೇನೆʼʼ ಎಂದು ಗುಡುಗಿದ ಅವರು, ಮೈತ್ರಿಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಅಕ್ಟೋಬರ್‌ 16ರಂದು ಕರೆದಿರುವ ಸಮಾನ ಮನಸ್ಕರ ಸಭೆಯಲ್ಲಿ ಮುಂದಿನ ನಡೆಯನ್ನು ನಿರ್ಧರಿಸುವುದಾಗಿ ಪ್ರಕಟಿಸಿದರು. ಅಂದು ಅವರು ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಮೈತ್ರಿಯ ಬಳಿಕ ಮಾಜಿ ಮುಖ್ಯಮಂತ್ರಿ

ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ: ಗುಡುಗಿದ ಜೆಡಿಎಸ್ ರಾಜ್ಯಾಧ್ಯಕ್ಷ? Read More »

ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ

ಪುತ್ತೂರು: ನ. 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಕೋಡಿಂಬಾಡಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಂಗಳೂರು ಕಂಬಳವು ಅಭೂತಪೂರ್ವ ಯಶಸ್ವಿಯಾಗಲಿ ಎಂದು ತನ್ನ ಊರಿನ ದೇವಾಲಯದಲ್ಲಿ ಶನಿವಾರ ಶಾಸಕರು ಪ್ರಾರ್ಥನೆ ಸಲ್ಲಿಸಿದರು. ಪ್ರಥಮ ಭಾರಿಗೆ ರಾಜ್ಯದ ರಾಜಧಾನಿಯಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ.

ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ Read More »

error: Content is protected !!
Scroll to Top