ರಾಜ್ಯ

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ

ಸುಬ್ರಹ್ಮಣ್ಯ: ಅಂಗಡಿ ಮಾಲಕರೊಬ್ಬರು ನಿಷೇಧದ ನಡುವೆಯೇ ಶಾಲಾ ಕಾಲೇಜು ಬಳಿ ತಂಬಾಕು ಮಾರಾಟ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬಳು ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಿಂದ ಶೀಘ್ರ ಸ್ಪಂದನೆ ದೊರಕಿದೆ. ಪತ್ರ ತಲುಪಿದ ಸ್ವಲ್ಪ ಹೊತ್ತಿನಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದು ಕಡಬ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೈಕಂಬದಲ್ಲಿ ನಡೆದಿದೆ. ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಪತ್ರ ಬರೆದ ಬಾಲಕಿ. ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಬಂದಿದ್ದ ಧಾರ್ಮಿಕ ಕೇಂದ್ರಗಳ ಬಳಿಯ ಮಾದಕ ವಸ್ತು […]

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ Read More »

ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ: ಗುಡುಗಿದ ಜೆಡಿಎಸ್ ರಾಜ್ಯಾಧ್ಯಕ್ಷ?

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ನಡುವೆ ನಡೆದಿರುವ ಚುನಾವಣಾ ಮೈತ್ರಿಯ ವಿರುದ್ಧ ಜೆಡಿಎಸ್‌ ರಾಜ್ಯಾದ್ಯಕ್ಷ ಸಿಎಂ. ಇಬ್ರಾಹಿಂ ಅಬ್ಬರಿಸಿದ್ದಾರೆ. ʻʻಇಬ್ಬರು ಕೂತು ಮಾತನಾಡಿದರೆ ಮೈತ್ರಿ ಆಗಲ್ಲ. ನಾನು ರಾಜ್ಯಾಧ್ಯಕ್ಷನಿದ್ದೇನೆ. ಚುನಾಯಿತ ಆಧ್ಯಕ್ಷನಿದ್ದೇನೆʼʼ ಎಂದು ಗುಡುಗಿದ ಅವರು, ಮೈತ್ರಿಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಅಕ್ಟೋಬರ್‌ 16ರಂದು ಕರೆದಿರುವ ಸಮಾನ ಮನಸ್ಕರ ಸಭೆಯಲ್ಲಿ ಮುಂದಿನ ನಡೆಯನ್ನು ನಿರ್ಧರಿಸುವುದಾಗಿ ಪ್ರಕಟಿಸಿದರು. ಅಂದು ಅವರು ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಮೈತ್ರಿಯ ಬಳಿಕ ಮಾಜಿ ಮುಖ್ಯಮಂತ್ರಿ

ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ: ಗುಡುಗಿದ ಜೆಡಿಎಸ್ ರಾಜ್ಯಾಧ್ಯಕ್ಷ? Read More »

ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ

ಪುತ್ತೂರು: ನ. 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಕೋಡಿಂಬಾಡಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಂಗಳೂರು ಕಂಬಳವು ಅಭೂತಪೂರ್ವ ಯಶಸ್ವಿಯಾಗಲಿ ಎಂದು ತನ್ನ ಊರಿನ ದೇವಾಲಯದಲ್ಲಿ ಶನಿವಾರ ಶಾಸಕರು ಪ್ರಾರ್ಥನೆ ಸಲ್ಲಿಸಿದರು. ಪ್ರಥಮ ಭಾರಿಗೆ ರಾಜ್ಯದ ರಾಜಧಾನಿಯಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ.

ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತ್ಯು!!

ಬೈಂದೂರು: ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ದಂಪತಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮಹಾಬಲ ದೇವಾಡಿಗ (58) ಮತ್ತು ಲಕ್ಷ್ಮಿ ಮಹಾಬಲ ದೇವಾಡಿಗ (48) ಮೃತಪಟ್ಟವರು. ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಧ್ಯಾಹ್ನದ ವೇಳೆ ಮನೆ ಕೆಲಸಕ್ಕೆ ಹೋಗುವಾಗ ಪತಿಗೆ ವಿದ್ಯುತ್ ಶಾಕ್ ತಗುಲಿದ್ದು ಅವರನ್ನು ಪತ್ನಿ ರಕ್ಷಿಸಲು ಹೋಗಿ ಇಬ್ಬರೂ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತ್ಯು!! Read More »

ಕರಾವಳಿಯಲ್ಲಿ ಭಾರಿ ಮಳೆಯ ಸೂಚನೆ | ಮೀನುಗಾರರಿಗೆ ಸೂಚನೆ ನೀಡಿದ ಐಎಂಡಿ!!

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಮಳೆ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಐಎಂಡಿ (ಭಾರತೀಯ ಹವಾಮಾನ ಇಲಾಖೆ) ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ

ಕರಾವಳಿಯಲ್ಲಿ ಭಾರಿ ಮಳೆಯ ಸೂಚನೆ | ಮೀನುಗಾರರಿಗೆ ಸೂಚನೆ ನೀಡಿದ ಐಎಂಡಿ!! Read More »

`ಕಾವೇರಿ’ದ ಪ್ರತಿಭಟನೆಗೆ  44 ವಿಮಾನ ಹಾರಾಟ ರದ್ದು | ಪ್ರಯಾಣಿಕರಂತೆ ಬಂದು ಪ್ರತಿಭಟಿಸಲು ಯತ್ನಿಸಿದವರ ಬಂಧನ

ಬೆಂಗಳೂರು: ಕಾವೇರಿ ಪ್ರತಿಭಟನೆಯ ಕಾರಣ ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ, ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿವಿಧ ರಾಜ್ಯಗಳಿಂದ ಆಗಮಿಸಬೇಕಿದ್ದ 44 ವಿಮಾನಗಳು ರದ್ದುಗೊಂಡಿವೆ. ದೆಹಲಿ, ಮುಂಬೈ, ಕೋಲ್ಕತ್ತಾ, ಮಂಗಳೂರು ಸೇರಿದಂತೆ ಹಲವು ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಬೆಂಗಳೂರಿಗೆ ಆಗಮಿಸಬೇಕಿದ್ದ 22 ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 22 ವಿಮಾನಗಳನ್ನು ನಿಲ್ಲಿಸಲಾಗಿದೆ. ಪ್ರಯಾಣಿಕರಿಲ್ಲದ ಕಾರಣ 44 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನತ್ತ ಪ್ರಯಾಣಿಕರು ಮುಖ ಮಾಡಲಿಲ್ಲ. ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ

`ಕಾವೇರಿ’ದ ಪ್ರತಿಭಟನೆಗೆ  44 ವಿಮಾನ ಹಾರಾಟ ರದ್ದು | ಪ್ರಯಾಣಿಕರಂತೆ ಬಂದು ಪ್ರತಿಭಟಿಸಲು ಯತ್ನಿಸಿದವರ ಬಂಧನ Read More »

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ

ಬೆಂಗಳೂರು: ನಾಳೆ ನಡೆಯುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಸೆ. 29ರಂದು ನಡೆಯುವ ಕರ್ನಾಟಕ ಬಂದ್’ಗೆ ರಜೆಯನ್ನು ನೀಡುವಂತೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿಯಾಗುವ ಲಕ್ಷಣಗಳಿವೆ. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ Read More »

ಮಹಿಳಾ ಕ್ರಿಕೆಟ್ ಏಕದಿನ ಪಂದ್ಯಾಟ: ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ

ಪುತ್ತೂರು: ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆಯಲಿರುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಏಕದಿನ ಟ್ರೋಫಿ 2023-24 ಕ್ರಿಕೆಟ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಪುತ್ತೂರು ಮೂಲದ ಶ್ರೀನಿತಿ ಪಿ. ರೈ ಆಯ್ಕೆಯಾಗಿದ್ದಾರೆ. ಅ.8 ರಿಂದ 16 ರ ತನಕ ಪಂದ್ಯಾಟ ನಡೆಯಲಿದೆ. ಶ್ರೀನಿತಿ ಪಿ. ರೈ ಬೆಂಗಳೂರಿನ ಅಕ್ಷಯ ನಗರದಲ್ಲಿರುವ ಸೈಂಟ್ ಆನ್ಸ್ ಐಸಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪುತ್ತೂರಿನ ಸಾಲ್ಮರ ಕೆರೆಮೂಲೆ ನಿವಾಸಿ, ಪ್ರಸ್ತುತ ಕೊಡಗು ಜಿಲ್ಲೆಯ ಮಡಿಕೇರಿ

ಮಹಿಳಾ ಕ್ರಿಕೆಟ್ ಏಕದಿನ ಪಂದ್ಯಾಟ: ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ Read More »

ಹುದ್ದೆ ತೋರಿಸಿದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಕೋರ್ಟ್ ಟ್ವಿಸ್ಟ್…

ಬೆಂಗಳೂರು: ಐಎಎಸ್‌ ಆಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಇದು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಭಾರಿ ಹಿನ್ನಡೆಯಾಗಿ ಪರಿಣಮಿಸಿದೆ. ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಕೊಡಿಸಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ನಗರದ

ಹುದ್ದೆ ತೋರಿಸಿದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಕೋರ್ಟ್ ಟ್ವಿಸ್ಟ್… Read More »

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ನೀಡಲು ನಿರಾಕರಿಸಿದರೇ ಶೃಂಗೇರಿ ಜಗದ್ಗುರು?? ಆಶೀರ್ವಾದ ನಿರಾಕರಿಸಲು ಕಾರಣ ನೀಡಿದ ಮಹಾಸ್ವಾಮೀಜಿ!!

ಶೃಂಗೇರಿ: ಶೃಂಗೇರಿ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಹಾಗೂ ರಾಜ್ಯದ ಸಿಎಂ ಸಿದ್ಧರಾಮಯ್ಯ ಅವರಿಗೆ ಶೃಂಗೇರಿ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರು ಆಶೀರ್ವಾದ ಮಾಡಲು ನಿರಾಕರಿಸಿದ್ದು, ಈ ಕುರಿತಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಜಗದ್ಗುರುಗಳು, “ನೀವು ಮಠಕ್ಕೆ ಬಂದಿದ್ದೀರಿ, ಧನ್ಯವಾದಗಳು. ಆದರೆ, ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ತಿಳಿದಿಲ್ಲ, ನಾವು ನಿಮ್ಮನ್ನು ಆಶೀರ್ವದಿಸಲು ಸಾಧ್ಯವಿಲ್ಲ” ಎಂದು ಹೇಳಿದರು ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ನೀಡಲು ನಿರಾಕರಿಸಿದರೇ ಶೃಂಗೇರಿ ಜಗದ್ಗುರು?? ಆಶೀರ್ವಾದ ನಿರಾಕರಿಸಲು ಕಾರಣ ನೀಡಿದ ಮಹಾಸ್ವಾಮೀಜಿ!! Read More »

error: Content is protected !!
Scroll to Top