ರಾಜ್ಯ

ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ

ಈಗಾಗಲೇ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಅರಣ್ಯ ನಾಶವಾಗಿದೆ ಎಂದ ಪರಿಸರ ಸಚಿವಾಲಯ ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಯೋಜನೆಗೆ ಹೆಚ್ಚುವರಿಯಾಗಿ 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ತಿರಸ್ಕರಿಸಿದೆ. ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರ […]

ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ Read More »

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಸೋಮವಾರ, ಶನಿವಾರ ಮೊಟ್ಟೆ ಕೊಡದ ಕುರಿತು ದೂರು ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನಿವಾರಿಸುವ ಉದ್ದೇಶದಿಂದ 1ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ ಎಸ್‌ಡಿಎಂಸಿ ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುತ್ತಿದ್ದಾರೆ. ಸೋಮವಾರ ಮತ್ತು ಶನಿವಾರ

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ Read More »

ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಸಚಿವ ಜಮೀರ್‌ 10 ಲ.ರೂ. ; ಸ್ಪೀಕರ್‌ ಯು.ಟಿ.ಖಾದರ್‌ 5 ಲ.ರೂ. ವೈಯಕ್ತಿಕ ನೆಲೆಯಲ್ಲಿ ಕೊಡುಗೆ ಮಂಗಳೂರು: ನಗರದ ಕುಡುಪು ಸಮೀಪ ಮೈದಾನದಲ್ಲಿ ನಡೆದಿದ್ದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳದ ವಯನಾಡಿನ ಅಶ್ರಫ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಧನ ವಿತರಿಸಿದೆ. ನಿನ್ನೆ ರಾಜ್ಯ ಕಾಂಗ್ರೆಸ್ ನಿಯೋಗ ಆಶ್ರಫ್‌ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದು, ಈ ಸಂದರ್ಭದಲ್ಲಿ ಪರಿಹಾರದ ಚೆಕ್‌ ಹಸ್ತಾಂತರಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬೆಂಗಳೂರು ನಿವಾಸದಲ್ಲಿ

ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ Read More »

ಹೃದಯಾಘಾತಕ್ಕೆ ಕೊರೋನಾ ‌ಲಸಿಕೆ ಕಾರಣವಲ್ಲ : ದಿನೇಶ್ ಗುಂಡೂರಾವ್ | ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ | ಹಾರ್ಟ್ ಅಟ್ಯಾಕ್‌ಗೆ ‌ಸಂಬಂಧಿಸಿದಂತೆ ಪ್ರತ್ಯೇಕ ಪಠ್ಯ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯಿಂದಾಗಿ ಹೃದಯಾಘಾತ ಸಂಭವಿಸಿರುವುದಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಭೆ ನಡೆಸಿ‌ ಮಾತನಾಡಿದ ಅವರು, ಕೊರೋನಾ‌ದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತಗಳಂತಹ ಅಪಾಯ ಹೆಚ್ಚಾಗಿದೆ. ಆದರೆ ಕೊರೋನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕ್ ಆಗುವ ಸಂಭವ ಹೆಚ್ಚು. ಮೂರು ವರ್ಷಗಳ ನಂತರ ಅದರ ಸಾಧ್ಯತೆ ಕಡಿಮೆ. ಹೃದಯಾಘಾತ ಪ್ರಕರಣಗಳಿಗೆ ಕೊರೋನಾ ‌ಲಸಿಕೆ ಕಾರಣ ಅಲ್ಲ ಎಂದು ಅವರು ಹೇಳಿದ್ದಾರೆ. ಕೊರೋನಾ ‌ಲಸಿಕೆಯಿಂದ ಜನರಿಗೆ

ಹೃದಯಾಘಾತಕ್ಕೆ ಕೊರೋನಾ ‌ಲಸಿಕೆ ಕಾರಣವಲ್ಲ : ದಿನೇಶ್ ಗುಂಡೂರಾವ್ | ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ | ಹಾರ್ಟ್ ಅಟ್ಯಾಕ್‌ಗೆ ‌ಸಂಬಂಧಿಸಿದಂತೆ ಪ್ರತ್ಯೇಕ ಪಠ್ಯ Read More »

ಹಿಂದುತ್ವದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? | ಹೇರ್‌ಸ್ಟೈಲ್ ಬಗ್ಗೆ ಟೀಕೆ ಮಾಡಿದವರಿಗೆ ಸಚಿವರು ಕೊಟ್ಟ ಉತ್ತರ ಹೇಗಿತ್ತು?

ಕೊಪ್ಪಳ: ಹಿಂದುತ್ವದ ಕುರಿತು ಮಾತನಾಡುವವರು ಬಾಯಿ ಮುಚ್ಚಿಕೊಂಡಿರಲಿ. ಹಿಂದುತ್ವ ಎನ್ನುವವರಿಗೆ ಗೊತ್ತಿರುವುದು ಬದನೆಕಾಯಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಬಂಗಾರಪ್ಪ ಅವರು ಈ ಹಿಂದೆ ಹಳ್ಳಿಗಳಲ್ಲಿ ದೇಗುಲಗಳಲ್ಲಿ ಆರ್ಥಿಕ ಬಲ ತುಂಬಲು ಆರಾಧನಾ ಯೋಜನೆ ಆರಂಭ ಮಾಡಿದ್ದರು. ಈಗ ಅಜೀಂ ಪ್ರೇಮ್‌ಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಹಣ ನೀಡಿದ್ದಾರೆ. ಆದರೆ ಇವರ್ಯಾರೂ ಜಾತಿ ನೋಡಿಲ್ಲ. ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ನೀಡಿದ್ದಾರೆ ಎಂದಿದ್ದಾರೆ. ಹಾಗೆಯೇ ಗ್ಯಾರಂಟಿ ಯೋಜನೆಗಳಿಂದ ಪುರುಷರಿಗೆ ಯಾವುದೇ ಬೇಸರ ಇಲ್ಲ ಎಂದು

ಹಿಂದುತ್ವದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? | ಹೇರ್‌ಸ್ಟೈಲ್ ಬಗ್ಗೆ ಟೀಕೆ ಮಾಡಿದವರಿಗೆ ಸಚಿವರು ಕೊಟ್ಟ ಉತ್ತರ ಹೇಗಿತ್ತು? Read More »

ಡ್ರಗ್ಸ್ ಪಾರ್ಟಿ ನಡೆದರೆ ಬಾಡಿಗೆಗೆ ಸ್ಥಳಾವಕಾಶ ಒದಗಿಸಿದ ಮಾಲೀಕನ ಮೇಲೆಯೂ ಕೇಸ್?

ಬೆಂಗಳೂರು: ಡ್ರಗ್ಸ್ ದಂಧೆಗೆ, ಸೇವನೆಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗ ಪೊಲೀಸರು ರೆಸಾರ್ಟ್, ಹೋಂಸ್ಟೇ, ಹೊಟೇಲ್ ಸೇರಿದಂತೆ ಇನ್ನಿತರ ಪಾರ್ಟಿ ಮಾಡುವ ಸ್ಥಳಗಳ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್‌ಗಳು, ಹೊಟೇಲ್‌ಗಳು, ಹೋಮ್‌ಸ್ಟೇ‌ಗಳಲ್ಲಿ ಪಾರ್ಟಿಗಾಗಿ ಬುಕ್ ಮಾಡುವ ಕೆಲ ಆಯೋಜಕರು, ಅಲ್ಲಿ ಮಾದಕ ದ್ರವ್ಯಗಳಿಗಾಗಿಯೂ ವ್ಯವಸ್ಥೆ ಮಾಡುತ್ತಾರೆ‌. ಡ್ರಗ್ಸ್ ಸೇವನೆಯಂತಹ ಸಮಾಜ ಘಾತುಕ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆ ಪಾರ್ಟಿಗಳಿಗೆ ತಮ್ಮ ಕಟ್ಟಡಗಳು, ಸ್ಥಳಗಳನ್ನು ಬಿಟ್ಟು ಕೊಡುವವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಹೋಂಸ್ಟೇ ನಡೆಸುವವರು

ಡ್ರಗ್ಸ್ ಪಾರ್ಟಿ ನಡೆದರೆ ಬಾಡಿಗೆಗೆ ಸ್ಥಳಾವಕಾಶ ಒದಗಿಸಿದ ಮಾಲೀಕನ ಮೇಲೆಯೂ ಕೇಸ್? Read More »

ಈಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಗ್ಯಾರಂಟಿ : ಬಿ.ವೈ. ವಿಜಯೇಂದ್ರ | ನನ್ನನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ವಿಶ್ವಾಸವಿದೆ | ನನ್ನ ಕೆಲಸದ ಮೇಲೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿ ಇದೆ.

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೂ ಅದರಲ್ಲಿ ಬಿಜೆಪಿಗೆ 130 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ವರೆಗೆ ತಾನು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸುವುದಾಗಿ ಹೇಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಪಕ್ಷ ಸಂಘಟನೆಯ ದೃಷ್ಟಿಯಿಂದ ಕೆಲಸ ಮಾಡಿರುವುದಾಗಿಯೂ ಅವರು ನುಡಿದಿದ್ದಾರೆ. ಬಿಜೆಪಿಯ ಕಾರ್ಯಕರ್ತರು ಮತ್ತು ಹೈಕಮಾಂಡ್‌ಗೆ ನನ್ನ ಕಾರ್ಯ ವೈಖರಿಯ ಬಗ್ಗೆ ತೃಪ್ತಿ

ಈಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಗ್ಯಾರಂಟಿ : ಬಿ.ವೈ. ವಿಜಯೇಂದ್ರ | ನನ್ನನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ವಿಶ್ವಾಸವಿದೆ | ನನ್ನ ಕೆಲಸದ ಮೇಲೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿ ಇದೆ. Read More »

ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ

ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆಗಿಳಿದ ದೊಡ್ಡಬಳ್ಳಾಪುರದ ಜನರು ಬೆಂಗಳೂರು: ನೇತ್ರಾವತಿಯ ಉಪನದಿಯಾದ ಎತ್ತಿನಹೊಳೆಯ ಹರಿವನ್ನು ತಿರುಗಿಸಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಿಂದಲೂ ವಿರೋಧ ಇದೆ. ಆದರೂ ಸರ್ಕಾರ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು, ಈಗ ಇದಕ್ಕೆ ಬಯಲುಸೀಮೆಯಲ್ಲೂ ವಿರೋಧ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೆನಹಳ್ಳಿ ಬಳಿ ಎತ್ತಿನಹೊಳೆಯ ನೀರು ಸಂಗ್ರಹಿಸುವ ಸಲುವಾಗಿ ಬೃಹತ್‌ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಲಕ್ಕೆನಹಳ್ಳಿ ಬಳಿ‌ ಎತ್ತಿನಹೊಳೆ‌

ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ Read More »

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ

ರದ್ದಾಗಲಿವೆಯೇ ಗ್ಯಾರಂಟಿ ಯೋಜನೆಗಳು? ಬೆಂಗಳೂರು: ಕರ್ನಾಟಕದಲ್ಲಿನ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರಸ್ತೆ ಬೇಕು ಎಂದಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂಬ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ. ಈ ಹಿಂದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಲಾದ ಮಾಹಿತಿಗಳನ್ನು ತಪ್ಪಾಗಿ ಅರ್ಥೈಸಲಾಗಿರುವುದಾಗಿ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ Read More »

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ

ವಿಪಕ್ಷಕ್ಕೆ ಅಸ್ತ್ರವಾಗಿ ಸಿಕ್ಕಿದ ರಸ್ತೆ ಬೇಕಾ? ಗ್ಯಾರಂಟಿ ಬೇಕಾ ಹೇಳಿಕೆ ಬೆಂಗಳೂರು : ನಿಮಗೆ ರಸ್ತೆ ಬೇಕಾ ಗ್ಯಾರಂಟಿ ಬೇಕಾ? ರಸ್ತೆ ಬೇಕಾದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಪಕ್ಷಕ್ಕೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತಿತರರು ಈ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ದುಸ್ಥಿತಿ

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ Read More »

error: Content is protected !!
Scroll to Top