ರಾಜ್ಯ

ಹುದ್ದೆ ತೋರಿಸಿದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಕೋರ್ಟ್ ಟ್ವಿಸ್ಟ್…

ಬೆಂಗಳೂರು: ಐಎಎಸ್‌ ಆಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಇದು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಭಾರಿ ಹಿನ್ನಡೆಯಾಗಿ ಪರಿಣಮಿಸಿದೆ. ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಕೊಡಿಸಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ನಗರದ […]

ಹುದ್ದೆ ತೋರಿಸಿದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಕೋರ್ಟ್ ಟ್ವಿಸ್ಟ್… Read More »

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ನೀಡಲು ನಿರಾಕರಿಸಿದರೇ ಶೃಂಗೇರಿ ಜಗದ್ಗುರು?? ಆಶೀರ್ವಾದ ನಿರಾಕರಿಸಲು ಕಾರಣ ನೀಡಿದ ಮಹಾಸ್ವಾಮೀಜಿ!!

ಶೃಂಗೇರಿ: ಶೃಂಗೇರಿ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಹಾಗೂ ರಾಜ್ಯದ ಸಿಎಂ ಸಿದ್ಧರಾಮಯ್ಯ ಅವರಿಗೆ ಶೃಂಗೇರಿ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರು ಆಶೀರ್ವಾದ ಮಾಡಲು ನಿರಾಕರಿಸಿದ್ದು, ಈ ಕುರಿತಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಜಗದ್ಗುರುಗಳು, “ನೀವು ಮಠಕ್ಕೆ ಬಂದಿದ್ದೀರಿ, ಧನ್ಯವಾದಗಳು. ಆದರೆ, ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ತಿಳಿದಿಲ್ಲ, ನಾವು ನಿಮ್ಮನ್ನು ಆಶೀರ್ವದಿಸಲು ಸಾಧ್ಯವಿಲ್ಲ” ಎಂದು ಹೇಳಿದರು ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ನೀಡಲು ನಿರಾಕರಿಸಿದರೇ ಶೃಂಗೇರಿ ಜಗದ್ಗುರು?? ಆಶೀರ್ವಾದ ನಿರಾಕರಿಸಲು ಕಾರಣ ನೀಡಿದ ಮಹಾಸ್ವಾಮೀಜಿ!! Read More »

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ | ಫ್ರೀಡಂ ಪಾರ್ಕಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ!!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಇದರ ನಡುವೆ ರೈತರೊಬ್ಬರು ಫ್ರೀಡಂ ಪಾರ್ಕಿನಲ್ಲಿ ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆಯಿತು. ಮರಕ್ಕೆ ನೇಣು ಹಾಕಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ವಿಭಿನ್ನ ರೀತಿಯ ಪ್ರದರ್ಶನಗಳನ್ನು ಜನರು ಮುಂದಿಟ್ಟಿದ್ದಾರೆ. ಕೆಲವರು ಹೆಣದ ರೀತಿಯಲ್ಲೇ ಮಲಗಿ, ಇನ್ನೂ ಕೆಲವರು ರಸ್ತೆಯಲ್ಲಿ ಉರುಳಾಡುತ್ತಾ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ | ಫ್ರೀಡಂ ಪಾರ್ಕಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ!! Read More »

ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅಯೋಧ್ಯೆಯ ರಾಮಜನ್ಮ ಭೂಮಿ ಟ್ರಸ್ಟ್ ಸಮಿತಿಯ ಸದಸ್ಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜೀಯವರ 36ನೇ ಚಾತುರ್ಮಾಸ್ಯ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣಧಾಮದಲ್ಲಿ ಜರಗುತಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಮೈಸೂರಿನ ಬಿ ಬಿ ಕೇರಿಗೆ ಸೌಹಾರ್ದ ಭೇಟಿ ನೀಡಿದರು. ಸ್ವಾಮೀಜಿ ಜೊತೆ ಅರುಣ್ ಪುತ್ತಿಲ ಅವರು ಜೊತೆಗಿದ್ದರು.ಕಾಲೊನಿಯಲ್ಲಿ ಸ್ವಾಮೀಜಿ ಪಾದಯಾತ್ರೆ ನಡೆಸಿ, ಅಲ್ಲಿನ ನಿವಾಸಿಗಳ ಮನೆಗಳಿಗೂ ಭೇಟಿ ನೀಡಿದರು.

ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ Read More »

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್!!

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಶನಿವಾರ ಮಂಡ್ಯ ಬಂದ್‌ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ ವಿಸ್ತರಿಸುತ್ತಿದೆ. ಇದರ ನಡುವೆಯೇ ನಾನಾ ಸಂಘಟನೆಗಳು ಸೇರಿ ಬೆಂಗಳೂರು ಬಂದ್ ಕರೆ ನೀಡಿವೆ. ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದ ಸಭೆಯಲ್ಲಿ ಬಂದ್‌ಗೆ ನಿರ್ಧಾರ ಮಾಡಲಾಗಿದೆ. ಅಂದು ಎಲ್ಲಾ ಸಾರ್ವಜನಿಕ ಸೇವೆ ಸ್ಥಗಿತವಾಗಲಿದೆ, ಸಂಚಾರ ವ್ಯವಸ್ಥೆ ಇರುವುದಿಲ್ಲ. ಶಾಲಾ ಕಾಲೇಜ್‌, ಸರ್ಕಾರಿ ಕಚೇರಿ ಕಾರ್ಯ ಚಟುವಟಿಕೆ ಸ್ಥಗಿತವಾಗಲಿದೆ. ಬೆಂಗಳೂರಿಗೆ ಸಂಪರ್ಕ

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್!! Read More »

ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ!! | ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರದಲ್ಲೂ ಪರಿಷ್ಕರಣೆ!! | ತಕ್ಷಣದಿಂದಲೇ ಜಾರಿಯಾಗುವ ಬದಲಾದ ಹೊಸ ಸಮಯ ಹೀಗಿದೆ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಯ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಹೆಚ್ಚುವರಿ ಸಮಯ ಕೆಲಸ ಮಾಡುವಂತೆ ಹೊಸ ಆದೇಶವನ್ನು ಹೊರಡಿಸಲಾಗಿದೆ. ಅಕ್ಟೋಬರ್ 1ರಿಂದ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ. ಆದರೆ ಈ ಆದೇಶ ನಾಳೆಯಿಂದಲೇ ಅಂದರೆ ಸೆಪ್ಟೆಂಬರ್ 23ರಿಂದಲೇ ಜಾರಿಗೆ ಬರಲಿದ್ದು, ನಾಲ್ಕನೇ ಶನಿವಾರವಾದ ನಾಳೆಯೂ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ

ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ!! | ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರದಲ್ಲೂ ಪರಿಷ್ಕರಣೆ!! | ತಕ್ಷಣದಿಂದಲೇ ಜಾರಿಯಾಗುವ ಬದಲಾದ ಹೊಸ ಸಮಯ ಹೀಗಿದೆ Read More »

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ.

ನವದೆಹಲಿ: ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಿದೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ ಎಂದಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ.

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ. Read More »

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರಮುಖರ ಜೊತೆ ಶಾಸಕ ಅಶೋಕ್ ರೈ ಅವರು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಇದಕ್ಕೆ ಮೊದಲು ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಲಾಗಿದೆ. ಕಂಬಳ ವೀಕ್ಷಣೆಗೆ ರಾಜ್ಯದ ನಾನಾ ಕಡೆಗಳಿಂದ ಕಂಬಳಾಭಿಮಾನಿಗಳು ಆಗಮಿಸುವ ನಿರೀಕ್ಷೆ

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ Read More »

ತೀವ್ರಗೊಂಡ ಕಾವೇರಿ ಹೋರಾಟ: ಬೆಂಗಳೂರಿಗೆ ನೀರು ಪೂರೈಕೆ ನಿಲ್ಲಿಸಲು ಆಗ್ರಹ!!

ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಕರ್ನಾಟಕದಲ್ಲಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿದೆ. ಕಾವೇರಿ ಜಲಾನಯನ ಪ್ರದೇಶಗಳ ರೈತರು ಮತ್ತು ಜನರಿಗೆ ಕುಡಿಯಲು, ವ್ಯವಸಾಯಕ್ಕೆ ನೀರು ಇಲ್ಲದಿರುವಾಗ ಬೆಂಗಳೂರಿಗೆ ಕಾವೇರಿ ನೀರನ್ನು ಕೆಲ ದಿನಗಳವರೆಗೆ ಸರಬರಾಜು ಮಾಡುವುದು ಬೇಡ ಎಂದು ವಿವಿಧ ಸಂಘಟನೆಗಳ ನಾಯಕರು, ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ರೈತ ಹಿತರಕ್ಷಣಾ ಸಮಿತಿಯು ನಾಳೆ ಶನಿವಾರ ಮಂಡ್ಯ ಬಂದ್‌ಗೆ ಕರೆ

ತೀವ್ರಗೊಂಡ ಕಾವೇರಿ ಹೋರಾಟ: ಬೆಂಗಳೂರಿಗೆ ನೀರು ಪೂರೈಕೆ ನಿಲ್ಲಿಸಲು ಆಗ್ರಹ!! Read More »

ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್‌ ನಿಧನ

ಉಡುಪಿ: ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್‌ (57) ಸೆ. 21ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಯಕ್ಷಗಾನ ಭಾಗವತರಾಗಿ ಮಾತ್ರವಲ್ಲದೆ ಕೃತಿ ರಚನಾಕಾರರೂ ಆಗಿದ್ದರು. ಹಲವು ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿ ಅಭಿಮಾನಿಗಳನ್ನು ಸಂಪಾದಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ, ಬಂಧುಗಳನ್ನು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಕಲಾವಿದರು ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್‌ ನಿಧನ Read More »

error: Content is protected !!
Scroll to Top