ರಾಜ್ಯ

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ

3 ವರ್ಷ ಜೈಲು, 5 ಲ.ರೂ. ದಂಡ ವಿಧಿಸುವ ಕಾನೂನು ರಚನೆಗೆ ಮುಂದಾದ ಸರ್ಕಾರ ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್‌ ನಿಷೇಧಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್‌, […]

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ Read More »

ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ

ಮುಖ್ಯಮಂತ್ರಿ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಊಹಾಪೋಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ–ಪ್ರತಿ ಹೇಳಿಕೆಗಳ ಜಟಾಪಟಿ ಜೋರಾಗಿ ನಡೆಯುತ್ತಿರುವ ಹೊತ್ತಿಗೆ ಸಿದ್ದರಾಮಯ್ಯನವರಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿರುವುದು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ. 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ

ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ Read More »

ಪೊಲೀಸ್‌ ಇನ್‌ಸ್ಪೆಕ್ಟರ್‌ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ : ನಾಲ್ಕು ದಿನಗಳ ಬಳಿಕ ಮೃತದೇಹ ಪತ್ತೆ

ಕೌಟುಂಬಿಕ ಕಲಹದಿಂದ ಬೇಸತ್ತು ಡೆತ್‌ನೋಟ್‌ ಬರೆದು ಸಾವಿಗೆ ಶರಣಾದ ಪಿಎಸ್‌ಐ ಬೆಂಗಳೂರು: ನಿವೃತ್ತಿಯ ಅಂಚಿನಲ್ಲಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್‌ ಒಬ್ಬರ ಮೃತದೇಹ ತುಮಕೂರಿನ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ದಾವಣಗೆರೆ ಪೊಲೀಸ್ ಠಾಣೆಯ ಸಬ್‌ಇನ್ಸ್​ ಪೆಕ್ಟರ್ ನಾಗರಾಜಪ್ಪ (58) ಮೃತಪಟ್ಟವರು. ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. 4 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ

ಪೊಲೀಸ್‌ ಇನ್‌ಸ್ಪೆಕ್ಟರ್‌ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ : ನಾಲ್ಕು ದಿನಗಳ ಬಳಿಕ ಮೃತದೇಹ ಪತ್ತೆ Read More »

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ

ಸರಣಿ ಹೃದಯಾಘಾತಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ ತಜ್ಞ ವೈದ್ಯರ ಸಮಿತಿಯಿಂದ ಅಧ್ಯಯನ ಬೆಂಗಳೂರು: ಐಸಿಎಂಆರ್‌ ಬಳಿಕ ರಾಜ್ಯ ಸರ್ಕಾರವೇ ರಚಿಸಿದ ಸಮಿತಿ ಕೂಡ ಹೃದಯಾಘಾತಗಳಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎಂದು ವರದಿ ನೀಡಿದೆ. ಡಾ. ರವೀಂದ್ರನಾಥ್ ನೇತೃತ್ವದ ಸಮಿತಿ ಜುಲೈ 2ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಹಠಾತ್ ಹೃದಯಾಘಾತಕ್ಕೆ ಕೋವಿಡ್-19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ Read More »

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ದುಷ್ಕರ್ಮಿಗಳು ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಶನಿವಾರ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಚಾರ ಮಾಡಿರುವ ಘಟನೆಯಿಂದ ಶಿವಮೊಗ್ಗದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ Read More »

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ

ಯಾದಗಿರಿ: ಕಾಂಗ್ರೆಸಿಗರು ‌ಮಾತೆತ್ತಿದರೆ ಜೆಡಿಎಸ್ ಕಥೆ ಮುಗಿದಿದೆ ಎಂದು ಹೇಳುತ್ತಾರೆ. ಆದರೆ ಅವರ ಪಕ್ಷ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರವೇ ಅಧಿಕಾರದಲ್ಲಿದೆ. ಕರ್ನಾಟಕ ರಾಜ್ಯದಲ್ಲಂತೂ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ Read More »

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ

ದಾವಣಗೆರೆ: ಏಳು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯ ಶವ ರೈಲ್ವೆ ಟ್ರಾಕ್ ಮೇಲೆ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳವೇ ಈ ಘಟನೆಗೆ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ. ಚನ್ನಗಿರಿ ತಾಲೂಕಿನ ವಿದ್ಯಾ ಎಂಬವರೇ ಮೃತ ದುರ್ದೈವಿ. ವಿದ್ಯಾ ಅವರನ್ನು ಸೋಮಲಾಪುರದ ಶಿವು ಎಂಬ ಯುವಕನಿಗೆ‌ಮದುವೆ ಮಾಡಿ ಕೊಡಲಾಗಿತ್ತು. ಶಿವು ಪೊಲೀಸ್ ಆಗಿದ್ದು, ದಂಪತಿ ಬೆಂಗಳೂರಿನ ಶಂಕರಪುರಂನಲ್ಲಿ ವಾಸ ಮಾಡುತ್ತಿದ್ದರು. ಜೂ. 30 ರಂದು ನಾಪತ್ತೆಯಾಗಿದ್ದ ‌ವಿದ್ಯಾ, ಸಂಜೆ ಅರಸೀಕೆರೆ ರೈಲ್ವೆ ಟ್ರಾಕ್‌ನಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ Read More »

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ

ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಸೆರೆಯಾದ ಸಂದರ್ಭದಲ್ಲಿ ಬಯಲಾದ ಇನ್ನೊಂದು ರಹಸ್ಯ ಮಂಗಳೂರು : ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸೆರೆಯಾಗಿದ್ದ ಹಿಂದೂ ಮುಖಂಡ ಸಮಿತ್‌ರಾಜ್ ಧರೆಗುಡ್ಡೆಯ ಮೊಬೈಲ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿಯ ಓರ್ವ ರಾಜಕಾರಣಿಯ ಔಿಡಿಯೋ ಇದೆ ಎಂಬ ವಿಚಾರ ಸಂಚಲನವುಂಟುಮಾಡಿದೆ. ಮೊಬೈಲ್​ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮೂಡುಬಿದಿರೆ ಪೊಲೀಸರ ತನಿಖೆ ವೇಳೆ

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ Read More »

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ

ದ.ಕ. ಜಿಲ್ಲೆಯ 115 ಸೇರಿ ರಾಜ್ಯದ 4,134 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆಗೆ ಅನುಮತಿ ಮಂಗಳೂರು: ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮ ಶುರುವಾಗಲಿದೆ. ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ Read More »

ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದ ಉಡುಪಿ

ಒಂದು ತಿಂಗಳಲ್ಲಿ 1,140 ಮಿ.ಮೀ ಮಳೆ ಸುರಿದು ಹೊಸ ದಾಖಲೆ ಉಡುಪಿ: ಮೇಘಾಲಯದ ಚಿರಾಪುಂಜಿ ದೇಶದಲ್ಲಿ ಅತ್ಯಧಿಕ ಮಳೆಯಾಗುವ ಪ್ರದೇಶ ಎಂಬ ದಾಖಲೆ ಅನೇಕ ವರ್ಷಗಳಿಂದ ಇದೆ. ಆದರೆ ಈ ಸಲ ಉಡುಪಿ ಜಿಲ್ಲೆ ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದೆ. ಜೂನ್‌ ತಿಂಗಳಲ್ಲಿ ಉಡುಪಿಯಾದ್ಯಂತ ದಾಖಲೆಯ ಮಳೆ ಸುರಿದಿದ್ದು, ಕರ್ನಾಟಕದಲ್ಲಿ ಅತ್ಯಧಿಕ ಮಳೆಯಾಗುವ ಆಗುಂಬೆಯನ್ನೂ ಹಿಂದಿಕ್ಕಿದೆ. ಜೂನ್ ತಿಂಗಳ ಮಳೆ ಲೆಕ್ಕಾಚಾರದಲ್ಲಿ ಉಡುಪಿ ಜಿಲ್ಲೆ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಒಂದು ತಿಂಗಳಲ್ಲಿ 1,140 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ

ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದ ಉಡುಪಿ Read More »

error: Content is protected !!
Scroll to Top