ರಾಜ್ಯ

ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್‌ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ

ಅಂದು ಮಾಡಿದ ಟೀಕೆಗಳನ್ನೇ ತಿರುಗುಬಾಣವಾಗಿ ಬಳಸಿ ಕಾಲೆಳೆಯುತ್ತಿರುವ ನೆಟ್ಟಿಗರು ಮಂಗಳೂರು: ಆರ್‌ಸಿಬಿ ತಂಡ ಚೊಚ್ಚಲ ಐಪಿಎಲ್‌ ಕಪ್‌ ಗೆದ್ದ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಅಮಾಯಕರು ಸಾವನ್ನಪ್ಪಿದ ಘಟನೆಯ ಬಳಿಕ ಕುಂಭಮೇಳದ ಸಂದರ್ಭದಲ್ಲಿ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ-2 ಚಿತ್ರದ ಪ್ರೀಮಿಯರ್‌ ಶೋ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ. ವಿವಿಧ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದೀಚೆಗೆ ಜನರು ಈ ಎರಡು […]

ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್‌ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ Read More »

ಚಿನ್ನಸ್ವಾಮಿ ಕಾಲ್ತುಳಿತ – ಜನರ ಜೀವದ ಬೆಲೆ ತಿಳಿಯದ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು : ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತ ರಾಜ್ಯದ ಆಡಳಿತ ವ್ಯವಸ್ಥೆಯ ಸಂಪೂರ್ಣ ದಿವಾಳಿತನವನ್ನು ಬಹಿರಂಗಪಡಿಸಿದೆ. ಇದನ್ನು ಒಂದು ಎಚ್ಚರಿಕೆಯ ಗಂಟೆಯೆಂದು ನಾನು ಪರಿಗಣಿಸುತ್ತೇನೆ. ಇಂತಹ ಕಾಲ್ತುಳಿತದ ಜವಾಬ್ದಾರಿ ಪೂರ್ವಯೋಜನೆಯಿಲ್ಲದ, ಅತಿಯಾದ ತುರಾತುರಿಯಲ್ಲಿ ಕೈಗೊಂಡ ಆಡಳಿತಾತ್ಮಕ ತೀರ್ಮಾನಗಳ ಕಾರಣವಾಗಿ ಉಂಟಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವಅವರು, ಇದೊಂದು ಕ್ರಿಕೆಟ್ ತಂಡದ ಸಾಂಪ್ರದಾಯಿಕ ಸೀಜನ್

ಚಿನ್ನಸ್ವಾಮಿ ಕಾಲ್ತುಳಿತ – ಜನರ ಜೀವದ ಬೆಲೆ ತಿಳಿಯದ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು : ಕಿಶೋರ್ ಕುಮಾರ್ ಪುತ್ತೂರು Read More »

ಸರ್ಕಾರದ ಬೇಜವಾಬ್ದಾರಿ, ಕ್ರಿಕೆಟ್ ಅಸೋಸಿಯೇಶನ್‌ ಅವಿವೇಕದಿಂದ ಭಾರಿ ದುರಂತ

ಸಂಭ್ರಮವನ್ನು ಸೂತಕವಾಗಿ ಬದಲಾಯಿಸಿದ ಕಾಲ್ತುಳಿತ ಘಟನೆ ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿನ್ನೆ 11 ಜನರ ಸಾವಿಗೆ ಕಾರಣವಾದ ಘೋರ ಕಾಲ್ತುಳಿತ ದುರ್ಘಟನೆಗೆ ಸರ್ಕಾರ ಮತ್ತು ಕರ್ನಾಟಕ ಕ್ರಿಕೆಟ್‌ ಅಸೋಸಿಯೇಶನ್‌ನ ಅವಿವೇಕಿ ನಿರ್ಧಾರವೇ ಕಾರಣ ಎನ್ನುವುದು ಗಾಢವಾಗಿ ಗೋಚರಿಸುತ್ತಿದೆ. ಸಿದ್ಧತೆ ಇಲ್ಲದೆ ಕಾರ್ಯಕ್ರಮ ನಡೆಸಿದರೆ ನಿಯಂತ್ರಣ ಮಾಡುವುದು ಕಷ್ಟ ಎಂದು ಪೊಲೀಸರು ತಿಳಿಸಿದ್ದರೂ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್‌ ಪಟ್ಟುಹಿಡಿದು ಕಾರ್ಯಕ್ರಮ ಆಯೋಜನೆ ಮಾಡಿದ್ದರಿಂದ ಕಾಲ್ತುಳಿತ ನಡೆದಿದೆ ಎಂಬ ಗಂಭೀರ ಆರೋಪ ಈಗ ಕೇಳಿ

ಸರ್ಕಾರದ ಬೇಜವಾಬ್ದಾರಿ, ಕ್ರಿಕೆಟ್ ಅಸೋಸಿಯೇಶನ್‌ ಅವಿವೇಕದಿಂದ ಭಾರಿ ದುರಂತ Read More »

ಬೆಂಗಳೂರು ಕಾಲ್ತುಳಿತ : ಮೃತರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್‌ಗಳು…

ಸಾವಿಗೆ ಕಾರಣವಾದ ಕ್ರಿಕೆಟ್‌ ಅಭಿಮಾನ ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ ದುರಂತದಲ್ಲಿ ಮೃತಪಟ್ಟವರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್‌ ಕೂಡ ಸೇರಿದ್ದಾರೆ. ತಡರಾತ್ರಿ ಸರ್ಕಾರ ಮೃತಪಟ್ಟ 11 ಜನರ ಮಾಹಿತಿಯನ್ನು ಬಿಡುಗಡೆಮಾಡಿದೆ. ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ ಕನಕಶ್ರೀ ಲೇಔಟ್‌ನಲ್ಲಿ ವಾಸವಿದ್ದ 9ನೇ ತರಗತಿ ವಿದ್ಯಾರ್ಥಿನಿ ದಿವ್ಯಾಂಶಿ (14) ಎಂಬಾಕೆ ಮೃತಪಟ್ಟಿದ್ದು, ಈಕೆ ಶಿವಕುಮಾರ್-ಅಶ್ವಿನಿ ದಂಪತಿಯ ಪುತ್ರಿ. ನಿನ್ನೆ ಮಧ್ಯಾಹ್ನ ತಾಯಿ ಅಶ್ವಿನಿ, ಚಿಕ್ಕಮ್ಮ ರಚನಾ, ದಿವ್ಯಾಂಶ್ರೀ ಸೇರಿ ಕುಟುಂಬದ

ಬೆಂಗಳೂರು ಕಾಲ್ತುಳಿತ : ಮೃತರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್‌ಗಳು… Read More »

ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ

ಬೆಂಗಳೂರು: 18ನೇ ಐಪಿಎಲ್‍ ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ ಆಗಿದ್ದು, ಈ ಸಂಬಂಧ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಭಾರೀ ಜನಸ್ತೋಮ ನೆರೆದಿದ್ದು, ಈ ಸಂದರ್ಭ ಕಾಲ್ತುಳಿತಕ್ಕೆ ಹಲವರು ಬಲಿಯಾಗಿದ್ದಾರೆ. ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ನೂಕುನುಗ್ಗಾಟದಲ್ಲಿ  ಕಾಲ್ತುಳಿತಕ್ಕೆ  15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿ ಅಭಿಮಾನಿಗಳು

ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ Read More »

ಹೊಸಂಗಡಿ ಸಿದ್ಧಾಪುರ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಒಂಟಿ ಸಲಗ

ಸಿದ್ಧಾಪುರ: ಇಂದು ಬೆಳಗಿನ ಜಾವ ಒಂಟಿ ಸಲಗವೊಂದು ಬಾಳೆಬರೆ ಘಾಟ್  ಹೊಸಂಗಡಿ ಸಿದ್ದಾಪುರ ಜನವಸತಿ  ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಸಲಗ ಸಂಚಾರ ಕಂಡು ಬರುತ್ತಿದ್ದಂತೆ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸಾರ್ವಜನಿಕರ, ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು ಸಿದ್ದಾಪುರ ಭಾಗದ ಶಾಲಾ ಕಾಲೇಜು ಅಂಗನವಾಡಿಗಳಿಗೆ ರಜೆ ಘೋಷಣೆ ಜತೆಗೆ ಸಿದ್ಧಾಪುರ ವಾರದ ಸಂತೆಯನ್ನು ರದ್ದುಗೊಳಿಸಲಾಗಿದೆ.

ಹೊಸಂಗಡಿ ಸಿದ್ಧಾಪುರ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಒಂಟಿ ಸಲಗ Read More »

ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಮೆರವಣಿಗೆ

ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ತನಕ ಭವ್ಯ ವಿಕ್ಟರಿ ಪರೇಡ್‌ ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಚಾಂಪಿಯನ್‌ ಆದ ಬಳಿಕ ಕರ್ನಾಟಕದಲ್ಲಿ ಸಂಭ್ರಮ ಮನೆಮಾಡಿದೆ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ಅದ್ದೂರಿ ವಿಜಯೋತ್ಸವ ಮೆರವಣಿಗೆ ನಡೆಯಲಿದೆ. ಅಧಿಕೃತವಾಗಿ ಆರ್‌ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ.

ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಮೆರವಣಿಗೆ Read More »

ಸರ್ಕಾರದ ನಡವಳಿಕೆಯಿಂದಲೇ ಕರಾವಳಿಯಲ್ಲಿ ಕಾನೂನು ಹಾಳು : ಬಿ.ವೈ. ವಿಜಯೇಂದ್ರ

ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಎಂದು ಆರೋಪ ಬೆಂಗಳೂರು: ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರ

ಸರ್ಕಾರದ ನಡವಳಿಕೆಯಿಂದಲೇ ಕರಾವಳಿಯಲ್ಲಿ ಕಾನೂನು ಹಾಳು : ಬಿ.ವೈ. ವಿಜಯೇಂದ್ರ Read More »

ಹೇಳಿಕೆ ವಿವಾದ : ಕಮಲಹಾಸನ್‌ಗೆ ಕೋರ್ಟ್‌ ತರಾಟೆ

ಕ್ಷಮೆ ಕೇಳಲು ಆಗದಿದ್ದರೆ ಕರ್ನಾಟಕವನ್ನು ಬಿಟ್ಟುಬಿಡಿ ಭಾಷೆಯ ಬಗ್ಗೆ ಮಾತನಾಡಲು ನೀವು ಭಾಷಾ ತಜ್ಞರೆ? ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರನ್ನು ಕೆಣಕಿರುವ ನಟ ಕಮಲಹಾಸನ್‌ ಅವರನ್ನು ನ್ಯಾಯಾಲಯ ಇಂದು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದೆ. ತನ್ನ ಥಗ್‌ಲೈಫ್‌ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕಮಲಹಾಸನ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೊಳಪಡಿಸಿದ ಹೈಕೋರ್ಟ್‌ ನ್ಯಾಯಾಧೀಶ ನಾಗಪ್ರಸನ್ನ ಅವರ ಪೀಠ ಭಾಷೆ ಹುಟ್ಟಿದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ? ಇಲ್ಲ ಇತಿಹಾಸಕಾರರೇ ಎಂದು

ಹೇಳಿಕೆ ವಿವಾದ : ಕಮಲಹಾಸನ್‌ಗೆ ಕೋರ್ಟ್‌ ತರಾಟೆ Read More »

ಗ್ಯಾರಂಟಿಗಳನ್ನು ಸರಿಯಾಗಿ ಕೊಡದಿದ್ದರೂ ಅನುಷ್ಠಾನ ಸಮಿತಿಯಲ್ಲಿರುವವರಿಗೆ ಮುಂಗಡ ಹಣ ಬಿಡುಗಡೆ

ಸರ್ಕಾರದ ನಡೆಗೆ ತೀವ್ರ ಟೀಕೆ ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಜನರಿಗೆ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಕೊಡದಿದ್ದರೂ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿರುವ ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಕ್ಲಪ್ತವಾಗಿ 7.65 ಕೋಟಿ ರೂ. ಹಣ ಬಿಡುಗಡೆ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದ್ದು, ಟಿಕೆಟ್ ದರ ಏರಿಕೆ ಮಾಡಿ ಬರೆ

ಗ್ಯಾರಂಟಿಗಳನ್ನು ಸರಿಯಾಗಿ ಕೊಡದಿದ್ದರೂ ಅನುಷ್ಠಾನ ಸಮಿತಿಯಲ್ಲಿರುವವರಿಗೆ ಮುಂಗಡ ಹಣ ಬಿಡುಗಡೆ Read More »

error: Content is protected !!
Scroll to Top