ರಾಜ್ಯ

ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು

ದೈವಾರಾಧನೆಗೆ ಅಡ್ಡಿಪಡಿಸಿದವರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ಮಂಗಳೂರು : ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವದ ಆರಾಧನೆಗೆ ಅಡ್ಡಿಪಡಿಸಿದ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌)ದ ವಿರುದ್ಧ ಮಾ.18ರಂದು ನಡೆಸುದ್ದೇಶಿಸಿದ್ದ ಬೃಹತ್‌ ಪಾದಯಾತ್ರೆ ತಾತ್ಕಾಲಿಕವಾಗಿ ರದ್ದಾಗಿದೆ. ಬಜ್ಪೆಯ ಪೇಜಾವರ ಮಾಗಣೆಯ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ಸರಕಾರಿ ಕಂಪನಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಮಾ. 18ರಂದು ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಆದರೆ, ದೈವಸ್ಥಾನದ ಧಾರ್ಮಿಕ ವಿಧಿವಿಧಾನಗಳನ್ನು ಪಾಲಿಸುವ […]

ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ?

ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್‌ ಸೂಚನೆ ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಎಗ ಸರಕಾರಿ ಗುತ್ತಿಗೆಯಲ್ಲಿ ಶೆ.4 ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಸಿಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ

ಸಿಐಡಿ ತನಿಖೆ ದಿಢೀರ್‌ ಹಿಂದೆಗೆದುಕೊಂಡ ಕುರಿತು ನಾನಾ ಅನುಮಾನ ಬೆಂಗಳೂರು : ಕನ್ನಡ ಚಿತ್ರನಟಿ ರನ್ಯಾ ರಾವ್‌ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇಬ್ಬರ ಸಚಿವರ ಹೆಸರು ಈ ಪ್ರಕರಣದಲ್ಲಿ ತುಳುಕು ಹಾಕುತ್ತಿರುವ ಬೆನ್ನಲ್ಲೆ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಒಂದು ಫೋಟೊ ಕಾಂಗ್ರೆಸ್‌ನ ಆಕ್ರೋಶಕ್ಕೆ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿ ರನ್ಯಾ ರಾವ್‌ ಜೊತೆ ಇರುವ ಫೋಟೊವನ್ನು ಬಿಜೆಪಿಯ ಸೋಷಿಯಲ್‌ ಮೀಡಿಯಾ ವಿಭಾಗ ಅಪ್‌ಲೋಡ್‌ ಮಾಡಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ Read More »

ದರೋಡೆ ಪ್ರಕರಣ : ಹಾಸನದಲ್ಲಿ ಇಸಾಕ್‌ ಸಹಿತ ನಾಲ್ವರ ಬಂಧನ | ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದ ಇಸಾಕ್‌ ಕಾಲಿಗೆ ಪೊಲೀಸರಿಂದ ಗುಂಡೇಟು

ಉಡುಪಿ: ಪೊಲೀಸರಿಗೆ ಅಪಘಾತ ನಡೆಸಿ ಪರಾರಿಯಾಗಿದ್ದವರನ್ನು ಹಾಸನದಲ್ಲಿ ಬಂಧಿಸಿ ಮಣಿಪಾಲಕ್ಕೆ ಕರೆತರುತ್ತಿದ್ದ ಗರುಡ ಗ್ಯಾಂಗ್‌ ನ ಇಸಾಕ್‌ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇಸಾಕ್ ಕಾಲಿಗೆ ಗುಂಡೇಟು ತಗಲಿದ್ದು, ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ

ದರೋಡೆ ಪ್ರಕರಣ : ಹಾಸನದಲ್ಲಿ ಇಸಾಕ್‌ ಸಹಿತ ನಾಲ್ವರ ಬಂಧನ | ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದ ಇಸಾಕ್‌ ಕಾಲಿಗೆ ಪೊಲೀಸರಿಂದ ಗುಂಡೇಟು Read More »

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ

ಭಕ್ತರ ಅನುಕೂಲಕ್ಕಾಗಿ 400 ದೇವಸ್ಥಾನ, ಛತ್ರಗಳ ಮಾಹಿತಿ ಅಪ್‌ಲೋಡ್‌ ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ರಾಜ್ಯದ ದೇವಾಲಯಗಳು ಮತ್ತು ಹೊರರಾಜ್ಯಗಳ ಛತ್ರಗಳಲ್ಲಿ ಲಭ್ಯವಿರುವ ಕೊಠಡಿಗಳ ಮಾಹಿತಿ ಇನ್ನು ವೆಬ್‌ಸೈಟಿನಲ್ಲಿ ಸಿಗಲಿದೆ. ಹಬ್ಬ, ಹರಿದಿನಗಳಂದು ಜನ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನ ಪರಿಸರದಲ್ಲಿ ಉಳಿದುಕೊಳ್ಳಲು ಕೊಠಡಿ ಸಿಗುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ವೆಬ್‌ಸೈಟ್‌ನಲ್ಲಿ ಕೊಠಡಿಗಳ ಮಾಹಿತಿ ನೀಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ.ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ Read More »

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ

ಹಲವು ವಿಮಾನಗಳು ಡೈವರ್ಟ್‌; ಬೆಂಗಳೂರು ಫ್ಲೈಟ್‌ ವಾಪಸ್‌ ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಕಡುಬೇಸಿಗೆಯ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಜನ ತುಸು ತಂಪಾಗಿದ್ದರೂ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳೂ ಸಂಭವಿಸಿವೆ. ಮಂಗಳೂರು ನಗರದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶುರುವಾದ ಗುಡುಗು ಸಿಡಿಲು ಗಾಳಿಯಿಂದೊಡಗೂಡಿದ ಮಳೆ ರಾತ್ರಿ 11 ಗಂಟೆಯವರೆಗೂ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಲ್ಯಾಂಡಿಂಗ್‌ ಸಾಧ್ಯವಾಗದೆ ವಿಮಾನಗಳನ್ನು ಪಕ್ಕದ

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ Read More »

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ !

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.  ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ, 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತು ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು. ಮುಂದಾಗಿದ್ದಾರೆ. ವಿಜ್ಞಾನಿಗಳ ಶೋಧನೆಯ ಆಧಾರದಲ್ಲಿ ಭುಕಂಪನ ಆಗಿದೆಯೇ, ಎಷ್ಟರಮಟ್ಟಿಗೆ ಆಗಿದೆ ಎಂಬ ಮಾಹತಿ ತಿಳಿಯಬೇಕಿದೆ.

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ ! Read More »

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆ, ಸುಧಾರಿಸಲು ಏನು ಮಾಡಬೇಕು | ಸದನದಲ್ಲಿ ತಮ್ಮ ಮಾತಿನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಕಿಶೋರ್ ಕುಮಾರ್ ಪುತ್ತೂರು

ವಿಧಾನ ಪರಿಷತ್ತಿನಲ್ಲಿ ಹದಿಹರೆಯದ ಮಕ್ಕಳ ಎದುರಿಸುತ್ತಿರುವ ಸಮಸ್ಯೆಗಳ ಕುರಿತು, ಅವರ ಭವಿಷ್ಯ ಸುಧಾರಿಸಲು ನಾವು ಏನು ಮಾಡಬೇಕು ಎಂಬ ಬಗ್ಗೆ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಮಾತನಾಡಿದರು. ಮಕ್ಕಳ ಖಿನ್ನತೆ ಬಗ್ಗೆ ಮಾತನಾಡಿದ ಅವರು, ಪೋಷಕರ ಅತಿಯಾದ ನಿರೀಕ್ಷೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಿದರು. “ನನ್ನ ಮಗು ಡಾಕ್ಟರ್ ಆಗಬೇಕು, ಇಂಜಿನಿಯರ್ ಆಗಬೇಕು, ಫಸ್ಟ್ ರ್ಯಾಂಕ್ ಪಡೆಯಬೇಕು” ಎಂಬ ಪೋಷಕರ ತೀವ್ರ ಮನೋಭಾವದ ಕಾರಣದಿಂದ ಮಕ್ಕಳು ಭಾರೀ ಒತ್ತಡ ಅನುಭವಿಸುತ್ತಿದ್ದಾರೆ. ಇದಲ್ಲದೆ, ಸಮಾಜ ಪೋಷಕರ

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆ, ಸುಧಾರಿಸಲು ಏನು ಮಾಡಬೇಕು | ಸದನದಲ್ಲಿ ತಮ್ಮ ಮಾತಿನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಕಿಶೋರ್ ಕುಮಾರ್ ಪುತ್ತೂರು Read More »

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ

ಪಕ್ಷದ ಕಾರ್ಯಕರ್ತರಿಗಾಗಿ ಖಜಾನೆ ಲೂಟಿ ಮಾಡಬೇಡಿ; ಕೆಪಿಸಿಸಿ ಹಣ ಕೊಡಿ ಎಂದು ಆಗ್ರಹ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ, ಅವುಗಳಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಪ್ರತಿತಿಂಗಳು ಸಾವಿರಗಟ್ಟಲೆ ಸಂಬಳ ಕೊಡುತ್ತಿರುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್‌ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ಶುರು ಮಾಡಿದೆ. ಸದನದ ಹೊರಗೂ ಇಂದು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾಂಗ್ರೆಸ್‌

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ

ಚಿನ್ನ ಸದಾಶಿವ ನಗರಕ್ಕೆ ಹೋಗಿದೆಯಾ? ಚಾಮರಾಜ ನಗರಕ್ಕೆ ಹೋಗಿದೆಯಾ ಹೇಳಿಕೆಯಿಂದ ಸಚಿವರಿಗೆ ಕಸಿವಿಸಿ ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಶಾಮೀಲಾಗಿರುವ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಶಾಸಕ ಸುನಿಲ್‌ ಕುಮಾರ್‌ ನೀಡಿದ ಹೇಳಿಕೆ ಸಂಚಲನ ಹುಟ್ಟಿಸಿದೆ. ಈ ಹೇಳಿಕೆಗೆ ಹಲವು ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಜೊತೆಗೆ ಮಾತನಾಡುವಾಗ ಸುನಿಲ್‌ ಕುಮಾರ್‌ ನಟಿ ರನ್ಯಾ ರಾವ್‌ ತಂದ ಚಿನ್ನ ಎಲ್ಲಿಗೆ ಹೋಗಿದೆ ಸದಾಶಿವ ನಗರಕ್ಕೆ ಹೋಗಿದೆಯಾ ಅಥವಾ ಚಾಮರಾಜ ನಗರಕ್ಕೆ ಹೋಗಿದೆಯಾ ಎಂಬುದರ ಬಗ್ಗೆ ತನಿಖೆಯಾಗಲಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ Read More »

error: Content is protected !!
Scroll to Top