ರಾಜ್ಯ

ಮತ್ತೆ ಮದ್ಯದ ಬೆಲೆ ಏರಿಕೆ?

ಬಜೆಟ್‌ನಲ್ಲಿ ನೀಡಿದ ಗುರಿ ತಲುಪಲು ಬೆಲೆ ಹೆಚ್ಚಿಸುವುದು ಅನಿವಾರ್ಯ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮದ್ಯದ ದರ ಹೆಚ್ಚಿಸಲು ಚಿಂತನೆ ನಡೆದಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ದರ ಹೆಚ್ಚಳ ಮಾಡುವ ಬಗ್ಗೆ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಲಾಗಿದೆ. ಹೆಚ್ಚುವರಿ ಗುರಿಯನ್ನು […]

ಮತ್ತೆ ಮದ್ಯದ ಬೆಲೆ ಏರಿಕೆ? Read More »

ಕೌಟುಂಬಿಕ ಕಲಹ ಹಿನ್ನಲೆ : ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದ ಕಾರಣದಿಂದ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಕಬ್ಬಳಿ ಗ್ರಾಮದ ಜಯಂತಿ (60) ಹಾಗೂ ಅವರ ಪುತ್ರ ಭರತ್ (35)  ಆತ್ಮಹತ್ಯೆ ಮಾಡಿಕೊಂಡವರು. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್‌ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಕುಟುಂಬಸ್ಥರು

ಕೌಟುಂಬಿಕ ಕಲಹ ಹಿನ್ನಲೆ : ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಆದೇಶ

ವಿಮಾನ ನಿಲ್ದಾಣದಿಂದ ಹೊರಬರಲು ವಿಶೇಷ ಪ್ರೊಟೊಕಾಲ್‌ ಒದಗಿಸಿದ ಅನುಮಾನ ಬೆಂಗಳೂರು: ಕನ್ನಡದ ನಟಿ ರನ್ಯಾ ರಾವ್ ಒಳಗೊಂಡಿರುವ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಆಕೆಯ ಮಲತಂದೆ ಡಿಜಿಪಿ ಡಾ.ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೊಟೊಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಆದೇಶ Read More »

ಸದನದಲ್ಲಿ ಪ್ರತಿಧ್ವನಿಸಿದ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌

ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸಲು ಸುನಿಲ್‌ ಕುಮಾರ್‌ ಒತ್ತಾಯ ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಜೊತೆ ನಂಟು ಹೊಂದಿರುವ ರಾಜ್ಯದ ಇಬ್ಬರು ಸಚಿವರ ಹೆಸರು ಬಹಿರಂಗಪಡಿಸಲು ಮತ್ತು ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲು ಶಾಸಕ ಸುನಿಲ್‌ ಕುಮಾರ್‌ ನಿನ್ನೆ ಸದನದಲ್ಲಿ ಒತ್ತಾಯಸಿದ್ದಾರೆ. ಕಲಾಪದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸುನಿಲ್‌ ಕುಮಾರ್‌ ನಟಿಯೊಬ್ಬರು ಭಾರಿ ಪ್ರಮಾಣದ ಚಿನ್ನ ಕಳ್ಳ ಸಾಗಾಟ ಮಾಡಿ ಸಿಕ್ಕಿಬಿದ್ದಿರುವ ವಿಚಾರ ಮಾಧ್ಯಮಗಳಲ್ಲಿ ಬಂದಿದೆ. ಈ ನಟಿಯ ಹಿಂದೆ ಕೆಲವು ಪ್ರಭಾವಿ ವ್ಯಕ್ತಿಗಳಿದ್ದು,

ಸದನದಲ್ಲಿ ಪ್ರತಿಧ್ವನಿಸಿದ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ Read More »

ಅನ್ಯಧರ್ಮದ ಹುಡುಗಿಯರನ್ನು ಮದುವೆಯಾಗಿ ಹೇಳಿಕೆಗೆ ಭಾರಿ ವಿರೋಧ

ಚಕ್ರವರ್ತಿ ಸೂಲಿಬೆಲೆಗೆ ಎಸ್‌ಡಿಪಿಐಯಿಂದ ಎಚ್ಚರಿಕೆ ಮಂಗಳೂರು: ಹಿಂದೂ ಹುಡುಗರಿಗೆ ಮದುವೆಯಾಗಲು ಹುಡುಗಿ ಸಿಗದಿದ್ದರೆ ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಿ ಎಂದಿರುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ಸೇರಿ ಹಲವು ಸಂಘಟನೆಗಳ ನಾಯಕರು ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಚಕ್ರವರ್ತಿ ಸೂಲಿಬೆಲೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಹೇಳಿಕೆಗೆ ಸದಾ ಬದ್ಧನಾಗಿರುತ್ತೇನೆ ಎಂದಿದ್ದಾರೆ. ವಿಶ್ವ ಹಿಂದೂ ಪರಿಷತ್ ಭಾನುವಾರ ಮಂಗಳೂರಿನಲ್ಲಿ ನಡೆದಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ

ಅನ್ಯಧರ್ಮದ ಹುಡುಗಿಯರನ್ನು ಮದುವೆಯಾಗಿ ಹೇಳಿಕೆಗೆ ಭಾರಿ ವಿರೋಧ Read More »

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ.ವಾಗಿದ್ದು, ಇದು ಬಹಳ ದುಃಖಕರ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಸದನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೇಮಕವಾಗಿರುವ ಸಿಬ್ಬಂದಿಗಳ ಬಗ್ಗೆ ಪ್ರಶ್ನಿಸಿದಾಗ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗುವಂತೆ ಪ್ರೋತ್ಸಾಹಿಸಲು ಅಗತ್ಯ ಸವಲತ್ತುಗಳನ್ನು ಒದಗಿಸುವ ಕುರಿತು ಸರಕಾರ ಕ್ರಮ ಕೈಗೊಳ್ಳಬೇಕೆಂದು

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು Read More »

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ

ಜಲಮೂಲ ಮಲಿನಗೊಳಿಸುವುದನ್ನು ತಡೆಯಲು ಸರಕಾರ ಸೂಚನೆ ಬೆಂಗಳೂರು: ಪುಣ್ಯಕ್ಷೇತ್ರಗಳ ಬಳಿಯಿರುವ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳಿಗೆ ತ್ಯಾಜ್ಯ ಎಸೆದು ಅಪವಿತ್ರಗೊಳಿಸುವುದನ್ನು ತಡೆಯಲು ಸರಕಾರ ಮುಂದಾಗಿದ್ದು, ಇಂಥ ಸ್ಥಳಗಳ 500 ಮೀಟರ್ ವ್ಯಾಪ್ತಿಯ ಸುತ್ತಮುತ್ತ ಸೋಪ್‌, ಶ್ಯಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ Read More »

ನೆಲ್ಲಿದಡಿ ಗುತ್ತು ವಿವಾದ : ಯಥಾಸ್ಥಿತಿಗೆ ಜಿಲ್ಲಾಧಿಕಾರಿ ಸೂಚನೆ

ಶತಮಾನಗಳಿಂದ ನಡೆಯುತ್ತಿರುವ ದೈವಾರಾಧನೆಗೆ ಅಡ್ಡಿಯಾಗದಂತೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌)ನಿಂದ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ತೊಡಕುಂಟಾಗಿರುವ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯಕ್ಕೆ ಅಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚಿಸಿದ್ದಾರೆ. ನೆಲ್ಲಿದಡಿಯಲ್ಲಿ ಈವರೆಗೂ ದೈವಾರಾಧನೆ ನಿಂತಿಲ್ಲ. ಲಿಖಿತವಾಗಿ ಅನುಮತಿ ಪಡೆಯದಿದ್ದರೆ ಅವಕಾಶ ಇಲ್ಲ ಎಂದಿದ್ದರಿಂದ ಗೊಂದಲಕ್ಕೆ ಕಾರಣವಾಗಿದೆ. ಶಾಶ್ವತ ಪರಿಹಾರ ಸಿಗುವವರೆಗೂ ಯಥಾಸ್ಥಿತಿ ಕಾಪಾಡಲು ಸೂಚಿಸಲಾಗಿದೆ ಎಂದು

ನೆಲ್ಲಿದಡಿ ಗುತ್ತು ವಿವಾದ : ಯಥಾಸ್ಥಿತಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ

ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢ, ಬ್ಯಾನ್‌ಗೆ ಶಿಫಾರಸ್ಸು ಬೆಂಗಳೂರು: ಇಡ್ಲಿ, ಗೋಬಿಮಂಚೂರಿ, ಕಬಾಬ್‌ ಸೇರಿದಂತೆ ವಿವಿಧ ಆಹಾರ ವಸ್ತುಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬಳಿಕ ಈಗ ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಕ್ಯಾನ್ಸರ್​ಕಾರಕ ಅಂಶ ಬಿಡುಗಡೆಯಾಗಿ ಇಡ್ಲಿಯನ್ನು ಸೇರಿಕೊಳ್ಳುತ್ತಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ ಹೊಟೇಲ್, ಉಪಾಹಾರ ಮತ್ತು ತಿನಿಸು ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಯ ಬಳಕೆಯನ್ನು ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ Read More »

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌?

ಶಿವಮೊಗ್ಗ, ಮೈಸೂರು, ಬೆಂಗಳೂರು ತಿರುಗಾಡಿ ಉಡುಪಿಗೆ ಬಂದಾಗ ಪತ್ತೆ ​ಮಂಗಳೂರು : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಕೊನೆಗೂ ನಿನ್ನೆ ಬಗೆಹರಿದಿದೆ. ದಿಗಂತ್‌ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ವಿಧಾನ ಮಂಡಲದ ಕಲಾಪದಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್‌ ಖಾದರ್‌ ನೀಡಿದ ಸೂಚನೆಯ ಬಳಿಕ ಪೊಲೀಸರು 11 ತಂಡಗಳನ್ನು ರಚಿಸಿ ಹುಡುಕಾಡಿ ದಿಗಂತ್‌ನನ್ನು ನಿನ್ನೆ ಉಡುಪಿಯ ಡಿಮಾರ್ಟ್‌ ಮಾಲ್‌ನಲ್ಲಿ ಪತ್ತೆಹಚ್ಚಿದ್ದಾರೆ. ಹಿಂದು ಸಂಘಟನೆಗಳಿಂದ ಪ್ರತಿಭಟನೆ ಸಹಿತ ಹಲವು ಬೆಳವಣಿಗೆಗಳಿಗೆ ಕಾರಣವಾಗಿದ್ದ

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌? Read More »

error: Content is protected !!
Scroll to Top