ರಾಜ್ಯ

ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ

ಬೆಂಗಳೂರು: ಥೈಲಾಂಡ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ನಾಳೆ (ಬುಧವಾರ) ಮಧ್ಯಾಹ್ನ 12 ಗಂಟೆ ವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಥೈಲಾಂಡ್ ನಲ್ಲಿ […]

ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ Read More »

ರಾಜ್ಯ ಕೃಷಿ ಸಚಿವರಿಂದ ಕೃಷಿ ಅಧಿಕಾರಿಗಳು, ಸಿಬ್ಬಂದಿಗಳಿಂದ ಹಣಕ್ಕಾಗಿ ಒತ್ತಡ | ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮನವಿ

ಮಂಡ್ಯ: ರಾಜ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ತಲಾ 6 ರಿಂದ 8 ಲಕ್ಷ ರೂ. ನೀಡುವಂತೆ ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಮಂದಿ ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಮೂಲಕ ಕರ್ನಾಟಕ ಸರಕಾರದ  ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಈ ಕುರಿತು ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಹಾಗೂ ಮದ್ದೂರು

ರಾಜ್ಯ ಕೃಷಿ ಸಚಿವರಿಂದ ಕೃಷಿ ಅಧಿಕಾರಿಗಳು, ಸಿಬ್ಬಂದಿಗಳಿಂದ ಹಣಕ್ಕಾಗಿ ಒತ್ತಡ | ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮನವಿ Read More »

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007,

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು | ಸಚಿವ ಕೆ.ಹೆಚ್. ಮುನಿಯಪ್ಪ ಘೊಷಣೆ

ಬೆಂಗಳೂರು: ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ. ಹೀಗೆಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದು, ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು | ಸಚಿವ ಕೆ.ಹೆಚ್. ಮುನಿಯಪ್ಪ ಘೊಷಣೆ Read More »

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಮೋಕ್ಷಾ, ಎಂಟು ತಿಂಗಳ  ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ. ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ Read More »

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ

ಬಾಗಲಕೋಟೆ: ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಮತಾ ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಗಲಕೋಟೆಯ ಇಳಕಲ್ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ಇಹಲೋಕ ತ್ಯಜಿಸಿದರು. ಮಮತಾ ಅವರು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದರು. 25 ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗದ ಮೇರು ನಟರುಗಳಾದ ಅಂಬರೀಷ್, ವಜ್ರಮುನಿ ಸೇರಿ ಅನೇಕರ ಜೊತೆ ತೆರೆಹಂಚಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಚಿತ್ರರಂಗದಿಂದ ದೂರವೇ

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ Read More »

ಆಯ್ಕೆ ಅಸಿಂಧು ಕೋರಿ ಅರ್ಜಿ : ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಆರೋಪದಡಿ ವರುಣಾ ಕ್ಷೇತ್ರದ ಶಾಸಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ನೀಡಿದೆ. ಸೆಪ್ಟೆಂಬರ್ 1ಕ್ಕೆ ವಿಚಾರಣೆ ಮುಂದೂಡಿ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಆದೇಶ ನೀಡಿದರು. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(2) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್‌ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ

ಆಯ್ಕೆ ಅಸಿಂಧು ಕೋರಿ ಅರ್ಜಿ : ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್ Read More »

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೋಕ್

ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೋಕ್ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೋಕ್ Read More »

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ

ದೆಹಲಿ : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 14ನೇ ಕಂತು ಗುರುವಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಪ್ರಕಟಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ 8.5 ಕೋಟಿ ರೈತರಿಗೆ 14ನೇ ಕಂತಿನ ನಿಧಿಯನ್ನು ಜು.27 ರಂದು ಪ್ರಧಾನ ಮಂತ್ರಿಯವರು ನರೇಂದ್ರ ಮೋದಿ ವಿತರಿಸಲಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪಿಎಂ ಕಿಸಾನ್ ಕಂತಿನ ಹಣವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ Read More »

error: Content is protected !!
Scroll to Top