ರಾಜ್ಯ

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು

ಸಾಲಗಾರರ ಕಾಟದಿಂದ ಬೇಸತ್ತು ಕೃತ್ಯ – ಇಬ್ಬರ ಸ್ಥಿತಿ ಚಿಂತಾಜನಕ ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ […]

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು Read More »

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು

ಶಿವಮೊಗ್ಗ: ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಹತ್ತನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ರಿಪ್ಪನ್ ಪೇಟೆಯ ಬರುವೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂದು ಗುರುತಿಸಲಾಗಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಬಾಲಕ ಆ‌ನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು Read More »

ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪಿಯ ಬಂಧನ

ಮಂಗಳೂರು: ಕೋಮು ದ್ವೇಷ ಬಿತ್ತುವ ಕಾಮೆಂಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಕಳೆದ ಜನವರಿ ತಿಂಗಳಿನಲ್ಲಿ ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ಕುರಾನ್ ಪಠಣ ಸ್ಪರ್ಧೆ ನಡೆಯುತ್ತಿತ್ತು. ಇದು ಉದಯವಾಣಿ ಫೇಸ್ಬುಕ್ ಪೇಜ್‌ನಲ್ಲಿ ಪ್ರಕಟವಾಗುತ್ತಿತ್ತು. ಈ ಸಂದರ್ಭದಲ್ಲಿ ಆರೋಪಿ ಗಣೇಶ್ ಪ್ರಸಾದ್ ತನ್ನ ಫೇಸ್ಬುಕ್ ಪೇಜಿನಿಂದ ಪ್ರಚೋದನಾಕಾರಿ ಕಾಮೆಂಟ್ ಹಾಕಿದ್ದಾನೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು.

ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪಿಯ ಬಂಧನ Read More »

ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದ ಪ್ರೊಫೆಸರ್‌ ಅಮಾನತು

ಎರಡು ದಿನ ಹಿಂದಿನ ಘಟನೆಯ ವಿಡಿಯೋ ವೈರಲ್‌ ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಮೂರಳಿಧರ ದೇಶಪಾಂಡೆ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡು ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಅದರ ವಿಡಿಯೋ ಈಗ ವೈರಲ್‌ ಆಗಿದೆ. ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು

ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದ ಪ್ರೊಫೆಸರ್‌ ಅಮಾನತು Read More »

48 ಕೆಜಿ ಡ್ರಗ್ಸ್‌ ವಶ : ಇಬ್ಬರು ಆರೋಪಿಗಳ ಬಂಧನ

ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ

48 ಕೆಜಿ ಡ್ರಗ್ಸ್‌ ವಶ : ಇಬ್ಬರು ಆರೋಪಿಗಳ ಬಂಧನ Read More »

ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರಕ್ಕೆ ಕನ್ನ ಹಾಕಿದ ಖದೀಮರು

ಬೆಂಗಳೂರು: ನೆಲಮಂಗಲ ಸಮೀಪದ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿಯಲ್ಲಿ ಹಾಡುಹಗಲೇ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಕದ್ದು ಪರಾರಿಯಾದ ಘಟನೆ ನಡೆದಿದೆ. ಬೇಕರಿಯ ‌ಸಮೀಪ ನಿಂತಿದ್ದ ಮಹಿಳೆಯೊಬ್ಬರ ತಾಳಿ ಸರವನ್ನು ಖದೀಮರು ದೋಚಿದ್ದಾರೆೆ‌. ಬೇಕರಿಯಲ್ಲಿ ಜ್ಯೂಸ್ ಕುಡಿಯುವಂತೆ ನಟನೆ ಮಾಡಿ ಕಳ್ಳರು ಅವರ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ ಎಳೆದ ರಭಸಕ್ಕೆ ಮಹಿಳೆ ನೆಲಕ್ಕೆ ಬಿದ್ದಿದ್ದಾರೆ. ಸರ 55 ಗ್ರಾಂ ತೂಕವಿತ್ತು ಎಂದು ತಿಳಿದು ಬಂದಿದೆ‌. ಸಿಸಿಟಿವಿಯಲ್ಲಿಯೂ ‌ಸರಗಳ್ಳತನ ಮಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ

ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರಕ್ಕೆ ಕನ್ನ ಹಾಕಿದ ಖದೀಮರು Read More »

ಹುಸಿಬಾಂಬ್‌ ಬೆದರಿಕೆಗಳ ಹಿಂದಿದ್ದ ಆರೋಪಿ ಸೆರೆ

ಮೈಸೂರಿನಲ್ಲಿ ಅಡಗಿ ಕುಳಿತು ಪೊಲೀಸರನ್ನು ಆಟವಾಡಿಸುತ್ತಿದ್ದ ಆರೋಪಿ ಮೈಸೂರು : ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರ ತಂಡ ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ.

ಹುಸಿಬಾಂಬ್‌ ಬೆದರಿಕೆಗಳ ಹಿಂದಿದ್ದ ಆರೋಪಿ ಸೆರೆ Read More »

ವಿವಾದದ ಕಿಡಿ ಹೊತ್ತಿಸಿದ ಹಿಂದಿ ಅಂಕ ಕೈಬಿಡುವ ನಿರ್ಧಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ದಿಢೀರ್‌ ಎಂದು ಹಿಂದಿ ಕೈಬಿಟ್ಟ ಸರ್ಕಾರ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ಹಿಂದಿಯ ಅಂಕವನ್ನು ದಿಢೀರ್‌ ಎಂದು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮ ಮತ್ತೊಮ್ಮೆ ಭಾಷಾ ವಿವಾದ ಭುಗಿಲೇಳುವಂತೆ ಮಾಡಿದೆ. ಶಿಕ್ಷಣ ತಜ್ಞರು, ರಾಜಕೀಯ ಮುಖಂಡರು, ಭಾಷಾ ಹೋರಾಟಗಾರರು ಈ ಕುರಿತು ನಾನಾ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಪರೀಕ್ಷೆ ನಡೆಯುತ್ತಿರುವಾಗಲೇ ಯಾವುದೇ ಮುನ್ಸೂಚನೆ ನೀಡದೆ ದಿಢೀರ್‌ ಎಂದು ಸರ್ಕಾರ ಹಿಂದಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿಗಳ ಹಿತಕ್ಕಿಂತ ರಾಜಕೀಯ ಕಾರಣವೇ ಗುರಿಯಾಗಿರುವಂತೆ ಕಾಣಿಸುತ್ತಿದೆ. ಹಿಂದಿ ಅಂಕಗಳನ್ನು

ವಿವಾದದ ಕಿಡಿ ಹೊತ್ತಿಸಿದ ಹಿಂದಿ ಅಂಕ ಕೈಬಿಡುವ ನಿರ್ಧಾರ Read More »

ಭೀಕರ ಅಪಘಾತ : 4 ವರ್ಷದ ಮಗು ಸಹಿತ ದಂಪತಿ ಸಾವು

ತಿರುಪತಿಗೆ ಹೊರಟವರ ದುರಂತ ಅಂತ್ಯ ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ

ಭೀಕರ ಅಪಘಾತ : 4 ವರ್ಷದ ಮಗು ಸಹಿತ ದಂಪತಿ ಸಾವು Read More »

ವಿದ್ಯಾರ್ಥಿನಿಗೆ ಲವ್‌ ಪ್ರಪೋಸ್‌ ಪ್ರಕರಣ : ಕಾಲೇಜಿಗೆ ಬಾಂಬ್‌ ಬೆದರಿಕೆ

ಪ್ರೊಪೆಸರ್‌ಗೆ ಥಳಿಸಿದ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಬೆದರಿಕೆ ಬೆಂಗಳೂರು: ಬೆಂಗಳೂರು ಸಮೀಪದ ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಅಬ್ದುಲ್‌ ಎಂಬಾತ ತರಗತಿಯಲ್ಲಿ ವಿದ್ಯಾರ್ಥಿನಿಗೆ ಲವ್ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಡಾ.ಅಬ್ದುಲ್‌ಗೆ ವಿದ್ಯಾರ್ಥಿನಿ ಚಪ್ಪಲಿಯಲ್ಲಿ ಹೊಡೆದ ವಿಡಿಯೋ ವೈರಲ್‌ ಆಗಿದೆ. ಶುಕ್ರವಾರ ಮುಂಜಾನೆ ಕಾಲೇಜಿನ ಪ್ರಿನ್ಸಿಪಾಲ್ ಸೇರಿದಂತೆ ಅಧಿಕಾರಿಗಳ ಅಧಿಕೃತ ಇಮೇಲ್‌ಗಳಿಗೆ ಬಾಂಬ್

ವಿದ್ಯಾರ್ಥಿನಿಗೆ ಲವ್‌ ಪ್ರಪೋಸ್‌ ಪ್ರಕರಣ : ಕಾಲೇಜಿಗೆ ಬಾಂಬ್‌ ಬೆದರಿಕೆ Read More »

error: Content is protected !!
Scroll to Top