ರಾಜ್ಯ

ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು : ಅನುದಾನ ಬಿಡುಗಡೆ ಮಾಡಲು ಕೂಡ ಸಚಿವರು ಕಮಿಷನ್ ಕೇಳುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಬರೆದಿರುವ ಪತ್ರದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ನ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಈ ಶಾಸಕಾಂಗ ಸಭೆ ಬಹಳ ಕುತೂಹಲ ಮೂಡಿಸಿದೆ. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಹಿರಿಯ ಶಾಸಕರೇ ಶಾಸಕಾಂಗ ಸಭೆ ಕರೆಯುವಂತೆ ಒತ್ತಡ ಹಾಕಿದ್ದಾರೆ. ಅಲ್ಲದೆ ಸಚಿವರ ವಿರುದ್ಧ ಶಾಸಕರ ಪತ್ರ […]

ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ Read More »

ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ಕೊಡಗಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಭೂಕುಸಿತ ಉಂಟಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯಗೊಂಡಿದೆ. ಕೊಡಗಿನ ಮದೆನಾಡು ಸಮೀಪದ ಕರ್ತೋಜೆಯಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತತದಿಂದಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸೂಚನೆಯಿದ್ದು, ಆತಂಕ ಉಂಟಾಗಿದೆ. ಭಾರೀ ಮಳೆಯನ್ನು ಲೆಕ್ಕಿಸದೆ ಕೊಡಗು ಜಿಲ್ಲಾಡಳಿತ ಜೆಸಿಬಿ, ಹಿಟಾಚಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ Read More »

ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

ಪುತ್ತೂರು: ನಂದಿನಿ ಹಾಲಿ ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಪ್ರತೀ ಲೀಟರ್ ಗೆ 5 ರೂ. ಹೆಚ್ಚಳ ಮಾಡಬೇಕು ಎಂದು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಸಭೆಯಲ್ಲಿ ನಿರ್ಣಯದ ಬಳಿಕ ಮೂರು ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ Read More »

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ | ಜಿಕೆ ವೆಂಚರ್ಸ್ ಟೈಟಲ್ಸ್ ನಿಂದ ನೋಂದಣಿ

ಬೆಂಗಳೂರು : ನೈಜ ಘಟನೆ ಆಧರಿಸಿ ಅನೇಕ ಸಿನೆಮಾಗಳು ಮೂಡಿ ಬಂದಿದ್ದು, ಈ ಹಿನ್ನಲೆಯಲ್ಲಿ ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್ ವುಡ್‌ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ | ಜಿಕೆ ವೆಂಚರ್ಸ್ ಟೈಟಲ್ಸ್ ನಿಂದ ನೋಂದಣಿ Read More »

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: 2023 – 24ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ  ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ಅಡಿಕೆ, ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ ಕಲ್ಪಿಸಿದ್ದು ಜು.31 ರ ತನಕ ರೈತರು ವಿಮೆ ಕಂತನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲಾ ರೈತ ಬಾಂಧವರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿರುತ್ತದೆ. ಸಮಯದ ಅಭಾವವಿರುವುದರಿಂದ ರೈತರು ತಮ್ಮ ತಮ್ಮಲ್ಲಿಯೇ ಹೆಚ್ಚಿನ ಪ್ರಚಾರ ಕೈಗೊಂಡು ತಮ್ಮ ತಮ್ಮಲ್ಲಿನ ರೈತರ ವಾಟ್ಸಾಪ್ ಗುಂಪುಗಳಿಗೆ

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್ Read More »

ಸದನದಲ್ಲಿ ಕುಸಿದುಬಿದ್ದ ಯತ್ನಾಳ್ | ಆಸ್ಪತ್ರೆಗೆ ಭೇಟಿ ನೀಡಿದ ರಾಜಕೀಯ ನಾಯಕರು

ಬೆಂಗಳೂರು : ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಯತ್ನಾಳ್ ಅವರು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲವು ಬಿಜೆಪಿ ಶಾಸಕರು ಸಹ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ

ಸದನದಲ್ಲಿ ಕುಸಿದುಬಿದ್ದ ಯತ್ನಾಳ್ | ಆಸ್ಪತ್ರೆಗೆ ಭೇಟಿ ನೀಡಿದ ರಾಜಕೀಯ ನಾಯಕರು Read More »

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು : ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಶಾಸಕ ಬಸನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು,

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್ Read More »

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಕಚ್ಚಾಡಿಕೊಂಡಿದ್ದ ಜೆಡಿಎಸ್ ಮತ್ತು ಬಿಜೆಪಿ ನಡುವೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೈತ್ರಿ ಏರ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಯಾರೂ ಶಾಶ್ವತ ಮಿತ್ರರೂ ಅಲ್ಲ ಎಂಬ ಹಳೇ ಗಾದೆ ಮಾತಿಗೆ ಮತ್ತೊಂದು ನಿದರ್ಶನ ಕರ್ನಾಟಕದಲ್ಲೆ ತಯಾರಾಗುತ್ತಿದೆ. ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟಬಂಧನ್ ನಾಯಕರು ಬೆಂಗಳೂರಿನಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರುವಂತೆಯೇ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿದ್ದಾರೆ. ತೆನೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ Read More »

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ Read More »

ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ | ಮೂವರು ಮೃತ್ಯು

ಪಿರಿಯಾಪಟ್ಟಣ : ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ. ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು ಮಂಗಳವಾರ  ಮುಂಜಾನೆ 4.30ಕ್ಕೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ

ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ | ಮೂವರು ಮೃತ್ಯು Read More »

error: Content is protected !!
Scroll to Top