ರಾಜ್ಯ

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ

ಇಂದಿನಿಂದ ವಿಧಾನ ಮಂಡಲ ಬಜೆಟ್‌ ಅಧಿವೇಶನ ಬೆಂಗಳೂರು: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ- ಪ್ರತ್ಯಾರೋಪ, ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಗ್ಯಾರಂಟಿಯ ಪ್ರಯೋಜನಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪದಿರುವುದು ಸೇರಿದಂತೆ ಎರಡು ತಿಂಗಳಿನಿಂದ ಆಗಿರುವ ಬೆಳವಣಿಗೆಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಮೂಡಿದೆ.ಹಾಡಹಗಲೇ ನಡೆದ ಬ್ಯಾಂಕ್‌ಗಳ ದರೋಡೆ, ಮೈಸೂರಿನ ಉದಯಗಿರಿ ಠಾಣೆ ಮೇಲಿನ ದಾಳಿ, ಅತ್ಯಾಚಾರ – ಹತ್ಯೆ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕಾನೂನು […]

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ Read More »

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ

ನಿನ್ನೆ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳು ಪವಿತ್ರ ವ್ರತ ಬೆಂಗಳೂರು: ಅಮವಾಸ್ಯೆಯ ಹಿಂದಿನ ದಿನ ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಮ್ಜಾನ್ ಉಪವಾಸ ಆರಂಭಗೊಂಡಿದೆ. ನಿನ್ನೆ ಕೇರಳದಲ್ಲಿ ಚಂದ್ರದರ್ಶನವಾಗಿದ್ದು, ಹೀಗಾಗಿ ಕರಾವಳಿಯಲ್ಲೂ ಇಂದಿನಿಂದಲೇ ಮುಸ್ಲಿಮರು ಉಪವಾಸ ವ್ರತ ಆರಂಭಿಸಿದ್ದಾರೆ.ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ,

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ Read More »

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ

ಮಾ.22ರಂದು 7,8,9ನೇ ತರಗತಿ ಪರೀಕ್ಷೆ ನಿಗದಿಯಾಗಿರುವಂತೆ ನಡೆಯಲಿದೆ ಬೆಂಗಳೂರು: ಮಾರ್ಚ್‌ 22ರಂದು ಕರ್ನಾಟಕ ಬಂದ್‌ ಇದ್ದರೂ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು.ಮಕ್ಕಳಿಗೆ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ Read More »

ಬಿಜೆಪಿ ರಾಜ್ಯಾಧ್ಯಕ್ಷ  ವಿಜೇಯೇಂದ್ರ ಕಾರು ಅಪಘಾತ | ಪ್ರಾಣಪಾಯದಿಂದ ಪಾರಾದ ಕಾರು ಚಾಲಕ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ

ಬಿಜೆಪಿ ರಾಜ್ಯಾಧ್ಯಕ್ಷ  ವಿಜೇಯೇಂದ್ರ ಕಾರು ಅಪಘಾತ | ಪ್ರಾಣಪಾಯದಿಂದ ಪಾರಾದ ಕಾರು ಚಾಲಕ Read More »

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌

ವಾಟಾಲ್‌ ನಾಗರಾಜ್‌ ನೇತೃತ್ವದಲ್ಲಿ ಬಂದ್‌ಗೆ ಕರೆ ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ಸಹ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಮಾರ್ಚ್3ರಂದು ಸಭೆ ನಡೆಸಿ ತಿರ್ಮಾನ ಪ್ರಕಟಿಸುವುದಾಗಿ ಹೇಳಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು, ಕನ್ನಡಿಗರಿಗೆ ಅಪಮಾನ

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌ Read More »

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ : ಸಾವಿರಾರು ಕೋಳಿಗಳು ನಾಶ

ಮಾಂಸಾಹಾರ ಪ್ರಿಯರಿಗೆ ಆತಂಕ ತಂದೊಡ್ಡಿದ್ದ ಹಕ್ಕಿಜ್ವರ ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರದ ಹಾವಳಿ ಕಾಣಿಸಿಕೊಂಡಿದ್ದು, ಸಾವಿರಾರು ಕೋಳಿಗಳನ್ನು ನಾಶ ಮಾಡಲಾಗಿದೆ. ಚಿಕ್ಕಬಳ್ಳಾಪುರ ದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ರಾಯಚೂರು, ಬಳ್ಳಾರಿ ಜಿಲ್ಲೆಗಳಿಗೂ ಹರಡಿದೆ. ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿಫಾರ್ಮ್‌ನಲ್ಲಿ 2400 ಕೋಳಿಗಳು ಹಕ್ಕಿಜ್ವರದಿಂದ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್​ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಫೆಬ್ರವರಿ 21ರಿಂದ ಇಲ್ಲಿಯವರೆಗೆ 2400 ಕೋಳಿಗಳ ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ : ಸಾವಿರಾರು ಕೋಳಿಗಳು ನಾಶ Read More »

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ

ಮೋಜು ಮಾಡಲು ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಖತರ್‌ನಾಕ್‌ ಕಳ್ಳ ಬೆಂಗಳೂರು : ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳನೊಬ್ಬನನ್ನು ಬೆಂಗಳೂರಿನ ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.ಆಂಧ್ರ ಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದ್‌ ಬಾಬು ಈ ಖತರ್‌ನಾಕ್‌ ಬೈಕ್ ಕಳ್ಳ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಕದಿಯುತ್ತಿದ್ದ ಈತ ಲಕ್ಷಾಂತರ

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ Read More »

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ

ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿ ಹೆಸರು, ನಿರ್ದೇಶನಗಳನ್ನು ಮುದ್ರಿಸಲು ಸೂಚನೆ ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆಯಲ್ಲಿ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ Read More »

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತಗತಿ  ನ್ಯಾಯಾಲಯ ಮಾರ್ಚ್ 15ಕ್ಕೆ ನಿಗದಿಪಡಿಸಿದೆ.  ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್​ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌ Read More »

ಒಂದು ತಿಂಗಳು ಶಿರಾಡಿ ಘಾಟಿ ಬಂದ್‌?

ಚತುಷ್ಪಥ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲು ಪ್ರಸ್ತಾವ ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ.30ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ.15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ ವೇಳೆ ಕಾಮಗಾರಿಯನ್ನು ತ್ವರಿತವಾಗಿ

ಒಂದು ತಿಂಗಳು ಶಿರಾಡಿ ಘಾಟಿ ಬಂದ್‌? Read More »

error: Content is protected !!
Scroll to Top