ರಾಜ್ಯ

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ

800 ವರ್ಷ ಪುರಾತನ ದೈವಸ್ಥಾನದ ಆರಾಧನೆಗೆ ತಡೆಯೊಡ್ಡಿದ ಅಧಿಕಾರಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ ಮಂಗಳೂರು : ಬಜ್ಪೆ ಸಮೀಪ ಇರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಆರಾಧನೆಗೆ ತಡೆಯೊಡ್ಡಿರುವ ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌) ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂತೇರಿ ಜುಮಾದಿ ದೈವಸ್ಥಾನ ಉಳಿಸಿ ಹೋರಾಟಕ್ಕೆ ತಯಾರಿ ನಡೆಯುತ್ತಿದೆ. ನಿನ್ನೆ ಮೊನ್ನೆ ಬಂದ ಎಂಎಸ್‌ಇಝಡ್‌ ಅಧಿಕಾರಿಗಳು 800 ವರ್ಷಕ್ಕೂ ಹಿಂದಿನ ದೈವದ ಆಚರಣೆ ಮತ್ತು ಆರಾಧನೆಗೆ ತಡೆಯೊಡ್ಡಿರುವುದು ಜನರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದೆ. ಕಂಪನಿಯ […]

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ Read More »

ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌ ಆದೇಶ

ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಬರುವುದು ದೃಢಪಟ್ಟ ಬಳಿಕ ಕ್ರಮ ಬೆಂಗಳೂರು : ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆಗಳಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆ ಬರುತ್ತದೆ ಎಂಬುದು ಬಹಿರಂಗವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯದ ಹೋಟೆಲ್‌, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿದೆ. . ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ

ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌ ಆದೇಶ Read More »

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು?

ಹೆಸರು ಬಹಿರಂಗವಾದ ಬಳಿಕ ನಾಪತ್ತೆಯಾಗಿರುವ ಉಡುಪಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಮಂಗಳೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಿದ ಘಟನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ.ವಾಮಾಚಾರಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.ಈಗ ವಾಮಾಚಾರ

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು? Read More »

ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ ಸಾಧ್ಯತೆ : ಯೆಲ್ಲೊ ಅಲರ್ಟ್‌ ಘೋಷಣೆ

ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ 4-5 ದಿನ ಉಷ್ಣ ಅಲೆ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿ ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ, ಕರಾವಳಿಯಲ್ಲಿ ಗರಿಷ್ಠ ತಾಪಮಾನ 36-38 ಡಿಗ್ರಿ ಸೆಲ್ಶಿಯಸ್ ಆಗಬಹುದು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು

ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ ಸಾಧ್ಯತೆ : ಯೆಲ್ಲೊ ಅಲರ್ಟ್‌ ಘೋಷಣೆ Read More »

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ

ಕಾಂಗ್ರೆಸ್‌ನಿಂದ ತೀವ್ರ ಆಕ್ಷೇಪ – ರಾಜಕೀಯದಲ್ಲಿ ಸಂಚಲನ ಬೆಂಗಳೂರು: ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದು ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಕಾಂಗ್ರೆಸ್‌ನಲ್ಲಿ ಈ ನಡೆಗೆ ತೀವ್ರ ಅಪಸ್ವರ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಏನೇನೋ ಹಾಕುತ್ತಾರೆ ಎಂದು ಡಿಕೆಶಿ ಹೇಳಿಕೆ ಬೆನ್ನಲ್ಲೇ ಎಐಸಿಸಿ‌ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಬಹಿರಂಗವಾಗಿಯೇ ಅಸಮಾಧಾನ‌ ಹೊರಹಾಕಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಹಾಗೂ ರಾಹುಲ್ ಗಾಂಧಿ

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ Read More »

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌

ಪ್ರಣಾಳಿಕೆ ಸಿದ್ಧಪಡಿಸಿದ್ದು ನೀವೇ ಎಂದ ಶಿವಕುಮಾರ್‌ ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಧಿಕಾರ ಹಿಡಿಯಲು ಘೋಷಿಸಿದ ಗ್ಯಾರಂಟಿ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿವೆ ಎಂಬುದನ್ನು ಈಗ ಕಾಂಗ್ರೆಸ್‌ ಸಚಿವರೇ ಹೇಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರೂ

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌ Read More »

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ

ಹೀಗಿದೆ ರೈಲಿನ ಹೊಸ ವೇಳಾಪಟ್ಟಿ ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ

ವಾರ್ಷಿಕ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತವಾಗಿ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ Read More »

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ

ಸತಾಯಿಸುತ್ತಿದ್ದ ಮಾಲೀಕನಿಂದ ಪಾರಾಗಲು ತಪ್ಪಿಸಿಕೊಂಡು ಬಂದ ತಮಿಳುನಾಡಿನ ಮೀನುಗಾರರು 4000 ಕಿ.ಮೀ. ಮೀನುಗಾರಿಕೆ ದೋಣಿಯಲ್ಲೆ ಪ್ರಯಾಣ ಉಡುಪಿ : ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಮೀನುಗಾರಿಕೆ ದೋಣಿಯೊಂದು ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮಾನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮಾನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.ಓಮಾನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ Read More »

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು!

ಆರೋಪಿಗಳ ಖರ್ಚಿನಲ್ಲೇ ಗುಜರಾತ್‌ಗೆ ಹೋಗಿ ಮೋಜುಮಸ್ತಿ ಮಾಡಿದ ಫೋಟೊ ಬಹಿರಂಗ ಮಂಗಳೂರು : ಅಮೆಜಾನ್‌ ಆನ್‌ಲೈನ್‌ ಕಂಪನಿಗೆ ವಂಚಿಸಿದ ಆರೋಪದಲ್ಲಿ ಸೆರೆಯಾಗಿರುವ ಇಬ್ಬರು ಸೈಬರ್‌ ವಂಚಕರಿಂದಲೇ ಮಂಗಳೂರು ಪೊಲೀಸರು ಕಾನೂನು ವಿದ್ಯಾರ್ಥಿಗಳಿಗೆ ಸೈಬರ್‌ ವಂಚನೆ ಜಾಗೃತಿಯ ಪಾಠ ಮಾಡಿಸಿ ಯಡವಟ್ಟು ಮಾಡಿಕೊಂಡಿರುವುದು ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಈ ಆರೋಪಿಗಳ ಖರ್ಚಿನಲ್ಲಿ ಪೊಲೀಸರು ತಿರುಗಾಡಿ ಮೋಜು ಮಸ್ತಿ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದು ಕೂಡ ಬಹಿರಂಗವಾಗಿ ಪೊಲೀಸ್‌ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಮಂಗಳೂರಿನ ಉರ್ವ ಠಾಣೆಯ ಪೊಲೀಸರ ವಿರುದ್ಧ ಇಂಥದ್ದೊಂದು ಗಂಭೀರ

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು! Read More »

error: Content is protected !!
Scroll to Top