ರಾಜ್ಯ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ […]

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ Read More »

ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ | ಮೂವರು ಮೃತ್ಯು

ಪಿರಿಯಾಪಟ್ಟಣ : ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ. ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು ಮಂಗಳವಾರ  ಮುಂಜಾನೆ 4.30ಕ್ಕೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ

ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ | ಮೂವರು ಮೃತ್ಯು Read More »

ಗೃಹಲಕ್ಷ್ಮೀ ಯೋಜನೆಯ ನೋಂದಾವಣೆ ಜು.19 ರಿಂದ ಆರಂಭ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನೋಂದಾವಣೆ ಜು.19 ರಿಂದ ಆರಂಭಗೊಳ್ಳಲಿದೆ. ಮನೆಯ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಗಳಾಗಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಫಲಾನುಭವಿ ಮಹಿಳೆ ಅಥವಾ ಪತಿ ಆದಾಯ ತೆರಿಗೆ ಅಥವಾ ಜಿಎಸ್ ಟಿ ಪಾವತಿದಾರರಾಗಿಬಾರದು. ರೇಷನ್ ಕಾರ್ಡ್ ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೊಂದಣಿ ಸ್ಥಳದ ವಿವರ ಎಸ್ ಎಂ

ಗೃಹಲಕ್ಷ್ಮೀ ಯೋಜನೆಯ ನೋಂದಾವಣೆ ಜು.19 ರಿಂದ ಆರಂಭ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದರೆ ಕರ್ನಾಟಕ ಹೊತ್ತಿ ಉರಿಯುತ್ತೆ : ಪ್ರಮೋದ್ ಮುತಾಲಿಕ್

ಧಾರವಾಡ: ವಿಧಾನಸೌಧದಲ್ಲಿ ನಮಾಜ್ ಮಾಡಲು ಅನುಮತಿ ನೀಡಿದರೆ ಕರ್ನಾಟಕ ಹೊತ್ತಿ ಉರಿಯಲಿದೆ. ಒಂದೆ ವೇಳೆ ಅವಕಾಶ ನೀಡಿದರೆ ನಾವು ವಿಧಾನಸೌಧದಲ್ಲಿ ಹನುಮಾನ್ ಚಾಲಿಸಾ ಪಠ ಮಾಡುತ್ತೇವೆ. ಹೀಗೆಂದು ರಾಜ್ಯ ಸರಕಾರದ ಮೇಲೆ ಗುಡುಗಿದ್ದಾರೆ ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್. ಅವರು ಧಾರವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ಯಾವುದೇ ಕಾರಣಕ್ಕೂ ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಬಾರದು. ಹೀಗಾದರೆ, ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಇಲ್ಲಿಯವರೆಗೆ ದೇಶವನ್ನು ಹೇಗೆಲ್ಲಾ

ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದರೆ ಕರ್ನಾಟಕ ಹೊತ್ತಿ ಉರಿಯುತ್ತೆ : ಪ್ರಮೋದ್ ಮುತಾಲಿಕ್ Read More »

ಉಚಿತ “ಶಕ್ತಿ” ಯೋಜನೆಯಿಂದಾಗಿ ಬಸ್‍ ನಲ್ಲಿ ಫುಲ್ ರಶ್ | ಪುಟ್‍ ಬೋರ್ಡ್‍ನಲ್ಲಿ ಪುಟ್ಟ ಮಗುವಿನೊಂದಿಗೆ ಕುಳಿತ ವೃದ್ಧೆ

ಕೊಪ್ಪಳ: ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ಬಂದಾಗಿನಿಂದ ಕೆ.ಎಸ್‍.ಆರ್‍.ಟಿಸಿ ಬಸ್‍ಗಳಲ್ಲಿ ಜನವೋ ಜನ. ಕುಳಿತುಕೊಳ್ಳಲು ಸೀಟು ಸಿಗುವುದು ಬಿಡಿ ಕಾಲಿಡಲೂ ಜಾಗವಿಲ್ಲದಷ್ಟು ರಶ್. ಇದಕ್ಕೆ ಉದಾಹರಣೆ ಎಂಬಂತೆ ವೃದ್ಧೆಯೊಬ್ಬರು ಬಸ್‍ನಲ್ಲಿ ಜಾಗವಿಲ್ಲದೆ ತನ್ನ ಪುಟ್ಟ ಮೊಮ್ಮಗುವಿನೊಂದಿಗೆ ಬಸ್‍ನ ಫುಟ್ ಬೋರ್ಡ್‍ನಲ್ಲಿ ಕುಳಿತು ಪ್ರಯಾಣಿಸಿದ ಘಟನೆ ನಡೆದಿದೆ. ಕೊಪ್ಪಳದಲ್ಲಿ ಈ ಘಟನೆ ನಡೆದಿದ್ದು ಬಹುತೇಕ ಬಸ್ ಪ್ರಯಾಣಿಕರಿಂದ ಕಿಕ್ಕಿರಿದು ತುಂಬುತ್ತಿದೆ. ಬೇರೆ ಮಾರ್ಗವಿಲ್ಲದೇ ವೃದ್ಧೆ ತನ್ನ ಮೊಮ್ಮಗುವನ್ನು ಕೈಯಲ್ಲಿ ಎತ್ತಿಕೊಂಡು ಬಸ್ ನ ಪುಟ್

ಉಚಿತ “ಶಕ್ತಿ” ಯೋಜನೆಯಿಂದಾಗಿ ಬಸ್‍ ನಲ್ಲಿ ಫುಲ್ ರಶ್ | ಪುಟ್‍ ಬೋರ್ಡ್‍ನಲ್ಲಿ ಪುಟ್ಟ ಮಗುವಿನೊಂದಿಗೆ ಕುಳಿತ ವೃದ್ಧೆ Read More »

ಜು.28 : ಅಣ್ಣಾಮಲೈ ನಡೆಸಲಿರುವ 120 ದಿನಗಳ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ನಡೆಸಲಿರುವ 120 ದಿನಗಳ ಕಾಲ ಪಾದಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜು. 8 ರಂದು ರಾಮೇಶ್ವರಂನಿಂದ ಚಾಲನೆ ನೀಡಲಿದ್ದಾರೆ. ಎನ್ ಮಣ್ ಎನ್ ಮಕ್ಕಳ್ – ಪ್ರಥಮರ್ ಮೋದಿಯಿನ್ ತಮಿಳ್ ಮುಝಕ್ಕಂ (ನನ್ನ ಭೂಮಿ, ನನ್ನ ಜನರು – ತಮಿಳರಿಗೆ ಪ್ರಧಾನಿ ಮೋದಿಯವರ ಕರೆ) ಎಂಬ ಹೆಸರಿನ ಈ ಯಾತ್ರೆಯು ಎಲ್ಲಾ 234 ವಿಧಾನಸಭಾ ಕ್ಷೇತ್ರಗಳನ್ನು ಹಾದುಹೋಗಲಿದ್ದು, 2024 ರ ಜನವರಿ ಮಧ್ಯದಲ್ಲಿ

ಜು.28 : ಅಣ್ಣಾಮಲೈ ನಡೆಸಲಿರುವ 120 ದಿನಗಳ ಪಾದಯಾತ್ರೆಗೆ ಚಾಲನೆ Read More »

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ | ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ ಭೀತಿ ಇಲ್ಲದೆ ಓಡಾಡುವಂತಿಲ್ಲ. ಜೈನ ಮುನಿ ಕೊಲೆ ಆಗಿದೆ‌

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ | ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ Read More »

ರಾಜ್ಯ ಸರಕಾರದ ಉಚಿತ ಗ್ಯಾರಂಟಿ ಯೋಜನೆ “ಶಕ್ತಿ” ಯೋಜನೆಯಿಂದ ಸರಕಾರದ ಬೊಕ್ಕಸಕ್ಕೆ ಎಷ್ಟು ನಷ್ಟ | ಇಲ್ಲಿದೆ ಡಿಟೈಲ್ಸ್

ಪುತ್ತೂರು : ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ “ಶಕ್ತಿ” ಯೋಜನೆ ಆರಂಭಗೊಂಡು ತಿಂಗಳು ಕಳೆದಿದೆ. ಆದರೆ ಸರಕಾರದ ಬೊಕ್ಕಸಕ್ಕೆ ಎಷ್ಟು ಲಾಭ, ನಷ್ಟ ಎಂಬುದು ಈಗಿರುವ ಲೆಕ್ಕಾಚಾರ. ಮಹಿಳೆಯರ ಉಚಿತ ಬಸ್ ಪ್ರಯಾಣದಿಂದಾಗಿ ಕೆಎಸ್‍ ಆರ್ ಟಿಸಿ 151.25 ಕೋಟಿ, ಬಿಎಂಟಿಸಿಗೆ 69.56 ಕೋಟಿ, ವಾಯುವ್ಯ ಕರ್ನಾಟಕ ಸಾರಿಗೆಗೆ 103.51 ಕೋಟಿ ಹಾಗೂ ಕಲ್ಯಾಣ ಸಾರಿಗೆ 77.62 ಕೋಟಿ ರೂಪಾಯಿ ಭರಿಸಬೇಕಿದ್ದು ತಿಂಗಳಲ್ಲಿ 16.73 ಕೋಟಿ ಮಹಿಳೆಯರು ಈ ಯೋಜನೆಯನ್ನು ಪಡೆದುಕೊಂಡಿದ್ದಾರೆ.

ರಾಜ್ಯ ಸರಕಾರದ ಉಚಿತ ಗ್ಯಾರಂಟಿ ಯೋಜನೆ “ಶಕ್ತಿ” ಯೋಜನೆಯಿಂದ ಸರಕಾರದ ಬೊಕ್ಕಸಕ್ಕೆ ಎಷ್ಟು ನಷ್ಟ | ಇಲ್ಲಿದೆ ಡಿಟೈಲ್ಸ್ Read More »

ಹಸಿ ಮೀನಿನ ದರ ಗಗನಕ್ಕೆ | ಹೈರಾಣಾದ ಜನತೆ

ಬೆಂಗಳೂರು: ದಿನದಿಂದ ದಿನಕ್ಕೆ ದಿನಬಳಕೆ ಸಾಮಾಗ್ರಿಗಳ ಜತೆ ತರಕಾರಿ ಬೆಲೆ ಗಗನಕ್ಕೇರಿದ್ದು, ಇನ್ನೊಂದೆಡೆ ಇದೀಗ ಮಾರುಕಟ್ಟೆಯಲ್ಲಿ ಹಸಿಮೀನಿನ ಬೆಲೆ ಗಗನಕ್ಕೇರಿದೆ. ಪರಿಣಾಮ ಜನ ಹೈರಾಣಾಗಿದ್ದಾರೆ. ಸಾಂಬಾರು ಪದಾರ್ಥಗಳು ಸೇರಿದಂತೆ ಹಣ್ಣು ತರಕಾರಿಗಳ ದುಬಾರಿ ಬೆಲೆಯಿಂದ ಜನರು ಹೈರಾಣಾಗಿದ್ದಾರೆ. ಕೆಲವೆಡೆ ಮಳೆಯ ಅಭಾವದಿಂದ ಇಳುವರಿ ಕಡಿಮೆಯಾದ ಹಿನ್ನೆಲೆ ತರಕಾರಿ, ಹಣ್ಣಿನ ಬೆಲೆ ಹೆಚ್ಚಾಗಿದೆ. ಜೂನ್‌-ಜುಲೈ ತಿಂಗಳಿನಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಜೂ.1ರಿಂದ ಜು.30 ರವರೆಗೆ ರಾಜ್ಯ ಸರಕಾರ ಯಾಂತ್ರೀಕೃತ ಮೀನುಗಾರಿಕೆಗೆ ತಡೆಯೊಡ್ಡಿದೆ. ಈ ಎರಡು ತಿಂಗಳುಗಳಲ್ಲಿ ಮೀನುಗಳು ಸಂತಾನೋತ್ಪತ್ತಿಯಲ್ಲಿ

ಹಸಿ ಮೀನಿನ ದರ ಗಗನಕ್ಕೆ | ಹೈರಾಣಾದ ಜನತೆ Read More »

ಹಾಡುಹಗಲೇ ಜೋಡಿ ಕೊಲೆ : ಮಾಜಿ ಉದ್ಯೋಗಿಯಿಂದ ಕೃತ್ಯ

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಎಂಬ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ಹಾಡುಹಗಲೇ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಹತ್ಯೆಯಾದರು. ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್ ಕಂಪನಿಯಿಂದ

ಹಾಡುಹಗಲೇ ಜೋಡಿ ಕೊಲೆ : ಮಾಜಿ ಉದ್ಯೋಗಿಯಿಂದ ಕೃತ್ಯ Read More »

error: Content is protected !!
Scroll to Top