ರಾಜ್ಯ

ಗೃಹಲಕ್ಷ್ಮೀ ಯೋಜನೆ ಜ್ಯಾರಿಗೆ ತರಲು ಮುಹೂರ್ತ ಫಿಕ್ಸ್ | ಸೈಬರ್ ವಂಚಕರಿಂದ ನಕಲಿ ಆ್ಯಪ್​ಗಳ ಸೃಷ್ಟಿ | ಎಚ್ಚೆತ್ತುಕೊಳ್ಳಬೇಕಾಗಿದೆ ಜನತೆ

ಬೆಂಗಳೂರು : ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಿಂದ ಅನುಷ್ಠಾನಗೊಳಿಸುವ ಸಿದ್ಧತೆಯಲ್ಲಿದ್ದು, ಇದಕ್ಕಾಗಿ ಪ್ರತ್ಯೇಕ ಆ್ಯಪ್​ ಕೂಡ ಸಿದ್ಧಪಡಿಸಲಾಗಿದೆ. ಈ ನಡುವೆ ಗೂಗಲ್​ ಪ್ಲೇಸ್ಟೋರ್​ನಲ್ಲಿ ಗೃಹಲಕ್ಷ್ಮೀ ಯೋಜನೆಯ ಹೆಸರಿಯಲ್ಲಿ ಮೂರು ನಕಲಿ ಆ್ಯಪ್​ಗಳ ಸೃಷ್ಟಿಯಾಗಿದ್ದು ಸೈಬರ್​ ಕ್ರೈಂ ಅಪಾಯ ಹೆಚ್ಚಾಗಿದೆ. ಥೇಟ್​ ಸರ್ಕಾರಿ ಆ್ಯಪ್​ನಂತೆಯೇ ಕಾಣುವಂತಹ ಮೂರು ನಕಲಿ ಗೃಹಲಕ್ಷ್ಮೀ ಅಪ್ಲಿಕೇಶನ್​ ಗೂಗಲ್​ ಪ್ಲೇಸ್ಟೋರ್​ನಲ್ಲಿ ಡೌನ್​ಲೋಡ್​ ಆಗ್ತಿದೆ. ಇದೊಂದು ನಕಲಿ ಆ್ಯಪ್​ ಎಂಬ ಅರಿವಿರದ ಅನೇಕರು ಈ ಆ್ಯಪ್‍ […]

ಗೃಹಲಕ್ಷ್ಮೀ ಯೋಜನೆ ಜ್ಯಾರಿಗೆ ತರಲು ಮುಹೂರ್ತ ಫಿಕ್ಸ್ | ಸೈಬರ್ ವಂಚಕರಿಂದ ನಕಲಿ ಆ್ಯಪ್​ಗಳ ಸೃಷ್ಟಿ | ಎಚ್ಚೆತ್ತುಕೊಳ್ಳಬೇಕಾಗಿದೆ ಜನತೆ Read More »

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಹಾಸನ : ರಾಜ್ಯಮಟ್ಟದ 514ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಸಮಾರಂಭ ಹಾಸನ ನಗರದಲ್ಲಿ ಮಂಗಳವಾರ ನಡೆಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಕೆ ಎನ್ ರಾಜಣ್ಣ, ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕರುಗಳಾದ ಕೆ ಎಂ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಸಿ ಎನ್ ಬಾಲಕೃಷ್ಣ, ಸಿಮೆಂಟ್ ಮಂಜು,

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ

ಬೆಂಗಳೂರು: ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ ಬಂದಿದ್ದು, ಸಿದ್ಧರಾಮಯ್ಯ ಸರಕಾರದ ಬಜೆಟ್ ಅಧಿವೇಶನ ಜು.3 ರಿಂದ ಆರಂಭವಾಗಲಿದ್ದು, ಜು.7 ರಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನಕ್ಕೂ ಮುತ್ತ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಸಿಎಂ ಬೊಮ್ಮಾಯಿ  ಜಾರಿಗೊಳಿಸಿದ ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ಧರಾಮಯ್ಯ ಸರಕಾರವನ್ನು ತರಾಟೆಗೆತ್ತಿಕೊಳ್ಳಲು ಸಜ್ಜಾಗುತ್ತಿದೆ ಎಂದು ತಿಳಿದು ಬಂದಿದೆ. ಅಧಿವೇಶನ ಜು.3 ರಂದು ಆರಂಭಗೊಂಢು ಜು.7 ರಂದು ಮುಗಿಯಲಿದೆ. ಮಾಜಿ ಸಿಎಂ

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ Read More »

ಬೆಂಗಳೂರು ಒಕ್ಕಲಿಗ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯೋತ್ಸವ |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಬೆಂಗಳೂರು: ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವವನ್ನು ಮಂಗಳವಾರ ಆಯೋಜಿಸಲಾಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ,  ಲೋಕಸಭಾ ಸದಸ್ಯ ಡಿ ವಿ ಸದಾನಂದ ಗೌಡ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ರಾಜ್ಯ

ಬೆಂಗಳೂರು ಒಕ್ಕಲಿಗ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯೋತ್ಸವ |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ಮನೆಯಲ್ಲೇ ಗಾಂಜಾ ಬೆಳೆ ಬೆಳೆದ ವಿದ್ಯಾರ್ಥಿಗಳು | ಐದು ಮಂದಿಯ ಬಂಧನ

ಶಿವಮೊಗ್ಗ :   ವೈದ್ಯಕೀಯ ವಿಧ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. ಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ

ಮನೆಯಲ್ಲೇ ಗಾಂಜಾ ಬೆಳೆ ಬೆಳೆದ ವಿದ್ಯಾರ್ಥಿಗಳು | ಐದು ಮಂದಿಯ ಬಂಧನ Read More »

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ : ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ | ಮಾಧ್ಯಮಗಳಲ್ಲಿ ತಪ್ಪಾಗಿ ಬಿತ್ತರಿಸಲಾಗುತ್ತಿದೆ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ತಪ್ಪಾಗಿ ಬಿತ್ತಿರಿಸಲಾಗುತ್ತಿದೆ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ : ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ | ಮಾಧ್ಯಮಗಳಲ್ಲಿ ತಪ್ಪಾಗಿ ಬಿತ್ತರಿಸಲಾಗುತ್ತಿದೆ Read More »

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಇನ್ನೂ, ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ ಎಂದಿರುವ

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ Read More »

ಗೃಹಜ್ಯೋತಿ ನೋಂದಣಿಗೆ 20 ರೂಪಾಯಿಗಿಂತ ಅಧಿಕ ವಸೂಲಿ ಮಾಡಬಾರದು | ಸರಕಾರ ಖಡಕ್ ಎಚ್ಚರಿಕೆ

ಬೆಂಗಳೂರು :: ಗೃಹಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಇನ್ ಕೇಂದ್ರಗಳಲ್ಲಿ ಬೇಕಾಬಿಟ್ಟಿಯಾಗಿ ದರ ವಸೂಲಿ ಮಾಡುವಂತಿಲ್ಲ. 20 ರೂಪಾಯಿಗಿಂತ ಹೆಚ್ಚು ಸಾರ್ವಜನಿಕರಿಂದ ವಸೂಲಿ ಮಾಡುವಂತಿಲ್ಲ ಎಂದು ಖಡಕ್ ಸರಕಾರ ಎಚ್ಚರಿಕೆ ನೀಡಿದೆ. ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ನೋಂದಾವಣೆ ಪ್ರಕ್ರಿಯೆ ಆರಂಭವಾಗಿದೆ. ಸೈಬರ್ ಸೆಂಟರ್ ಗಳು ನೋಂದಾವಣೆಗೆ ಜನರಿಂದ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ದೂರುಗಳು ಬಂದ ಹಿನ್ನಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ.

ಗೃಹಜ್ಯೋತಿ ನೋಂದಣಿಗೆ 20 ರೂಪಾಯಿಗಿಂತ ಅಧಿಕ ವಸೂಲಿ ಮಾಡಬಾರದು | ಸರಕಾರ ಖಡಕ್ ಎಚ್ಚರಿಕೆ Read More »

ಗೃಹಲಕ್ಷ್ಮೀ ಯೋಜನೆಗೆ ಸದ್ಯ ತಡೆ | ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು: ಮನೆಯ ಯಜಮಾನಿಗೆ ಪ್ರತಿ ತಿಂಗಳು ನೀಡುವ ಎರಡು ಸಾವಿರ ರೂಪಾಯಿಯ ಗೃಹಲಕ್ಷ್ಮೀ ಯೋಜನೆಯನ್ನು ಸದ್ಯಕ್ಕೆ  ತಡೆ ಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ಇದ್ದು, ಮನೆಯೊಡತಿಯೇ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಎರಡೂ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಧಿಕಾರಿಗಲ ಜತೆ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಅರ್ಜಿ

ಗೃಹಲಕ್ಷ್ಮೀ ಯೋಜನೆಗೆ ಸದ್ಯ ತಡೆ | ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ Read More »

ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು

ಹಾಸನ : ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕ ಮೃತಪಟ್ಟ ಘಟನರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ. ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಹೆಕ್ಕಲು ಹೋಗಿದ್ದ ಸಂದರ್ಭ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಆದರೆ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ

ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು Read More »

error: Content is protected !!
Scroll to Top