ರಾಜ್ಯ

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ

ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.‘ಗೃಹಲಕ್ಷ್ಮಿ ಹಣ […]

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ Read More »

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ

ಮಹಾರಾಷ್ಟ್ರದಲ್ಲಿ ಹುಲಿ, ಚಿರತೆ, ಕಾಗೆಗಳಿಗೂ ಹಕ್ಕಿಜ್ವರ ಬೆಂಗಳೂರು: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್​ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮೃತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಉಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ Read More »

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು 119 ಕೆಜಿ ಗಾಂಜಾ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡಿನ ಮೊಹಿಯುದ್ದೀನ್ ಶಬ್ಬೀರ್ (38), ಮಹಾರಾಷ್ಟ್ರದ ಥಾಣೆಯ ಮಹೇಶ್ ದ್ವಾರಕಾನಾಥ್ ಪಾಂಡೆ (30), ಕೇರಳದ ಅಜಯ್ ಕೃಷ್ಣನ್ (30) ಮತ್ತು ಹರಿಯಾಣದ ಜೀವನ್ ಸಿಂಗ್ (35) ಸೆರೆಯಾಗಿರುವ ಆರೋಪಿಗಳು. ಆರೋಪಿಗಳಿಂದ ಆಲ್ಟೋ ಕಾರು ಹಾಗೂ ಟೆಂಪೋ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ Read More »

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು : ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರ ಜೋಬಿ ಆ್ಯಂಟೋನಿ (45) ಹಾಗೂ ಜೋಬಿ ಅವರ ಪತ್ನಿ ಶರ್ಮಿಳಾ (40) ಶವ ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್‌ನ ಏಣಿಯಲ್ಲಿ ಮಂಗಳವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಾಡಿದ ವಿಡಿಯೋದಲ್ಲಿ ‘ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ

ಅಬಕಾರಿ ಆದಾಯ ಹೆಚ್ಚಿಸಲು ದಿಲ್ಲಿಯನ್ನೂ ಮೀರಿಸಿದ ಹಗರಣ ಎಂದು ಟೀಕೆ ಬೆಂಗಳೂರು: ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀಕ್ಷ್ಣವಾಗಿ ಟೀಕಿಸಿದ್ದು, ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ. ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ Read More »

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ!

ಜಲಕ್ಷಾಮ ಎದುರಿಸಲು ನೀರಿನ ಮಿತ ಬಳಕಗೆ ಸೂಚನೆ ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನಲ್ಲಿ ಕಾರು ತೊಳೆದರೆ ಬರೋಬ್ಬರಿ 5 ಸಾವಿರ ರೂ. ದಂಡ ಬೀಳಲಿದೆ. ಈ ಬಾರಿ ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವುದು ಸೇರಿದಂತೆ ಹಲವು ಮಹತ್ವದ ಸೂಚನೆಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶನ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ! Read More »

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್‌

ಕೊಬ್ಬಿನಂಶ ಹೆಚ್ಚು ಇದೆ ಎಂಬ ಕಾರಣಕ್ಕೆ ವಿತರಣೆ ಸ್ಥಗಿತಗೊಳಿಸಲು ಸರಕಾರದ ಆದೇಶ ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್‌ Read More »

ಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ…

ಕೆಲವು ತಿಂಗಳಿಂದ ಸ್ಥಗಿತಗೊಂಡಿರುವ ಗ್ಯಾರಂಟಿಗಳು ಬೆಂಗಳೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ ಎರಡು ಮಹತ್ವಾಕಾಂಕ್ಷಿ ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಕೆಲ ತಿಂಗಳಿಂದ ಸ್ಥಗಿತಗೊಂಡಿದ್ದು, ಜನ ಗೊಂದಲದಲ್ಲಿದ್ದಾರೆ.ಅನ್ಯಭಾಗ್ಯದಡಿ ಬಿಪಿಎಲ್‌ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ನೀಡಲಾಗುತ್ತಿದ್ದ ಹಣ 5 ತಿಂಗಳಿನಿಂದ ಸ್ಥಗಿತಗೊಂಡಿದ್ದರೆ ಗೃಹಲಕ್ಷ್ಮಿ ಹಣ 3 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ.ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ

ಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ… Read More »

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಚೇತನ್ (45), ರೂಪಾಲಿ (43), ಪ್ರಿಯಂವದಾ ಮತ್ತು ಕುಶಾಲ್ (15) ಎಂದು ಗುರುತಿಸಲಾಗಿದೆ. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿವೆ. ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ Read More »

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

error: Content is protected !!
Scroll to Top