ರಾಜ್ಯ

ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು : ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈರುತ್ಯ ರೈಲ್ವೆ ಕೆಲವು ವಿಶೇಷ ರೈಲುಗಳನ್ನು ಓಡಿಸಲಿದೆ. ಈ ಪೈಕಿ ಒಂದು ರೈಲು ಬೆಂಗಳೂರು-ಮಂಗಳೂರು ನಡುವೆ ಸಂಚರಿಸಲಿದೆ. ರೈಲು ಸಂಖ್ಯೆ 06579 ಏಪ್ರಿಲ್ 17ರಂದು ರಾತ್ರಿ 11.55ಕ್ಕೆ ಬೆಂಗಳೂರಿನಿಂದ (ಎಸ್​ಎಂವಿಟಿ) ಹೊರಟು ಮರುದಿನ ಸಂಜೆ 4 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ. ರೈಲು ಸಂಖ್ಯೆ 06580 ಏಪ್ರಿಲ್ 20ರಂದು ಮಧ್ಯಾಹ್ನ 2.10ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರು (ಎಸ್​ಎಂವಿಟಿ) ತಲುಪುತ್ತದೆ.1 ಪ್ರಥಮ […]

ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ

ಪ್ರಬಲ ಸಮುದಾಯಗಳಿಂದ ಪ್ರತ್ಯೇಕ ಗಣತಿ, ಹೋರಾಟದ ಎಚ್ಚರಿಕೆ ಬೆಂಗಳೂರು: ಏನೇನೋ ಲೆಕ್ಕಾಚಾರ ಹಾಕಿ ಬಿಡುಗಡೆ ಮಾಡಿದ ಜಾತಿ ಗಣತಿ ವರದಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಲಿಗೆ ಬಿಸಿತುಪ್ಪವಾಗುವ ಲಕ್ಷಣ ಕಾಣಿಸಿದೆ. ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದರೂ ಅದಕ್ಕೂ ಮೊದಲೇ ವರದಿಯ ಕೆಲವು ಅಂಶಗಳು ಬಹಿರಂಗವಾಗಿ ಎಲ್ಲೆಲ್ಲೂ ಆಕ್ರೋಶ ವ್ಯಕ್ತವಾಗುತ್ತದೆ. ಮುಖ್ಯವಾಗಿ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ವರದಿ ವಿರುದ್ಧ ಸಿಡಿದು ನಿಂತಿದ್ದಾರೆ. ಇದರ ಜೊತೆಗೆ ಇತರ

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ Read More »

ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಮುಖ್ಯಮಂತ್ರಿ ಮನವೊಲಿಕೆಗೂ ಬಗ್ಗದ ಲಾರಿ ಮಾಲೀಕರು ಬೆಂಗಳೂರು : ಮುಷ್ಕರ ಹೂಡಿರುವ ಲಾರಿ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಡೆಸಿದ ಸಂಧಾನ ಸಭೆ ವಿಫಲಗೊಂಡಿದ್ದು, ಲಾರಿ ಮುಷ್ಕರ ಮುಂದುವರಿದಿದೆ. ಏರಿಸಿದ ಡೀಸೆಲ್ ದರ ಇಳಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ

ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು : ಸುಳ್ಯದ ಬೆಳ್ಳಾರೆಯಲ್ಲಿ 2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಇದುವರೆಗೂ ಈ ಪ್ರಕರಣದಲ್ಲಿ 21 ಆರೋಪಿಗಳನ್ನ ಬಂಧಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ. 2022ರ ಜು.26ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್​ ನೆಟ್ಟಾರು ಹತ್ಯೆ ನಡೆದಿತ್ತು. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್ ಮತ್ತು ಅತೀಕ್ ಅಹ್ಮದ್​ ಎಂಬವರ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ Read More »

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು

ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್‌ ನೀಡಿರುವ ಲೋಕಾಯುಕ್ತ ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚೀಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಜನಪ್ರತಿನಿಧಿ ನ್ಯಾಯಾಲಯ ಇಂದು ಪ್ರಕಟಿಸಲಿದೆ. ಜನಪ್ರತಿನಿಧಿ ನ್ಯಾಯಾಲಯಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಜೊತೆಗೆ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ತೀರ್ಪು

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು Read More »

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ

ಬೆಂಗಳೂರು: ಜಾತಿ ಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ವರದಿ ಅವೈಜ್ಞಾನಿಕವಾಗಿದೆ ಎಂದು ಹಲವು ನಾಯಕರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ರಾಜ್ಯದ ಎರಡು ಪ್ರಮುಖ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ಜಾತಿಯ ಮುಖಂಡರು ಕೂಡ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಒಕ್ಕಲಿಗ ಶಾಸಕರು ಮತ್ತು ಎಂಎಲ್‌ಸಿಗಳ ಸಭೆ ಕರೆದಿದ್ದಾರೆ. ಡಿಕೆಶಿ ಮನೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗುತ್ತದೆ

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ Read More »

ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ

ತರಕಾರಿ, ಹಣ್ಣುಹಂಪಲು ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿ ಮಾಲೀಕರ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಶುರುವಾಗಿದೆ. ಮಂಗಳವಾರ ಬೆಳಗ್ಗೆ ಲಾರಿಗಳು ರೋಡಿಗೆ ಇಳಿದಿಲ್ಲ. ಇದರಿಂದಾಗಿ ಅಗತ್ಯ ವಸ್ತುಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.ಡಿಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. 6

ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ Read More »

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ

ಮುಂದಿನ ತಿಂಗಳೇ ಹಸೆಮಣೆಯೇರಲಿದ್ದಾರೆ ಹುಬ್ಬಳ್ಳಿಯ ಈ ದಿಟ್ಟ ಮಹಿಳಾ ಪೊಲೀಸ್‌ ಅಧಿಕಾರಿ ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತುಹಿಚುಕಿ ಕೊಲೆ ಮಾಡಿದ್ದ ಆರೋಪಿಯನ್ನು ಗುಂಡಿಕ್ಕಿ ಸಾಯಿಸಿದ ಮಹಿಳಾ ಇನ್‌ಸ್ಪೆಕ್ಟರ್‌ ಅನ್ನಪೂರ್ಣ ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಮನೆ ಮಾತಾಗಿ ಲೇಡಿ ಸಿಂಗಂ ಎಂದು ಕರೆಸಿಕೊಂಡಿದ್ದಾರೆ. ವಾಟ್ಸಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ಸೋಷಿಯಲ್‌‌ ಮೀಡಿಯಾಗಳಲ್ಲಿ ಅನ್ನಪೂರ್ಣ ಕುರಿತು ಪುಂಖಾನುಪುಂಖವಾಗಿ ಪೋಸ್ಟ್‌ಗಳು ಹರಿದಾಡುತ್ತಿವೆ. ಮಹಿಳೆಯಾಗಿ ಅನ್ನಪೂರ್ಣ ತೋರಿಸಿದ ದಿಟ್ಟತನಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಾಕಷ್ಟು ಮಂದಿ ಅನ್ನಪೂರ್ಣ

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ Read More »

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ

ರಾಜ್ಯಾದ್ಯಂತ ಅಕ್ರೋಶಕ್ಕೆ ಕಾರಣವಾಗಿದ್ದ ಕೃತ್ಯದ ಆರೋಪಿ ಬೆಂಗಳೂರು : ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಬಂದು ಕಿರುಕುಳ ನೀಡಿ ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸುಮಾರು 10 ದಿನಗಳ ಬಳಿಕ ಆರೋಪಿ ಸಂತೋಷ್ ಡೆನಿಯಲ್​​​ನನ್ನು ಕೇರಳ ಕೋಝಿಕ್ಕೋಡ್‌ ಸಮೀಪದ ಹಳ್ಳಿಯೊಂದರಿಂದ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ Read More »

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು

ತರಕಾರಿ, ಗ್ಯಾಸ್‌ ಸೇರಿ ಅಗತ್ಯ ವಸ್ತುಗಳ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್ ದರ ಏರಿಕೆ ಪ್ರತಿಭಟಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ ಸುಮಾರು 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ಹೋಗುವ ಸರಕು ಸಾಗಾಟದಲ್ಲಿ ವ್ಯತ್ಯಯವಾಗಿ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಆಲ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್‌ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್,

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು Read More »

error: Content is protected !!
Scroll to Top