ರಾಜ್ಯ

ಅಬ್ದುಲ್‌ ರಹಿಮಾನ್‌ ಶವಯಾತ್ರೆ ವೇಳೆ ಫರಂಗಿಪೇಟೆಯಲ್ಲಿ ಉದ್ವಿಗ್ನ ಸ್ಥಿತಿ

ರಸ್ತೆತಡೆ ಮಾಡಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಉದ್ರಿಕ್ತ ಗುಂಪು ಮಂಗಳೂರು: ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹಿಮಾನ್(34) ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ ಜನರ ಗುಂಪು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ದೇರಳಕಟ್ಟೆ ಯೇನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಮಯ್ಯತ್ ಸ್ನಾನ ನಿರ್ವಹಿಸಿ ಅಲ್ಲಿಂದ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಕೊಂಡೊಯ್ಯಲಾಯಿತು. […]

ಅಬ್ದುಲ್‌ ರಹಿಮಾನ್‌ ಶವಯಾತ್ರೆ ವೇಳೆ ಫರಂಗಿಪೇಟೆಯಲ್ಲಿ ಉದ್ವಿಗ್ನ ಸ್ಥಿತಿ Read More »

ಕಾರಿನ ಸನ್‌ರೂಫ್‌ ತೆರೆದು ನಡುರಸ್ತೆಯಲ್ಲೇ ದಂಪತಿ ರೊಮಾನ್ಸ್‌

ದಂಡ ವಿಧಿಸಿ ಎಚ್ಚರಿಕೆ ನೀಡಿದ ಪೊಲೀಸರು ಬೆಂಗಳೂರು: ಕಾರಿನಲ್ಲಿ ಹೋಗುತ್ತಿರುವಾಗ ಸನ್‌ರೂಫ್ ತೆಗೆದು ನಡುರಸ್ತೆಯಲ್ಲೇ ದಂಪತಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಗರದ ಕೋರಮಂಗಲದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ದಂಪತಿ ಊಟ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಸನ್‌ರೂಪ್ ತೆಗೆದು ರೊಮ್ಯಾನ್ಸ್ ಮಾಡಿದ್ದು, ದಂಪತಿಯ ವರ್ತನೆಯನ್ನು ವಾಹನ ಸವಾರರು ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದನ್ನು ಕಂಡ ಹಲಸೂರು ಪೊಲೀಸರು ಕಾರಿನ ನಂಬರ್ ಆಧಾರಿಸಿ ಮಾಲೀಕರನ್ನು ಪತ್ತೆ ಹಚ್ಚಿದ್ದಾರೆ. ಅಪಾಯಕಾರಿಯಾಗಿ

ಕಾರಿನ ಸನ್‌ರೂಫ್‌ ತೆರೆದು ನಡುರಸ್ತೆಯಲ್ಲೇ ದಂಪತಿ ರೊಮಾನ್ಸ್‌ Read More »

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ

ಸರಣಿ ಹತ್ಯೆಗಳಿಂದ ಕರಾವಳಿಯಲ್ಲಿ ಆತಂಕದ ವಾತಾವರಣ- ಮೇ 30ರವರೆಗೆ ನಿಷೇಧಾಜ್ಞೆ ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಂಟ್ವಾಳ ಸಮೀಪ ಮುಸ್ಲಿಂ ಯುವಕನನ್ನು ಬರ್ಬರವಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕರಾವಳಿಯಲ್ಲಿ ಮತ್ತೆ ಆತಂಕದ ವಾತಾವರಣ ಉಂಟು ಮಾಡಿದೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗೂ ಮಂಗಳೂರು ಪೊಲೀಸ್‌ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ Read More »

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ

ನ್ಯಾಯಾಲಯಕ್ಕೆ ಮಾಹಿತಿ ನೀಡಿದ ರೇವಣ್ಣ ಕುಟುಂಬದ ಮಾಜಿ ಚಾಲಕ ಬೆಂಗಳೂರು: ಸರಣಿ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ವೇಳೆ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ಮೊಬೈಲ್‌ನಲ್ಲಿ ಸುಮಾರು 2 ಸಾವಿರ ಅಶ್ಲೀಲ ಫೋಟೋಗಳು ಹಾಗೂ 40ರಿಂದ 50 ವಿಡಿಯೋಗಳಿದ್ದವು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣದ ವಿಚಾರಣೆಗೆ ಹಾಜರಾದ ಕಾರ್ತಿಕ್‌, ಪ್ರಜ್ವಲ್‌ ಮೊಬೈಲ್‌ನಲ್ಲಿದ್ದ

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ Read More »

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ

ಆರೋಗ್ಯದಲ್ಲಿ ವ್ಯತ್ಯಾಸವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ಸಲಹೆ ಬೆಂಗಳೂರು: ರಾಜ್ಯದಲ್ಲಿ ಕೊರೊನ ಪ್ರಕರಣಗೂ ವರದಿಯಾಗುತ್ತಿದ್ದರೂ ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಹೊರಡಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅವುಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ Read More »

ಘಾಟಿ ರಸ್ತೆಯಲ್ಲಿ ಭೂ ಕುಸಿತ ಆತಂಕ : ವಾಹನ ಸವಾರರಿಗೆ ಎಚ್ಚರಿಕೆಯಿಂದಿರಲು ಸೂಚನೆ

ಚಾರ್ಮಾಡಿ, ಶಿರಾಡಿ ಘಾಟಿಗಳಲ್ಲಿ ಅಲ್ಲಲ್ಲಿ ಗುಡ್ಡೆ ಕುಸಿದು ಸಂಚಾರಕ್ಕೆ ಅಡಚಣೆ ಮಂಗಳೂರು: ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣಾರ್ಭಟ ಜೋರಾಗಿದ್ದು, ಮಂಗಳೂರನ್ನು ಬೆಂಗಳೂರಿಗೆ ಸಂಪರ್ಕಿಸುವ ಚಾರ್ಮಾಡಿ ಮತ್ತು ಶಿರಾಡಿ ಘಾಟಡಿಯಲ್ಲಿ ಈ ವರ್ಷವೂ ಭೂಕುಸಿತದ ಭೀತಿ ಎದುರಾಗಿದೆ. ಈ ವರ್ಷ ಮುಂಗಾರಿನ ಮೊದಲ ಮಳೆಗೆ ಹತ್ತಾರು ಕಡೆ ಭೂಕುಸಿತಗಳು ಸಂಭವಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ ಉಂಟಾಗಿದೆ. ಸೋಮವಾರ ಚಾರ್ಮಾಡಿ ಘಾಟಿಯ ಬಿದಿರುತಳ ಮತ್ತು ಅಲೆಕಾನ್‌ ಮಧ್ಯೆ ಭೂಕುಸಿತವಾಗಿ ಹಲವು ತಾಸು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಈ ಭಾಗದಲ್ಲಿ

ಘಾಟಿ ರಸ್ತೆಯಲ್ಲಿ ಭೂ ಕುಸಿತ ಆತಂಕ : ವಾಹನ ಸವಾರರಿಗೆ ಎಚ್ಚರಿಕೆಯಿಂದಿರಲು ಸೂಚನೆ Read More »

ಜೂ.1ರಿಂದ ವಿಧಾನಸೌಧಕ್ಕೆ ಗೈಡೆಡ್‌ ಟೂರ್‌ ಸೌಲಭ್ಯ

ಸಾರ್ವಜನಿಕರಿಗೆ ವಿಧಾನಸೌಧದ ಒಳಗಿನ ಸೊಬಗು ವೀಕ್ಷಿಸಲು ಅವಕಾಶ ನೀಡುವ ಪ್ರವಾಸ ಬೆಂಗಳೂರು: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ವಿಧಾನಸೌಧದ ಸಭಾಂಗಣದ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಜೂ.1ರಿಂದ ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌಧ ಗೈಡೆಡ್ ಟೂರ್‌ಗೆ ಚಾಲನೆ ನೀಡಲಿದೆ. ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧದ ಗೈಡೆಡ್ ಟೂರ್ ವ್ಯವಸ್ಥೆ ಏರ್ಪಡಿಸಲಾಗುತ್ತಿದ್ದು, ಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಇದಕ್ಕೆ ಸಮಯ ಹಾಗೂ ಶುಲ್ಕ ನಿಗದಿ ಮಾಡಲಾಗಿದೆ. ಈ ನಿಮಿತ್ತ

ಜೂ.1ರಿಂದ ವಿಧಾನಸೌಧಕ್ಕೆ ಗೈಡೆಡ್‌ ಟೂರ್‌ ಸೌಲಭ್ಯ Read More »

ಬರ್ತ್‌ಡೇ ನೆಪದಲ್ಲಿ ರೇವ್‌ ಪಾರ್ಟಿ : 31 ಯುವಕ-ಯುವತಿಯರ ಬಂಧನ

ಮಾದಕ ವಸ್ತು, ಮದ್ಯ ಬಳಕೆ ದೃಢ ಬೆಂಗಳೂರು: ದೇವನಹಳ್ಳಿ ತಾಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಬೆಳಗಿನ ಜಾವ 5 ಗಂಟೆಗೆ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಒಬ್ಬನ ಜನ್ಮದಿನದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ದೇವನಹಳ್ಳಿ

ಬರ್ತ್‌ಡೇ ನೆಪದಲ್ಲಿ ರೇವ್‌ ಪಾರ್ಟಿ : 31 ಯುವಕ-ಯುವತಿಯರ ಬಂಧನ Read More »

18 ಶಾಸಕರ ಅಮಾನತು ಎರಡೇ ತಿಂಗಳಿಗೆ ಮುಕ್ತಾಯ

ಅಮಾನತು ಆದೇಶ ಹಿಂಪಡೆದಿದ್ದೇನೆ ಎಂದ ಸ್ಪೀಕರ್‌ ಖಾದರ್‌ ಬೆಂಗಳೂರು: ಸದನದೊಳಗೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಅಮಾನತಗೊಂಡಿದ್ದ ಬಿಜೆಪಿಯ 18 ಶಾಸಕರ ಅಮಾನತು ಅವಧಿ ಎರಡೇ ತಿಂಗಳಿಗೆ ಮುಕ್ತಾಯವಾಗಿದೆ. ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ 18 ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನಿಸಲಾಯಿತು. ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಯು.ಟಿ ಖಾದರ್ ಸಭೆಯ ಬಳಿಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ

18 ಶಾಸಕರ ಅಮಾನತು ಎರಡೇ ತಿಂಗಳಿಗೆ ಮುಕ್ತಾಯ Read More »

ಪ್ರಸಿದ್ದವಾದ ‘ಮೈಸೂರು ಪಾಕ್’ ಇನ್ಮುಂದೆ “ಮೈಸೂರು ಶ್ರೀ”

ಜೈಪುರ: ಪಹಲ್ಗಾಮ್ ನಲ್ಲಿ ಪಾಕ್ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ಅಪರೇಷನ್ ಸಿಂಧೂರ ಸೇನಾ ಕರ‍್ಯಾಚರಣೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದ್ದು, ಇದೀಗ ಭಾರತದಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತದ ಮೇಲೆ ಉಗ್ರರು ದಾಳಿ ಮಾಡಿದ ನಂತರ ಅನೇಕ ರೀತಿಯಲ್ಲಿ ಪಾಕ್ ಗೆ ವಿರೋಧ ವ್ಯಕ್ತವಾಗುತ್ತಲೇ ಇವೆ. ಇದೀಗ ಪಾಕ್ ಗೆ ವಿರೋಧ ವ್ಯಕ್ತ ಪಡಿಸುವಲ್ಲಿ ಸ್ವೀಟ್ ಶಾಪ್ ಗಳೂ ಕೂಡ ಸೇರ್ಪಡೆಯಾಗಿದ್ದು, ವಿನೂತನ ರೀತಿಯಲ್ಲಿ ‘ಪಾಕ್’ ವಿರುದ್ಧ

ಪ್ರಸಿದ್ದವಾದ ‘ಮೈಸೂರು ಪಾಕ್’ ಇನ್ಮುಂದೆ “ಮೈಸೂರು ಶ್ರೀ” Read More »

error: Content is protected !!
Scroll to Top