ರಾಜ್ಯ

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌ […]

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು

ನೀರಿನಲ್ಲಿ ಯೋಗನಿದ್ರೆಯಲ್ಲಿರುವಾಗಲೇ ಬಂದ ಮೃತ್ಯು ಚಾಮರಾಜನಗರ: ನುರಿತ ಯೋಗಪಟುವೊಬ್ಬರು ನದಿಯಲ್ಲಿ ಯೋಗ ಮಾಡುತ್ತಿರುವಾಗಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಮೃತ ದುರ್ದೈವಿ. ತೀರ್ಥಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು Read More »

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ

ಅಲ್ಪಸಂಖ್ಯಾತರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂದು ಟೀಕೆ ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಪಾಕಿಸ್ಥಾನ್‌ ಜಿಂದಾಬಾದ್ ಎಂದು ಹೇಳುವವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮೈಸೂರು ಉದಯಗಿರಿ ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ Read More »

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಜನ ಮನೆ ಮಠ ಕಳೆದುಕೊಂಡು ಬೀದಿಗೆ ಭೀಳುವ, ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳ ಬಗ್ಗೆ ರಾಜ್ಯ ಸರಕಾರ ತೆಗೆದುಕೊಂಡ ಮಹತ್ವದ ನಿರ್ಣಯಗಳಂತೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ ೨೦೨೫ ರ ಮುಖ್ಯಾಂಶಗಳು:- ೧. ಸದರಿ ಆಧ್ಯಾದೇಶವು ದಿನಾಂಕ: ೧೨.೦೨.೨೦೨೫ ರಂದು ಜಾರಿಗೆ ಬಂದಿದೆ.

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ Read More »

ಅಪಾರ್ಟ್‌ಮೆಂಟ್‌ ನಿಂದ ಜಿಗಿದು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ SSLC ಪರೀಕ್ಷೆ ಹತ್ತಿರ ಬರುತ್ತಾ ಇದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ.

ಅಪಾರ್ಟ್‌ಮೆಂಟ್‌ ನಿಂದ ಜಿಗಿದು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅನಾರೋಗ್ಯದಿಂದಾಗಿ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಎಂದೂ ಕರೆಯಲಾಗುತ್ತಿತ್ತು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ Read More »

ದಾಂಧಲೆ ಮಾಡೋಕೆ ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ | ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿ‍ಧಾನ ಇದೆ : ಪ್ರಮೋದ್‍ ಮುತಾಲಿಕ್‍

ದಾವಣಗೆರೆ: ಮುಸ್ಲಿಮರು ದಾಂಧಲೆ ಮಾಡೋಕೆ ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ. ಮುಂದೆ ಈ ರೀತಿ ಮಾಡಿದರೆ ಹುಷಾರ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವೇಳೆ ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು. ಅದನ್ನು ಬಿಟ್ಟು ಪೊಲೀಸ್

ದಾಂಧಲೆ ಮಾಡೋಕೆ ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ | ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿ‍ಧಾನ ಇದೆ : ಪ್ರಮೋದ್‍ ಮುತಾಲಿಕ್‍ Read More »

ಕರ್ನಾಟಕ ‘SSLC ಪೂರ್ವ ಸಿದ್ಧತಾ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು :2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ 25-02-2025ರಿಂದ 04-03-2025ರವರೆಗೆ ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ

ಕರ್ನಾಟಕ ‘SSLC ಪೂರ್ವ ಸಿದ್ಧತಾ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ Read More »

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು

ದೇಶ ವಿದೇಶಗಳನ್ನು ಆಕರ್ಷಿಸುವ ಏರ್‌ ಶೋ ಪ್ರಾರಂಭಕ್ಕೆ ಕ್ಷಣಗಣನೆ ಬೆಂಗಳೂರು: ರೋಮಾಂಚಕಾರಿ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ-2025ʼ ಇಂದಿನಿಂದ ಶುರುವಾಗಲಿದ್ದು, ಇದಕ್ಕಾಗಿ ಬೆಂಗಳೂರು ಸರ್ವಸಜ್ಜಾಗಿದೆ. ಯಲಹಂಕ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ–ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯಾ ಸೇರಿದಂತೆ ವಿವಿಧ ದೇಶಗಳ

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು Read More »

error: Content is protected !!
Scroll to Top