ರಾಜ್ಯ

ಜೂ.22 ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಜೂ.22 ರಂದು ಕರ್ನಾಟಕ ಬಂದ್ ಗೆ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್  ಕರೆ ನೀಡಿದೆ. ಕೆಸಿಸಿಐ ಮತ್ತು ಇತರ ಜಿಲ್ಲಾ ವಾಣಿಜ್ಯ ಮಂಡಳಿಗಳು ಬಂದ್‍ ಗೆ ಕರೆ ನೀಡಿದ್ದು, ಎಲ್ಲಾ ವ್ಯಾಪಾರ, ಕೈಗಾರಿಕೆಗಳು ಹಾಗೂ ಇಂಡಸ್ಟ್ರೀಸ್ ಗಳು ಅಂದು ಬಂದ್ ಆಗಲಿವೆ. ಈಗಾಗಲೇ ಬಂದ್‍ ಗೆ 25 ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‍ ಗಳ ಬೆಂಬಲ ದೊರಕಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಈ ಕುರಿತು […]

ಜೂ.22 ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ Read More »

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಉಚಿತ ವಿದ್ಯುತ್ “ಗೃಹಜ್ಯೋತಿ” ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು: ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ರಾಜ್ಯ ಸರ್ಕಾರವು ಗೃಹಜ್ಯೋತಿಗೆ ನೊಂದಣಿ ಪ್ರಕ್ರಿಯೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಒಂದು ಹಂತದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗೃಹಜ್ಯೋತಿ ಯೋಜನೆಯನ್ನು ಲೋಕಾರ್ಪಣೆ ಮಾಡಲು ನಿರ್ಧರಿಸಲಾಗಿದೆ. https://sevasindhugs.karnataka.gov.in/gruhajyothi ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ರಾಜ್ಯದ ಜನತೆ ಉಚಿತ ವಿದ್ಯುತ್​ ಸೌಕರ್ಯವನ್ನು ಪಡೆದುಕೊಳ್ಳಬಹುದಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಸರ್ಕಾರ ಇನ್ನೂ ಕೊನೆಯ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಉಚಿತ ವಿದ್ಯುತ್ “ಗೃಹಜ್ಯೋತಿ” ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ Read More »

ಕೋಮು ದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 25 ಲಕ್ಷ ಪರಿಹಾರ

ಬೆಂಗಳೂರು:: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿಗಳನ್ನು ಪರಿಹಾರದ ರೂಪದಲ್ಲಿ ಘೋಷಣೆ ಮಾಡಿದೆ. ಓರ್ವ ಬಿಜೆಪಿ ಕಾರ್ಯಕರ್ತ ಹಾಗೂ ಮೂವರು ಮುಸ್ಲಿಂ ಸಮುದಾಯದ ಯುವಕರ ಕುಟುಂಬಕ್ಕೆ ಪರಿಹಾರ ಘೋಷಣೆಯಾಗಿದೆ. ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್​ ರಾವ್​, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್​,ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ ಮಹಮ್ಮದ್​ ಫಾಜಿಲ್​, ಡಿಸೆಂಬರ್​ 24ರಂದು ಹತ್ಯೆಗೀಡಾದ ಕಾಟಿಪಳ್ಳದ ಅಬ್ದುಲ್​

ಕೋಮು ದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 25 ಲಕ್ಷ ಪರಿಹಾರ Read More »

ಪಾನ್-ಆಧಾರ್ ಲಿಂಕ್ ಮಾಡಲು ಕೇವಲ 15 ದಿನವಷ್ಟೇ ಬಾಕಿ ; ತಪ್ಪಿದಲ್ಲಿ ಪಾನ್ ನಿಷ್ಕ್ರಿಯ !

ಬೆಂಗಳೂರು: ನೀವು ಇದುವರೆಗೂ ನಿಮ್ಮ ಆಧಾರ್ ಕಾರ್ಡ್ (Aadhar Card) ಅನ್ನು ಪ್ಯಾನ್ ಕಾರ್ಡ್‌ (PAN Card) ನೊಂದಿಗೆ ಲಿಂಕ್ ಮಾಡದಿದ್ದಲ್ಲಿ, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ – ಆದಾರ್‌ ಲಿಂಕ್ ಮಾಡಲು 2023ರ ಜೂನ್‌ 30 ಕೊನೆಯ ದಿನವಾಗಿದೆ. ಈ ಗಡುವಿನೊಳಗೆ ತಪ್ಪದೆ ಈ ಕೆಲಸವನ್ನು ಮಾಡಿ. ಏಕೆಂದರೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ

ಪಾನ್-ಆಧಾರ್ ಲಿಂಕ್ ಮಾಡಲು ಕೇವಲ 15 ದಿನವಷ್ಟೇ ಬಾಕಿ ; ತಪ್ಪಿದಲ್ಲಿ ಪಾನ್ ನಿಷ್ಕ್ರಿಯ ! Read More »

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈನಲ್ಲಿ ನಡೆಯಲಿರುವ ಅಧೀವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ Read More »

ಸಾರಿಗೆ ಇಲಾಖೆ ನೌಕರರ ವೇತನ ಪರಷ್ಕರಣೆ ಮನವಿ ತಿರಸ್ಕರಿಸಿದ ರಾಜ್ಯ ಸರಕಾರ | ನೌಕರರಿಗೆ ಬಿಗ್ ಶಾಕ್

ಪುತ್ತೂರು: ರಾಜ್ಯ ಸರಕಾರ ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸುವ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಻ನುದಾನ ನೀಡುವಂತೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದವು. ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದ್ದು, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶವಿಲ್ಲ. ಸಾರಿಗೆ ನಿಮಗಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ.

ಸಾರಿಗೆ ಇಲಾಖೆ ನೌಕರರ ವೇತನ ಪರಷ್ಕರಣೆ ಮನವಿ ತಿರಸ್ಕರಿಸಿದ ರಾಜ್ಯ ಸರಕಾರ | ನೌಕರರಿಗೆ ಬಿಗ್ ಶಾಕ್ Read More »

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಮನೆಯ ಯಜಮಾನಿಗೆ 2 ಸಾವಿರ ರೂಪಾಯಿಗಳ ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಜೂ.16 ರಿಂದ ಆನ್ ಲೈನ್, ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಇಂದು ಮಾತನಾಡಿ, ಬಿಪಿಎಲ್, ಅಂತ್ಯೋದಯ ಕಾರ್ಡ್‍ ದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ನಾಳೆಯಿಂದಲೇ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆಯರು ಆಧಾರ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ Read More »

ಚಿತ್ತೂರು ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಮಿನಿ ಲಾರಿ ಡಿಕ್ಕಿ | ಮೂರು ಆನೆಗಳು ಮೃತ್ಯು

ಚಿತ್ತೂರು: ತರಕಾರಿ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿಯೊಂದು ರಸ್ತೆ ದಾಟುತ್ತಿದ್ದ ಆನೆ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆಗಳು ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಒಂದು ದೊಡ್ಡ ಆನೆ ಹಾಗೂ ಎರಡು ಮರಿ ಆನೆಗಳು ಸಾವನ್ನಪ್ಪಿದೆ. ಪಲಮನೇರು ಬಳಿ ಆಹಾರಕ್ಕಾಗಿ ಆನೆಗಳು ಸುತ್ತಾಡುತ್ತಲಿತ್ತು. ಬುಧವಾರ ರಾತ್ರಿ ಬೂತಲಬಂಡ ತಿರುವಿನಲ್ಲಿ ಚೆನ್ನೈಗೆ ತರಕಾರಿ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಓಡಿ ಹೋಗಿದ್ದಾನೆ. ಅಪಘಾತ

ಚಿತ್ತೂರು ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಮಿನಿ ಲಾರಿ ಡಿಕ್ಕಿ | ಮೂರು ಆನೆಗಳು ಮೃತ್ಯು Read More »

ವಿಶ್ವ ಪ್ರವಾಸಿತಾಣವಾಗಿ ಗಮನ ಸೆಳೆದ ಮಡಿಕೇರಿಯಲ್ಲಿ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ನಿರ್ಮಾಣ | ಪ್ರವಾಸಿ ತಾಣಕ್ಕೆ ಮತ್ತೊಂದು ಸೇರ್ಪಡೆ

ಮಡಿಕೇರಿ: ಮಡಿಕೇರಿಯ ಹೊರವಲಯದ ಉಡೋತ್ ಎಂಬಲ್ಲಿ 31 ಮೀ. ಉದ್ದ, 2 ಮೀ. ಅಗಲದ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಮಂಜಿನನಗರಿ ಎಂದೇ ಖ್ಯಾತವಾದ, ಪ್ರವಾಸಿ ತಾಣವೆಂದೇ ವಿಶ್ವದ ಗಮನ ಸೆಳೆದ ಮಡಿಕೇರಿಯ ಉಡೋತ್  ಎಂಬಲ್ಲಿ ಈ ನೂತನ ಬ್ರಿಡ್ಜ್‍ ನಿರ್ಮಾಣವಾಗಿದ್ದು, ದಕ್ಷಿಣ ಭಾರತದ ಎರಡನೇ ಬ್ರಿಡ್ಜ್‍ ಆಗಿದೆ. ಸುಮಾರು 78 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. ಇದೀಗ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ಪ್ರವಾಸೋದ್ಯಮಕ್ಕೆ ಹೊಸ ಸೇರ್ಪಡೆಯಾಗಿದೆ. ಸುಮಾರು 5 ಟನ್

ವಿಶ್ವ ಪ್ರವಾಸಿತಾಣವಾಗಿ ಗಮನ ಸೆಳೆದ ಮಡಿಕೇರಿಯಲ್ಲಿ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ನಿರ್ಮಾಣ | ಪ್ರವಾಸಿ ತಾಣಕ್ಕೆ ಮತ್ತೊಂದು ಸೇರ್ಪಡೆ Read More »

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ Read More »

error: Content is protected !!
Scroll to Top