ರಾಜ್ಯ

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು

ದೇಶ ವಿದೇಶಗಳನ್ನು ಆಕರ್ಷಿಸುವ ಏರ್‌ ಶೋ ಪ್ರಾರಂಭಕ್ಕೆ ಕ್ಷಣಗಣನೆ ಬೆಂಗಳೂರು: ರೋಮಾಂಚಕಾರಿ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ-2025ʼ ಇಂದಿನಿಂದ ಶುರುವಾಗಲಿದ್ದು, ಇದಕ್ಕಾಗಿ ಬೆಂಗಳೂರು ಸರ್ವಸಜ್ಜಾಗಿದೆ. ಯಲಹಂಕ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ–ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯಾ ಸೇರಿದಂತೆ ವಿವಿಧ ದೇಶಗಳ […]

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು Read More »

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ

ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿಗೂ ಅತ್ಯಾಧುನಿಕ ಕೋಚ್‌ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ Read More »

ನಾಳೆಯಿಂದ ಬೆಂಗಳೂರಿನಲ್ಲಿ ಏರ್‌ಶೋ

ರೋಮಾಂಚನಕಾರಿ ವೈಮಾನಿಕ ಪ್ರದರ್ಶನ ಬೆಂಗಳೂರು: ಬೆಂಗಳೂರಿನಲ್ಲಿ ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನಿರೀಕ್ಷೆಗಳನ್ನು ಹುಟ್ಟಿಸಿದೆ.ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ಧ್ಯೇಯದೊಂದಿಗೆ 5 ದಿನ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ

ನಾಳೆಯಿಂದ ಬೆಂಗಳೂರಿನಲ್ಲಿ ಏರ್‌ಶೋ Read More »

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ

ಬಜೆಟ್‌ನಲ್ಲಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಬೆಂಗಳೂರು: ರಾಜ್ಯದ ಎರಡನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮೊಯ್ಲಿ, ಬೆಂಗಳೂರಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕಾನೂನು ಶಾಲೆ ಎನ್‌ಎಲ್‌ಎಸ್‌ಐಯು ಸ್ಥಾಪಿಸಲು ಕ್ರಮಗಳ ಕೈಗೊಂಡಿದ್ದೆ. ಇದು ಅತ್ಯಂತ ಯಶಸ್ವಿ ಪ್ರಯೋಗವಾಗಿದ್ದು, ಇಂದು ಭಾರತದಲ್ಲಿ 27 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ. ಕೆಲವು ರಾಜ್ಯಗಳು ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ Read More »

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಇದು ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಈ ವರ್ಷವೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ ಪಾದಯಾತ್ರಿಗಳು

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ Read More »

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌

ದೌರ್ಜನ್ಯದ ದೂರು ಕೊಟ್ಟವರ ವಿರುದ್ಧವೇ ಕಿರುಕುಳ ನೀಡಿ ಸಾವಿಗೆ ಕಾರಣರಾದದ್ದಕ್ಕೆ ಆಕ್ರೋಶ ಬೆಂಗಳೂರು: ಪೊಲೀಸ್​ ಇನ್‌ಸ್ಪೆಕ್ಟರ್‌ ಒಬ್ಬರು ತನ್ನ ತಂದೆಯ ಶವವನ್ನೇ ಪೊಲೀಸ್‌ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದ ಹಾರುಗೇರಿಯಲ್ಲಿ ಇಂದು ಮುಂಜಾನೆ ಹೊತ್ತು ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಹಾರುಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದವರು. ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌ Read More »

ಹಠಾತ್‌ ಸಾವುಗಳ ಸಂಶೋಧನೆಗೆ ತಜ್ಞರ ಸಮಿತಿ ರಚನೆ : ಸಿದ್ದರಾಮಯ್ಯ ಆದೇಶ

ಪತ್ರಕರ್ತನ ಪತ್ರಕ್ಕೆ ಸ್ಪಂದಿಸಿ ಸೂಚನೆ ನೀಡಿದ ಸಿಎಂ ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಆರೋಗ್ಯದಿಂದಿರುವವರು ದಿಢೀರ್‌ ಎಂದು ಹೃದಯಾಘಾತವಾಗಿ ಸಾವನ್ನಪ್ಪುತ್ತಿದ್ದಾರೆ, ಅದರಲ್ಲೂ ಯುವಕರು ಮತ್ತು ಮಕ್ಕಳು ಯಾವುದೇ ಸಮಸ್ಯೆ ಇಲ್ಲದಿದ್ದರೂ ಸಾವಿಗೀಡಾಗುತ್ತಿರುವುದು ಕಳವಳಕಾರಿಯಾಗಿ ಸಂಭವಿಸುತ್ತಿದೆ. ಈ ಕುರಿತು ನಿತ್ಯ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಪತ್ರಕರ್ತರೊಬ್ಬರು ಇ.-ಮೈಲ್‌ನಲ್ಲಿ ಬರೆದ ಪತ್ರವನ್ನು ಪರಿಗಣಿಸಿ ಸಾವುಗಳ ಬಗ್ಗೆ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ

ಹಠಾತ್‌ ಸಾವುಗಳ ಸಂಶೋಧನೆಗೆ ತಜ್ಞರ ಸಮಿತಿ ರಚನೆ : ಸಿದ್ದರಾಮಯ್ಯ ಆದೇಶ Read More »

ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?

ಕೇಂದ್ರದ ಕಿಸಾನ್‌ ಸಮ್ಮಾನ್‌ ರೀತಿ ವಿತರಿಸಲು ಸರಕಾರದ ಚಿಂತನೆ ಬೆಂಗಳೂರು: ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿ ಕೊಡುಗೆಯಾಗಿರುವ ಗೃಹಲಕ್ಷ್ಮೀ ಗ್ಯಾರಂಟಿಯ ಹಣ ವಿತರಣೆ ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತಾಲೂಕು ಪಂಚಾಯಿತಿಗಳ ಮೂಲಕ ಜಾರಿಗೊಳಿಸಲು ಸರಕಾರ ಮುಂದಾಗಿದೆ. ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ. ಮಹಿಳಾ ಮತ್ತು

ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ? Read More »

ನಂದಿಹೋದ 46 ವರ್ಷಗಳಿಂದ ಉರಿಯುತ್ತಿದ್ದ ದೀಪ : ಕೆಡುಕಿನ ಭೀತಿಯಲ್ಲಿ ಜನ

ಎಣ್ಣೆ-ಬತ್ತಿ ಇಲ್ಲದೆ ನಿರಂತರವಾಗಿ ನಾಲ್ಕೂವರೆ ದಶಕ ಉರಿಯುತ್ತಿದ್ದ ಮೂರು ದೀಪಗಳು ಕಾರವಾರ: ದೇವಸ್ಥಾನವೊಂದರಲ್ಲಿ ಸುಮಾರು ನಾಲ್ಕೂವರೆ ದಶಕದಿಂದ ಎಣ್ಣೆ ಮತ್ತು ಬತ್ತಿ ಇಲ್ಲದೆ ನಿರಂತರವಾಗಿ ಉರಿಯುತ್ತಿದ್ದ ಮೂರು ದೀಪಗಳು ಹಠಾತ್‌ ನಂದಿಹೋಗಿದ್ದು, ಇದು ಯಾವುದೋ ಕೆಡುಕಿನ ಸೂಚನೆ ಎಂದು ಈ ಊರಿನ ಜನ ಭಯಭೀತರಾಗಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ದೀಪನಾಥೇಶ್ವರ ದೇವಾಲಯದದಲ್ಲಿ ಮೂರು ದೀಪಗಳು ಎಣ್ಣೆ ಮತ್ತು ಬತ್ತಿ ಇಲ್ಲದೆ ಸತತ 46 ವರ್ಷಗಳಿಂದ ಹಗಲು-ರಾತ್ರಿ ನಿರಂತರವಾಗಿ ಉರಿಯುತ್ತಿದ್ದವು. ಕೆಲದಿನಗಳ ಹಿಂದೆ ಏಕಾಏಕಿ

ನಂದಿಹೋದ 46 ವರ್ಷಗಳಿಂದ ಉರಿಯುತ್ತಿದ್ದ ದೀಪ : ಕೆಡುಕಿನ ಭೀತಿಯಲ್ಲಿ ಜನ Read More »

ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ

ಮುಡಾ ಹಗರಣ, ಪೋಕ್ಸೊ ಕೇಸ್‌ ತೀರ್ಪಿಗೆ ಕ್ಷಣಗಣನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪಾಲಿಗೆ ಇಂದು ನ್ಯಾಯಾಲಯದ ವಿಚಾರಣೆ ನಿರ್ಣಾಯಕವಾಗಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಪೋಕ್ಸೊ ಕೇಸಿನಲ್ಲಿ ಯಡಿಯೂರಪ್ಪ ಕುರಿತಾದ ತೀರ್ಪು ಇಂದು ಪ್ರಕಟವಾಗಲಿದೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಶುಕ್ರವಾರ ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ

ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ Read More »

error: Content is protected !!
Scroll to Top