ರಾಜ್ಯ

ವಿದ್ಯಾರ್ಥಿನಿಗೆ ಲವ್‌ ಪ್ರಪೋಸ್‌ ಪ್ರಕರಣ : ಕಾಲೇಜಿಗೆ ಬಾಂಬ್‌ ಬೆದರಿಕೆ

ಪ್ರೊಪೆಸರ್‌ಗೆ ಥಳಿಸಿದ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಬೆದರಿಕೆ ಬೆಂಗಳೂರು: ಬೆಂಗಳೂರು ಸಮೀಪದ ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಅಬ್ದುಲ್‌ ಎಂಬಾತ ತರಗತಿಯಲ್ಲಿ ವಿದ್ಯಾರ್ಥಿನಿಗೆ ಲವ್ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಡಾ.ಅಬ್ದುಲ್‌ಗೆ ವಿದ್ಯಾರ್ಥಿನಿ ಚಪ್ಪಲಿಯಲ್ಲಿ ಹೊಡೆದ ವಿಡಿಯೋ ವೈರಲ್‌ ಆಗಿದೆ. ಶುಕ್ರವಾರ ಮುಂಜಾನೆ ಕಾಲೇಜಿನ ಪ್ರಿನ್ಸಿಪಾಲ್ ಸೇರಿದಂತೆ ಅಧಿಕಾರಿಗಳ ಅಧಿಕೃತ ಇಮೇಲ್‌ಗಳಿಗೆ ಬಾಂಬ್ […]

ವಿದ್ಯಾರ್ಥಿನಿಗೆ ಲವ್‌ ಪ್ರಪೋಸ್‌ ಪ್ರಕರಣ : ಕಾಲೇಜಿಗೆ ಬಾಂಬ್‌ ಬೆದರಿಕೆ Read More »

ಮಾ: 28: ಮಂಗಳೂರು ವಿವಿ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ಮಾ. 28 ರಂದು ಮಂಗಳ ಗಂಗೋತ್ರಿ, ಮಂಗಳೂರು ವಿಶ್ವವಿದ್ಯಾಲಯದ 44 ನೇ ಘಟಿಕೋತ್ಸವವು ನಡೆಯಲಿದ್ದು ಈ ಸಂದರ್ಭದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ಕ್ಷೇತ್ರದ ಸಾಧಕ ಪದ್ಮಶ್ರೀ ಹರೇಕಳ ಹಾಜಬ್ಬ, ಮರಣೋತ್ತರವಾಗಿ ಇತ್ತೀಚೆಗೆ ಮೃತರಾದ ಯಕ್ಷಗಾನದ ಮೇರು ನಟ ಸೂರಿಕುಮೇರು ಗೋವಿಂದ ಭಟ್, ದೈವನರ್ತಕ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ನಡೆಯಲಿರುವುದಾಗಿ ಕುಲಪತಿ ಪ್ರೊ. ಕೆ. ಎಲ್. ಧರ್ಮ ತಿಳಿಸಿದ್ದಾರೆ. ಹರೇಕಳ ಹಾಜಬ್ಬ: ಇವರು ಕಿತ್ತಳೆ

ಮಾ: 28: ಮಂಗಳೂರು ವಿವಿ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ Read More »

ರೌಡಿ ಶೀಟರ್ ಆರಿಫ್ ಕೊಲೆ ಆರೋಪಿಗಳು ಬಳಸಿದ ಕಾರು ಪತ್ತೆ

ತೊಕ್ಕೊಟ್ಟು: ಇಲ್ಲಿನ ಫ್ಲೈ ಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಯಾನೆ ಟ್ಯಾಬ್ಲೆಟ್ ಆರಿಫ್‌ನ ಕೊಲೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಬಳಸಿದ್ದ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಿಫ್‌ನನ್ನು ಬೈಕಿನಿಂದ ಕೆಡವಿ ಕೊಲೆಗೈದ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಆ ಕಾರು ಬಂಟ್ವಾಳದ ಬುಡೋಳಿ ಎಂಬಲ್ಲಿ ಪತ್ತೆಯಾಗಿದೆ. ಆರಿಫ್ ಹತ್ಯೆಯ ಬಳಿಕ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೇ ಸಂದರ್ಭದಲ್ಲಿ ಬುಡೋಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.

ರೌಡಿ ಶೀಟರ್ ಆರಿಫ್ ಕೊಲೆ ಆರೋಪಿಗಳು ಬಳಸಿದ ಕಾರು ಪತ್ತೆ Read More »

ನಿಧಿಯಾಸೆಗೆ ಪುರಾತನ ದೇವಾಲಯ ಧ್ವಂಸ, ಶಿವಲಿಂಗ ಭಗ್ನ

ಕಲ್ಬುರ್ಗಿ: ಪುರಾತನ ದೇಗುಲವೊಂದು ದುಷ್ಕರ್ಮಿಗಳ ನಿಧಿಯಾಸೆಗೆ ಧ್ವಂಸವಾದ ಘಟನೆ ಅಫ್ಜಲಪುರದ ಬಡದಾಳ ಗ್ರಾಮದಲ್ಲಿ ನಡೆದಿದೆ. ಬಡದಾಳದ ಬಸವಣ್ಣ ದೇಗುಲದಲ್ಲಿ ನಿಧಿ ಇದೆ ಎಂದು ದುಷ್ಕರ್ಮಿಗಳು ರಾತ್ರಿ ವೇಳೆ ಶೋಧ ಕಾರ್ಯ ನಡೆಸಿದ್ದಾರೆ. ದೇಗುಲದ ಒಳಕ್ಕೆ ನುಗ್ಗಿ ಶಿವಲಿಂಗ ಸೇರಿದಂತೆ ದೇವರ ಇನ್ನಿತರ ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹಾಗೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

ನಿಧಿಯಾಸೆಗೆ ಪುರಾತನ ದೇವಾಲಯ ಧ್ವಂಸ, ಶಿವಲಿಂಗ ಭಗ್ನ Read More »

ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದವಳ ಪುತ್ರನಿಂದ ಪತ್ನಿ ಮತ್ತು ಆಕೆಯ ಸಹೋದರನ ಕೊಲೆ

ಬೆಂಗಳೂರು: ತನ್ನ ತಾಯಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದವನ ಪತ್ನಿ ಮತ್ತು ಅವಳ ಸಹೋದರನಿಗೆ ಚಾಕು ಚುಚ್ಚಿ ಕೊಲೆ ಮಾಡಿರುವ ಘಟನೆ ಪೀಣ್ಯಾ‌ದ ನೆಲಗೆದರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಗಳರಪಾಳ್ಯದ ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಎಂದು ಗುರುತಿಸಲಾಗಿದೆ. ಈ ಕೃತ್ಯವನ್ನು ಅಪರಾಧಿಗಳಾದ ಛಾಯಾ ಮತ್ತು ಆಕೆಯ ಅಪ್ರಾಪ್ತ ಪುತ್ರ ಎಸಗಿದ್ದಾಗಿದೆ. ಎಚ್‌ಎಂ‌ಟಿ ‌ಲೇ ಔಟ್‌ನ ಛಾಯಾಳ ಮನೆಯಲ್ಲೇ ಈ ಹತ್ಯೆ ನಡೆದಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಮುನಾ ಎಂಬವರ ಗಂಡ ಮಲ್ಲೇಗೌಡನಿಗೆ ಮತ್ತು

ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದವಳ ಪುತ್ರನಿಂದ ಪತ್ನಿ ಮತ್ತು ಆಕೆಯ ಸಹೋದರನ ಕೊಲೆ Read More »

ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ್ದ ಪ್ರೊಫೆಸರ್‌ ಅಬ್ದುಲ್ಲ ಅರೆಸ್ಟ್‌

ಕ್ಲಾಸ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್‌ ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕೋಲೆಟ್ ಕೊಟ್ಟು ಲವ್ ಪ್ರಪೋಸ್ ಮಾಡಿದ ಅಸಿಸ್ಟೆಂಟ್ ಪ್ರೊಫೆಸರ್‌ನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪ್ರೋಫೆಸರ್ ಅಬ್ದುಲ್ ವಿರುದ್ಧ ನೆಲಮಂಗಲದ ಖಾಸಗಿ ಕಾಲೇಜು ಆಡಳಿತ ಮಂಡಳಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಪ್ರೊಫೆಸರ್ ವಿರುದ್ಧ ಕ್ರೈಂ ನಂಬರ್ 79, ಬಿಎನ್‌ಎಸ್ ಆಕ್ಟ್ 74, 75, 329 (3) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ

ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ್ದ ಪ್ರೊಫೆಸರ್‌ ಅಬ್ದುಲ್ಲ ಅರೆಸ್ಟ್‌ Read More »

ಒಂದನೇ ತರಗತಿ ದಾಖಲಾಗಲು ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ ಪ್ರಕಟ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸುವಂತೆ ಕರ್ನಾಟಕದಲ್ಲಿ ಒಂದನೇ ತರಗತಿಗೆ ದಾಖಲಾಗಲು ಇದ್ದ 6 ರ ವಯೋಮಿತಿಯನ್ನು ಸಡಿಲಿಸಿರುವುದಾಗಿ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಮಾಡಿದೆ. ಈ ಸಂಬಂಧ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಒಂದನೇ ತರಗತಿಗೆ ದಾಖಲಾಗಲು ಇದ್ದ 6 ವರ್ಷದ ಮಿತಿಯನ್ನು 5 ವರ್ಷ 10 ತಿಂಗಳಿಗೆ ಸಡಿಲಿಕೆ ಮಾಡಲಾಗುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಗೂ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ನೀಡುವ ಬಗ್ಗೆ ಕೆಲಸ ಮಾಡುತ್ತಿದ್ದೇವೆ.

ಒಂದನೇ ತರಗತಿ ದಾಖಲಾಗಲು ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ ಪ್ರಕಟ Read More »

ಎ. 6 : ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ

ಕಡಬ: ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ಸನ್ನಿಧಿ ಕುದ್ಮಾರು ಇಲ್ಲಿ ಎ. 6 ರಂದು ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ ಜರುಗಲಿದೆ. ಎ. 6 ರಂದು ಸಂಜೆ ಗಂಟೆ 6 ಕ್ಕೆ ದೈವಗಳ ಭಂಡಾರ ತೆಗೆಯುವುದು ರಾತ್ರಿ ಗಂಟೆ 7 ರಿಂದ ಗುಳಿಗ ದೈವದ ನೇಮ ರಾತ್ರಿ ಗಂಟೆ 9 ರಿಂದ ಅನ್ನಸಂತರ್ಪಣೆ ರಾತ್ರಿ ಗಂಟೆ 10 ರಿಂದ ಕಲ್ಲುರ್ಟಿ ದೈವದ ನೇಮ ನಡೆಯಲಿದೆ. ಹಾಗೆಯೇ ಎ. 7 ರಂದು ಬೆಳಿಗ್ಗೆ

ಎ. 6 : ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ Read More »

ಉಗ್ರರ ಜೊತೆ ನಂಟು: ಬಳ್ಳಾರಿಯ ಅಬ್ದುಲ್ ಸಲಾಮ್‌ನನ್ನು ಬಂಧಿಸಿದ ವಿಜಯವಾಡ ಪೊಲೀಸರು

ಬಳ್ಳಾರಿ: ಆನ್‌ಲೈನಿನಲ್ಲಿ ‌ಮೂಲಭೂತವಾದದ ಬಗ್ಗೆ ಪ್ರಚಾರ, ಉಗ್ರರ ಜೊತೆ ನಂಟು ಹೊಂದಿರುವ ಆರೋಪದಲ್ಲಿ ದೇಶದಲ್ಲಿ 12 ಯುವಕರನ್ನು ಬಂಧಿಸಲಾಗಿದ್ದು, ಇದರಲ್ಲಿ ಓರ್ವ ಬಂಧಿತ ಬಳ್ಳಾರಿಯವ ಎಂದು ತಿಳಿದು ಬಂದಿದೆ. ಶಂಕಿತನನ್ನು ಬಳ್ಳಾರಿಯ ಅಬ್ದುಲ್ ಸಲಾಮ್ (36) ಎಂದು ಗುರುತಿಸಲಾಗಿದೆ. ಕರ್ನಾಟಕ, ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಜಯವಾಡ ಪೊಲೀಸರು ನಡೆಸಿದ ಕಾರ್ಯಾಚರಣೆಯ ಸಂದರ್ಭದಲ್ಲಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಿಷೇಧಿತ ಉಗ್ರ ಸಂಘಟನೆಗಳ ಜೊತೆ ನಂಟು, ಉಗ್ರವಾದದ ಬಗ್ಗೆ ಪ್ರಚಾರ ಮಾಡುತ್ತಿರುವ ಹಿನ್ನೆಲೆ ಆರೋಪಿ

ಉಗ್ರರ ಜೊತೆ ನಂಟು: ಬಳ್ಳಾರಿಯ ಅಬ್ದುಲ್ ಸಲಾಮ್‌ನನ್ನು ಬಂಧಿಸಿದ ವಿಜಯವಾಡ ಪೊಲೀಸರು Read More »

ತರಗತಿಯಲ್ಲೇ ‌ವಿದ್ಯಾರ್ಥಿನಿಗೆ ಲವ್ ಪ್ರೊಪೋಸ್ ಮಾಡಿದ ಪ್ರೊಫೆಸರ್

ಬೆಂಗಳೂರು: ವಿದ್ರಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಒಬ್ಬ ತರಗತಿ ನಡೆಯುತ್ತಿರುವಾಗಲೇ ಲವ್ ಪ್ರೊಪೋಸ್ ಮಾಡಿದ್ದು, ಇದು ವಿವಾದ ಸೃಷ್ಟಿ ಮಾಡಿದೆ. ಪ್ರತಿಷ್ಟಿತ ಮೆಡಿಕಲ್ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಪ್ರೊ. ಅಬ್ದುಲ್ಲಾ ಎಂಬಾತ ಚಾಕೊಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆಯನ್ನು ತರಗತಿಯಲ್ಲೇ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ ಆಕ್ರೋಶದಿಂದ ಆತನನ್ನು ಪ್ರಶ್ನೆ ಮಾಡಿದ್ದಾಳೆ. ಘಟನೆಯಿಂದ ವಿವಾದ ಉಂಟಾಗಿತ್ತು, ಬೇರೆ ವಿದ್ಯಾರ್ಥಿಗಳು ಸಹ ಪ್ರೊಫೆಸರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆತನನ್ನು ಹಿಂಬಾಲಿಸಿ ಕ್ಯಾಂಪಸ್ ನಲ್ಲೇ ಹೊಡೆದಿರುವ ಘಟನೆ ಸಹ ನಡೆದಿದೆ. ಪರಿಸ್ಥಿತಿ

ತರಗತಿಯಲ್ಲೇ ‌ವಿದ್ಯಾರ್ಥಿನಿಗೆ ಲವ್ ಪ್ರೊಪೋಸ್ ಮಾಡಿದ ಪ್ರೊಫೆಸರ್ Read More »

error: Content is protected !!
Scroll to Top