ರಾಜ್ಯ

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ

ಮೊಬೈಲ್‌ನಲ್ಲಿತ್ತು ಮಂಗಳೂರಿನಲ್ಲಿ ನಡೆದ ಪ್ರಾಣಿ ಬಲಿಯ ಶಾಕಿಂಗ್‌ ವೀಡಿಯೊಗಳು ಮಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಮಸಾಜ್ ಪಾರ್ಲರ್ ಗಲಾಟೆ ಸಂಬಂಧ ಬಂಧನದಲ್ಲಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮುಡಾ ಹಗರಣವನ್ನು ಬಯಲಿಗೆಳೆದಿರುವ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಶಕ್ತಿ ತುಂಬಲು ಪ್ರಾಣಿ ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೊಗೆ ಹಚ್ಚಿರುವ ವೀಡಿಯೊ ಪೊಲೀಸರಿಗೆ ಲಭ್ಯವಾಗಿದೆ. […]

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ Read More »

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ

ಕಾರು ಅಡ್ಡಗಟ್ಟಿ ಅಜ್ಞಾತ ಸ್ಥಳಕ್ಕೆ ಒಯ್ದು ಚಿತ್ರಹಿಂಸೆ ಬೆಂಗಳೂರು: ಪುತ್ತೂರಿನ ಉದ್ಯಮಿಯೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಚಿತ್ರಹಿಂಸೆ ನೀಡಿ, 28 ಲಕ್ಷ ರೂ. ದೋಚಿರುವ ಘಟನೆ ಬೆಂಗಳೂರಿನ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೊಲ್ಪೆ ಗ್ರಾಮದ ನಿವಾಸಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರಾಗಿದ್ದು, ಇವರು ಪೆಟ್ರೋಲ್‌ ಬಂಕ್ ಹಾಗೂ ಟ್ರಾನ್ಸ್‌ಪೋರ್ಟ್ ವ್ಯವಹಾರ ಹೊಂದಿದ್ದಾರೆ. ಜ.24ರಂದು ಇಕ್ಬಾಲ್‌ ದೇವನಹಳ್ಳಿಯ ಹೋಟೆಲ್‌ಗೆ ಹೋಗಿ ಅಲ್ಲಿ ಕೆಲಸ ಮುಗಿಸಿ ಬೆಂಗಳೂರಿನಲ್ಲಿರುವ ಸ್ನೇಹಿತ ಕರೀಂ ಮನೆಯಲ್ಲಿ ಉಳಿದುಕೊಂಡು ಮರುದಿನ

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ತಡೆದು ಲಾಂಗ್‌ನಿಂದ ಗಾಜು ಒಡೆದು ಹಾಕಿ ಹಲ್ಲೆ ಮಾಡಿ ಅಟ್ಟಹಾಸ ಮೆರೆದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನು (23) ಎಂಬ ಈ ರೌಡಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆ ನೆಪ ಹೇಳಿ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು Read More »

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ

ಪಿಡಿಒ ಮನೆಯಲ್ಲಿ ಮಷಿನ್‌ ಬಳಸಿ ನೋಟು ಎಣಿಕೆ ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಭ್ರಷ್ಟರ ಬೇಟೆ ಆರಂಭಿಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ

ಲಾಂಗ್‌ನಿಂದ ಬಸ್‌ನ ಗಾಜು ಒಡೆದು ಹಾಕಿ ಪ್ರಯಾಣಿಕರಿಗೆ ಬೆದರಿಕೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್‌ ತಡೆದು ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ Read More »

ಭೀಕರ ಅಗ್ನಿ ಅವಘಡ : 50ಕ್ಕೂ ಹೆಚ್ಚು ವಾಹನಗಳು ನಾಶ

ಪೊಲೀಸರು ಜಪ್ತಿ ಮಾಡಿ ಮೈದಾನದಲ್ಲಿಟ್ಟಿದ್ದ ವಾಹನಗಳಿಗೆ ಹತ್ತಿಕೊಂಡ ಬೆಂಕಿ ಬೆಂಗಳೂರು: ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಬೆಳಗ್ಗೆ ಬೆಂಕಿ ಬಿದ್ದಿದೆ. ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ

ಭೀಕರ ಅಗ್ನಿ ಅವಘಡ : 50ಕ್ಕೂ ಹೆಚ್ಚು ವಾಹನಗಳು ನಾಶ Read More »

ಮೂರು ಅಂತಸ್ತಿನ ಹೋಟೆಲ್‌ ಕಟ್ಟಡವೇ ಸ್ಥಳಾಂತರ

ಹೈಡ್ರಾಲಿಕ್‌ ಜಾಕ್‌ ಬಳಸಿ ಇಡೀ ಕಟ್ಟಡವನ್ನೇ ಹಿಂದಕ್ಕೆ ತಳ್ಳುವ ಸಾಹಸ ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5 ಅಡಿಯಷ್ಟು ಹಿಂದಕ್ಕೆ ಜರುಗಿಸಲಾಗಿದೆ. ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಂಚಿನಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವುಗೊಳಿಸಲು

ಮೂರು ಅಂತಸ್ತಿನ ಹೋಟೆಲ್‌ ಕಟ್ಟಡವೇ ಸ್ಥಳಾಂತರ Read More »

ಕಾರು, ಬೈಕ್‌ ಖರೀದಿಸುವವರಿಗೆ ಸೆಸ್‌ ಬರೆ

ಫೆ.1ರಿಂದಲೇ ಜಾರಿಗೆ ಬರಲಿದೆ ಹೊಸ ಮೇಲ್ತೆರಿಗೆ ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದಾಗಿ ಖಜಾನೆ ಖಾಲಿಯಾಗಿ ಪರದಾಡುತ್ತಿರುವ ಕಾಂಗ್ರೆಸ್‌ ಸರಕಾರ ಈಗ ಸಂಪನ್ಮೂಲ ಕ್ರೋಡೀಕರಣಕ್ಕೆ ವಾಹನ ಖರೀದಿಸುವವರಿಗೆ ಬರೆ ಹಾಕಲು ಮುಂದಾಗಿದೆ. ಫೆಬ್ರವರಿ 1ರಿಂದಲೇ ಹೊಸದಾಗಿ ಕಾರು ಮತ್ತು ಬೈಕ್ ಖರೀದಿ ಮಾಡುವವರಿಗೆ ಕರ್ನಾಟಕ ಸರ್ಕಾರ ಸೆಸ್‌ ಹಾಕಲಿದೆ. ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಸೆಸ್ ಸಂಗ್ರಹಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ

ಕಾರು, ಬೈಕ್‌ ಖರೀದಿಸುವವರಿಗೆ ಸೆಸ್‌ ಬರೆ Read More »

ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನಲ್ಲಿತ್ತು ಕಂತೆ ಕಂತೆ ನೋಟು

ನಿರ್ಜನ ಪ್ರದೇಶದಲ್ಲಿ ಉಪೇಕ್ಷಿಸಿ ಹೋದ ಕಾರಿನ ನಂಬರ್‌ ಪ್ಲೇಟ್‌ ನಕಲಿ ಕಾರವಾರ: ಅಂಕೋಲಾ ಸಮೀಪ ರಾಮನಗುಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿರ್ಜನ ಪ್ರದೇಶದಲ್ಲಿ ಉಪೇಕ್ಷಿಸಿ ಹೋಗಿದ್ದ ಕ್ರೆಟಾ ಕಾರಿನೊಳಗೆ ಕಂತೆ ಕಂತೆ ಹಣ ಪತ್ತೆಯಾಗಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಕಾರನ್ನು ಪೊಲೀಸ್‌ ಠಾಣೆಗೆ ಒಯ್ದಿದ್ದಾರೆ. ಕಾರು ಮಂಗಳೂರು ಮೂಲದ್ದು ಎಂಬ ಸಂಶಯ ವ್ಯಕ್ತವಾಗಿದೆ.ಕಾರಿನ ನಂಬರ್‌ ಪ್ಲೇಟ್‌ ನಕಲಿಯಾಗಿದ್ದು, ಹೀಗಾಗಿ ಈ ಕಾರು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾರಿನೊಳಗಿದ್ದ ಬ್ಯಾಗಿನಲ್ಲಿ 1,14,99,500 ರೂಪಾಯಿ

ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನಲ್ಲಿತ್ತು ಕಂತೆ ಕಂತೆ ನೋಟು Read More »

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ

ಮಹಾಕುಂಭಮೇಳದ ಕುರಿತು ಖರ್ಗೆ ಹೇಳಿಕೆಗೆ ತಿರುಗೇಟು ಉಡುಪಿ: ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ, ಕಾಂಗ್ರೆಸ್ ಈಗಾಗಲೇ ನರಕದಲ್ಲಿ ಇದೆ. ಸ್ವರ್ಗಕ್ಕೆ ಹೋಗುವಂತಹ ಅವಕಾಶವನ್ನು ದೇವರು ಅವರಿಗೆ ಕಲ್ಪಿಸುವುದಿಲ್ಲ. ದೇಶ ವಿರೋಧಿ, ಹಿಂದೂ ವಿರೋಧಿಗಳಿಗೆ ಸ್ವರ್ಗ

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ Read More »

error: Content is protected !!
Scroll to Top