ರಾಜ್ಯ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಆರೋಗ್ಯದಲ್ಲಿ ಏರುಪೇರಾಗಿ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ  ದಾಖಲಿಸಲಾಗಿದೆ. ಅವರು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿಂದೆ ಏಪ್ರಿಲ್​ ತಿಂಗಳಿನಲ್ಲೂ ಅವರು ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪತಿ ಪರವಾಗಿ ಪಲ್ಲವಿ ಮತಪ್ರಚಾರದಲ್ಲಿ ಭಾಗಿಯಾಗಿ ಪತಿಯ ಆರೋಗ್ಯದ ಬಗ್ಗೆ ಹೇಳಿಕೊಂಡಿದ್ದರು. ಅನಾರೋಗ್ಯ ಉಂಟಾಗಿದ್ದರೂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅವರಿಗೆ ವಿಶ್ರಾಂತ್ರಿಯಿಲ್ಲದೆ ಆರೋಗ್ಯದಲ್ಲಿ ಏರುಪೇರು […]

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಅಂಬಾರಿಯನ್ನು ಹೊರುತ್ತಿದ್ದ ಆನೆ ಬಲರಾಮನ ಅಂತ್ಯಕ್ರಿಯೆ ಸೋಮವಾರ ವಿಧಿವಿಧಾನ ಪೂರ್ವಕವಾಗಿ ನಡೆಯಿತು. ಬಲರಾಮನ ಕಿವಿಯಲ್ಲಿ ನಾರಾಯಣ… ನಾರಾಯಣ… ನಾರಾಯಣ… ಎಂದು ಮಾವುತ ಮೂರು ಬಾರಿ ಉಸುರುತ್ತಾ, ಕಣ್ಣೀರಿಡುತ್ತಾ ಅಂತಿಮ ವಿದಾಯ ಹೇಳುತ್ತಿದ್ದರೆ, ಆಗಮಿಸಿದ ಎಲ್ಲರ ಕಣ್ಣಂಚಿನಲ್ಲೂ ನೀರಾಡಿತು. ಸೌಮ್ಯ ಸ್ವಭಾವದ ಬಲರಾಮ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಮೈಸೂರಿನ ಗಜಪಡೆಯ ಸಾರಥಿ, ಅರಮನೆಯ ಮುಖ್ಯ ಆನೆ, ಬಲಾಢ್ಯ ಅಂಬಾರಿಯನ್ನೇ ಸಲೀಸಾಗಿ ಎತ್ತಬಲ್ಲ ಬಲರಾಮ, ಹೆಸರಿಗೆ ತಕ್ಕಂತೆ ಬಲರಾಮ. ಹಾಗೆಂದು ಎಲ್ಲಿಯೂ ತನ್ನ ಬಲ ಪ್ರದರ್ಶನ

ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ Read More »

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸ್ನಾನತ್ತಾರು ಚಂದ್ರಶೇಖರ ರೈ ಹಾಗೂ ಸೋಮಾವತಿ ರೈ ದಂಪತಿ ಪುತ್ರಿ ಶ್ರುತಿ ಸಿ. ರೈ (22) ಆತ್ಮಹತ್ಯೆ ಮಾಡಿಕೊಂಡವರು. ಶ್ರುತಿ ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಶಿಕ್ಷಣ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು. ಅದಕ್ಕಾಗಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ತನ್ನ ಬಾಡಿಗೆ ರೂಂನಲ್ಲಿ ಕೆಲವು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ Read More »

ಡಿ.ಕೆ.ಶಿವಕುಮಾರ್ ಚಲಿಸುತ್ತಿದ್ದ ಹೆಲಿಕಾಫ್ಟರ್ ಗೆ ರಣಹದ್ದು ಡಿಕ್ಕಿ | ತುರ್ತು ಭೂಸ್ಪರ್ಶ

ಪುತ್ತೂರು: ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಈ ನಡುವೆ ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಗೆ ರಣಹದ್ದೊಂದು ಬಡಿದ ಪರಿಣಾಮ ಗ್ಲಾಸ್ ಪುಡಿಯಾಗಿ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ ಆದ ಘಟನೆ ನಡೆದಿದೆ. ಕಾಂಗ್ರೆಸ್‍ ನ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿ.ಕೆ.ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್‍ ಎಎಲ್ ಏರ್ ಪೋರ್ಟ್ ಗೆ ಬಂದಿದ್ದರು. ಅಲ್ಲಿಂದ ಮುಳುಬಾಗಿಲಿಗೆ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ರಣಹದ್ದು ಬಡಿದಿದೆ. ತುರ್ತು ಭೂಸ್ಪರ್ಶ ಆದರೂ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಬಳಿಕ

ಡಿ.ಕೆ.ಶಿವಕುಮಾರ್ ಚಲಿಸುತ್ತಿದ್ದ ಹೆಲಿಕಾಫ್ಟರ್ ಗೆ ರಣಹದ್ದು ಡಿಕ್ಕಿ | ತುರ್ತು ಭೂಸ್ಪರ್ಶ Read More »

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಚುನಾವಣಾ ಪ್ರಚಾರದಲ್ಲಿ ಕೇಂದ್ರದ ನಾಯಕರು ಭಾಗಿ ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವರು ಮತ್ತು ಬಿಜೆಪಿಯ ಪ್ರಮುಖ ನಾಯಕರ ದಂಡೇ ರಾಜ್ಯಕ್ಕೆ ಆಗಮಿಸುತ್ತಿದೆ. ವಿವಿಧ ರಾಜ್ಯಗಳ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಹಿಂದೂ ಫಯರ್​ ಬ್ರ್ಯಾಂಡ್​ ಲೀಡರ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ.ಲಖನೌನಿಂದ ಮೈಸೂರಿಗೆ ಆಗಮಿಸುವ ಯೋಗಿ ಆದಿತ್ಯನಾಥ್​​ 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ.

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ Read More »

ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.ಮುಸ್ಲಿಮರಿಗೆ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17

ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ Read More »

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ

ಏ. 29 ರಂದು ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮೂಲ್ಕಿಯಲ್ಲಿ ಪ್ರಧಾನಿಯ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೆಣವ ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸೇರಿಸಿ ಒಂದೇ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯದಲ್ಲಿರುವ ಮೂಲ್ಕಿಯನ್ನು ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ Read More »

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ

ತಿರುಪತಿ : ತಿರುಮಲ ತಿರುಪತಿ ದೇವಸ್ಥಾನ (TTD) ಇಂದು ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಟಿಟಿಡಿಯು ವೆಬ್​​ಸೈಟ್​​ನಲ್ಲಿ ತಿಳಿಸಿರುವ ತಿಂಗಳಿನಲ್ಲಿ ತಿರುಮಲದಲ್ಲಿ ವಿಶೇಷ ಮತ್ತು ಹೆಚ್ಚುವರಿ ವಸತಿ ಕೊಠಡಿಗಳನ್ನು ಬಿಡುಗಡೆ ಮಾಡಲಿದೆ. ಮೇ ಮತ್ತು ಜೂನ್‌ನಲ್ಲಿ ತಿರುಮಲಗೆ ಭೇಟಿ ನೀಡಬೇಕಾದರೆ ಟೋಕನ್ ಪಡೆಯಲು ಭಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಕಲ್ಯಾಣೋತ್ಸವ, ಉಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವಂ

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆರಿಯಾ ಗ್ರಾಮದ ಸಿಯೊನ್ ಆಶ್ರಮದಲ್ಲಿ ಏ.23 ರಂದು ಸಂಭವಿಸಿದೆ.ಕಿಶೋರ್ ಕುಮಾರ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಬಾರದೇ ಇರುವುದನ್ನು ಗಮನಿಸಿ ಆಶ್ರಮದ ಸಿಬ್ಬಂಧಿ ಜಿಬಿನ್ ಎಂಬವರು ಹೋಗಿ ನೋಡಿದಾಗ, ಹಾಲ್‌ನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top