ರಾಜ್ಯ

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು, […]

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಪುಣೆ : ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಸಮೀಪ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. .ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಂಬೇಗಾಂವ್‌ನ ಸ್ವಾಮಿ ನಾರಾಯಣ ದೇಗುಲದ ಬಳಿ ನವಲೆ ಸೇತುವೆ ಬಳಿ ಅಪಘಾತ ಸಂಭವಿಸಿದೆ.ಸಕ್ಕರೆ ಮೂಟೆ ಸಾಗಿಸುತ್ತಿದ್ದ ಟ್ರಕ್‌ ಟೂರಿಸ್ಟ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ Read More »

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ

ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದರು ಬೆಂಗಳೂರು : ಕಿರುತೆರೆಯ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದ ಸಂಪತ್ ಜಯರಾಮ್(35) ಅವರು ನಿಧನರಾಗಿದ್ದಾರೆ. ಕೆಲವು ಕನ್ನಡ ಸಿನೆಮಾ ಹಾಗೂ ದಾರವಾಹಿಗಳಲ್ಲಿ ಸಂಪತ್‌ ಕುಮಾರ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಕೆಲ ಸಮಯದಿಂದ ಸೂಕ್ತ ಅವಕಾಶ ಸಿಗದೆ ಚಿಂತೆಯಲ್ಲಿದ್ದರು. ಶನಿವಾರ (ಏ.22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ವೈವಾಹಿಕ ಜೀವನಕ್ಕೆ

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ Read More »

ಇಂದು ಶೂನ್ಯ ನೆರಳಿನ ದಿನ

ನಿಮ್ಮ ನೆರಳು ನಿಮಗೇ ಕಾಣಿಸದ ಪ್ರಾಕೃತಿಕ ಚಮತ್ಕಾರ ಪುತ್ತೂರು : ಪುತ್ತೂರಿನಲ್ಲಿ ಇಂದು(ಎ. 23) ಮುಂಬರುವ ದಿನಗಳಲ್ಲಿ ಸೂರ್ಯನು ಆಕಾಶದಲ್ಲಿ ಉತ್ತರ ದಿಕ್ಕಿನತ್ತ ಚಲಿಸುವಾಗ, ನೀವು ಇರುವ ಸ್ಥಳಕ್ಕೆ ಅವಲಂಬಿತವಾಗಿ ಸೂರ್ಯನು ಖಮಧ್ಯದ ಮೂಲಕ ಅಂದರೆ ನೆತ್ತಿಯ ನೇರದಲ್ಲಿ ಹಾದು ಹೋಗುತ್ತಾನೆ. ನೀವು ನಿಂತಿರುವ ಸ್ಥಳದಿಂದ ನೆತ್ತಿಯ ಮೇಲಿರುವ ಬಿಂದು ವನ್ನು ಖಮಧ್ಯ(ನಿತ್) ಎನ್ನುತ್ತಾರೆ. ಭೂಮಿಯು ಗೋಳಾಕಾರದಲ್ಲಿ ರುವುದರಿಂದ ಈ ಬಿಂದುವು ಆಕಾಶಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಬೇರೆ ಯಾವುದೇ ಸಮಯದಲ್ಲಿ, ಸೂರ್ಯನು ನಿಮ್ಮನ್ನು ಒಂದು

ಇಂದು ಶೂನ್ಯ ನೆರಳಿನ ದಿನ Read More »

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ

ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ ಬೆಂಗಳೂರು : ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪುಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸೃಷ್ಟಿಕರಣ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪುಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ. ಲಿಂಗಾಯತರಲ್ಲಿ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ Read More »

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಜ್ವರ, ಶ್ವಾಸಕೋಶದ ಸೋಂಕು, ಧೂಳಿನ ಅಲರ್ಜಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಭಯಪಡುವ ಅಗತ್ಯವಿಲ್ಲ” ಮತ್ತು ವಿಶ್ರಾಂತಿ ಪಡೆದ ನಂತರ ಪ್ರಚಾರವನ್ನು ಪುನರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ “ದಣಿವರಿಯದೆ” ತೊಡಗಿಸಿಕೊಂಡ ನಂತರ ಅವರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತನಿಖೆಗಾಗಿ ಬೆಂಗಳೂರಿಗೆ ಹೊರಟ ಅಸ್ಸಾಂ ಪೊಲೀಸ್‌ ತಂಡ ದೆಹಲಿ : ಯುವ ಕಾಂಗ್ರೆಸ್‌ನ ಉಚ್ಚಾಟಿತ ಅಧ್ಯಕ್ಷೆ ಅಂಗ್ಕಿತಾ ದತ್ತಾ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರಿನ ಶ್ರೀನಿವಾಸ ಬಿ. ವಿ. ವಿರುದ್ಧ ನೀಡಿರುವ ಲೈಂಗಿಕ ಕಿರುಕುಳದ ತನಿಖೆಗಾಗಿ ಅಸ್ಸಾಂ ಪೊಲೀಸ್‌ ತಂಡವೊಂದು ಬೆಂಗಳೂರಿಗೆ ಹೊರಟಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅಂಗ್ಕಿತಾ ದತ್ತ ಬಹಿರಂಗಪಡಿಸಿದ ಬಳಿಕ ಅವರನ್ನು ಕಾಂಗ್ರೆಸ್‌ನಿಂದ ಆರ ವರ್ಷದ ಮಟ್ಟಿಗೆ ಉಚ್ಚಾಟಿಸಲಾಗಿದೆ. ಶ್ರೀನಿವಾಸ ವಿರುದ್ಧ

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್‌ ಬಂಧನ

ಒಂದು ತಿಂಗಳ ಹುಡುಕಾಟದ ಬಳಿಕ ಸಿಕ್ಕಿದ ಖಲಿಸ್ಥಾನಿ ಪ್ರತ್ಯೇಕವಾದಿ ನಾಯಕ ದೆಹಲಿ : ತಲೆಮರೆಸಿಕೊಂಡಿದ್ದ ಖಲಿಸ್ಥಾನಿ ಪ್ರತ್ಯೇಕವಾದಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದಿರುವ ಪಂಜಾಬ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಅಮೃತ್‌ಪಾಲ್‌ ಸಿಂಗ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಅಮೃತ್‌ಪಾಲ್‌ ಸಿಂಗ್ ಪಂಜಾಬ್‌ನ ಮೋಗಾದಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಮಾರ್ಚ್ 18ರಿಂದ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿಕೊಂಡು ಅಮೃತ್‌ಪಾಲ್‌ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಅಮೃತ್‌ಪಾಲ್‌ ಸಿಂಗ್‌ರನ್ನು ಪೊಲೀಸರು ವಶಕ್ಕೆ ಪಡೆದು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್‌ ಬಂಧನ Read More »

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ

ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಮಠಾಧೀಶರ ತೀವ್ರ ಆಕ್ಷೇಪ ಬೆಂಗಳೂರು : ಒಂದೆಡೆ ಕಾಂಗ್ರೆಸ್‌ ಲಿಂಗಾಯತ ಸಮುದಾಯವನ್ನು ಓಲೈಸಲು ಯತ್ನಸುತ್ತಿದ್ದರೆ ಇನ್ನೊಂದೆಡೆ ಪಕ್ಷದ ನಾಯಕ ಸಿದ್ದರಾಮಯ್ಯ ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂಬ ದಾಟಿಯಲ್ಲಿ ಮಾತನಾಡಿ ಈ ಪ್ರಯತ್ನಕ್ಕೆ ತಣ್ಣೀರು ಎರಚಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಇದೀಗ ಲಿಂಗಾಯತ ಮಠಾಧೀಶರು ಪ್ರವೇಶಿಸಿದ್ದಾರೆ. ಮಾದ್ಯಮ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸುವಾಗ ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ Read More »

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

ವಾಷಿಂಗ್ಟನ್‌ : ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ಅವರು ಏ. 22 ರಂದು ನೇಮಕಗೊಂಡಿದ್ದಾರೆ.ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ. ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ Read More »

error: Content is protected !!
Scroll to Top