ರಾಜ್ಯ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ […]

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ

ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ Read More »

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌

ಹವಾಲ ಮೂಲಕ ದುಬೈಗೆ ಕೋಟಿಗಟ್ಟಲೆ ಹಣ ರವಾನೆ ಬೆಂಗಳೂರು : ನಟಿ ರನ್ಯಾ ರಾವ್‌ ಮೂರು ತಿಂಗಳಲ್ಲಿ ಬರೋಬ್ಬರಿ 49.6 ಕೆಜಿ ಚಿನ್ನ ಕಳ್ಳ ಸಾಗಾಟ ಮಾಡಿರುವ ವಿಚಾರ ಬಯಲಾಗಿದೆ. ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಮೂರನೇ ಆರೋಪಿ ಸಾಹಿಲ್ ಜೈನ್ ಡಿಆರ್‌ಐ ಮುಂದೆ ಈ ವಿಚಾರ ಬಾಯಿಬಿಟ್ಟಿದ್ದಾನೆ. ನವಂಬರ್‌ನಿಂದ ರನ್ಯಾ ಬರೋಬ್ಬರಿ 49.6 ಕೆಜಿ ಚಿನ್ನ ಸಾಗಿಸಿದ್ದಾಳೆ. ಈ ಚಿನ್ನವನ್ನೆಲ್ಲ ತಂದು ಸಾಹಿಲ್ ಜೈನ್​ಗೆ ಕೊಟ್ಟಿದ್ದ ರನ್ಯಾ ಅದನ್ನು ಆತನ ಮೂಲಕ ಮಾರಾಟ ಮಾಡಿಸುತ್ತಿದ್ದಳು. ಅಷ್ಟೇ ಅಲ್ಲ

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌ Read More »

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು!

ಪತ್ನಿಯನ್ನು ಸಾಯಿಸಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದ ಗಂಡನಿಗೆ ಶಾಕ್ ಮಡಿಕೇರಿ : ಐದು ವರ್ಷದ ಹಿಂದೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಹೆಂಡತಿ ಹೋಟೆಲೊಂದರಲ್ಲಿ ಪ್ರಿಯಕರನ ಜೊತೆ ಗಂಡನ ಕೈಗೆ ಸಿಕ್ಕಿಬಿದ್ದ ಸಿನಿಮಾ ಮಾದರಿ ಘಟನೆಯೊಂದು ಮಡಿಕೇರಿಯಲ್ಲಿ ಸಂಭವಿಸಿದೆ. ಕುಶಾಲನಗರ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಈ ಕೊಲೆ ಪ್ರಕರಣ ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾದಂತೆ ಅನಾವರಣಗೊಂಡಿದೆ. ತಾನು ಮಾಡದ ಕೊಲೆಗಾಗಿ ಗಂಡ ಎರಡು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಪೊಲೀಸರು ಮಲ್ಲಿಗೆ

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು! Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಎರಡನೇ ದಿನ ಪ್ರವೇಶಿಸಿದ ಅಹೋರಾತ್ರಿ ಧರಣಿ ಬೆಂಗಳೂರು: ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್‌ ಸರಕಾರದ ಬಿಜೆಪಿ ಬೆಂಗಳುರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ಬಿಜೆಪಿ ನಿರ್ಧರಿಸಿದೆ. ಫ್ರೀಡಂ ಪಾರ್ಕ್ ಇರುವ ಶೇಷಾದ್ರಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಜೆಪಿ ನಾಯಕರು ಬಿಸಿ ಮುಟ್ಟಿಸಲಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ Read More »

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ

ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಕೃತ್ಯ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆ.ಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಆಕೆಯನ್ನು ಕರೆದುಕೊಂಡು ಹೋಗಲು ದೊಡ್ಡಮ್ಮನ ಮಗ ಬಂದಿದ್ದರು.ಅಲ್ಲಿಂದ ಅವರು

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಬೈಕ್‌ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್‌ ಆದೇಶ

ನಿಯಮ ಇಲ್ಲದೆ ಬೈಕ್‌ ಟ್ಯಾಕ್ಸಿ ಓಡಾಡುವಂತಿಲ್ಲ ಎಂದ ನ್ಯಾಯಾಲಯ ಬೆಂಗಳೂರು: ಬೆಂಗಳೂರಿನಲ್ಲಿ ಬಹಳ ಜನಪ್ರಿಯವಾಗಿರುವ ಬೈಕಜ್‌ ಟ್ಯಾಕ್ಸಿ ಸೇವೆಯನ್ನು 6 ವಾರಗಳಲ್ಲಿ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಓಲಾ, ಉಬರ್ ಕಂಪನಿಗಳು ಬೆಂಗಳೂರು ಸೇರಿ ಕೆಲವು ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿವೆ.2022ರಲ್ಲಿ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಯ ವೇಳೆ

ಬೈಕ್‌ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್‌ ಆದೇಶ Read More »

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು

ಬೆಂಗಳೂರು : ಆಲೋವೆರಾ ಜ್ಯೂಸ್ ಎಂದು ತಪ್ಪಾಗಿ ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತಳು 9ನೇ ತರಗತಿಯ ವಿದ್ಯಾರ್ಥಿನಿ 11ನೇ ವರ್ಷದ ಬಾಲಕಿ ನಿಧಿ ಕೃಷ್ಣ ಎಂದು ಹೇಳಲಾಗಿದೆ. ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ನಿಧಿ ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ, ಮನೆಯವರು ಅಲೋವೆರಾ ಜ್ಯೂಸ್‌ನ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಎಂಬ ಕ್ರಿಮಿನಾಶಕ ಔಷಧವನ್ನು ತುಂಬಿದ್ದರು. ಇದರಿಂದ ಮಾ.18ರಂದು ಬಾಲಕಿ ಜ್ಯೂಸ್ ಎಂದು ಭಾವಿಸಿ ಈ ಕ್ರಿಮಿನಾಶಕವನ್ನು

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು Read More »

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ

ಮದುವೆಯ ಬಳಿಕ ದಾಂಪತ್ಯದಲ್ಲಿ ಒಂದಲ್ಲ ಒಂದು ಸಮಸ್ಯೆ ಎಂದು ಅರ್ಜಿ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಸಂಸಾರವೂ ಈಗ ಸಮಸ್ಯೆಯಲ್ಲಿ ಸಿಲುಕಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. 2024 ಅಕ್ಟೋಬರ್ 6ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ ಮತ್ತು

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ Read More »

error: Content is protected !!
Scroll to Top