ರಾಜ್ಯ

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ

ಪದೇ ಪದೆ ದಾಳಿ ನಡೆಸುತ್ತಿದ್ದ ಕೇರಳದ ಐಟಿ ಅಧಿಕಾರಿಗಳು ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಹಾಗೂ ಒತ್ತಡವೇ ಕಾರಣ ಎಂದು ಸಹೋದರ ಸಿ.ಜೆ.ಬಾಬು ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ಐಟಿ ಅಧಿಕಾರಿಗಳು ಜ.28ರಿಂದಲೂ ನನ್ನ ತಮ್ಮ ಸಿ.ಜೆ.ರಾಯ್ ಅವರನ್ನು ವಿಚಾರಣೆ ಮಾಡುತ್ತಿದ್ದರು. ಶುಕ್ರವಾರವೂ ಕಚೇರಿಗೆ ಬಂದು ವಿಚಾರಣೆ ಮಾಡಿದ್ದಾರೆ. ಐಟಿ ಇಲಾಖೆಯ ಅಡಿಷನಲ್ ಕಮಿಷನರ್ ಕೃಷ್ಣ ಪ್ರಸಾದ್ ಸಹ ಅಧಿಕಾರಿಗಳ ತಂಡದಲ್ಲಿದ್ದರು ಎಂದು ಹೇಳಿದ್ದಾರೆ. ಈ ಐಟಿ ಅಧಿಕಾರಿಗಳು ಜ.27ರಂದು ನನ್ನ ಮನೆಗೆ […]

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ Read More »

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌

ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್‌ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ.

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌ Read More »

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ?

ಉದ್ಯಮ ವಲಯವನ್ನು ಆಘಾತಕ್ಕೆ ತಳ್ಳಿದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷನ ಆತ್ಮಹತ್ಯೆ ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಕೇರಳ ಮೂಲದ ಸಿ.ಜೆ ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಆದಾಯ ಕರ ಇಲಾಖೆ ಅಧಿಅಕರಿಗಳ ದಾಳಿ ನಡೆಯುತ್ತಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ ರಾಯ್ ಅವರ

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ? Read More »

ಐಟಿ ದಾಳಿ ಬೆನ್ನಲ್ಲೇ ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು: ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ, ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಅವರು ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶವವನ್ನು ಅನೇಕಲ್‌ನ ನಾರಾಯಣ ರಾವ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅವರ ಕಂಪನಿಗೆ ಪದೇ ಪದೇ ಐಟಿ ಅಧಿಕಾರಿಗಳು ದಾಳಿ ಮಾಡುತ್ತಿದ್ದು, ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇಂದು ಕೂಡ ಐಟಿ ದಾಳಿ ನಡೆದಿದ್ದು, ಈ ವೇಳೆ

ಐಟಿ ದಾಳಿ ಬೆನ್ನಲ್ಲೇ ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT

ತಿರುವನಂತಪುರಂ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಲೆಯಾಳಂ‌ನ ಹೆಸರಾಂತ ನಟ ಜಯರಾಮ್ ಅವರ ಹೇಳಿಕೆಯನ್ನು ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿದೆ. ಚೆನ್ನೈ ನಲ್ಲಿರುವ ಜಯರಾಮ್ ನಿವಾಸಕ್ಕೆ ತೆರಳಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿರುವುದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಉಣ್ಣಿಕೃಷ್ಣನ್ ಪೊಟ್ಟಿ ಜೊತೆಗೆ ಜಯರಾಮ್‌ ಅವರ ಸಂಬಂಧ ಏನು ಎಂಬುದನ್ನು SIT ಅಧಿಕಾರಿಗಳು ಪ್ರಶ್ನೆ ಮಾಡಿದ್ದು, ಪೊಟ್ಟಿ ತನ್ನ ಮನೆಯ ಪೂಜಾ ಕಾರ್ಯಕ್ರಮಗಳಿಗೆ ಆಗಾಗ ಬರುತ್ತಿದ್ದರು. ಆದರೆ ಅವರ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ನನಗೆ ಮಾಹಿತಿ ಇಲ್ಲ.

ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT Read More »

ತಿರುಪತಿಯಲ್ಲಿ ನವಜೋಡಿ ಫೋಟೋ ಶೂಟ್: ಭಕ್ತರ ಆಕ್ರೋಶ

ತಿರುಮಲ: ತಿರುಪತಿ ತಿರುಮಲ ಶ್ರೀವಾರಿ ದೇಗುಲದ ಮುಂಭಾಗದಲ್ಲಿ ನವಜೋಡಿಯೊಂದು ನಡೆಸಿರುವ ಫೋಟೋಶೂಟ್‌ಗೆ ಭಕ್ತರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ತಮ್ಮ ಅಸಭ್ಯ ಫೋಟೋಶೂಟ್ ಮೂಲಕ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾಗಿರುವಂತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಕ್ತರ ಕೆಂಗಣ್ಣಿಗೆ ನವ ಜೋಡಿ ಗುರಿಯಾಗಿರುವುದಾಗಿದೆ. ತಮಿಳುನಾಡು‌ ಮೂಲದ ಜೋಡಿ ಮದುವೆಯ ಬಳಿಕ ಶ್ರೀ ವೆಂಕಟೇಶ್ವರನ ದರ್ಶನ ಪಡೆದು, ಆ ಬಳಿಕ ದೇಗುಲದ ಆವರಣದ ಗೊಲ್ಲಮಂಟಪದ ಸಮೀಪ ವಿಶೇಷ ಬೆಳಕಿನಲ್ಲಿ ಪರಸ್ಪರ ಚುಂಬಿಸಿಕೊಂಡಂತೆ ಫೋಟೋ ತೆಗೆಸಿಕೊಂಡಿದ್ದಾರೆ. ಇದು ಭಕ್ತರು ಅತ್ತಿಂದಿತ್ತ ಓಡಾಡುವ ಸಂದರ್ಭದಲ್ಲಿ ಅವರುಗಳ ಕಣ್ಣಿಗೆ

ತಿರುಪತಿಯಲ್ಲಿ ನವಜೋಡಿ ಫೋಟೋ ಶೂಟ್: ಭಕ್ತರ ಆಕ್ರೋಶ Read More »

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ

ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ವರ ಚಾಮರಾಜನಗರ: ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ Read More »

ಸರ್ಕಾರಿ ನೌಕರರಿಗೂ ಬಂತು ಡ್ರೆಸ್‌ ಕೋಡ್‌ : ಖಾದಿ ಉಡುಪು ಧರಿಸಲು ಸೂಚನೆ

ಯಾವಾಗ, ಯಾವ ಉಡುಪು ಧರಿಸಬೇಕೆಂದು ಸೂಚಿಸಿದ ಸರ್ಕಾರ ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ಜಾರಿ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ನೌಕರರು ಸ್ವಯಂಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದಲ್ಲದೆ, ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಖಾದಿ ಉಡುಪನ್ನು ಧರಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಖಾದಿ ಕೇವಲ ಒಂದು ಉಡುಪು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು

ಸರ್ಕಾರಿ ನೌಕರರಿಗೂ ಬಂತು ಡ್ರೆಸ್‌ ಕೋಡ್‌ : ಖಾದಿ ಉಡುಪು ಧರಿಸಲು ಸೂಚನೆ Read More »

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ

ಪೌರಾಯುಕ್ತಗೆ ನಿಂದಿಸಿ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರಸ್‌ ಮುಖಂಡ ಮಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಜೆ ಶಿಡ್ಲಘಟ್ಟದ ಪೊಲೀಸರು ಮಹಜರು ನಡೆಸಿದ್ದಾರೆ. ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪೊಲೀಸ್ ವಾಹನದಲ್ಲಿ ಪಚ್ಚನಾಡಿಗೆ ಬಂದು ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿ ಆತ ವಾಸ್ತವ್ಯ ಇದ್ದುದಕ್ಕೆ ಪೂರಕ ಸಾಕ್ಷಿ

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ Read More »

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌ Read More »

error: Content is protected !!
Scroll to Top