ರಾಜ್ಯ

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ

ಪೊಲೀಸ್‌ ದೂರು ದಾಖಲಿಸಿದ ಕಮಿಷನರ್‌ ನೂರ್ ಝಹರಾ ಖಾನಂ ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಮೇಲೆ ಬ್ರೋಕರ್‌ಗಳು ಮಾಟಮಂತ್ರ ಮಾಡಲು ಮುಂದಾದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಕಮಿಷನರ್‌ ಇಬ್ಬರು ದಲ್ಲಾಳಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಮುಡಾ ಕಚೇರಿಯಲ್ಲಿ ಬ್ರೋಕರ್‌ಗಳ ಕಾರುಬಾರು ಜೋರಾಗಿದ್ದು, ಅವರನ್ನು ನಿಯಂತ್ರಸಲು ಮುಂದಾದ ಕಮಿಷನರ್‌ ನೂರ್ ಝಹರಾ ಖಾನಂ ಅವರಿಗೆ ಬ್ರೋಕರ್‌ಗಳು ನಾನಾ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇತ್ತೀಚೆಗೆ ಒಬ್ಬ ಬ್ರೋಕರ್‌ ಸಿಬ್ಬಂದಿ ಇಲ್ಲದ ವೇಳೆ ಮುಡಾ […]

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ Read More »

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡು ಹಾರಿಸಿ ಸಾಯಿಸಿದ್ದು, ಬಳಿಕ ತಾನೂ ಅತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿವ. ಈತನ ಹೆಂಡತಿ ಎರಡು ವರ್ಷದ ಹಿಂದೆ ಬಿಟ್ಟು ಹೋಗಿದ್ದು, ಈ ಸಿಟ್ಟಿನಲ್ಲಿ ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24)

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ Read More »

ಡೀಸೆಲ್‌ ಬೆಲೆ ಮತ್ತೊಮ್ಮೆ ಏರಿಕೆ : ಜನರಿಗೆ ಇನ್ನೊಂದು ಬರೆ

ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ.21.17ಕ್ಕೆ ಹೆಚ್ಚಿಸಿದ ರಾಜ್ಯ ಸರಕಾರ ಬೆಂಗಳೂರು: ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ.2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಈ ಹಿಂದೆ ಶೇ.18.44 ರಷ್ಟು ಇದ್ದ ತೆರಿಗೆ ಶೇ.21.17ಕ್ಕೆ ಏರಿಕೆಯಾಗಿದೆ. ಹಾಲು, ಮೊಸರು ಮತ್ತು ವಿದ್ಯುತ್ ಸಹಿತ ಹಲವು ದರ ಏರಿಕೆ ನಿನ್ನೆಯಿಂದ ಜಾರಿಗೆ ಬಂದಿದ್ದು, ಇದರ ಬೆನ್ನಿಗೆ ದಿಢೀರ್‌ ಎಂದು

ಡೀಸೆಲ್‌ ಬೆಲೆ ಮತ್ತೊಮ್ಮೆ ಏರಿಕೆ : ಜನರಿಗೆ ಇನ್ನೊಂದು ಬರೆ Read More »

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ

ವಿದ್ಯಾರ್ಥಿಗಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ ಟೀಚರ್‌ ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿ ಲಕ್ಷಗಟ್ಟಲೆ ಹಣ ವಸೂಲು ಮಾಡಿದ ಶಿಕ್ಷಕಿ ಮತ್ತು ಆಕೆಯ ಇಬ್ಬರು ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಮಾಡಿದ ಶಿಕ್ಷಕಿ. ತನ್ನ ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಶ್ರೀದೇವಿ ಬ್ಲ್ಯಾಕ್‌ಮೇಲ್‌ ಮಾಡಿದ್ದಳು. ರಾಕೇಶ್ ಎಂಬ ಉದ್ಯಮಿಯ ಮಕ್ಕಳು ಶ್ರೀದೇವಿ ಕಲಿಸುತ್ತಿದ್ದ ಪ್ರೀಸ್ಕೂಲ್‌ಗೆ ಬರುತ್ತಿದ್ದರು.

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ Read More »

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ

ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೆಚ್ಚಳ ಇಂದಿನಿಂದ ಜಾರಿ ಬೆಂಗಳೂರು : ಇಂದಿನಿಂದಲೇ ಕರ್ನಾಟಕದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೀಗೆ ಅನೇಕ ವಸ್ತು ಮತ್ತು ಸೇವೆಗಳ ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ.ಇಂದಿನಿಂದ ನಂದಿನಿ ಹಾಲಿನ ಎಲ್ಲ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಮೊಸರಿನ ದರವೂ ಪ್ರತಿ ಲೀಟರ್​​ಗೆ

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ Read More »

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ

ಆಡಿಯೋ ಬಹಿರಂಗವಾದ ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಬೆಂಗಳೂರು: ಸಚಿವ ಕೆ.ಎನ್‌. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ತುಣುಕೊಂದು ಬಹಿರಂಗವಾದ ಬೆನ್ನಿಗೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆಡಿಯೋದಲ್ಲಿದ್ದ ಪುಷ್ಪಾ ಎಂಬ ಮಹಿಳೆಯ ಸಹಿತ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪಡೆದುಕೊಂಡಿದ್ದ ಎನ್ನಲಾದ ರೌಡಿಶೀಟರ್‌ ಸೋಮು ಎಂಬಾತನ ಕುರಿತು ರಾಕಿ ಹಾಗೂ ಪುಷ್ಪಾ ಎಂಬವರು ಮಾತುಕತೆ ನಡೆಸಿದ್ದ 18 ನಿಮಿಷದ

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ

ಏ.9ರಂದು ಮಂಗಳೂರು, 10ರಂದು ಉಡುಪಿಯಲ್ಲಿ ಜನಾಕ್ರೋಶ ಹೋರಾಟ ಬೆಂಗಳೂರು : ಬೆಲೆಯೇರಿಕೆ ಖಂಡಿಸಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಮುಂದಾಗಿದ್ದು, ಏಪ್ರಿಲ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುವುದರೊಂದಿಗೆ ಬಿಜೆಪಿಯ ಹೋರಾಟ ಪ್ರಾರಂಭವಾಗಲಿದೆ.ಏಪ್ರಿಲ್​ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್​ 5ರಂದು ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ Read More »

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು

ಬೆಂಗಳೂರು:  ತಾಯಿ ಸಾವನ್ನಪ್ಪಿದ್ದರಿಂದ ಮಗ ಮನನೊಂದು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಪತ್ತೆಹಚ್ಚಲಾಗಿದೆ. ಮೃತರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಭಾದೆಯಿಂದ ಮನೆಯಲ್ಲಿಯೇ ನೇ‌ಣಿಗೆ ಶರಣಾಗಿದ್ದರು. ಈತ ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕುರಿತಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

ಮಗಳ ಬರ್ತ್‌ಡೇ ದಿನವೇ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಪ್ಲ್ಯಾನ್‌

ಆಡಿಯೊ ಕ್ಲಿಪ್ಪಿಂಗ್‌ನಿಂದ ಬಯಲಾಯಿತು ಸುಪಾರಿ ಹಿಂದಿನ ಮರ್ಮ ಬೆಂಗಳೂರು: ಸಚಿವ ಕೆ.ಎನ್‌ ರಾಜಣ್ಣ ಅವರ ಪುತ್ರ, ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಅವರ ಮಗಳ ಬರ್ತ್‌ಡೇ ದಿನವೇ ಯತ್ನಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ತನ್ನ ಹತ್ಯಾಯತ್ನದ ಬಗ್ಗೆ ರಾಜೇಂದ್ರ ಅವರೇ ದೂರಿನ ಜೊತೆಗೆ ನೀಡಿದ್ದ ಆಡಿಯೊ ಕ್ಲಿಪ್ಪಿಂಗ್‌ ಈಗ ಬಯಲಾಗಿದ್ದು, ಇದರಲ್ಲಿ ಪುಷ್ಪಾ ಎಂದು ಹೇಳಿಕೊಂಡಿರುವ ಮಹಿಳೆ ರಾಕಿ ಎಂಬಾತನಿಗೆ ರಾಜೇಂದ್ರ ಅವರ ಹತ್ಯೆಯ ಪ್ಲ್ಯಾನ್‌ ವಿವರಿಸಿದ ಸಂಭಾಷಣೆಯಿದೆ. ರಾಜೇಂದ್ರ ತುಮಕೂರು ಎಸ್ಪಿಗೆ ನೀಡಿದ ಆಡಿಯೋದಲ್ಲಿ ಸುಪಾರಿ

ಮಗಳ ಬರ್ತ್‌ಡೇ ದಿನವೇ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಪ್ಲ್ಯಾನ್‌ Read More »

ಜೋಕೆ…ಐಸ್‌ಕ್ರೀಂನಲ್ಲೂ ಇದೆ ರಾಸಾಯನಿಕ ಅಂಶ

ಅನಾರೋಗ್ಯಕರ ಪರಿಸರದಲ್ಲಿ ಐಸ್‌ಕ್ರೀಂ ತಯಾರಿ ಪತ್ತೆ ಬೆಂಗಳೂರು: ಬಿರುಬಿಸಿಲಿದೆ, ಸೆಖೆಯಾಗುತ್ತಿದೆ ಎಂದು ಐಸ್‌ಕ್ರೀಂ ತಿನ್ನಲು ಹೋದಿರಾ ಜೋಕೆ! ಐಸ್‌ಕ್ರೀಂನಲ್ಲೂ ಇದೆ ವಿಷಕಾರಿ ಅಂಶ. ಇದಕ್ಕೂ ಮಿಗಿಲಾಗಿ ಐಸ್‌ಕ್ರೀಂ ತಯಾರಿ ಮತ್ತು ಸಂಗ್ರಹ ಅನಾರೋಗ್ಯಕಾರಿ ಪರಿಸರದಲ್ಲಿ ನಡೆಯುತ್ತಿರುವುದನ್ನು ಆರೋಗ್ಯ ಇಲಾಖೆ ಪತ್ತೆಹಚ್ಚಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಐಸ್‌ಕ್ರೀಂಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ರವಾನೆ ಮಾಡಿದ್ದಾರೆ. ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಅಧಿಕಾರಿಗಳು ಪ್ರತಿ ತಿಂಗಳು ಆಹಾರ

ಜೋಕೆ…ಐಸ್‌ಕ್ರೀಂನಲ್ಲೂ ಇದೆ ರಾಸಾಯನಿಕ ಅಂಶ Read More »

error: Content is protected !!
Scroll to Top