ರಾಜ್ಯ

ವಿಷಾಹಾರದಿಂದ ನರಳಿದ ಮಂಗಳೂರು ಜೈಲಿನ 45 ಕೈದಿಗಳು

ವಾಂತಿಭೇದಿಯಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಕೈದಿಗಳು ಮಂಗಳೂರು : ಮಂಗಳೂರು ಜೈಲಿನಲ್ಲಿ ನಿನ್ನೆ ವಿಷಾಹಾರ ಸೇವನೆಯಿಂದ ಸುಮಾರು 45 ಕೈದಿಗಳು ಅಸ್ವಸ್ಥರಾಗಿದ್ದು, ಈ ಪೈಕಿ ಓರ್ವ ಕೈದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೈಲಿನಲ್ಲಿ ನೀಡಿದ ಆಹಾರದಿಂದಾಗಿ ಫುಡ್ ಪಾಯಿಸನ್ ಆಗಿ ಹೊಟ್ಟೆನೋವಿನಿಂದ 45 ಕೈದಿಗಳು ನರಳಾಡಿದ್ದಾರೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆನೋವಿನಿಂದ ಕೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಸ್ವಸ್ಥ ಕೈದಿಗಳನ್ನ ಇತರ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ […]

ವಿಷಾಹಾರದಿಂದ ನರಳಿದ ಮಂಗಳೂರು ಜೈಲಿನ 45 ಕೈದಿಗಳು Read More »

ನವ ವಿವಾಹಿತ ಹೃದಯಘಾತದಿಂದ ಮೃತ್ಯು

ಮಂಡ್ಯ: ನವವಿವಾಹಿತ ಹೃದಯಘಾತದಿಂದ ಮೃತಪಟ್ಟ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾದ ಶಶಾಂಕ್ (28 ವ.) ಹೃದಯಘಾತಕ್ಕೆ ಬಲಿಯಾದ ಯುವಕ.

ನವ ವಿವಾಹಿತ ಹೃದಯಘಾತದಿಂದ ಮೃತ್ಯು Read More »

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ

ಗೋಲ್ಡ್‌ ಸ್ಮಗ್ಲಿಂಗ್‌ ಗ್ಯಾಂಗಿಗಾಗಿ ಕೆಲಸ ಮಾಡುತ್ತಿರುವ ಅನುಮಾನ ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಿದ ಕೇಸ್‌ನಲ್ಲಿ ಸೆರೆಯಾಗಿರುವ ಕನ್ನಡದ ನಟಿ ರನ್ಯಾ ರಾವ್‌ ಹಿಂದೆ ಗೋಲ್ಡ್‌ ಸ್ಮಗ್ಲಿಂಗ್‌ನ ವ್ಯವಸ್ಥಿತ ಜಾಲವೊಂದು ಇರುವ ಬಗ್ಗೆ ಡಿಆರ್‌ಐ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ನಟಿ ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ಗಲ್ಫ್ ದೇಶಕ್ಕೆ ಹೋಗಿ ಬಂದಿದ್ದಳಂತೆ. ವಿಮಾನ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೊಟೊಕಾಲ್ ಸರ್ವೀಸ್ ಬಳಸಿ ಸೆಕ್ಯುರಿಟಿ ಚೆಕ್‌ನಿಂದ ತಪ್ಪಿಸಿಕೊಳ್ಳುತ್ತಿದ್ದಳು. ಪ್ರತಿಬಾರಿ ಚಿನ್ನ ಕಳ್ಳಸಾಗಾಟಕ್ಕೆ

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ Read More »

ಇಡ್ಲಿಯ ಜನಪ್ರಿಯತೆಗೆ ಕುತ್ತು ತಂದ ಕ್ಯಾನ್ಸರ್‌ಕಾರಕ ಅಂಶ

ಹೋಟೆಲ್‌ಗಳಲ್ಲಿ ಇಡ್ಲಿಗೆ ಬೇಡಿಕೆ ಕುಸಿತ; ದೋಸೆಯತ್ತ ವಾಲಿದ ಗ್ರಾಹಕರು ಬೆಂಗಳೂರು : ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ ಶೀಟ್‌ ಬಳಸಿ ಇಡ್ಲಿ ತಯಾರಿಸುವ ವಿಚಾರ ಬಯಲಾದ ಬೆನ್ನಿಗೆ ಜನರು ಇಡ್ಲಿ ತಿನ್ನಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಕೆಲವು ಹೋಟೆಲ್‌ಗಳ ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬೆನ್ನಲ್ಲೇ ಇಡ್ಲಿಗೆ ಬೇಡಿಕೆ ಕುಸಿತ ಕಂಡುಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಇಡ್ಲಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಬೆಂಗಳೂರಿನ ದರ್ಶಿನಿಗಳಲ್ಲಿ ಮತ್ತು ಹೋಟೆಲ್‌ಗಳಲ್ಲಿ ಜನರ

ಇಡ್ಲಿಯ ಜನಪ್ರಿಯತೆಗೆ ಕುತ್ತು ತಂದ ಕ್ಯಾನ್ಸರ್‌ಕಾರಕ ಅಂಶ Read More »

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ

ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು

ತಿಂಗಳಿಗೆ 4.5 ಲ.ರೂ. ಬಾಡಿಗೆಯ ಐಷರಾಮಿ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ರನ್ಯಾ ರಾವ್‌ ಬೆಂಗಳೂರು: ದುಬೈಯಿಂದ ಸುಮಾರು 15 ಕೆಜಿ ಚಿನ್ನ ಅಕ್ರಮವಾಗಿ ತಂದು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಕನ್ನಡದ ನಟಿ ರನ್ಯಾ ರಾವ್‌ ಫ್ಲ್ಯಾಟ್‌ನಲ್ಲೂ ಕೋಟಿಗಟ್ಟಲೆ ಮೌಲ್ಯದ ಚಿನ್ನ ಮತ್ತು ನಗದು ಸಿಕ್ಕಿದೆ. ನಟಿ ರನ್ಯಾ ರಾವ್‌ ಬಹಳ ಕಾಲದಿಂದ ಚಿನ್ನ ಸ್ಮಗ್ಲಿಂಗ್‌ಗನ್ನಲಿ ಭಾಗಿಯಾಗಿದ್ದಾಳೆ ಎನ್ನುವ ಅನುಮಾನ ಮೂಡಿದೆ. ನಿನ್ನೆ ರಾತ್ರಿ ಡಿಆರ್‌ಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರುವ ನಟಿಯ ಫ್ಲ್ಯಾಟ್‌ಗೆ ದಾಳಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು Read More »

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ

ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಮಣಿಪಾಲ ಪೊಲೀಸರು ಉಡುಪಿ: ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ಕುಖ್ಯಾತ ಕ್ರಿಮಿನಲ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ. ಬೆಂಗಳೂರಿನ ಕುಖ್ಯಾತ ಪಾತಕಿ ಇಸಾಕ್‌ ಎಂಬಾತನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೆ ಪೊಲೀಸರು ಚೇಸ್‌ ಮಾಡಿದ್ದಾರೆ. ತಕ್ಷಣ ಮಣಿಪಾಲ

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ Read More »

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌

ಸ್ಪೀಕರ್‌ ಖಾದರ್‌ ಬೆಂಬಲ; ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು: ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ.14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್‌ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ ಎಫ್‌ಐಆರ್ ದಾಖಲು‌

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ Read More »

ಎಲೆಚುಕ್ಕಿ, ಹಳದಿ ರೋಗದಿಂದ ಸುಳ್ಯ ಪುತ್ತೂರು ಭಾಗದ ರೈತರು ಹೈರಾಣ | ಸಮಸ್ಯೆ ಬಗೆಹರಿಸುವಂತೆ ವಿಧಾನ ಪರಿಷತ್ ಕಲಾಪದಲ್ಲಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಹಳದಿ ರೋಗ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಹೈರಾಣಗಿದ್ದು, ರೋಗಕ್ಕೆ ಸಮರ್ಪಕವಾಗಿ ಔಷಧಿಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ, ಅಗತ್ಯ ಪೋಷಕಾಂಶಗಳನ್ನು ನೀಡುತ್ತಿಲ್ಲ. ಒಟ್ಟಾರೆ ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸದನದ ಗಮನಕ್ಕೆ ತಂದಿದ್ದಾರೆ. ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರು ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ ಒದಗಿಸಬೇಕು. ಈ ಸಮಸ್ಯೆಯನ್ನು ಬಗೆಹರಿಸಬೇಕು

ಎಲೆಚುಕ್ಕಿ, ಹಳದಿ ರೋಗದಿಂದ ಸುಳ್ಯ ಪುತ್ತೂರು ಭಾಗದ ರೈತರು ಹೈರಾಣ | ಸಮಸ್ಯೆ ಬಗೆಹರಿಸುವಂತೆ ವಿಧಾನ ಪರಿಷತ್ ಕಲಾಪದಲ್ಲಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

ಚಾಮರಾಜನಗರ : ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬ ನಂತರ ಕಾಣೆಯಾಗಿದೆ ಎನ್ನಲಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೆ ಇದೆ. ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಬಂಡೀಪುರ

ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ Read More »

error: Content is protected !!
Scroll to Top