ರಾಜ್ಯ

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ

ಪ್ರಯಾಗರಾಜ್ : ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಗಮವಾಗಿಡಲು ಯೋಗಿ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಯುಪಿ ಡಿಜಿಪಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಪ್ರಯಾಗ್‌ರಾಜ್‌ಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲದೆ ಪ್ರತಿ 2 […]

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ Read More »

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕೋಲಾರ : ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ Read More »

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ

ಲಖನೌ : ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ. ಗುಂಡಿನ ದಾಳಿ ನಡೆಸಿದ್ದ ಲವಲೇಶ್ ತಿವಾರಿ, ಸನ್ನಿ ಮತ್ತು ಅರುಣ್ ಮೌರ್ಯ ಎಂಬ ಮೂವರು ದಾಳಿಕೋರರನ್ನು ಬಂಧಿಸಿದ್ದು ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ Read More »

ಸುಡಾನ್‌ನಲ್ಲಿ ಸೇನಾ ಸಂಘರ್ಷ ತೀವ್ರ : ಭಾರತೀಯ ಪ್ರಜೆ ಸೇರಿ 65 ಸಾವು

500ಕ್ಕೂ ಅಧಿಕ ಮಂದಿಗೆ ಗುಂಡೇಟು ಖಾರ್ಟೂಮ್ : ಸುಡಾನ್‌ನಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷ ತೀವ್ರಗೊಂಡಿದ್ದು, ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಭಾರತ ಮೂಲದ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗುಂಡಿನ ಗಾಯಗಳಾಗಿದ್ದು, ಆತ ಸೇನಾ ಗುಂಡಿಗೆ ಬಲಿಯಾಗಿರಬಹುದು

ಸುಡಾನ್‌ನಲ್ಲಿ ಸೇನಾ ಸಂಘರ್ಷ ತೀವ್ರ : ಭಾರತೀಯ ಪ್ರಜೆ ಸೇರಿ 65 ಸಾವು Read More »

ಜಗದೀಶ್ ಶೆಟ್ಟರ್ ರಾಜೀನಾಮೆಯ ನಿರ್ಧಾರದಿಂದ ನೋವಾಗಿದೆ : ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬೊಮ್ಮಾಯಿ ಭಾವುಕ ಹೇಳಿಕೆ ಹುಬ್ಬಳ್ಳಿ : ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ನಮಗೆ ಆದರ್ಶವಾಗಿದ್ದಾರೆ. ಹೊಸಬರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಹಿರಿಯ ನಾಯಕರು. ಅವರ ರಾಜೀನಾಮೆ ಘೋಷಣೆ ನೋವು ತಂದಿದೆ. ಇಂತಹ ನಿರ್ಧಾರದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದ್ದು,

ಜಗದೀಶ್ ಶೆಟ್ಟರ್ ರಾಜೀನಾಮೆಯ ನಿರ್ಧಾರದಿಂದ ನೋವಾಗಿದೆ : ಸಿಎಂ ಬೊಮ್ಮಾಯಿ Read More »

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು

ಮಂಗಳೂರು : ಪಾರ್ಟ್‌ಟೈಂ ಕೆಲಸದ ಕುರಿತು ಟೆಲಿಗ್ರಾಂ ಖಾತೆಯಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 1,14,901 ರೂ. ಮೋಸ ಹೋಗಿರುವ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫಲ್ಗುಣಿ ಎಂಬ ಹೆಸರಿನಿಂದ ಪಾರ್ಟ್‌ ಟೈಂ ಕೆಲಸದ ಬಗ್ಗೆ ಸಂದೇಶ ಬಂದಿದ್ದು, ಈ ಕುರಿತು ವಿಚಾರಿಸಿದಾಗ, ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಉದ್ಯೋಗ ಎಂದು ತಿಳಿಸಿದ್ದಾರೆ. ಇನ್ನು ಲಿಂಕ್‌ ಕಳುಹಿಸಿ ಆ್ಯಪ್‌ ಇನ್‌ಸ್ಟಾಲ್‌ ಮಾಡಿ ಖಾತೆ ತೆರೆದು ಅದರಲ್ಲಿ ಪ್ರಸಾರವಾಗುವ ವೀಡಿಯೋ ನೋಡಿ ರೇಟಿಂಗ್‌ ಹಾಕಿ ಕಮೀಷನ್‌ ಹಣ

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು Read More »

ಇಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ

ಅನರ್ಹತೆಗೆ ಕಾರಣವಾಗಿದ್ದ ಸ್ಥಳದಿಂದಲೇ ಹೋರಾಟ ಶುರು ಕೋಲಾರ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದಿನಿಂದ ಎರಡು ದಿನ ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದು, ಇಂದು ಕೋಲಾರದಲ್ಲಿ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ಈ ಸಮಾವೇಶಕ್ಕೆ ಬರಲು ಕಾಂಗ್ರೆಸ್‌ ವ್ಯವಸ್ಥೆ ಮಾಡಿದೆ. ರಾಹುಲ್ ಗಾಂಧಿ,‌ ಮಲ್ಲಿಕಾರ್ಜುನ

ಇಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ Read More »

ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಶನಿವಾರ ರಾತ್ರಿ ಘೋಷಿಸಿದ್ದಾರೆ. ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಅವರ ಮನೆಗೆ ಆಗಮಿಸಿ ಮನವೊಲಿಕೆಗೆ ಯತ್ನಿಸಿದರು. ಆದರೆ ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾಗಿದೆ.ಸಂಧಾನ ಸಭೆ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿದೆ. ಮೂವತ್ತು ವರ್ಷದ ರಾಜಕಾರಣದಲ್ಲಿ

ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ Read More »

ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್‌ಪಿ ನಾಯಕ ಅತೀಕ್‌ ಅಹ್ಮದ್‌ ಹತ್ಯೆ

ಮಗ ಎನ್‌ಕೌಂಟರ್‌ಗೆ ಬಲಿಯಾದ ಎರಡೇ ದಿನದಲ್ಲಿ ತಂದೆಯ ಹತ್ಯೆ ಲಖನೌ : ನೂರಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿರುವ ಉತ್ತರ ಪ್ರದೇಶದ ದರೋಡೆಕೋರ ಅತೀಕ್ ಅಹ್ಮದ್ ಮತ್ತು ಅವನ ಸಹೋದರ ಅಶ್ರಫ್ ಅಹ್ಮದ್‌ನನ್ನು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯುತ್ತಿದ್ದಾಗ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಬಂದ ಹಂತಕರು ಅಹ್ಮದ್‌ ಸಹೋದರರನ್ನು ಪೊಲೀಸರು ಮತ್ತು ಪತ್ರಕರ್ತರ ಎದುರೇ ಅತಿ ಸಮೀಪದಿಂದ ತಲೆಗೆ ಗುರಿಯಿಟ್ಟು ಗುಂಡು ಹಾರಿಸಿ ಕೊಂದಿದ್ದಾರೆ. ಇಡೀ ಹತ್ಯೆ ಕೃತ್ಯ

ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್‌ಪಿ ನಾಯಕ ಅತೀಕ್‌ ಅಹ್ಮದ್‌ ಹತ್ಯೆ Read More »

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಸುಳ್ಯ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಏ.13 ರಂದು ಸಂಭವಿಸಿದೆ. ವಸಂತ್‌ ಕುಮಾರ್‌ ಎಂಬವರೇ ಮೃತಪಟ್ಟ ವ್ಯಕ್ತಿ. ಮದ್ಯಪಾನ ದುಶ್ಚಟ ಹೊಂದಿದ್ದ ಇವರು ಏ.13 ರಂದು ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿರುತ್ತಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು Read More »

error: Content is protected !!
Scroll to Top