ರಾಜ್ಯ

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್‌ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್‌ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ […]

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು Read More »

ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಮಂಗಳೂರು: ಶಕ್ತಿನಗರ ಬಳಿಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 12 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ನೀಡಿದ ದೂರಿನ

ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಎಫ್‌ಐಆರ್‌ Read More »

ಹಕ್ಕಿಜ್ವರ ಭೀತಿ : ಕೋಳಿ ಮಾಂಸ ಸೇವನೆಗೆ ಮಾರ್ಗಸೂಚಿ ಬಿಡುಗಡೆ

70 ಡಿಗ್ರಿ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಬೇಕು ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರದ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಕೋಳಿ ಮಾಂಸ ಸೇವನೆ ಬಗ್ಗೆ ಭೀತಿ ಮೂಡಿದೆ. ಹಲವೆಡೆ ಕೋಳಿ ಮಾಂಸಕ್ಕೆ ಬೇಡಿಕೆ ದಿಢೀರ್‌ ಕುಸಿದಿದೆ. ಜನ ಮೊಟ್ಟೆ ತಿನ್ನಲೂ ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಇಲಾಖೆ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಕೋಳಿ ಮಾಂಸ ಸೇವನೆಗೆ

ಹಕ್ಕಿಜ್ವರ ಭೀತಿ : ಕೋಳಿ ಮಾಂಸ ಸೇವನೆಗೆ ಮಾರ್ಗಸೂಚಿ ಬಿಡುಗಡೆ Read More »

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ

ಗೋಕಾಕ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಪ್ರಕರಣದ ಸೂತ್ರಧಾರಿ ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಆಪ್ತೆ, ರಾಮಗನಟ್ಟಿ ಗೋಕಾಕ್ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ Read More »

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ

ಡಿಕೆಶಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಹೇಳಿಕೆಗೆ ನಾನಾ ಬಣ್ಣ ಕಾರ್ಕಳ: ಮುಖ್ಯಮಂತ್ರಿ ಹುದ್ದೆಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಬಣಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ನಿನ್ನೆ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಭಾರಿ ಸಂಚಲನ ಉಂಟುಮಾಡಿದೆ. ರಾಜಕೀಯ ವಲಯದಲ್ಲಿ ಈ ಹೇಳಿಕೆಗೆ ನಾನಾ ರೀತಿಯ ಬಣ್ಣ ಬಳಿದು ವಿಶ್ಲೇಷಿಸಲಾಗುತ್ತಿದೆ.ಕಾರ್ಕಳದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ವೀರಪ್ಪ ಮೊಯ್ಲಿಯವರು ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿಯೇ ʼಡಿ.ಕೆ

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ Read More »

ಇನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ನಗದು ಹಣದ ಬದಲಾಗಿ ಅಕ್ಕಿ

ಈ ತಿಂಗಳಿನಿಂದಲೇ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ಉಚಿತ ಬೆಂಗಳೂರು : ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಈ ತಿಂಗಳಿನಿಂದ ನಗದು ಹಣ ಸಿಗುವುದಿಲ್ಲ, ಅದರ ಬದಲಾಗಿ 5 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಸಿಗಲಿದೆ. ಕಾಂಗ್ರೆಸ್‌ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಕೆಜಿ ಉಚಿತ ಅಕ್ಕಿಯ ಬದಲು ಇಷ್ಟರ ತನಕ ಅದರ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿತ್ತು. ಆದರೆ ಮಾರ್ಚ್‌ನಿಂದ ಹಣ ಬರುವುದಿಲ್ಲ, ಅದರ ಬದಲಾಗಿ ಅಕ್ಕಿಯನ್ನೇ ನೀಡಲು ಸರಕಾರ ತೀರ್ಮಾನಿಸಿದೆ. ಇನ್ನು ಮುಂದೆ

ಇನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ನಗದು ಹಣದ ಬದಲಾಗಿ ಅಕ್ಕಿ Read More »

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ

ಇಂದಿನಿಂದ ವಿಧಾನ ಮಂಡಲ ಬಜೆಟ್‌ ಅಧಿವೇಶನ ಬೆಂಗಳೂರು: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ- ಪ್ರತ್ಯಾರೋಪ, ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಗ್ಯಾರಂಟಿಯ ಪ್ರಯೋಜನಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪದಿರುವುದು ಸೇರಿದಂತೆ ಎರಡು ತಿಂಗಳಿನಿಂದ ಆಗಿರುವ ಬೆಳವಣಿಗೆಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಮೂಡಿದೆ.ಹಾಡಹಗಲೇ ನಡೆದ ಬ್ಯಾಂಕ್‌ಗಳ ದರೋಡೆ, ಮೈಸೂರಿನ ಉದಯಗಿರಿ ಠಾಣೆ ಮೇಲಿನ ದಾಳಿ, ಅತ್ಯಾಚಾರ – ಹತ್ಯೆ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕಾನೂನು

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ Read More »

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ

ನಿನ್ನೆ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳು ಪವಿತ್ರ ವ್ರತ ಬೆಂಗಳೂರು: ಅಮವಾಸ್ಯೆಯ ಹಿಂದಿನ ದಿನ ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಮ್ಜಾನ್ ಉಪವಾಸ ಆರಂಭಗೊಂಡಿದೆ. ನಿನ್ನೆ ಕೇರಳದಲ್ಲಿ ಚಂದ್ರದರ್ಶನವಾಗಿದ್ದು, ಹೀಗಾಗಿ ಕರಾವಳಿಯಲ್ಲೂ ಇಂದಿನಿಂದಲೇ ಮುಸ್ಲಿಮರು ಉಪವಾಸ ವ್ರತ ಆರಂಭಿಸಿದ್ದಾರೆ.ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ,

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ Read More »

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ

ಮಾ.22ರಂದು 7,8,9ನೇ ತರಗತಿ ಪರೀಕ್ಷೆ ನಿಗದಿಯಾಗಿರುವಂತೆ ನಡೆಯಲಿದೆ ಬೆಂಗಳೂರು: ಮಾರ್ಚ್‌ 22ರಂದು ಕರ್ನಾಟಕ ಬಂದ್‌ ಇದ್ದರೂ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು.ಮಕ್ಕಳಿಗೆ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ Read More »

ಬಿಜೆಪಿ ರಾಜ್ಯಾಧ್ಯಕ್ಷ  ವಿಜೇಯೇಂದ್ರ ಕಾರು ಅಪಘಾತ | ಪ್ರಾಣಪಾಯದಿಂದ ಪಾರಾದ ಕಾರು ಚಾಲಕ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ

ಬಿಜೆಪಿ ರಾಜ್ಯಾಧ್ಯಕ್ಷ  ವಿಜೇಯೇಂದ್ರ ಕಾರು ಅಪಘಾತ | ಪ್ರಾಣಪಾಯದಿಂದ ಪಾರಾದ ಕಾರು ಚಾಲಕ Read More »

error: Content is protected !!
Scroll to Top