ರಾಜ್ಯ

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌

ವಾಟಾಲ್‌ ನಾಗರಾಜ್‌ ನೇತೃತ್ವದಲ್ಲಿ ಬಂದ್‌ಗೆ ಕರೆ ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ಸಹ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಮಾರ್ಚ್3ರಂದು ಸಭೆ ನಡೆಸಿ ತಿರ್ಮಾನ ಪ್ರಕಟಿಸುವುದಾಗಿ ಹೇಳಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು, ಕನ್ನಡಿಗರಿಗೆ ಅಪಮಾನ […]

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌ Read More »

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ : ಸಾವಿರಾರು ಕೋಳಿಗಳು ನಾಶ

ಮಾಂಸಾಹಾರ ಪ್ರಿಯರಿಗೆ ಆತಂಕ ತಂದೊಡ್ಡಿದ್ದ ಹಕ್ಕಿಜ್ವರ ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರದ ಹಾವಳಿ ಕಾಣಿಸಿಕೊಂಡಿದ್ದು, ಸಾವಿರಾರು ಕೋಳಿಗಳನ್ನು ನಾಶ ಮಾಡಲಾಗಿದೆ. ಚಿಕ್ಕಬಳ್ಳಾಪುರ ದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ರಾಯಚೂರು, ಬಳ್ಳಾರಿ ಜಿಲ್ಲೆಗಳಿಗೂ ಹರಡಿದೆ. ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿಫಾರ್ಮ್‌ನಲ್ಲಿ 2400 ಕೋಳಿಗಳು ಹಕ್ಕಿಜ್ವರದಿಂದ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್​ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಫೆಬ್ರವರಿ 21ರಿಂದ ಇಲ್ಲಿಯವರೆಗೆ 2400 ಕೋಳಿಗಳ ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ : ಸಾವಿರಾರು ಕೋಳಿಗಳು ನಾಶ Read More »

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ

ಮೋಜು ಮಾಡಲು ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಖತರ್‌ನಾಕ್‌ ಕಳ್ಳ ಬೆಂಗಳೂರು : ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳನೊಬ್ಬನನ್ನು ಬೆಂಗಳೂರಿನ ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.ಆಂಧ್ರ ಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದ್‌ ಬಾಬು ಈ ಖತರ್‌ನಾಕ್‌ ಬೈಕ್ ಕಳ್ಳ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಕದಿಯುತ್ತಿದ್ದ ಈತ ಲಕ್ಷಾಂತರ

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ Read More »

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ

ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿ ಹೆಸರು, ನಿರ್ದೇಶನಗಳನ್ನು ಮುದ್ರಿಸಲು ಸೂಚನೆ ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆಯಲ್ಲಿ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ Read More »

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತಗತಿ  ನ್ಯಾಯಾಲಯ ಮಾರ್ಚ್ 15ಕ್ಕೆ ನಿಗದಿಪಡಿಸಿದೆ.  ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್​ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌ Read More »

ಒಂದು ತಿಂಗಳು ಶಿರಾಡಿ ಘಾಟಿ ಬಂದ್‌?

ಚತುಷ್ಪಥ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲು ಪ್ರಸ್ತಾವ ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ.30ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ.15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ ವೇಳೆ ಕಾಮಗಾರಿಯನ್ನು ತ್ವರಿತವಾಗಿ

ಒಂದು ತಿಂಗಳು ಶಿರಾಡಿ ಘಾಟಿ ಬಂದ್‌? Read More »

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ

800 ವರ್ಷ ಪುರಾತನ ದೈವಸ್ಥಾನದ ಆರಾಧನೆಗೆ ತಡೆಯೊಡ್ಡಿದ ಅಧಿಕಾರಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ ಮಂಗಳೂರು : ಬಜ್ಪೆ ಸಮೀಪ ಇರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಆರಾಧನೆಗೆ ತಡೆಯೊಡ್ಡಿರುವ ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌) ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂತೇರಿ ಜುಮಾದಿ ದೈವಸ್ಥಾನ ಉಳಿಸಿ ಹೋರಾಟಕ್ಕೆ ತಯಾರಿ ನಡೆಯುತ್ತಿದೆ. ನಿನ್ನೆ ಮೊನ್ನೆ ಬಂದ ಎಂಎಸ್‌ಇಝಡ್‌ ಅಧಿಕಾರಿಗಳು 800 ವರ್ಷಕ್ಕೂ ಹಿಂದಿನ ದೈವದ ಆಚರಣೆ ಮತ್ತು ಆರಾಧನೆಗೆ ತಡೆಯೊಡ್ಡಿರುವುದು ಜನರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದೆ. ಕಂಪನಿಯ

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ Read More »

ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌ ಆದೇಶ

ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಬರುವುದು ದೃಢಪಟ್ಟ ಬಳಿಕ ಕ್ರಮ ಬೆಂಗಳೂರು : ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆಗಳಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆ ಬರುತ್ತದೆ ಎಂಬುದು ಬಹಿರಂಗವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯದ ಹೋಟೆಲ್‌, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿದೆ. . ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ

ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌ ಆದೇಶ Read More »

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು?

ಹೆಸರು ಬಹಿರಂಗವಾದ ಬಳಿಕ ನಾಪತ್ತೆಯಾಗಿರುವ ಉಡುಪಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಮಂಗಳೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಿದ ಘಟನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ.ವಾಮಾಚಾರಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.ಈಗ ವಾಮಾಚಾರ

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು? Read More »

ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ ಸಾಧ್ಯತೆ : ಯೆಲ್ಲೊ ಅಲರ್ಟ್‌ ಘೋಷಣೆ

ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ 4-5 ದಿನ ಉಷ್ಣ ಅಲೆ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿ ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ, ಕರಾವಳಿಯಲ್ಲಿ ಗರಿಷ್ಠ ತಾಪಮಾನ 36-38 ಡಿಗ್ರಿ ಸೆಲ್ಶಿಯಸ್ ಆಗಬಹುದು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು

ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ ಸಾಧ್ಯತೆ : ಯೆಲ್ಲೊ ಅಲರ್ಟ್‌ ಘೋಷಣೆ Read More »

error: Content is protected !!
Scroll to Top