ರಾಜ್ಯ

ರಾಜ್ಯದ ಜನತೆಗೆ ಬಿಗ್‍ ಶಾಕ್‍ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ‍್ಯತೆ

ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್‍ ಆಗಲಿದ್ದು, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಸರ್ಕಾರದಿಂದ ನೋಟಿಸ್ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ಮೊತ್ತ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ […]

ರಾಜ್ಯದ ಜನತೆಗೆ ಬಿಗ್‍ ಶಾಕ್‍ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ‍್ಯತೆ Read More »

ಹುತಾತ್ಮ ಯೋಧರ ಕುಟುಂಬಗಳಿಗೆ ಪರಿಹಾರ : ಸಿದ್ದರಾಮಯ್ಯ

ಬೆಳಗಾವಿಯಲ್ಲಿ ಇಬ್ಬರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹುತಾತ್ಮರಾಗಿರುವ ಕರ್ನಾಟಕದ ಮೂವರು ಯೋಧರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಯೋದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿ ಸರ್ಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್,

ಹುತಾತ್ಮ ಯೋಧರ ಕುಟುಂಬಗಳಿಗೆ ಪರಿಹಾರ : ಸಿದ್ದರಾಮಯ್ಯ Read More »

ಧರ್ಮಸ್ಥಳಕ್ಕೂ ಬರುತ್ತೇನೆ, ಸವದತ್ತಿಗೂ ಹೋಗುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ಪ್ರತಿ ಸವಾಲು

ಚಿಕ್ಕಮಗಳೂರು: ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲು ಹಾಕಿರುವಂತೆ ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಎಂಎಲ್‌ಸಿ ಸಿ.ಟಿ. ರವಿ ಹೇಳಿದ್ದಾರೆ.ಆಕ್ಷೇಪಾರ್ಹ ಶಬ್ದ ಬಳಸಿಲ್ಲ ಎನ್ನುವುದಾದರೆ ಸಿ.ಟಿ.ರವಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲಿಗೆ ತಿರುಗೇಟು ನೀಡಿದ ಸಿ.ಟಿ.ರವಿ, ಸದನದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋ

ಧರ್ಮಸ್ಥಳಕ್ಕೂ ಬರುತ್ತೇನೆ, ಸವದತ್ತಿಗೂ ಹೋಗುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ಪ್ರತಿ ಸವಾಲು Read More »

ಕೊನೆಗೂ ಮಾರುಕಟ್ಟೆಗೆ ಬಂದ ನಂದಿನಿ ಇಡ್ಲಿ, ದೋಸೆ ಹಿಟ್ಟು

ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಉತ್ಪನ್ನ ಬಿಡುಗಡೆ ವಿಚಾರ ಬೆಂಗಳೂರು: ಸಾಕಷ್ಟು ರಾಜಕೀಯ ಕೆಸರೆರಚಾಟದ ಬಳಿಕ ಕೊನೆಗೂ ನಂದಿನಿಯ ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಂದಿದೆ. ನವೆಂಬರ್‌ನಲ್ಲಿಯೇ ಈ ಉತ್ಪನ್ನ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಬಳಿಕ ಸದ್ಯಕ್ಕೆ ಉತ್ಪನ್ನ ಬಿಡುಗಡೆ ಮಾಡುವುದಿಲ್ಲ ಎಂದು ಕೆಎಂಎಫ್ ಹೇಳಿತ್ತು. ಈ ವೇಳೆ ಕೇರಳದ ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆ ಆಕ್ರಮಿಸಲು ತೊಡಗಿತ್ತು. ಈ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಸಲುವಾಗಿ ಸರಕಾರ ನಂದಿನಿ ಬ್ರಾಂಡ್‌ ಉತ್ಪನ್ನಗಳಿಗೆ ತಡೆಯೊಡ್ಡಿದೆ ಎಂಬ ಆಕ್ರೋಶ

ಕೊನೆಗೂ ಮಾರುಕಟ್ಟೆಗೆ ಬಂದ ನಂದಿನಿ ಇಡ್ಲಿ, ದೋಸೆ ಹಿಟ್ಟು Read More »

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ

ತೆಕ್ಕಟ್ಟೆಯಿಂದ ಬೀಜಾಡಿಯವರೆಗೆ ಪಾರ್ಥಿವ ಶರೀರದ ಮೆರವಣಿಗೆ ಉಡುಪಿ: ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪ ಬೀಜಾಡಿಯ ಅನೂಪ್‌ ಪೂಜಾರಿ ಸಹಿತ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ಇಂದು ಅವರವರ ಹುಟ್ಟೂರಿಗೆ ತಲುಪಲಿವೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆಯಾಗಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಸುಮಾರು 5,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ Read More »

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ | ಕಾಂಗ್ರೆಸ್‍ — ಬಿಜೆಪಿಗರ ನಡುವೆ ಹೊಡೆದಾಟ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು, ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೊಂದು ಗಲಭೆಗೆ ಕಾರಣೀಯವಾಗಿದೆ. ಮೊಟ್ಟೆ ಎಸೆಯುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ಮೊಟ್ಟೆ ಎಸೆದ ಆರೋಪಿ  ಪೊಲೀಸರು ಕೈ ವಶವಾಗಿದ್ದಾನೆ. ಮುನಿರತ್ನ ಅವರು ಸುಶಾಸನ ದಿನಾಚರಣೆ ಕಾರ್ಯಕ್ರಮಕ್ಕೆ ಬಂದಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆಯನ್ನು  ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆಸಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು  ಕಾರಿನತ್ತ ಮೊಟ್ಟೆ ಎಸೆದು ಆಕ್ರೋಶ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ | ಕಾಂಗ್ರೆಸ್‍ — ಬಿಜೆಪಿಗರ ನಡುವೆ ಹೊಡೆದಾಟ Read More »

500 ನಕಲಿ ಚಿನ್ನದ ಬಳೆ ಅಡವಿಟ್ಟು ಬ್ಯಾಂಕಿಗೆ 2 ಕೋಟಿ ರೂ. ವಂಚನೆ

ಮಂಗಳೂರಿನ ಬ್ಯಾಂಕಿಗೆ ಪಂಗನಾಮ ಹಾಕಿದ ಖದೀಮ ಮಂಗಳೂರು : ಒಂದೆರಡಲ್ಲ ಬರೋಬ್ಬರಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಬ್ಯಾಂಕಿಗೆ 2 ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚನೆ ಎಸಗಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು ಮೋಸ ಮಾಡಿದ್ದಾನೆ.

500 ನಕಲಿ ಚಿನ್ನದ ಬಳೆ ಅಡವಿಟ್ಟು ಬ್ಯಾಂಕಿಗೆ 2 ಕೋಟಿ ರೂ. ವಂಚನೆ Read More »

ನಾಳೆಯಿಂದ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಅಧಿವೇಶನದ ಶತಮಾನೋತ್ಸವ

ರಾಷ್ಟ್ರೀಯ ನಾಯಕರ ದಂಡೇ ಬೆಳಗಾವಿಗೆ; ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್‌ ಮಹಾಅಧಿವೇಶನಕ್ಕೆ 100 ವರ್ಷ ತುಂಬುತ್ತಿರುವ ನೆನಪಿಗಾಗಿ ನೂರು ವರ್ಷ ಹಿಂದೆ ಅಧಿವೇಶನ ನಡೆದ ಬೆಳಗಾವಿಯಲ್ಲೇ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾಅಧಿವೇಶನ ನಡೆದಿತ್ತು. ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿಂದ ಶತಮಾನೋತ್ಸವ ಆಚರಿಸಲು ಸಜ್ಜಾಗಿದೆ. ಗುರುವಾರ ಮತ್ತು ಶುಕ್ರವಾರ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕಾಂಗ್ರೆಸ್

ನಾಳೆಯಿಂದ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಅಧಿವೇಶನದ ಶತಮಾನೋತ್ಸವ Read More »

ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌

ಅಶ್ಲೀಲ ಪದ ಹೇಳಿದ್ದಾರೆಯೇ ಎಂದು ತಿಳಿಯಲು ತನಿಖೆ ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನದ ಕೊನೆಯ ದಿನವಾದ ಡಿ.19ರಂದು ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿ.ಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ನಡುವಿನ ರಾದ್ಧಾಂತದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ದೇಶಾದ್ಯಂತ ಸದ್ದು ಮಾಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ

ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌ Read More »

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

3.8 ಕಿಲೋಮೀಟರ್ ಸುರಂಗ ಮಾರ್ಗ, 10 ಕಿ.ಮೀ ವಯಡಕ್ಟ್‌ ನಿರ್ಮಿಸುವ ಯೋಜನೆ ಹೊಸದಿಲ್ಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 3

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

error: Content is protected !!
Scroll to Top